Homeಮುಖಪುಟಹಳ್ಳಿ ತಲುಪಲು 500 ಕಿ.ಮೀ. ಸೈಕಲ್ ಪ್ರಯಾಣ ಹೊರಟ 'ಲಕ್ಷ್ಮಿ'! : ಮೋದಿ ಪ್ಯಾಕೇಜ್‌ನಿಂದ ಪ್ರಯೋಜನವಿಲ್ಲ...

ಹಳ್ಳಿ ತಲುಪಲು 500 ಕಿ.ಮೀ. ಸೈಕಲ್ ಪ್ರಯಾಣ ಹೊರಟ ‘ಲಕ್ಷ್ಮಿ’! : ಮೋದಿ ಪ್ಯಾಕೇಜ್‌ನಿಂದ ಪ್ರಯೋಜನವಿಲ್ಲ ಎನ್ನುತ್ತಾರೆ.

- Advertisement -
- Advertisement -

ಪತಿ ಹಾಗೂ ಸಣ್ಣ ಮಗುವಿನೊಂದಿಗೆ ಲಕ್ನೋದಲ್ಲಿ ದಿನಗೂಲಿ ಕಾರ್ಮಿಕಳಾಗಿ ಜೀವನ ಸಾಗಿಸುತ್ತಿದ್ದ ಲಕ್ಷ್ಮಿ ಸಾಹು 500 ಕಿ.ಮೀ. ದೂರದ ಛತ್ತೀಸ್ ಗಡದ ತನ್ನ ಹಳ್ಳಿಗೆ ಸೈಕಲ್ ಮೂಲಕ ಹೊರಟಿದ್ದಾರೆ.

ಲಕ್ಷ್ಮಿ ಸಾಹು ಉತ್ತರಪ್ರದೇಶದ ರಾಜಧಾನಿಯಲ್ಲಿ ತನ್ನ ಪತಿಯೊಂದಿಗೆ ದೈನಂದಿನ ಕೂಲಿ ಕಾರ್ಮಿಕಳಾಗಿ ಜೀವನ ಸಾಗಿಸುತ್ತಿದ್ದರು. ದೇಶದಾದ್ಯಂತ ವರದಿಯಾದ ವಲಸೆ ಕಾರ್ಮಿಕರ ದುರಂತ ಕತೆಗಳ ನಡುವೆ ಸುರಕ್ಷಿತವಾಗಿ ಮನೆಗೆ ಸೇರುವುದರ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿರುವುದಾಗಿ ಅವರು ಹೇಳುತ್ತಾರೆ.

“ಕೆಲಸವಿಲ್ಲದಿದ್ದಾಗ ಸಂತೋಷವಾಗಿರಲು ಹೇಗೆ ಸಾಧ್ಯ? ನಾನು ಕಾರ್ಮಿಕಳು ಉದ್ಯೋಗವಿಲ್ಲ … ಏನು ತಿನ್ನಲಿ? ಇದಕ್ಕಿಂತ ನನ್ನು ಹಳ್ಳಿಗೆ ಹಿಂತಿರುಗಿ ಹೊಲಗಳಲ್ಲಿ ಕೆಲಸ ಮಾಡುವುದು ಉತ್ತಮ” ಎಂದು ಅವರು ಹೇಳುತ್ತಾರೆ.

ಲಕ್ಷ್ಮಿ ಸಾಹು, ಅವರ ಪತಿ ಮತ್ತು ಅವರ ಚಿಕ್ಕ ಮಗು ಮಂಗಳವಾರ ರಾತ್ರಿಯಿಂದ ತಮ್ಮ ಗುಡಿಸಲಿನಿಂದ ಹೊರಟು, 70 ಕಿ.ಮೀ ದೂರದಲ್ಲಿರುವ ರಾಯ್ ಬರೇಲಿಯನ್ನು ತಲುಪಿದ್ದರು. ಅಲ್ಲಿ ಅವರು ಪತ್ರಕರ್ತರನ್ನು ಭೇಟಿಯಾಗುವಾಗ ಬಿಸಿಲಿಗೆ ಬಳಲಿ ಚಹಾ ಕುಡಿಯಲು ರಸ್ತೆಯ ಬದಿಯಲ್ಲಿ ಕುಳಿತಿದ್ದರು.

ಲಕ್ಷ್ಮಿ ಮತ್ತು ಅವರ ಕುಟುಂಬವು ತಮ್ಮ ಮುಂದಿನ ಪ್ರಯಾಣಕ್ಕಾಗಿ ತಯಾರಾಗುತ್ತಿದ್ದಂತೆ ಪತ್ರಕರ್ತರು ಪ್ರಧಾನ ಮಂತ್ರಿಯ ಪ್ಯಾಕೇಜಿನ ಪ್ರಯೋಜನಗಳ ಬಗ್ಗೆ ಪ್ರಶ್ನೆ ಕೇಳಿದ್ದಾರೆ.

“ಅದರಿಂದ ಏನು ಪ್ರಯೋಜನ? ನಾವು ಇದ್ದಲ್ಲಿ ನಮಗೆ ಪಡಿತರ ಸಿಗಲಿಲ್ಲ. ನಾನು ಮೂರು ಪಡಿತರ ಅಂಗಡಿಗಳಿಗೆ ಹೋಗಿದ್ದೆ. ಎಲ್ಲರೂ ನನ್ನ ಆಧಾರ್ ಕೇಳಿದರು, ಯಾರೂ ನನಗೆ ಅಕ್ಕಿ ಕೊಟ್ಟಿಲ್ಲ. ಅವರು ನಮಗೆ ಮನೆಗೆ ಹೋಗಲು ಬಸ್ಸುಗಳನ್ನು ವ್ಯವಸ್ಥೆ ಮಾಡಿದ್ದರೆ ಚೆನ್ನಾಗಿತ್ತು. ಕನಿಷ್ಠ ಸರ್ಕಾರವು ನಮ್ಮನ್ನು ನೋಡಿಕೊಳ್ಳುತ್ತದೆ ಎಂದು ನಾವು ಹೇಳಬಹುದಿತ್ತು,” ಎಂದು ಹೇಳತ್ತಾರೆ.

ಪ್ರಧಾನಿ ಮೋದಿ “ಪ್ಯಾಕೇಜ್ … ಸಣ್ಣ ಉದ್ಯಮಗಳು, ಕಾರ್ಮಿಕರು, ರೈತರು, ಮಧ್ಯಮ ವರ್ಗ ಮತ್ತು ಗೃಹ ಕೈಗಾರಿಕೆಗಳಿಗೆ ಸಹಾಯ ಮಾಡುತ್ತದೆ. ಇದು ವಲಸೆ ಕಾರ್ಮಿಕರ ಯೋಗಕ್ಷೇಮದ ಮೇಲೆ  ಕೇಂದ್ರೀಕರಿಸುತ್ತದೆ” ಎಂದು ತಮ್ಮ ಭಾಷಣದಲ್ಲಿ ಹೇಳುತ್ತಾ “ಈ ಅವಧಿಯಲ್ಲಿ ದಿನಗೂಲಿ ಕಾರ್ಮಿಕರು, ವಲಸೆ ಕಾರ್ಮಿಕರು ಹೆಚ್ಚು ತೊಂದರೆ ಅನುಭವಿಸಿದ್ದಾರೆ. ಅವರಿಗಾಗಿ ಏನಾದರೂ ಮಾಡುವುದು ನಮ್ಮ ಕರ್ತವ್ಯ ” ಎಂದು ಹೇಳಿದ್ದರು.

ಮಾರ್ಚ್ ನಿಂದ ಲಾಕ್ ಡೌನ್ ಘೋಷಿಸಿದ ನಂತರ, ಉದ್ಯೋಗ ಅಥವಾ ಹಣವಿಲ್ಲದೆ ಸಿಕ್ಕಿಹಾಕಿಕೊಂಡಿರುವ ಲಕ್ಷಾಂತರ ವಲಸೆ ಕಾರ್ಮಿಕರು ಮನೆಗೆ ಕಾಲ್ನಡಿಗೆಯಲ್ಲೇ ಪ್ರಯಾಣಿಸಿದ್ದರು. ನಂತರ ಕೇಂದ್ರ ಸರ್ಕಾರವು “ಶ್ರಮಿಕ್” ವಿಶೇಷ ರೈಲುಗಳನ್ನು ಬಿಟ್ಟಿತ್ತಾದರೂ ಸಾವಿರಾರು ವಲಸೆ ಕಾರ್ಮಿಕರು ಇನ್ನೂ ನೂರಾರು ಕಿಲೋಮೀಟರ್ ದೂರದ ತಮ್ಮ ಮನೆಗೆ ಕಾಲ್ನಡಿಗೆ ಅಥವಾ ಸೈಕಲ್ ಮೂಲಕ ಪ್ರಯಾಣಿಸುತ್ತಿದ್ದಾರೆ.

ಈ ಮಹಾವಲಸೆಯಲ್ಲಿ ಅನೇಕ ವಲಸೆ ಕಾರ್ಮಿಕರು ಅಫಘಾತ, ಬಳಲುವಿಕೆಯಿಂದ ದಾರಿಯಲ್ಲಿ ಸಾವನ್ನಪ್ಪಿದ್ದಾರೆ.

ಇಂದು ಬೆಳಿಗ್ಗೆ ಗುಜರಾತ್‌ನಿಂದ ಹಿಂತಿರುಗುತ್ತಿದ್ದ ಕಾರ್ಮಿಕರ ಗುಂಪಿನಲ್ಲಿದ್ದ ಮಹಿಳೆ ಮತ್ತು ಮಗು ಉತ್ತರ ಪ್ರದೇಶದ ಕಾನ್ಪುರ್ ದೇಹತ್ ಜಿಲ್ಲೆಯಲ್ಲಿ ಪ್ರಯಾಣಿಸುತ್ತಿದ್ದಾಗ, ತಾವು ಪ್ರಯಾಣಿಸುತ್ತಿದ್ದ ಮಿನಿ ಟ್ರಕ್ ದೊಡ್ಡ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದಾರೆ.

ಕಳೆದ ಶನಿವಾರ ದೆಹಲಿಯಿಂದ 1000 ಕಿ.ಮಿ. ದೂರದ ಬಿಹಾರದ ಪೂರ್ವ ಚಂಪಾರನ್‌ಗೆ ತಲುಪಲು ಸೈಕಲ್ ಚಲಾಯಿಸುತ್ತಿದ್ದ ವಲಸೆ ಕಾರ್ಮಿಕರೊಬ್ಬರು ಲಕ್ನೋದಲ್ಲಿ ಕಾರಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಅವರಿಗೆ ಪತ್ನಿ ಮತ್ತು ಮೂವರು ಮಕ್ಕಳಿದ್ದಾರೆ.

ಕೃಪೆ: ಎನ್ಡಿಟಿವಿ


ಓದಿ: ಬೆಂಗಳೂರಿನ ಹೊರಗೂ ರೈಲಿಗಾಗಿ ಕಾಯುತ್ತಿರುವ ವಲಸೆ ಕಾರ್ಮಿಕರು: ಇತ್ತ ಹರಿಯುವುದೇ ಸರ್ಕಾರದ ಗಮನ?


ವಿಡಿಯೋ ನೋಡಿ: ಸದ್ದು…… ಈ ಸುದ್ದಿಗಳೇನಾದವು? – 8 ನೇ ಸಂಚಿಕೆ(Facebook ವಿಡಿಯೋ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...