Homeಮುಖಪುಟಹಳ್ಳಿ ತಲುಪಲು 500 ಕಿ.ಮೀ. ಸೈಕಲ್ ಪ್ರಯಾಣ ಹೊರಟ 'ಲಕ್ಷ್ಮಿ'! : ಮೋದಿ ಪ್ಯಾಕೇಜ್‌ನಿಂದ ಪ್ರಯೋಜನವಿಲ್ಲ...

ಹಳ್ಳಿ ತಲುಪಲು 500 ಕಿ.ಮೀ. ಸೈಕಲ್ ಪ್ರಯಾಣ ಹೊರಟ ‘ಲಕ್ಷ್ಮಿ’! : ಮೋದಿ ಪ್ಯಾಕೇಜ್‌ನಿಂದ ಪ್ರಯೋಜನವಿಲ್ಲ ಎನ್ನುತ್ತಾರೆ.

- Advertisement -
- Advertisement -

ಪತಿ ಹಾಗೂ ಸಣ್ಣ ಮಗುವಿನೊಂದಿಗೆ ಲಕ್ನೋದಲ್ಲಿ ದಿನಗೂಲಿ ಕಾರ್ಮಿಕಳಾಗಿ ಜೀವನ ಸಾಗಿಸುತ್ತಿದ್ದ ಲಕ್ಷ್ಮಿ ಸಾಹು 500 ಕಿ.ಮೀ. ದೂರದ ಛತ್ತೀಸ್ ಗಡದ ತನ್ನ ಹಳ್ಳಿಗೆ ಸೈಕಲ್ ಮೂಲಕ ಹೊರಟಿದ್ದಾರೆ.

ಲಕ್ಷ್ಮಿ ಸಾಹು ಉತ್ತರಪ್ರದೇಶದ ರಾಜಧಾನಿಯಲ್ಲಿ ತನ್ನ ಪತಿಯೊಂದಿಗೆ ದೈನಂದಿನ ಕೂಲಿ ಕಾರ್ಮಿಕಳಾಗಿ ಜೀವನ ಸಾಗಿಸುತ್ತಿದ್ದರು. ದೇಶದಾದ್ಯಂತ ವರದಿಯಾದ ವಲಸೆ ಕಾರ್ಮಿಕರ ದುರಂತ ಕತೆಗಳ ನಡುವೆ ಸುರಕ್ಷಿತವಾಗಿ ಮನೆಗೆ ಸೇರುವುದರ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿರುವುದಾಗಿ ಅವರು ಹೇಳುತ್ತಾರೆ.

“ಕೆಲಸವಿಲ್ಲದಿದ್ದಾಗ ಸಂತೋಷವಾಗಿರಲು ಹೇಗೆ ಸಾಧ್ಯ? ನಾನು ಕಾರ್ಮಿಕಳು ಉದ್ಯೋಗವಿಲ್ಲ … ಏನು ತಿನ್ನಲಿ? ಇದಕ್ಕಿಂತ ನನ್ನು ಹಳ್ಳಿಗೆ ಹಿಂತಿರುಗಿ ಹೊಲಗಳಲ್ಲಿ ಕೆಲಸ ಮಾಡುವುದು ಉತ್ತಮ” ಎಂದು ಅವರು ಹೇಳುತ್ತಾರೆ.

ಲಕ್ಷ್ಮಿ ಸಾಹು, ಅವರ ಪತಿ ಮತ್ತು ಅವರ ಚಿಕ್ಕ ಮಗು ಮಂಗಳವಾರ ರಾತ್ರಿಯಿಂದ ತಮ್ಮ ಗುಡಿಸಲಿನಿಂದ ಹೊರಟು, 70 ಕಿ.ಮೀ ದೂರದಲ್ಲಿರುವ ರಾಯ್ ಬರೇಲಿಯನ್ನು ತಲುಪಿದ್ದರು. ಅಲ್ಲಿ ಅವರು ಪತ್ರಕರ್ತರನ್ನು ಭೇಟಿಯಾಗುವಾಗ ಬಿಸಿಲಿಗೆ ಬಳಲಿ ಚಹಾ ಕುಡಿಯಲು ರಸ್ತೆಯ ಬದಿಯಲ್ಲಿ ಕುಳಿತಿದ್ದರು.

ಲಕ್ಷ್ಮಿ ಮತ್ತು ಅವರ ಕುಟುಂಬವು ತಮ್ಮ ಮುಂದಿನ ಪ್ರಯಾಣಕ್ಕಾಗಿ ತಯಾರಾಗುತ್ತಿದ್ದಂತೆ ಪತ್ರಕರ್ತರು ಪ್ರಧಾನ ಮಂತ್ರಿಯ ಪ್ಯಾಕೇಜಿನ ಪ್ರಯೋಜನಗಳ ಬಗ್ಗೆ ಪ್ರಶ್ನೆ ಕೇಳಿದ್ದಾರೆ.

“ಅದರಿಂದ ಏನು ಪ್ರಯೋಜನ? ನಾವು ಇದ್ದಲ್ಲಿ ನಮಗೆ ಪಡಿತರ ಸಿಗಲಿಲ್ಲ. ನಾನು ಮೂರು ಪಡಿತರ ಅಂಗಡಿಗಳಿಗೆ ಹೋಗಿದ್ದೆ. ಎಲ್ಲರೂ ನನ್ನ ಆಧಾರ್ ಕೇಳಿದರು, ಯಾರೂ ನನಗೆ ಅಕ್ಕಿ ಕೊಟ್ಟಿಲ್ಲ. ಅವರು ನಮಗೆ ಮನೆಗೆ ಹೋಗಲು ಬಸ್ಸುಗಳನ್ನು ವ್ಯವಸ್ಥೆ ಮಾಡಿದ್ದರೆ ಚೆನ್ನಾಗಿತ್ತು. ಕನಿಷ್ಠ ಸರ್ಕಾರವು ನಮ್ಮನ್ನು ನೋಡಿಕೊಳ್ಳುತ್ತದೆ ಎಂದು ನಾವು ಹೇಳಬಹುದಿತ್ತು,” ಎಂದು ಹೇಳತ್ತಾರೆ.

ಪ್ರಧಾನಿ ಮೋದಿ “ಪ್ಯಾಕೇಜ್ … ಸಣ್ಣ ಉದ್ಯಮಗಳು, ಕಾರ್ಮಿಕರು, ರೈತರು, ಮಧ್ಯಮ ವರ್ಗ ಮತ್ತು ಗೃಹ ಕೈಗಾರಿಕೆಗಳಿಗೆ ಸಹಾಯ ಮಾಡುತ್ತದೆ. ಇದು ವಲಸೆ ಕಾರ್ಮಿಕರ ಯೋಗಕ್ಷೇಮದ ಮೇಲೆ  ಕೇಂದ್ರೀಕರಿಸುತ್ತದೆ” ಎಂದು ತಮ್ಮ ಭಾಷಣದಲ್ಲಿ ಹೇಳುತ್ತಾ “ಈ ಅವಧಿಯಲ್ಲಿ ದಿನಗೂಲಿ ಕಾರ್ಮಿಕರು, ವಲಸೆ ಕಾರ್ಮಿಕರು ಹೆಚ್ಚು ತೊಂದರೆ ಅನುಭವಿಸಿದ್ದಾರೆ. ಅವರಿಗಾಗಿ ಏನಾದರೂ ಮಾಡುವುದು ನಮ್ಮ ಕರ್ತವ್ಯ ” ಎಂದು ಹೇಳಿದ್ದರು.

ಮಾರ್ಚ್ ನಿಂದ ಲಾಕ್ ಡೌನ್ ಘೋಷಿಸಿದ ನಂತರ, ಉದ್ಯೋಗ ಅಥವಾ ಹಣವಿಲ್ಲದೆ ಸಿಕ್ಕಿಹಾಕಿಕೊಂಡಿರುವ ಲಕ್ಷಾಂತರ ವಲಸೆ ಕಾರ್ಮಿಕರು ಮನೆಗೆ ಕಾಲ್ನಡಿಗೆಯಲ್ಲೇ ಪ್ರಯಾಣಿಸಿದ್ದರು. ನಂತರ ಕೇಂದ್ರ ಸರ್ಕಾರವು “ಶ್ರಮಿಕ್” ವಿಶೇಷ ರೈಲುಗಳನ್ನು ಬಿಟ್ಟಿತ್ತಾದರೂ ಸಾವಿರಾರು ವಲಸೆ ಕಾರ್ಮಿಕರು ಇನ್ನೂ ನೂರಾರು ಕಿಲೋಮೀಟರ್ ದೂರದ ತಮ್ಮ ಮನೆಗೆ ಕಾಲ್ನಡಿಗೆ ಅಥವಾ ಸೈಕಲ್ ಮೂಲಕ ಪ್ರಯಾಣಿಸುತ್ತಿದ್ದಾರೆ.

ಈ ಮಹಾವಲಸೆಯಲ್ಲಿ ಅನೇಕ ವಲಸೆ ಕಾರ್ಮಿಕರು ಅಫಘಾತ, ಬಳಲುವಿಕೆಯಿಂದ ದಾರಿಯಲ್ಲಿ ಸಾವನ್ನಪ್ಪಿದ್ದಾರೆ.

ಇಂದು ಬೆಳಿಗ್ಗೆ ಗುಜರಾತ್‌ನಿಂದ ಹಿಂತಿರುಗುತ್ತಿದ್ದ ಕಾರ್ಮಿಕರ ಗುಂಪಿನಲ್ಲಿದ್ದ ಮಹಿಳೆ ಮತ್ತು ಮಗು ಉತ್ತರ ಪ್ರದೇಶದ ಕಾನ್ಪುರ್ ದೇಹತ್ ಜಿಲ್ಲೆಯಲ್ಲಿ ಪ್ರಯಾಣಿಸುತ್ತಿದ್ದಾಗ, ತಾವು ಪ್ರಯಾಣಿಸುತ್ತಿದ್ದ ಮಿನಿ ಟ್ರಕ್ ದೊಡ್ಡ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದಾರೆ.

ಕಳೆದ ಶನಿವಾರ ದೆಹಲಿಯಿಂದ 1000 ಕಿ.ಮಿ. ದೂರದ ಬಿಹಾರದ ಪೂರ್ವ ಚಂಪಾರನ್‌ಗೆ ತಲುಪಲು ಸೈಕಲ್ ಚಲಾಯಿಸುತ್ತಿದ್ದ ವಲಸೆ ಕಾರ್ಮಿಕರೊಬ್ಬರು ಲಕ್ನೋದಲ್ಲಿ ಕಾರಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಅವರಿಗೆ ಪತ್ನಿ ಮತ್ತು ಮೂವರು ಮಕ್ಕಳಿದ್ದಾರೆ.

ಕೃಪೆ: ಎನ್ಡಿಟಿವಿ


ಓದಿ: ಬೆಂಗಳೂರಿನ ಹೊರಗೂ ರೈಲಿಗಾಗಿ ಕಾಯುತ್ತಿರುವ ವಲಸೆ ಕಾರ್ಮಿಕರು: ಇತ್ತ ಹರಿಯುವುದೇ ಸರ್ಕಾರದ ಗಮನ?


ವಿಡಿಯೋ ನೋಡಿ: ಸದ್ದು…… ಈ ಸುದ್ದಿಗಳೇನಾದವು? – 8 ನೇ ಸಂಚಿಕೆ(Facebook ವಿಡಿಯೋ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...