Homeಮುಖಪುಟಹಳ್ಳಿ ತಲುಪಲು 500 ಕಿ.ಮೀ. ಸೈಕಲ್ ಪ್ರಯಾಣ ಹೊರಟ 'ಲಕ್ಷ್ಮಿ'! : ಮೋದಿ ಪ್ಯಾಕೇಜ್‌ನಿಂದ ಪ್ರಯೋಜನವಿಲ್ಲ...

ಹಳ್ಳಿ ತಲುಪಲು 500 ಕಿ.ಮೀ. ಸೈಕಲ್ ಪ್ರಯಾಣ ಹೊರಟ ‘ಲಕ್ಷ್ಮಿ’! : ಮೋದಿ ಪ್ಯಾಕೇಜ್‌ನಿಂದ ಪ್ರಯೋಜನವಿಲ್ಲ ಎನ್ನುತ್ತಾರೆ.

- Advertisement -
- Advertisement -

ಪತಿ ಹಾಗೂ ಸಣ್ಣ ಮಗುವಿನೊಂದಿಗೆ ಲಕ್ನೋದಲ್ಲಿ ದಿನಗೂಲಿ ಕಾರ್ಮಿಕಳಾಗಿ ಜೀವನ ಸಾಗಿಸುತ್ತಿದ್ದ ಲಕ್ಷ್ಮಿ ಸಾಹು 500 ಕಿ.ಮೀ. ದೂರದ ಛತ್ತೀಸ್ ಗಡದ ತನ್ನ ಹಳ್ಳಿಗೆ ಸೈಕಲ್ ಮೂಲಕ ಹೊರಟಿದ್ದಾರೆ.

ಲಕ್ಷ್ಮಿ ಸಾಹು ಉತ್ತರಪ್ರದೇಶದ ರಾಜಧಾನಿಯಲ್ಲಿ ತನ್ನ ಪತಿಯೊಂದಿಗೆ ದೈನಂದಿನ ಕೂಲಿ ಕಾರ್ಮಿಕಳಾಗಿ ಜೀವನ ಸಾಗಿಸುತ್ತಿದ್ದರು. ದೇಶದಾದ್ಯಂತ ವರದಿಯಾದ ವಲಸೆ ಕಾರ್ಮಿಕರ ದುರಂತ ಕತೆಗಳ ನಡುವೆ ಸುರಕ್ಷಿತವಾಗಿ ಮನೆಗೆ ಸೇರುವುದರ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿರುವುದಾಗಿ ಅವರು ಹೇಳುತ್ತಾರೆ.

“ಕೆಲಸವಿಲ್ಲದಿದ್ದಾಗ ಸಂತೋಷವಾಗಿರಲು ಹೇಗೆ ಸಾಧ್ಯ? ನಾನು ಕಾರ್ಮಿಕಳು ಉದ್ಯೋಗವಿಲ್ಲ … ಏನು ತಿನ್ನಲಿ? ಇದಕ್ಕಿಂತ ನನ್ನು ಹಳ್ಳಿಗೆ ಹಿಂತಿರುಗಿ ಹೊಲಗಳಲ್ಲಿ ಕೆಲಸ ಮಾಡುವುದು ಉತ್ತಮ” ಎಂದು ಅವರು ಹೇಳುತ್ತಾರೆ.

ಲಕ್ಷ್ಮಿ ಸಾಹು, ಅವರ ಪತಿ ಮತ್ತು ಅವರ ಚಿಕ್ಕ ಮಗು ಮಂಗಳವಾರ ರಾತ್ರಿಯಿಂದ ತಮ್ಮ ಗುಡಿಸಲಿನಿಂದ ಹೊರಟು, 70 ಕಿ.ಮೀ ದೂರದಲ್ಲಿರುವ ರಾಯ್ ಬರೇಲಿಯನ್ನು ತಲುಪಿದ್ದರು. ಅಲ್ಲಿ ಅವರು ಪತ್ರಕರ್ತರನ್ನು ಭೇಟಿಯಾಗುವಾಗ ಬಿಸಿಲಿಗೆ ಬಳಲಿ ಚಹಾ ಕುಡಿಯಲು ರಸ್ತೆಯ ಬದಿಯಲ್ಲಿ ಕುಳಿತಿದ್ದರು.

ಲಕ್ಷ್ಮಿ ಮತ್ತು ಅವರ ಕುಟುಂಬವು ತಮ್ಮ ಮುಂದಿನ ಪ್ರಯಾಣಕ್ಕಾಗಿ ತಯಾರಾಗುತ್ತಿದ್ದಂತೆ ಪತ್ರಕರ್ತರು ಪ್ರಧಾನ ಮಂತ್ರಿಯ ಪ್ಯಾಕೇಜಿನ ಪ್ರಯೋಜನಗಳ ಬಗ್ಗೆ ಪ್ರಶ್ನೆ ಕೇಳಿದ್ದಾರೆ.

“ಅದರಿಂದ ಏನು ಪ್ರಯೋಜನ? ನಾವು ಇದ್ದಲ್ಲಿ ನಮಗೆ ಪಡಿತರ ಸಿಗಲಿಲ್ಲ. ನಾನು ಮೂರು ಪಡಿತರ ಅಂಗಡಿಗಳಿಗೆ ಹೋಗಿದ್ದೆ. ಎಲ್ಲರೂ ನನ್ನ ಆಧಾರ್ ಕೇಳಿದರು, ಯಾರೂ ನನಗೆ ಅಕ್ಕಿ ಕೊಟ್ಟಿಲ್ಲ. ಅವರು ನಮಗೆ ಮನೆಗೆ ಹೋಗಲು ಬಸ್ಸುಗಳನ್ನು ವ್ಯವಸ್ಥೆ ಮಾಡಿದ್ದರೆ ಚೆನ್ನಾಗಿತ್ತು. ಕನಿಷ್ಠ ಸರ್ಕಾರವು ನಮ್ಮನ್ನು ನೋಡಿಕೊಳ್ಳುತ್ತದೆ ಎಂದು ನಾವು ಹೇಳಬಹುದಿತ್ತು,” ಎಂದು ಹೇಳತ್ತಾರೆ.

ಪ್ರಧಾನಿ ಮೋದಿ “ಪ್ಯಾಕೇಜ್ … ಸಣ್ಣ ಉದ್ಯಮಗಳು, ಕಾರ್ಮಿಕರು, ರೈತರು, ಮಧ್ಯಮ ವರ್ಗ ಮತ್ತು ಗೃಹ ಕೈಗಾರಿಕೆಗಳಿಗೆ ಸಹಾಯ ಮಾಡುತ್ತದೆ. ಇದು ವಲಸೆ ಕಾರ್ಮಿಕರ ಯೋಗಕ್ಷೇಮದ ಮೇಲೆ  ಕೇಂದ್ರೀಕರಿಸುತ್ತದೆ” ಎಂದು ತಮ್ಮ ಭಾಷಣದಲ್ಲಿ ಹೇಳುತ್ತಾ “ಈ ಅವಧಿಯಲ್ಲಿ ದಿನಗೂಲಿ ಕಾರ್ಮಿಕರು, ವಲಸೆ ಕಾರ್ಮಿಕರು ಹೆಚ್ಚು ತೊಂದರೆ ಅನುಭವಿಸಿದ್ದಾರೆ. ಅವರಿಗಾಗಿ ಏನಾದರೂ ಮಾಡುವುದು ನಮ್ಮ ಕರ್ತವ್ಯ ” ಎಂದು ಹೇಳಿದ್ದರು.

ಮಾರ್ಚ್ ನಿಂದ ಲಾಕ್ ಡೌನ್ ಘೋಷಿಸಿದ ನಂತರ, ಉದ್ಯೋಗ ಅಥವಾ ಹಣವಿಲ್ಲದೆ ಸಿಕ್ಕಿಹಾಕಿಕೊಂಡಿರುವ ಲಕ್ಷಾಂತರ ವಲಸೆ ಕಾರ್ಮಿಕರು ಮನೆಗೆ ಕಾಲ್ನಡಿಗೆಯಲ್ಲೇ ಪ್ರಯಾಣಿಸಿದ್ದರು. ನಂತರ ಕೇಂದ್ರ ಸರ್ಕಾರವು “ಶ್ರಮಿಕ್” ವಿಶೇಷ ರೈಲುಗಳನ್ನು ಬಿಟ್ಟಿತ್ತಾದರೂ ಸಾವಿರಾರು ವಲಸೆ ಕಾರ್ಮಿಕರು ಇನ್ನೂ ನೂರಾರು ಕಿಲೋಮೀಟರ್ ದೂರದ ತಮ್ಮ ಮನೆಗೆ ಕಾಲ್ನಡಿಗೆ ಅಥವಾ ಸೈಕಲ್ ಮೂಲಕ ಪ್ರಯಾಣಿಸುತ್ತಿದ್ದಾರೆ.

ಈ ಮಹಾವಲಸೆಯಲ್ಲಿ ಅನೇಕ ವಲಸೆ ಕಾರ್ಮಿಕರು ಅಫಘಾತ, ಬಳಲುವಿಕೆಯಿಂದ ದಾರಿಯಲ್ಲಿ ಸಾವನ್ನಪ್ಪಿದ್ದಾರೆ.

ಇಂದು ಬೆಳಿಗ್ಗೆ ಗುಜರಾತ್‌ನಿಂದ ಹಿಂತಿರುಗುತ್ತಿದ್ದ ಕಾರ್ಮಿಕರ ಗುಂಪಿನಲ್ಲಿದ್ದ ಮಹಿಳೆ ಮತ್ತು ಮಗು ಉತ್ತರ ಪ್ರದೇಶದ ಕಾನ್ಪುರ್ ದೇಹತ್ ಜಿಲ್ಲೆಯಲ್ಲಿ ಪ್ರಯಾಣಿಸುತ್ತಿದ್ದಾಗ, ತಾವು ಪ್ರಯಾಣಿಸುತ್ತಿದ್ದ ಮಿನಿ ಟ್ರಕ್ ದೊಡ್ಡ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದಾರೆ.

ಕಳೆದ ಶನಿವಾರ ದೆಹಲಿಯಿಂದ 1000 ಕಿ.ಮಿ. ದೂರದ ಬಿಹಾರದ ಪೂರ್ವ ಚಂಪಾರನ್‌ಗೆ ತಲುಪಲು ಸೈಕಲ್ ಚಲಾಯಿಸುತ್ತಿದ್ದ ವಲಸೆ ಕಾರ್ಮಿಕರೊಬ್ಬರು ಲಕ್ನೋದಲ್ಲಿ ಕಾರಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಅವರಿಗೆ ಪತ್ನಿ ಮತ್ತು ಮೂವರು ಮಕ್ಕಳಿದ್ದಾರೆ.

ಕೃಪೆ: ಎನ್ಡಿಟಿವಿ


ಓದಿ: ಬೆಂಗಳೂರಿನ ಹೊರಗೂ ರೈಲಿಗಾಗಿ ಕಾಯುತ್ತಿರುವ ವಲಸೆ ಕಾರ್ಮಿಕರು: ಇತ್ತ ಹರಿಯುವುದೇ ಸರ್ಕಾರದ ಗಮನ?


ವಿಡಿಯೋ ನೋಡಿ: ಸದ್ದು…… ಈ ಸುದ್ದಿಗಳೇನಾದವು? – 8 ನೇ ಸಂಚಿಕೆ(Facebook ವಿಡಿಯೋ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....