Homeಮುಖಪುಟಹಳ್ಳಿ ತಲುಪಲು 500 ಕಿ.ಮೀ. ಸೈಕಲ್ ಪ್ರಯಾಣ ಹೊರಟ 'ಲಕ್ಷ್ಮಿ'! : ಮೋದಿ ಪ್ಯಾಕೇಜ್‌ನಿಂದ ಪ್ರಯೋಜನವಿಲ್ಲ...

ಹಳ್ಳಿ ತಲುಪಲು 500 ಕಿ.ಮೀ. ಸೈಕಲ್ ಪ್ರಯಾಣ ಹೊರಟ ‘ಲಕ್ಷ್ಮಿ’! : ಮೋದಿ ಪ್ಯಾಕೇಜ್‌ನಿಂದ ಪ್ರಯೋಜನವಿಲ್ಲ ಎನ್ನುತ್ತಾರೆ.

- Advertisement -
- Advertisement -

ಪತಿ ಹಾಗೂ ಸಣ್ಣ ಮಗುವಿನೊಂದಿಗೆ ಲಕ್ನೋದಲ್ಲಿ ದಿನಗೂಲಿ ಕಾರ್ಮಿಕಳಾಗಿ ಜೀವನ ಸಾಗಿಸುತ್ತಿದ್ದ ಲಕ್ಷ್ಮಿ ಸಾಹು 500 ಕಿ.ಮೀ. ದೂರದ ಛತ್ತೀಸ್ ಗಡದ ತನ್ನ ಹಳ್ಳಿಗೆ ಸೈಕಲ್ ಮೂಲಕ ಹೊರಟಿದ್ದಾರೆ.

ಲಕ್ಷ್ಮಿ ಸಾಹು ಉತ್ತರಪ್ರದೇಶದ ರಾಜಧಾನಿಯಲ್ಲಿ ತನ್ನ ಪತಿಯೊಂದಿಗೆ ದೈನಂದಿನ ಕೂಲಿ ಕಾರ್ಮಿಕಳಾಗಿ ಜೀವನ ಸಾಗಿಸುತ್ತಿದ್ದರು. ದೇಶದಾದ್ಯಂತ ವರದಿಯಾದ ವಲಸೆ ಕಾರ್ಮಿಕರ ದುರಂತ ಕತೆಗಳ ನಡುವೆ ಸುರಕ್ಷಿತವಾಗಿ ಮನೆಗೆ ಸೇರುವುದರ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿರುವುದಾಗಿ ಅವರು ಹೇಳುತ್ತಾರೆ.

“ಕೆಲಸವಿಲ್ಲದಿದ್ದಾಗ ಸಂತೋಷವಾಗಿರಲು ಹೇಗೆ ಸಾಧ್ಯ? ನಾನು ಕಾರ್ಮಿಕಳು ಉದ್ಯೋಗವಿಲ್ಲ … ಏನು ತಿನ್ನಲಿ? ಇದಕ್ಕಿಂತ ನನ್ನು ಹಳ್ಳಿಗೆ ಹಿಂತಿರುಗಿ ಹೊಲಗಳಲ್ಲಿ ಕೆಲಸ ಮಾಡುವುದು ಉತ್ತಮ” ಎಂದು ಅವರು ಹೇಳುತ್ತಾರೆ.

ಲಕ್ಷ್ಮಿ ಸಾಹು, ಅವರ ಪತಿ ಮತ್ತು ಅವರ ಚಿಕ್ಕ ಮಗು ಮಂಗಳವಾರ ರಾತ್ರಿಯಿಂದ ತಮ್ಮ ಗುಡಿಸಲಿನಿಂದ ಹೊರಟು, 70 ಕಿ.ಮೀ ದೂರದಲ್ಲಿರುವ ರಾಯ್ ಬರೇಲಿಯನ್ನು ತಲುಪಿದ್ದರು. ಅಲ್ಲಿ ಅವರು ಪತ್ರಕರ್ತರನ್ನು ಭೇಟಿಯಾಗುವಾಗ ಬಿಸಿಲಿಗೆ ಬಳಲಿ ಚಹಾ ಕುಡಿಯಲು ರಸ್ತೆಯ ಬದಿಯಲ್ಲಿ ಕುಳಿತಿದ್ದರು.

ಲಕ್ಷ್ಮಿ ಮತ್ತು ಅವರ ಕುಟುಂಬವು ತಮ್ಮ ಮುಂದಿನ ಪ್ರಯಾಣಕ್ಕಾಗಿ ತಯಾರಾಗುತ್ತಿದ್ದಂತೆ ಪತ್ರಕರ್ತರು ಪ್ರಧಾನ ಮಂತ್ರಿಯ ಪ್ಯಾಕೇಜಿನ ಪ್ರಯೋಜನಗಳ ಬಗ್ಗೆ ಪ್ರಶ್ನೆ ಕೇಳಿದ್ದಾರೆ.

“ಅದರಿಂದ ಏನು ಪ್ರಯೋಜನ? ನಾವು ಇದ್ದಲ್ಲಿ ನಮಗೆ ಪಡಿತರ ಸಿಗಲಿಲ್ಲ. ನಾನು ಮೂರು ಪಡಿತರ ಅಂಗಡಿಗಳಿಗೆ ಹೋಗಿದ್ದೆ. ಎಲ್ಲರೂ ನನ್ನ ಆಧಾರ್ ಕೇಳಿದರು, ಯಾರೂ ನನಗೆ ಅಕ್ಕಿ ಕೊಟ್ಟಿಲ್ಲ. ಅವರು ನಮಗೆ ಮನೆಗೆ ಹೋಗಲು ಬಸ್ಸುಗಳನ್ನು ವ್ಯವಸ್ಥೆ ಮಾಡಿದ್ದರೆ ಚೆನ್ನಾಗಿತ್ತು. ಕನಿಷ್ಠ ಸರ್ಕಾರವು ನಮ್ಮನ್ನು ನೋಡಿಕೊಳ್ಳುತ್ತದೆ ಎಂದು ನಾವು ಹೇಳಬಹುದಿತ್ತು,” ಎಂದು ಹೇಳತ್ತಾರೆ.

ಪ್ರಧಾನಿ ಮೋದಿ “ಪ್ಯಾಕೇಜ್ … ಸಣ್ಣ ಉದ್ಯಮಗಳು, ಕಾರ್ಮಿಕರು, ರೈತರು, ಮಧ್ಯಮ ವರ್ಗ ಮತ್ತು ಗೃಹ ಕೈಗಾರಿಕೆಗಳಿಗೆ ಸಹಾಯ ಮಾಡುತ್ತದೆ. ಇದು ವಲಸೆ ಕಾರ್ಮಿಕರ ಯೋಗಕ್ಷೇಮದ ಮೇಲೆ  ಕೇಂದ್ರೀಕರಿಸುತ್ತದೆ” ಎಂದು ತಮ್ಮ ಭಾಷಣದಲ್ಲಿ ಹೇಳುತ್ತಾ “ಈ ಅವಧಿಯಲ್ಲಿ ದಿನಗೂಲಿ ಕಾರ್ಮಿಕರು, ವಲಸೆ ಕಾರ್ಮಿಕರು ಹೆಚ್ಚು ತೊಂದರೆ ಅನುಭವಿಸಿದ್ದಾರೆ. ಅವರಿಗಾಗಿ ಏನಾದರೂ ಮಾಡುವುದು ನಮ್ಮ ಕರ್ತವ್ಯ ” ಎಂದು ಹೇಳಿದ್ದರು.

ಮಾರ್ಚ್ ನಿಂದ ಲಾಕ್ ಡೌನ್ ಘೋಷಿಸಿದ ನಂತರ, ಉದ್ಯೋಗ ಅಥವಾ ಹಣವಿಲ್ಲದೆ ಸಿಕ್ಕಿಹಾಕಿಕೊಂಡಿರುವ ಲಕ್ಷಾಂತರ ವಲಸೆ ಕಾರ್ಮಿಕರು ಮನೆಗೆ ಕಾಲ್ನಡಿಗೆಯಲ್ಲೇ ಪ್ರಯಾಣಿಸಿದ್ದರು. ನಂತರ ಕೇಂದ್ರ ಸರ್ಕಾರವು “ಶ್ರಮಿಕ್” ವಿಶೇಷ ರೈಲುಗಳನ್ನು ಬಿಟ್ಟಿತ್ತಾದರೂ ಸಾವಿರಾರು ವಲಸೆ ಕಾರ್ಮಿಕರು ಇನ್ನೂ ನೂರಾರು ಕಿಲೋಮೀಟರ್ ದೂರದ ತಮ್ಮ ಮನೆಗೆ ಕಾಲ್ನಡಿಗೆ ಅಥವಾ ಸೈಕಲ್ ಮೂಲಕ ಪ್ರಯಾಣಿಸುತ್ತಿದ್ದಾರೆ.

ಈ ಮಹಾವಲಸೆಯಲ್ಲಿ ಅನೇಕ ವಲಸೆ ಕಾರ್ಮಿಕರು ಅಫಘಾತ, ಬಳಲುವಿಕೆಯಿಂದ ದಾರಿಯಲ್ಲಿ ಸಾವನ್ನಪ್ಪಿದ್ದಾರೆ.

ಇಂದು ಬೆಳಿಗ್ಗೆ ಗುಜರಾತ್‌ನಿಂದ ಹಿಂತಿರುಗುತ್ತಿದ್ದ ಕಾರ್ಮಿಕರ ಗುಂಪಿನಲ್ಲಿದ್ದ ಮಹಿಳೆ ಮತ್ತು ಮಗು ಉತ್ತರ ಪ್ರದೇಶದ ಕಾನ್ಪುರ್ ದೇಹತ್ ಜಿಲ್ಲೆಯಲ್ಲಿ ಪ್ರಯಾಣಿಸುತ್ತಿದ್ದಾಗ, ತಾವು ಪ್ರಯಾಣಿಸುತ್ತಿದ್ದ ಮಿನಿ ಟ್ರಕ್ ದೊಡ್ಡ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದಾರೆ.

ಕಳೆದ ಶನಿವಾರ ದೆಹಲಿಯಿಂದ 1000 ಕಿ.ಮಿ. ದೂರದ ಬಿಹಾರದ ಪೂರ್ವ ಚಂಪಾರನ್‌ಗೆ ತಲುಪಲು ಸೈಕಲ್ ಚಲಾಯಿಸುತ್ತಿದ್ದ ವಲಸೆ ಕಾರ್ಮಿಕರೊಬ್ಬರು ಲಕ್ನೋದಲ್ಲಿ ಕಾರಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಅವರಿಗೆ ಪತ್ನಿ ಮತ್ತು ಮೂವರು ಮಕ್ಕಳಿದ್ದಾರೆ.

ಕೃಪೆ: ಎನ್ಡಿಟಿವಿ


ಓದಿ: ಬೆಂಗಳೂರಿನ ಹೊರಗೂ ರೈಲಿಗಾಗಿ ಕಾಯುತ್ತಿರುವ ವಲಸೆ ಕಾರ್ಮಿಕರು: ಇತ್ತ ಹರಿಯುವುದೇ ಸರ್ಕಾರದ ಗಮನ?


ವಿಡಿಯೋ ನೋಡಿ: ಸದ್ದು…… ಈ ಸುದ್ದಿಗಳೇನಾದವು? – 8 ನೇ ಸಂಚಿಕೆ(Facebook ವಿಡಿಯೋ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...