Homeಮುಖಪುಟಹಳ್ಳಿ ತಲುಪಲು 500 ಕಿ.ಮೀ. ಸೈಕಲ್ ಪ್ರಯಾಣ ಹೊರಟ 'ಲಕ್ಷ್ಮಿ'! : ಮೋದಿ ಪ್ಯಾಕೇಜ್‌ನಿಂದ ಪ್ರಯೋಜನವಿಲ್ಲ...

ಹಳ್ಳಿ ತಲುಪಲು 500 ಕಿ.ಮೀ. ಸೈಕಲ್ ಪ್ರಯಾಣ ಹೊರಟ ‘ಲಕ್ಷ್ಮಿ’! : ಮೋದಿ ಪ್ಯಾಕೇಜ್‌ನಿಂದ ಪ್ರಯೋಜನವಿಲ್ಲ ಎನ್ನುತ್ತಾರೆ.

- Advertisement -
- Advertisement -

ಪತಿ ಹಾಗೂ ಸಣ್ಣ ಮಗುವಿನೊಂದಿಗೆ ಲಕ್ನೋದಲ್ಲಿ ದಿನಗೂಲಿ ಕಾರ್ಮಿಕಳಾಗಿ ಜೀವನ ಸಾಗಿಸುತ್ತಿದ್ದ ಲಕ್ಷ್ಮಿ ಸಾಹು 500 ಕಿ.ಮೀ. ದೂರದ ಛತ್ತೀಸ್ ಗಡದ ತನ್ನ ಹಳ್ಳಿಗೆ ಸೈಕಲ್ ಮೂಲಕ ಹೊರಟಿದ್ದಾರೆ.

ಲಕ್ಷ್ಮಿ ಸಾಹು ಉತ್ತರಪ್ರದೇಶದ ರಾಜಧಾನಿಯಲ್ಲಿ ತನ್ನ ಪತಿಯೊಂದಿಗೆ ದೈನಂದಿನ ಕೂಲಿ ಕಾರ್ಮಿಕಳಾಗಿ ಜೀವನ ಸಾಗಿಸುತ್ತಿದ್ದರು. ದೇಶದಾದ್ಯಂತ ವರದಿಯಾದ ವಲಸೆ ಕಾರ್ಮಿಕರ ದುರಂತ ಕತೆಗಳ ನಡುವೆ ಸುರಕ್ಷಿತವಾಗಿ ಮನೆಗೆ ಸೇರುವುದರ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿರುವುದಾಗಿ ಅವರು ಹೇಳುತ್ತಾರೆ.

“ಕೆಲಸವಿಲ್ಲದಿದ್ದಾಗ ಸಂತೋಷವಾಗಿರಲು ಹೇಗೆ ಸಾಧ್ಯ? ನಾನು ಕಾರ್ಮಿಕಳು ಉದ್ಯೋಗವಿಲ್ಲ … ಏನು ತಿನ್ನಲಿ? ಇದಕ್ಕಿಂತ ನನ್ನು ಹಳ್ಳಿಗೆ ಹಿಂತಿರುಗಿ ಹೊಲಗಳಲ್ಲಿ ಕೆಲಸ ಮಾಡುವುದು ಉತ್ತಮ” ಎಂದು ಅವರು ಹೇಳುತ್ತಾರೆ.

ಲಕ್ಷ್ಮಿ ಸಾಹು, ಅವರ ಪತಿ ಮತ್ತು ಅವರ ಚಿಕ್ಕ ಮಗು ಮಂಗಳವಾರ ರಾತ್ರಿಯಿಂದ ತಮ್ಮ ಗುಡಿಸಲಿನಿಂದ ಹೊರಟು, 70 ಕಿ.ಮೀ ದೂರದಲ್ಲಿರುವ ರಾಯ್ ಬರೇಲಿಯನ್ನು ತಲುಪಿದ್ದರು. ಅಲ್ಲಿ ಅವರು ಪತ್ರಕರ್ತರನ್ನು ಭೇಟಿಯಾಗುವಾಗ ಬಿಸಿಲಿಗೆ ಬಳಲಿ ಚಹಾ ಕುಡಿಯಲು ರಸ್ತೆಯ ಬದಿಯಲ್ಲಿ ಕುಳಿತಿದ್ದರು.

ಲಕ್ಷ್ಮಿ ಮತ್ತು ಅವರ ಕುಟುಂಬವು ತಮ್ಮ ಮುಂದಿನ ಪ್ರಯಾಣಕ್ಕಾಗಿ ತಯಾರಾಗುತ್ತಿದ್ದಂತೆ ಪತ್ರಕರ್ತರು ಪ್ರಧಾನ ಮಂತ್ರಿಯ ಪ್ಯಾಕೇಜಿನ ಪ್ರಯೋಜನಗಳ ಬಗ್ಗೆ ಪ್ರಶ್ನೆ ಕೇಳಿದ್ದಾರೆ.

“ಅದರಿಂದ ಏನು ಪ್ರಯೋಜನ? ನಾವು ಇದ್ದಲ್ಲಿ ನಮಗೆ ಪಡಿತರ ಸಿಗಲಿಲ್ಲ. ನಾನು ಮೂರು ಪಡಿತರ ಅಂಗಡಿಗಳಿಗೆ ಹೋಗಿದ್ದೆ. ಎಲ್ಲರೂ ನನ್ನ ಆಧಾರ್ ಕೇಳಿದರು, ಯಾರೂ ನನಗೆ ಅಕ್ಕಿ ಕೊಟ್ಟಿಲ್ಲ. ಅವರು ನಮಗೆ ಮನೆಗೆ ಹೋಗಲು ಬಸ್ಸುಗಳನ್ನು ವ್ಯವಸ್ಥೆ ಮಾಡಿದ್ದರೆ ಚೆನ್ನಾಗಿತ್ತು. ಕನಿಷ್ಠ ಸರ್ಕಾರವು ನಮ್ಮನ್ನು ನೋಡಿಕೊಳ್ಳುತ್ತದೆ ಎಂದು ನಾವು ಹೇಳಬಹುದಿತ್ತು,” ಎಂದು ಹೇಳತ್ತಾರೆ.

ಪ್ರಧಾನಿ ಮೋದಿ “ಪ್ಯಾಕೇಜ್ … ಸಣ್ಣ ಉದ್ಯಮಗಳು, ಕಾರ್ಮಿಕರು, ರೈತರು, ಮಧ್ಯಮ ವರ್ಗ ಮತ್ತು ಗೃಹ ಕೈಗಾರಿಕೆಗಳಿಗೆ ಸಹಾಯ ಮಾಡುತ್ತದೆ. ಇದು ವಲಸೆ ಕಾರ್ಮಿಕರ ಯೋಗಕ್ಷೇಮದ ಮೇಲೆ  ಕೇಂದ್ರೀಕರಿಸುತ್ತದೆ” ಎಂದು ತಮ್ಮ ಭಾಷಣದಲ್ಲಿ ಹೇಳುತ್ತಾ “ಈ ಅವಧಿಯಲ್ಲಿ ದಿನಗೂಲಿ ಕಾರ್ಮಿಕರು, ವಲಸೆ ಕಾರ್ಮಿಕರು ಹೆಚ್ಚು ತೊಂದರೆ ಅನುಭವಿಸಿದ್ದಾರೆ. ಅವರಿಗಾಗಿ ಏನಾದರೂ ಮಾಡುವುದು ನಮ್ಮ ಕರ್ತವ್ಯ ” ಎಂದು ಹೇಳಿದ್ದರು.

ಮಾರ್ಚ್ ನಿಂದ ಲಾಕ್ ಡೌನ್ ಘೋಷಿಸಿದ ನಂತರ, ಉದ್ಯೋಗ ಅಥವಾ ಹಣವಿಲ್ಲದೆ ಸಿಕ್ಕಿಹಾಕಿಕೊಂಡಿರುವ ಲಕ್ಷಾಂತರ ವಲಸೆ ಕಾರ್ಮಿಕರು ಮನೆಗೆ ಕಾಲ್ನಡಿಗೆಯಲ್ಲೇ ಪ್ರಯಾಣಿಸಿದ್ದರು. ನಂತರ ಕೇಂದ್ರ ಸರ್ಕಾರವು “ಶ್ರಮಿಕ್” ವಿಶೇಷ ರೈಲುಗಳನ್ನು ಬಿಟ್ಟಿತ್ತಾದರೂ ಸಾವಿರಾರು ವಲಸೆ ಕಾರ್ಮಿಕರು ಇನ್ನೂ ನೂರಾರು ಕಿಲೋಮೀಟರ್ ದೂರದ ತಮ್ಮ ಮನೆಗೆ ಕಾಲ್ನಡಿಗೆ ಅಥವಾ ಸೈಕಲ್ ಮೂಲಕ ಪ್ರಯಾಣಿಸುತ್ತಿದ್ದಾರೆ.

ಈ ಮಹಾವಲಸೆಯಲ್ಲಿ ಅನೇಕ ವಲಸೆ ಕಾರ್ಮಿಕರು ಅಫಘಾತ, ಬಳಲುವಿಕೆಯಿಂದ ದಾರಿಯಲ್ಲಿ ಸಾವನ್ನಪ್ಪಿದ್ದಾರೆ.

ಇಂದು ಬೆಳಿಗ್ಗೆ ಗುಜರಾತ್‌ನಿಂದ ಹಿಂತಿರುಗುತ್ತಿದ್ದ ಕಾರ್ಮಿಕರ ಗುಂಪಿನಲ್ಲಿದ್ದ ಮಹಿಳೆ ಮತ್ತು ಮಗು ಉತ್ತರ ಪ್ರದೇಶದ ಕಾನ್ಪುರ್ ದೇಹತ್ ಜಿಲ್ಲೆಯಲ್ಲಿ ಪ್ರಯಾಣಿಸುತ್ತಿದ್ದಾಗ, ತಾವು ಪ್ರಯಾಣಿಸುತ್ತಿದ್ದ ಮಿನಿ ಟ್ರಕ್ ದೊಡ್ಡ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದಾರೆ.

ಕಳೆದ ಶನಿವಾರ ದೆಹಲಿಯಿಂದ 1000 ಕಿ.ಮಿ. ದೂರದ ಬಿಹಾರದ ಪೂರ್ವ ಚಂಪಾರನ್‌ಗೆ ತಲುಪಲು ಸೈಕಲ್ ಚಲಾಯಿಸುತ್ತಿದ್ದ ವಲಸೆ ಕಾರ್ಮಿಕರೊಬ್ಬರು ಲಕ್ನೋದಲ್ಲಿ ಕಾರಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಅವರಿಗೆ ಪತ್ನಿ ಮತ್ತು ಮೂವರು ಮಕ್ಕಳಿದ್ದಾರೆ.

ಕೃಪೆ: ಎನ್ಡಿಟಿವಿ


ಓದಿ: ಬೆಂಗಳೂರಿನ ಹೊರಗೂ ರೈಲಿಗಾಗಿ ಕಾಯುತ್ತಿರುವ ವಲಸೆ ಕಾರ್ಮಿಕರು: ಇತ್ತ ಹರಿಯುವುದೇ ಸರ್ಕಾರದ ಗಮನ?


ವಿಡಿಯೋ ನೋಡಿ: ಸದ್ದು…… ಈ ಸುದ್ದಿಗಳೇನಾದವು? – 8 ನೇ ಸಂಚಿಕೆ(Facebook ವಿಡಿಯೋ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....