Homeಮುಖಪುಟಹಳ್ಳಿ ತಲುಪಲು 500 ಕಿ.ಮೀ. ಸೈಕಲ್ ಪ್ರಯಾಣ ಹೊರಟ 'ಲಕ್ಷ್ಮಿ'! : ಮೋದಿ ಪ್ಯಾಕೇಜ್‌ನಿಂದ ಪ್ರಯೋಜನವಿಲ್ಲ...

ಹಳ್ಳಿ ತಲುಪಲು 500 ಕಿ.ಮೀ. ಸೈಕಲ್ ಪ್ರಯಾಣ ಹೊರಟ ‘ಲಕ್ಷ್ಮಿ’! : ಮೋದಿ ಪ್ಯಾಕೇಜ್‌ನಿಂದ ಪ್ರಯೋಜನವಿಲ್ಲ ಎನ್ನುತ್ತಾರೆ.

- Advertisement -
- Advertisement -

ಪತಿ ಹಾಗೂ ಸಣ್ಣ ಮಗುವಿನೊಂದಿಗೆ ಲಕ್ನೋದಲ್ಲಿ ದಿನಗೂಲಿ ಕಾರ್ಮಿಕಳಾಗಿ ಜೀವನ ಸಾಗಿಸುತ್ತಿದ್ದ ಲಕ್ಷ್ಮಿ ಸಾಹು 500 ಕಿ.ಮೀ. ದೂರದ ಛತ್ತೀಸ್ ಗಡದ ತನ್ನ ಹಳ್ಳಿಗೆ ಸೈಕಲ್ ಮೂಲಕ ಹೊರಟಿದ್ದಾರೆ.

ಲಕ್ಷ್ಮಿ ಸಾಹು ಉತ್ತರಪ್ರದೇಶದ ರಾಜಧಾನಿಯಲ್ಲಿ ತನ್ನ ಪತಿಯೊಂದಿಗೆ ದೈನಂದಿನ ಕೂಲಿ ಕಾರ್ಮಿಕಳಾಗಿ ಜೀವನ ಸಾಗಿಸುತ್ತಿದ್ದರು. ದೇಶದಾದ್ಯಂತ ವರದಿಯಾದ ವಲಸೆ ಕಾರ್ಮಿಕರ ದುರಂತ ಕತೆಗಳ ನಡುವೆ ಸುರಕ್ಷಿತವಾಗಿ ಮನೆಗೆ ಸೇರುವುದರ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿರುವುದಾಗಿ ಅವರು ಹೇಳುತ್ತಾರೆ.

“ಕೆಲಸವಿಲ್ಲದಿದ್ದಾಗ ಸಂತೋಷವಾಗಿರಲು ಹೇಗೆ ಸಾಧ್ಯ? ನಾನು ಕಾರ್ಮಿಕಳು ಉದ್ಯೋಗವಿಲ್ಲ … ಏನು ತಿನ್ನಲಿ? ಇದಕ್ಕಿಂತ ನನ್ನು ಹಳ್ಳಿಗೆ ಹಿಂತಿರುಗಿ ಹೊಲಗಳಲ್ಲಿ ಕೆಲಸ ಮಾಡುವುದು ಉತ್ತಮ” ಎಂದು ಅವರು ಹೇಳುತ್ತಾರೆ.

ಲಕ್ಷ್ಮಿ ಸಾಹು, ಅವರ ಪತಿ ಮತ್ತು ಅವರ ಚಿಕ್ಕ ಮಗು ಮಂಗಳವಾರ ರಾತ್ರಿಯಿಂದ ತಮ್ಮ ಗುಡಿಸಲಿನಿಂದ ಹೊರಟು, 70 ಕಿ.ಮೀ ದೂರದಲ್ಲಿರುವ ರಾಯ್ ಬರೇಲಿಯನ್ನು ತಲುಪಿದ್ದರು. ಅಲ್ಲಿ ಅವರು ಪತ್ರಕರ್ತರನ್ನು ಭೇಟಿಯಾಗುವಾಗ ಬಿಸಿಲಿಗೆ ಬಳಲಿ ಚಹಾ ಕುಡಿಯಲು ರಸ್ತೆಯ ಬದಿಯಲ್ಲಿ ಕುಳಿತಿದ್ದರು.

ಲಕ್ಷ್ಮಿ ಮತ್ತು ಅವರ ಕುಟುಂಬವು ತಮ್ಮ ಮುಂದಿನ ಪ್ರಯಾಣಕ್ಕಾಗಿ ತಯಾರಾಗುತ್ತಿದ್ದಂತೆ ಪತ್ರಕರ್ತರು ಪ್ರಧಾನ ಮಂತ್ರಿಯ ಪ್ಯಾಕೇಜಿನ ಪ್ರಯೋಜನಗಳ ಬಗ್ಗೆ ಪ್ರಶ್ನೆ ಕೇಳಿದ್ದಾರೆ.

“ಅದರಿಂದ ಏನು ಪ್ರಯೋಜನ? ನಾವು ಇದ್ದಲ್ಲಿ ನಮಗೆ ಪಡಿತರ ಸಿಗಲಿಲ್ಲ. ನಾನು ಮೂರು ಪಡಿತರ ಅಂಗಡಿಗಳಿಗೆ ಹೋಗಿದ್ದೆ. ಎಲ್ಲರೂ ನನ್ನ ಆಧಾರ್ ಕೇಳಿದರು, ಯಾರೂ ನನಗೆ ಅಕ್ಕಿ ಕೊಟ್ಟಿಲ್ಲ. ಅವರು ನಮಗೆ ಮನೆಗೆ ಹೋಗಲು ಬಸ್ಸುಗಳನ್ನು ವ್ಯವಸ್ಥೆ ಮಾಡಿದ್ದರೆ ಚೆನ್ನಾಗಿತ್ತು. ಕನಿಷ್ಠ ಸರ್ಕಾರವು ನಮ್ಮನ್ನು ನೋಡಿಕೊಳ್ಳುತ್ತದೆ ಎಂದು ನಾವು ಹೇಳಬಹುದಿತ್ತು,” ಎಂದು ಹೇಳತ್ತಾರೆ.

ಪ್ರಧಾನಿ ಮೋದಿ “ಪ್ಯಾಕೇಜ್ … ಸಣ್ಣ ಉದ್ಯಮಗಳು, ಕಾರ್ಮಿಕರು, ರೈತರು, ಮಧ್ಯಮ ವರ್ಗ ಮತ್ತು ಗೃಹ ಕೈಗಾರಿಕೆಗಳಿಗೆ ಸಹಾಯ ಮಾಡುತ್ತದೆ. ಇದು ವಲಸೆ ಕಾರ್ಮಿಕರ ಯೋಗಕ್ಷೇಮದ ಮೇಲೆ  ಕೇಂದ್ರೀಕರಿಸುತ್ತದೆ” ಎಂದು ತಮ್ಮ ಭಾಷಣದಲ್ಲಿ ಹೇಳುತ್ತಾ “ಈ ಅವಧಿಯಲ್ಲಿ ದಿನಗೂಲಿ ಕಾರ್ಮಿಕರು, ವಲಸೆ ಕಾರ್ಮಿಕರು ಹೆಚ್ಚು ತೊಂದರೆ ಅನುಭವಿಸಿದ್ದಾರೆ. ಅವರಿಗಾಗಿ ಏನಾದರೂ ಮಾಡುವುದು ನಮ್ಮ ಕರ್ತವ್ಯ ” ಎಂದು ಹೇಳಿದ್ದರು.

ಮಾರ್ಚ್ ನಿಂದ ಲಾಕ್ ಡೌನ್ ಘೋಷಿಸಿದ ನಂತರ, ಉದ್ಯೋಗ ಅಥವಾ ಹಣವಿಲ್ಲದೆ ಸಿಕ್ಕಿಹಾಕಿಕೊಂಡಿರುವ ಲಕ್ಷಾಂತರ ವಲಸೆ ಕಾರ್ಮಿಕರು ಮನೆಗೆ ಕಾಲ್ನಡಿಗೆಯಲ್ಲೇ ಪ್ರಯಾಣಿಸಿದ್ದರು. ನಂತರ ಕೇಂದ್ರ ಸರ್ಕಾರವು “ಶ್ರಮಿಕ್” ವಿಶೇಷ ರೈಲುಗಳನ್ನು ಬಿಟ್ಟಿತ್ತಾದರೂ ಸಾವಿರಾರು ವಲಸೆ ಕಾರ್ಮಿಕರು ಇನ್ನೂ ನೂರಾರು ಕಿಲೋಮೀಟರ್ ದೂರದ ತಮ್ಮ ಮನೆಗೆ ಕಾಲ್ನಡಿಗೆ ಅಥವಾ ಸೈಕಲ್ ಮೂಲಕ ಪ್ರಯಾಣಿಸುತ್ತಿದ್ದಾರೆ.

ಈ ಮಹಾವಲಸೆಯಲ್ಲಿ ಅನೇಕ ವಲಸೆ ಕಾರ್ಮಿಕರು ಅಫಘಾತ, ಬಳಲುವಿಕೆಯಿಂದ ದಾರಿಯಲ್ಲಿ ಸಾವನ್ನಪ್ಪಿದ್ದಾರೆ.

ಇಂದು ಬೆಳಿಗ್ಗೆ ಗುಜರಾತ್‌ನಿಂದ ಹಿಂತಿರುಗುತ್ತಿದ್ದ ಕಾರ್ಮಿಕರ ಗುಂಪಿನಲ್ಲಿದ್ದ ಮಹಿಳೆ ಮತ್ತು ಮಗು ಉತ್ತರ ಪ್ರದೇಶದ ಕಾನ್ಪುರ್ ದೇಹತ್ ಜಿಲ್ಲೆಯಲ್ಲಿ ಪ್ರಯಾಣಿಸುತ್ತಿದ್ದಾಗ, ತಾವು ಪ್ರಯಾಣಿಸುತ್ತಿದ್ದ ಮಿನಿ ಟ್ರಕ್ ದೊಡ್ಡ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದಾರೆ.

ಕಳೆದ ಶನಿವಾರ ದೆಹಲಿಯಿಂದ 1000 ಕಿ.ಮಿ. ದೂರದ ಬಿಹಾರದ ಪೂರ್ವ ಚಂಪಾರನ್‌ಗೆ ತಲುಪಲು ಸೈಕಲ್ ಚಲಾಯಿಸುತ್ತಿದ್ದ ವಲಸೆ ಕಾರ್ಮಿಕರೊಬ್ಬರು ಲಕ್ನೋದಲ್ಲಿ ಕಾರಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಅವರಿಗೆ ಪತ್ನಿ ಮತ್ತು ಮೂವರು ಮಕ್ಕಳಿದ್ದಾರೆ.

ಕೃಪೆ: ಎನ್ಡಿಟಿವಿ


ಓದಿ: ಬೆಂಗಳೂರಿನ ಹೊರಗೂ ರೈಲಿಗಾಗಿ ಕಾಯುತ್ತಿರುವ ವಲಸೆ ಕಾರ್ಮಿಕರು: ಇತ್ತ ಹರಿಯುವುದೇ ಸರ್ಕಾರದ ಗಮನ?


ವಿಡಿಯೋ ನೋಡಿ: ಸದ್ದು…… ಈ ಸುದ್ದಿಗಳೇನಾದವು? – 8 ನೇ ಸಂಚಿಕೆ(Facebook ವಿಡಿಯೋ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...