Homeಮುಖಪುಟ500 ವರ್ಷಗಳಷ್ಟು ಹಳೆಯ ಮಸೀದಿಯ ಸಮೀಕ್ಷೆಗೆ ಆದೇಶಿಸಿದ ಯುಪಿ ಕೋರ್ಟ್ - ತೀವ್ರ ಆಕ್ರೋಶ

500 ವರ್ಷಗಳಷ್ಟು ಹಳೆಯ ಮಸೀದಿಯ ಸಮೀಕ್ಷೆಗೆ ಆದೇಶಿಸಿದ ಯುಪಿ ಕೋರ್ಟ್ – ತೀವ್ರ ಆಕ್ರೋಶ

- Advertisement -
- Advertisement -

1526 ರಲ್ಲಿ ನಿರ್ಮಿಸಲಾಗಿರುವ ಮಸೀದಿಯೊಂದರ ಸಮೀಕ್ಷೆ ನಡೆಸುವಂತೆ ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ನ್ಯಾಯಾಲಯ ಆದೇಶ ನೀಡಿದ್ದು, ಈ ಪ್ರಕ್ರಿಯೆಯನ್ನು ಪ್ರತಿಭಟಿಸಲು ಸ್ಥಳೀಯ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಪ್ರದೇಶದಲ್ಲಿ ಮಂಗಳವಾರ ಉದ್ವಿಗ್ನತೆ ಸೃಷ್ಟಿಸಿಯಾಗಿದೆ. ಪ್ರಸ್ತುತ ಮಸೀದಿಗೆ ಮೊದಲು ಆ ಸ್ಥಳದಲ್ಲಿ ಹಿಂದೂ ದೇವಾಲಯವು ಅಸ್ತಿತ್ವದಲ್ಲಿತ್ತು ಎಂಬ ಹೇಳಿಕೆಗಳನ್ನು ತನಿಖೆ ಮಾಡಲು ಅಧಿಕಾರಿಗಳು ಮಂಗಳವಾರ ಸಂಜೆ ಚಂದೌಸಿ ಪಟ್ಟಣದ ಶಾಹಿ ಜಾಮಾ ಮಸೀದಿಯನ್ನು ಸಮೀಕ್ಷೆ ನಡೆಸಿದ್ದಾರೆ. 500 ವರ್ಷಗಳಷ್ಟು

1526 ರಲ್ಲಿ ಮುಸ್ಲಿಂ ರಾಜರು ದೇವಸ್ಥಾನವನ್ನು ಕೆಡವಿ ಆ ಸ್ಥಳದಲ್ಲಿ ಮಸೀದಿಯನ್ನು ನಿರ್ಮಿಸಿದ್ದಾರೆ ಎಂದು ಆರೋಪಿಸಿ ರಿಷಿ ರಾಜ್ ಗಿರಿ ಎಂಬ ಹಿಂದೂ ಪೂಜಾರಿಯೊಬ್ಬ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಿದ್ದರು. ಹಾಗಾಗಿ, ಸ್ಥಳೀಯ ನ್ಯಾಯಾಲಯವು ಅಡ್ವೊಕೇಟ್ ಕಮಿಷನರ್ ರಮೇಶ್ ಚಂದ್ ರಾಘವ್ ಅವರನ್ನು ಸಮೀಕ್ಷೆ ನಡೆಸುವಂತೆ ಆದೇಶಿಸಿದೆ. ಸಮೀಕ್ಷೆ ನಡೆಸಲು ಅಧಿಕಾರಿಗಳು ಮಸೀದಿಗೆ ಆಗಮಿಸುತ್ತಿದ್ದಂತೆ, ನೂರಾರು ಮುಸ್ಲಿಮರು ಕ್ರಮವನ್ನು ಪ್ರತಿಭಟಿಸಲು ಜಮಾಯಿಸಿದ್ದಾರೆ. ಶಾಂತಿ ಕಾಪಾಡಲು ಹೆಚ್ಚಿನ ಸಂಖ್ಯೆಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣ ಕುಮಾರ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸ್ಥಳೀಯ ಮುಸ್ಲಿಂ ಮುಖಂಡರೊಂದಿಗೆ ಅಧಿಕಾರಿಗಳು ಸಂಪರ್ಕದಲ್ಲಿದ್ದು, ಕೋಮು ಸೌಹಾರ್ದತೆಗೆ ಧಕ್ಕೆಯಾಗುವುದಿಲ್ಲ ಎಂದು ಒಪ್ಪಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ಪೆನ್ಸಿಯಾ ತಿಳಿಸಿದ್ದಾರೆ. “ಸಾಮಾಜಿಕ ಮಾಧ್ಯಮಗಳ ಮೂಲಕ ಅಥವಾ ಯಾವುದೇ ರೀತಿಯಲ್ಲಿ ವದಂತಿಗಳನ್ನು ಹರಡುವುದು ಕಂಡುಬಂದರೆ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ” ಎಂದು ಪೆನ್ಸಿಯಾ ಎಚ್ಚರಿಕೆ ನೀಡಿದ್ದಾರೆ.

ನವೆಂಬರ್ 29ರೊಳಗೆ ನ್ಯಾಯಾಲಯ ವರದಿ ಕೇಳಿದ್ದರೂ ತರಾತುರಿಯಲ್ಲಿ ಸರ್ವೆ ನಡೆಸಲಾಗಿದೆ ಎಂದು ಮಸೀದಿ ಆಡಳಿತ ಪರ ವಕೀಲ ಜಾಫರ್ ಅಲಿ ತಿಳಿಸಿದ್ದಾರೆ. ಅಗತ್ಯವಿದ್ದರೆ ನ್ಯಾಯಾಲಯದ ಆದೇಶವನ್ನು ಮಸೀದಿ ಅಧಿಕಾರಿಗಳು ಪ್ರಶ್ನಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ. 500 ವರ್ಷಗಳಷ್ಟು

 

ಈ ಕ್ರಮವನ್ನು ಜಮೀಯತ್ ಉಲಮಾ-ಇ-ಹಿಂದ್ ವಿರೋಧಿಸಿದ್ದು, ಅಯೋಧ್ಯೆಯ ಬಾಬರಿ ಮಸೀದಿ ಧ್ವಂಸದ ಗಾಯಗಳಿಂದ ದೇಶ ನರಳುತ್ತಲೇ ಇದೆ ಎಂದು ಎಂದು ಹೇಳಿದ್ದಾರೆ. ಬಾಬರಿ ಮಸೀದಿಯಂತಹ ವಿವಾದಗಳು ಮರುಕಳಿಸದಂತೆ ತಡೆಯಲು 1991 ರಲ್ಲಿ ಪೂಜಾ ಸ್ಥಳಗಳ ವಿಶೇಷ ನಿಬಂಧನೆಗಳ ಕಾಯ್ದೆಯನ್ನು ಪರಿಚಯಿಸಲಾಯಿತು ಎಂದು ಉಲಮಾ ಇ ಹಿಂದ್ ಮುಖ್ಯಸ್ಥ ಮಹಮೂದ್ ಮದನಿ ಹೇಳಿದ್ದಾರೆ.

“ಬಾಬರಿ ಮಸೀದಿ ಒಡೆದ ಪ್ರಕರಣದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಕೂಡ ಈ ಕಾನೂನಿನ ಮಹತ್ವವನ್ನು ಒತ್ತಿಹೇಳಿದೆ. ಆದಾಗ್ಯೂ, ಇತ್ತೀಚಿನ ನ್ಯಾಯಾಂಗ ಕ್ರಮಗಳಲ್ಲಿ ಈ ಕಾನೂನನ್ನು ಕಡೆಗಣಿಸುತ್ತಿರುವುದು ಆತಂಕಕಾರಿಯಾಗಿದೆ. ಹಿಂದಿನದನ್ನು ಅಗೆಯುತ್ತಲೆ ಇದ್ದರೆ, ಅದಕ್ಕೆ ಅಂತ್ಯವೆ ಇರುವುದಿಲ್ಲ” ಎಂದು ಅವರು ಹೇಳಿದ್ದಾರೆ

ಇದೇ ರೀತಿಯ ವಾದಗಳೊಂದಿಗೆ ಬಾಬರಿ ಮಸೀದಿಯನ್ನು 1992 ರಲ್ಲಿ ಹಿಂದೂ ಉಗ್ರಗಾಮಿಗಳು ಧ್ವಂಸಗೊಳಿಸಿದ್ದರು. ಅದರಂತೆ ಕೆಡವಲಾದ ಮಸೀದಿಯ ಸ್ಥಳದಲ್ಲಿ ಈಗ ಬೇರೆ ಕಟ್ಟಡವನ್ನು ನಿರ್ಮಿಸಲು ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಮಾರಂಭದಲ್ಲಿ ಈ ಕಟ್ಟಡವನ್ನು ಉದ್ಘಾಟಿಸಲಾಗಿದೆ.

ಬಾಬರಿ ಮಸೀದಿ ಪ್ರಕರಣದ ಸುಪ್ರೀಂ ಕೋರ್ಟ್‌ನ ತೀರ್ಪು ಭಾರತದಾದ್ಯಂತ ಮುಸ್ಲಿಂ ಪ್ರಾರ್ಥನಾ ಸ್ಥಳಗಳನ್ನು ಗುರಿಯಾಗಿಸಲು ಹಿಂದುತ್ವ ಗುಂಪುಗಳಿಗೆ ಧೈರ್ಯ ನೀಡಿದೆ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಚಂಡೌಸಿಯಲ್ಲಿ ನಡೆದ ಸಮೀಕ್ಷೆಯ ವೇಗವನ್ನು ಪ್ರಶ್ನಿಸಿದ ಅವರು, ಸಾಮಾನ್ಯ ಪ್ರಕರಣಗಳಲ್ಲಿ ಇಂತಹ ಕ್ಷಿಪ್ರತನ ಕಂಡುಬರುವುದಿಲ್ಲ ಎಂದು ಟೀಕಿಸಿದ್ದಾರೆ.

“ನ್ಯಾಯಾಲಯಗಳು ಇಂತಹ ಆದೇಶಗಳನ್ನು ಮುಂದುವರಿಸಿದರೆ, ಆರಾಧನಾ ಸ್ಥಳಗಳ ಕಾಯಿದೆಯು ಕೇವಲ ಸತ್ತ ಪತ್ರವಾಗಿ ಮಾತ್ರ ಉಳಿಯಲಿದೆ. ಅಂತಹ ಮೊಕದ್ದಮೆಗಳು ನ್ಯಾಯಾಲಯಗಳನ್ನು ತಲುಪುವುದನ್ನು ತಡೆಯಲು ಕೂಡಾ ಈ ಕಾಯಿದೆಯ ಉದ್ದೇಶವಾಗಿದೆ.” ಎಂದು ಅವರು ಹೇಳಿದ್ದಾರೆ.

1991ರ ಆರಾಧನಾ ಸ್ಥಳಗಳ ಕಾಯಿದೆಯು, ಪವಿತ್ರ ಸ್ಥಳಗಳ “ಧಾರ್ಮಿಕ ಸ್ವರೂಪ” ಆಗಸ್ಟ್ 15, 1947ರ ಸ್ವಾತಂತ್ರ್ಯದ ದಿನದಂದು ಹೇಗಿತ್ತೊ, ಹಾಗೆಯೇ ಉಳಿಯಬೇಕು ಎಂಬ ಷರತ್ತು ವಿಧಿಸುತ್ತದೆ. ಆದರೆ ಈ ಕಾನೂನಿನಿಂದ ಬಾಬರಿ ಮಸೀದಿಯನ್ನು ಹೊರಗಿಡಲಾಗಿತ್ತು.

ಇದನ್ನೂ ಓದಿ: ನಿರ್ಮಲಾ ಸೀತಾರಾಮನ್, ಕಟೀಲ್ ವಿರುದ್ಧದ ಸುಲಿಗೆ ಪ್ರಕರಣ | ತೀರ್ಪು ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್

ನಿರ್ಮಲಾ ಸೀತಾರಾಮನ್, ಕಟೀಲ್ ವಿರುದ್ಧದ ಸುಲಿಗೆ ಪ್ರಕರಣ | ತೀರ್ಪು ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...