Homeಮುಖಪುಟಹಳ್ಳಿ ತಲುಪಲು 500 ಕಿ.ಮೀ. ಸೈಕಲ್ ಪ್ರಯಾಣ ಹೊರಟ 'ಲಕ್ಷ್ಮಿ'! : ಮೋದಿ ಪ್ಯಾಕೇಜ್‌ನಿಂದ ಪ್ರಯೋಜನವಿಲ್ಲ...

ಹಳ್ಳಿ ತಲುಪಲು 500 ಕಿ.ಮೀ. ಸೈಕಲ್ ಪ್ರಯಾಣ ಹೊರಟ ‘ಲಕ್ಷ್ಮಿ’! : ಮೋದಿ ಪ್ಯಾಕೇಜ್‌ನಿಂದ ಪ್ರಯೋಜನವಿಲ್ಲ ಎನ್ನುತ್ತಾರೆ.

- Advertisement -
- Advertisement -

ಪತಿ ಹಾಗೂ ಸಣ್ಣ ಮಗುವಿನೊಂದಿಗೆ ಲಕ್ನೋದಲ್ಲಿ ದಿನಗೂಲಿ ಕಾರ್ಮಿಕಳಾಗಿ ಜೀವನ ಸಾಗಿಸುತ್ತಿದ್ದ ಲಕ್ಷ್ಮಿ ಸಾಹು 500 ಕಿ.ಮೀ. ದೂರದ ಛತ್ತೀಸ್ ಗಡದ ತನ್ನ ಹಳ್ಳಿಗೆ ಸೈಕಲ್ ಮೂಲಕ ಹೊರಟಿದ್ದಾರೆ.

ಲಕ್ಷ್ಮಿ ಸಾಹು ಉತ್ತರಪ್ರದೇಶದ ರಾಜಧಾನಿಯಲ್ಲಿ ತನ್ನ ಪತಿಯೊಂದಿಗೆ ದೈನಂದಿನ ಕೂಲಿ ಕಾರ್ಮಿಕಳಾಗಿ ಜೀವನ ಸಾಗಿಸುತ್ತಿದ್ದರು. ದೇಶದಾದ್ಯಂತ ವರದಿಯಾದ ವಲಸೆ ಕಾರ್ಮಿಕರ ದುರಂತ ಕತೆಗಳ ನಡುವೆ ಸುರಕ್ಷಿತವಾಗಿ ಮನೆಗೆ ಸೇರುವುದರ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿರುವುದಾಗಿ ಅವರು ಹೇಳುತ್ತಾರೆ.

“ಕೆಲಸವಿಲ್ಲದಿದ್ದಾಗ ಸಂತೋಷವಾಗಿರಲು ಹೇಗೆ ಸಾಧ್ಯ? ನಾನು ಕಾರ್ಮಿಕಳು ಉದ್ಯೋಗವಿಲ್ಲ … ಏನು ತಿನ್ನಲಿ? ಇದಕ್ಕಿಂತ ನನ್ನು ಹಳ್ಳಿಗೆ ಹಿಂತಿರುಗಿ ಹೊಲಗಳಲ್ಲಿ ಕೆಲಸ ಮಾಡುವುದು ಉತ್ತಮ” ಎಂದು ಅವರು ಹೇಳುತ್ತಾರೆ.

ಲಕ್ಷ್ಮಿ ಸಾಹು, ಅವರ ಪತಿ ಮತ್ತು ಅವರ ಚಿಕ್ಕ ಮಗು ಮಂಗಳವಾರ ರಾತ್ರಿಯಿಂದ ತಮ್ಮ ಗುಡಿಸಲಿನಿಂದ ಹೊರಟು, 70 ಕಿ.ಮೀ ದೂರದಲ್ಲಿರುವ ರಾಯ್ ಬರೇಲಿಯನ್ನು ತಲುಪಿದ್ದರು. ಅಲ್ಲಿ ಅವರು ಪತ್ರಕರ್ತರನ್ನು ಭೇಟಿಯಾಗುವಾಗ ಬಿಸಿಲಿಗೆ ಬಳಲಿ ಚಹಾ ಕುಡಿಯಲು ರಸ್ತೆಯ ಬದಿಯಲ್ಲಿ ಕುಳಿತಿದ್ದರು.

ಲಕ್ಷ್ಮಿ ಮತ್ತು ಅವರ ಕುಟುಂಬವು ತಮ್ಮ ಮುಂದಿನ ಪ್ರಯಾಣಕ್ಕಾಗಿ ತಯಾರಾಗುತ್ತಿದ್ದಂತೆ ಪತ್ರಕರ್ತರು ಪ್ರಧಾನ ಮಂತ್ರಿಯ ಪ್ಯಾಕೇಜಿನ ಪ್ರಯೋಜನಗಳ ಬಗ್ಗೆ ಪ್ರಶ್ನೆ ಕೇಳಿದ್ದಾರೆ.

“ಅದರಿಂದ ಏನು ಪ್ರಯೋಜನ? ನಾವು ಇದ್ದಲ್ಲಿ ನಮಗೆ ಪಡಿತರ ಸಿಗಲಿಲ್ಲ. ನಾನು ಮೂರು ಪಡಿತರ ಅಂಗಡಿಗಳಿಗೆ ಹೋಗಿದ್ದೆ. ಎಲ್ಲರೂ ನನ್ನ ಆಧಾರ್ ಕೇಳಿದರು, ಯಾರೂ ನನಗೆ ಅಕ್ಕಿ ಕೊಟ್ಟಿಲ್ಲ. ಅವರು ನಮಗೆ ಮನೆಗೆ ಹೋಗಲು ಬಸ್ಸುಗಳನ್ನು ವ್ಯವಸ್ಥೆ ಮಾಡಿದ್ದರೆ ಚೆನ್ನಾಗಿತ್ತು. ಕನಿಷ್ಠ ಸರ್ಕಾರವು ನಮ್ಮನ್ನು ನೋಡಿಕೊಳ್ಳುತ್ತದೆ ಎಂದು ನಾವು ಹೇಳಬಹುದಿತ್ತು,” ಎಂದು ಹೇಳತ್ತಾರೆ.

ಪ್ರಧಾನಿ ಮೋದಿ “ಪ್ಯಾಕೇಜ್ … ಸಣ್ಣ ಉದ್ಯಮಗಳು, ಕಾರ್ಮಿಕರು, ರೈತರು, ಮಧ್ಯಮ ವರ್ಗ ಮತ್ತು ಗೃಹ ಕೈಗಾರಿಕೆಗಳಿಗೆ ಸಹಾಯ ಮಾಡುತ್ತದೆ. ಇದು ವಲಸೆ ಕಾರ್ಮಿಕರ ಯೋಗಕ್ಷೇಮದ ಮೇಲೆ  ಕೇಂದ್ರೀಕರಿಸುತ್ತದೆ” ಎಂದು ತಮ್ಮ ಭಾಷಣದಲ್ಲಿ ಹೇಳುತ್ತಾ “ಈ ಅವಧಿಯಲ್ಲಿ ದಿನಗೂಲಿ ಕಾರ್ಮಿಕರು, ವಲಸೆ ಕಾರ್ಮಿಕರು ಹೆಚ್ಚು ತೊಂದರೆ ಅನುಭವಿಸಿದ್ದಾರೆ. ಅವರಿಗಾಗಿ ಏನಾದರೂ ಮಾಡುವುದು ನಮ್ಮ ಕರ್ತವ್ಯ ” ಎಂದು ಹೇಳಿದ್ದರು.

ಮಾರ್ಚ್ ನಿಂದ ಲಾಕ್ ಡೌನ್ ಘೋಷಿಸಿದ ನಂತರ, ಉದ್ಯೋಗ ಅಥವಾ ಹಣವಿಲ್ಲದೆ ಸಿಕ್ಕಿಹಾಕಿಕೊಂಡಿರುವ ಲಕ್ಷಾಂತರ ವಲಸೆ ಕಾರ್ಮಿಕರು ಮನೆಗೆ ಕಾಲ್ನಡಿಗೆಯಲ್ಲೇ ಪ್ರಯಾಣಿಸಿದ್ದರು. ನಂತರ ಕೇಂದ್ರ ಸರ್ಕಾರವು “ಶ್ರಮಿಕ್” ವಿಶೇಷ ರೈಲುಗಳನ್ನು ಬಿಟ್ಟಿತ್ತಾದರೂ ಸಾವಿರಾರು ವಲಸೆ ಕಾರ್ಮಿಕರು ಇನ್ನೂ ನೂರಾರು ಕಿಲೋಮೀಟರ್ ದೂರದ ತಮ್ಮ ಮನೆಗೆ ಕಾಲ್ನಡಿಗೆ ಅಥವಾ ಸೈಕಲ್ ಮೂಲಕ ಪ್ರಯಾಣಿಸುತ್ತಿದ್ದಾರೆ.

ಈ ಮಹಾವಲಸೆಯಲ್ಲಿ ಅನೇಕ ವಲಸೆ ಕಾರ್ಮಿಕರು ಅಫಘಾತ, ಬಳಲುವಿಕೆಯಿಂದ ದಾರಿಯಲ್ಲಿ ಸಾವನ್ನಪ್ಪಿದ್ದಾರೆ.

ಇಂದು ಬೆಳಿಗ್ಗೆ ಗುಜರಾತ್‌ನಿಂದ ಹಿಂತಿರುಗುತ್ತಿದ್ದ ಕಾರ್ಮಿಕರ ಗುಂಪಿನಲ್ಲಿದ್ದ ಮಹಿಳೆ ಮತ್ತು ಮಗು ಉತ್ತರ ಪ್ರದೇಶದ ಕಾನ್ಪುರ್ ದೇಹತ್ ಜಿಲ್ಲೆಯಲ್ಲಿ ಪ್ರಯಾಣಿಸುತ್ತಿದ್ದಾಗ, ತಾವು ಪ್ರಯಾಣಿಸುತ್ತಿದ್ದ ಮಿನಿ ಟ್ರಕ್ ದೊಡ್ಡ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದಾರೆ.

ಕಳೆದ ಶನಿವಾರ ದೆಹಲಿಯಿಂದ 1000 ಕಿ.ಮಿ. ದೂರದ ಬಿಹಾರದ ಪೂರ್ವ ಚಂಪಾರನ್‌ಗೆ ತಲುಪಲು ಸೈಕಲ್ ಚಲಾಯಿಸುತ್ತಿದ್ದ ವಲಸೆ ಕಾರ್ಮಿಕರೊಬ್ಬರು ಲಕ್ನೋದಲ್ಲಿ ಕಾರಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಅವರಿಗೆ ಪತ್ನಿ ಮತ್ತು ಮೂವರು ಮಕ್ಕಳಿದ್ದಾರೆ.

ಕೃಪೆ: ಎನ್ಡಿಟಿವಿ


ಓದಿ: ಬೆಂಗಳೂರಿನ ಹೊರಗೂ ರೈಲಿಗಾಗಿ ಕಾಯುತ್ತಿರುವ ವಲಸೆ ಕಾರ್ಮಿಕರು: ಇತ್ತ ಹರಿಯುವುದೇ ಸರ್ಕಾರದ ಗಮನ?


ವಿಡಿಯೋ ನೋಡಿ: ಸದ್ದು…… ಈ ಸುದ್ದಿಗಳೇನಾದವು? – 8 ನೇ ಸಂಚಿಕೆ(Facebook ವಿಡಿಯೋ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...