Homeಮುಖಪುಟಹಳ್ಳಿ ತಲುಪಲು 500 ಕಿ.ಮೀ. ಸೈಕಲ್ ಪ್ರಯಾಣ ಹೊರಟ 'ಲಕ್ಷ್ಮಿ'! : ಮೋದಿ ಪ್ಯಾಕೇಜ್‌ನಿಂದ ಪ್ರಯೋಜನವಿಲ್ಲ...

ಹಳ್ಳಿ ತಲುಪಲು 500 ಕಿ.ಮೀ. ಸೈಕಲ್ ಪ್ರಯಾಣ ಹೊರಟ ‘ಲಕ್ಷ್ಮಿ’! : ಮೋದಿ ಪ್ಯಾಕೇಜ್‌ನಿಂದ ಪ್ರಯೋಜನವಿಲ್ಲ ಎನ್ನುತ್ತಾರೆ.

- Advertisement -
- Advertisement -

ಪತಿ ಹಾಗೂ ಸಣ್ಣ ಮಗುವಿನೊಂದಿಗೆ ಲಕ್ನೋದಲ್ಲಿ ದಿನಗೂಲಿ ಕಾರ್ಮಿಕಳಾಗಿ ಜೀವನ ಸಾಗಿಸುತ್ತಿದ್ದ ಲಕ್ಷ್ಮಿ ಸಾಹು 500 ಕಿ.ಮೀ. ದೂರದ ಛತ್ತೀಸ್ ಗಡದ ತನ್ನ ಹಳ್ಳಿಗೆ ಸೈಕಲ್ ಮೂಲಕ ಹೊರಟಿದ್ದಾರೆ.

ಲಕ್ಷ್ಮಿ ಸಾಹು ಉತ್ತರಪ್ರದೇಶದ ರಾಜಧಾನಿಯಲ್ಲಿ ತನ್ನ ಪತಿಯೊಂದಿಗೆ ದೈನಂದಿನ ಕೂಲಿ ಕಾರ್ಮಿಕಳಾಗಿ ಜೀವನ ಸಾಗಿಸುತ್ತಿದ್ದರು. ದೇಶದಾದ್ಯಂತ ವರದಿಯಾದ ವಲಸೆ ಕಾರ್ಮಿಕರ ದುರಂತ ಕತೆಗಳ ನಡುವೆ ಸುರಕ್ಷಿತವಾಗಿ ಮನೆಗೆ ಸೇರುವುದರ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿರುವುದಾಗಿ ಅವರು ಹೇಳುತ್ತಾರೆ.

“ಕೆಲಸವಿಲ್ಲದಿದ್ದಾಗ ಸಂತೋಷವಾಗಿರಲು ಹೇಗೆ ಸಾಧ್ಯ? ನಾನು ಕಾರ್ಮಿಕಳು ಉದ್ಯೋಗವಿಲ್ಲ … ಏನು ತಿನ್ನಲಿ? ಇದಕ್ಕಿಂತ ನನ್ನು ಹಳ್ಳಿಗೆ ಹಿಂತಿರುಗಿ ಹೊಲಗಳಲ್ಲಿ ಕೆಲಸ ಮಾಡುವುದು ಉತ್ತಮ” ಎಂದು ಅವರು ಹೇಳುತ್ತಾರೆ.

ಲಕ್ಷ್ಮಿ ಸಾಹು, ಅವರ ಪತಿ ಮತ್ತು ಅವರ ಚಿಕ್ಕ ಮಗು ಮಂಗಳವಾರ ರಾತ್ರಿಯಿಂದ ತಮ್ಮ ಗುಡಿಸಲಿನಿಂದ ಹೊರಟು, 70 ಕಿ.ಮೀ ದೂರದಲ್ಲಿರುವ ರಾಯ್ ಬರೇಲಿಯನ್ನು ತಲುಪಿದ್ದರು. ಅಲ್ಲಿ ಅವರು ಪತ್ರಕರ್ತರನ್ನು ಭೇಟಿಯಾಗುವಾಗ ಬಿಸಿಲಿಗೆ ಬಳಲಿ ಚಹಾ ಕುಡಿಯಲು ರಸ್ತೆಯ ಬದಿಯಲ್ಲಿ ಕುಳಿತಿದ್ದರು.

ಲಕ್ಷ್ಮಿ ಮತ್ತು ಅವರ ಕುಟುಂಬವು ತಮ್ಮ ಮುಂದಿನ ಪ್ರಯಾಣಕ್ಕಾಗಿ ತಯಾರಾಗುತ್ತಿದ್ದಂತೆ ಪತ್ರಕರ್ತರು ಪ್ರಧಾನ ಮಂತ್ರಿಯ ಪ್ಯಾಕೇಜಿನ ಪ್ರಯೋಜನಗಳ ಬಗ್ಗೆ ಪ್ರಶ್ನೆ ಕೇಳಿದ್ದಾರೆ.

“ಅದರಿಂದ ಏನು ಪ್ರಯೋಜನ? ನಾವು ಇದ್ದಲ್ಲಿ ನಮಗೆ ಪಡಿತರ ಸಿಗಲಿಲ್ಲ. ನಾನು ಮೂರು ಪಡಿತರ ಅಂಗಡಿಗಳಿಗೆ ಹೋಗಿದ್ದೆ. ಎಲ್ಲರೂ ನನ್ನ ಆಧಾರ್ ಕೇಳಿದರು, ಯಾರೂ ನನಗೆ ಅಕ್ಕಿ ಕೊಟ್ಟಿಲ್ಲ. ಅವರು ನಮಗೆ ಮನೆಗೆ ಹೋಗಲು ಬಸ್ಸುಗಳನ್ನು ವ್ಯವಸ್ಥೆ ಮಾಡಿದ್ದರೆ ಚೆನ್ನಾಗಿತ್ತು. ಕನಿಷ್ಠ ಸರ್ಕಾರವು ನಮ್ಮನ್ನು ನೋಡಿಕೊಳ್ಳುತ್ತದೆ ಎಂದು ನಾವು ಹೇಳಬಹುದಿತ್ತು,” ಎಂದು ಹೇಳತ್ತಾರೆ.

ಪ್ರಧಾನಿ ಮೋದಿ “ಪ್ಯಾಕೇಜ್ … ಸಣ್ಣ ಉದ್ಯಮಗಳು, ಕಾರ್ಮಿಕರು, ರೈತರು, ಮಧ್ಯಮ ವರ್ಗ ಮತ್ತು ಗೃಹ ಕೈಗಾರಿಕೆಗಳಿಗೆ ಸಹಾಯ ಮಾಡುತ್ತದೆ. ಇದು ವಲಸೆ ಕಾರ್ಮಿಕರ ಯೋಗಕ್ಷೇಮದ ಮೇಲೆ  ಕೇಂದ್ರೀಕರಿಸುತ್ತದೆ” ಎಂದು ತಮ್ಮ ಭಾಷಣದಲ್ಲಿ ಹೇಳುತ್ತಾ “ಈ ಅವಧಿಯಲ್ಲಿ ದಿನಗೂಲಿ ಕಾರ್ಮಿಕರು, ವಲಸೆ ಕಾರ್ಮಿಕರು ಹೆಚ್ಚು ತೊಂದರೆ ಅನುಭವಿಸಿದ್ದಾರೆ. ಅವರಿಗಾಗಿ ಏನಾದರೂ ಮಾಡುವುದು ನಮ್ಮ ಕರ್ತವ್ಯ ” ಎಂದು ಹೇಳಿದ್ದರು.

ಮಾರ್ಚ್ ನಿಂದ ಲಾಕ್ ಡೌನ್ ಘೋಷಿಸಿದ ನಂತರ, ಉದ್ಯೋಗ ಅಥವಾ ಹಣವಿಲ್ಲದೆ ಸಿಕ್ಕಿಹಾಕಿಕೊಂಡಿರುವ ಲಕ್ಷಾಂತರ ವಲಸೆ ಕಾರ್ಮಿಕರು ಮನೆಗೆ ಕಾಲ್ನಡಿಗೆಯಲ್ಲೇ ಪ್ರಯಾಣಿಸಿದ್ದರು. ನಂತರ ಕೇಂದ್ರ ಸರ್ಕಾರವು “ಶ್ರಮಿಕ್” ವಿಶೇಷ ರೈಲುಗಳನ್ನು ಬಿಟ್ಟಿತ್ತಾದರೂ ಸಾವಿರಾರು ವಲಸೆ ಕಾರ್ಮಿಕರು ಇನ್ನೂ ನೂರಾರು ಕಿಲೋಮೀಟರ್ ದೂರದ ತಮ್ಮ ಮನೆಗೆ ಕಾಲ್ನಡಿಗೆ ಅಥವಾ ಸೈಕಲ್ ಮೂಲಕ ಪ್ರಯಾಣಿಸುತ್ತಿದ್ದಾರೆ.

ಈ ಮಹಾವಲಸೆಯಲ್ಲಿ ಅನೇಕ ವಲಸೆ ಕಾರ್ಮಿಕರು ಅಫಘಾತ, ಬಳಲುವಿಕೆಯಿಂದ ದಾರಿಯಲ್ಲಿ ಸಾವನ್ನಪ್ಪಿದ್ದಾರೆ.

ಇಂದು ಬೆಳಿಗ್ಗೆ ಗುಜರಾತ್‌ನಿಂದ ಹಿಂತಿರುಗುತ್ತಿದ್ದ ಕಾರ್ಮಿಕರ ಗುಂಪಿನಲ್ಲಿದ್ದ ಮಹಿಳೆ ಮತ್ತು ಮಗು ಉತ್ತರ ಪ್ರದೇಶದ ಕಾನ್ಪುರ್ ದೇಹತ್ ಜಿಲ್ಲೆಯಲ್ಲಿ ಪ್ರಯಾಣಿಸುತ್ತಿದ್ದಾಗ, ತಾವು ಪ್ರಯಾಣಿಸುತ್ತಿದ್ದ ಮಿನಿ ಟ್ರಕ್ ದೊಡ್ಡ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದಾರೆ.

ಕಳೆದ ಶನಿವಾರ ದೆಹಲಿಯಿಂದ 1000 ಕಿ.ಮಿ. ದೂರದ ಬಿಹಾರದ ಪೂರ್ವ ಚಂಪಾರನ್‌ಗೆ ತಲುಪಲು ಸೈಕಲ್ ಚಲಾಯಿಸುತ್ತಿದ್ದ ವಲಸೆ ಕಾರ್ಮಿಕರೊಬ್ಬರು ಲಕ್ನೋದಲ್ಲಿ ಕಾರಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಅವರಿಗೆ ಪತ್ನಿ ಮತ್ತು ಮೂವರು ಮಕ್ಕಳಿದ್ದಾರೆ.

ಕೃಪೆ: ಎನ್ಡಿಟಿವಿ


ಓದಿ: ಬೆಂಗಳೂರಿನ ಹೊರಗೂ ರೈಲಿಗಾಗಿ ಕಾಯುತ್ತಿರುವ ವಲಸೆ ಕಾರ್ಮಿಕರು: ಇತ್ತ ಹರಿಯುವುದೇ ಸರ್ಕಾರದ ಗಮನ?


ವಿಡಿಯೋ ನೋಡಿ: ಸದ್ದು…… ಈ ಸುದ್ದಿಗಳೇನಾದವು? – 8 ನೇ ಸಂಚಿಕೆ(Facebook ವಿಡಿಯೋ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...