Homeಮುಖಪುಟ500 ವರ್ಷಗಳಷ್ಟು ಹಳೆಯ ಮಸೀದಿಯ ಸಮೀಕ್ಷೆಗೆ ಆದೇಶಿಸಿದ ಯುಪಿ ಕೋರ್ಟ್ - ತೀವ್ರ ಆಕ್ರೋಶ

500 ವರ್ಷಗಳಷ್ಟು ಹಳೆಯ ಮಸೀದಿಯ ಸಮೀಕ್ಷೆಗೆ ಆದೇಶಿಸಿದ ಯುಪಿ ಕೋರ್ಟ್ – ತೀವ್ರ ಆಕ್ರೋಶ

- Advertisement -
- Advertisement -

1526 ರಲ್ಲಿ ನಿರ್ಮಿಸಲಾಗಿರುವ ಮಸೀದಿಯೊಂದರ ಸಮೀಕ್ಷೆ ನಡೆಸುವಂತೆ ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ನ್ಯಾಯಾಲಯ ಆದೇಶ ನೀಡಿದ್ದು, ಈ ಪ್ರಕ್ರಿಯೆಯನ್ನು ಪ್ರತಿಭಟಿಸಲು ಸ್ಥಳೀಯ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಪ್ರದೇಶದಲ್ಲಿ ಮಂಗಳವಾರ ಉದ್ವಿಗ್ನತೆ ಸೃಷ್ಟಿಸಿಯಾಗಿದೆ. ಪ್ರಸ್ತುತ ಮಸೀದಿಗೆ ಮೊದಲು ಆ ಸ್ಥಳದಲ್ಲಿ ಹಿಂದೂ ದೇವಾಲಯವು ಅಸ್ತಿತ್ವದಲ್ಲಿತ್ತು ಎಂಬ ಹೇಳಿಕೆಗಳನ್ನು ತನಿಖೆ ಮಾಡಲು ಅಧಿಕಾರಿಗಳು ಮಂಗಳವಾರ ಸಂಜೆ ಚಂದೌಸಿ ಪಟ್ಟಣದ ಶಾಹಿ ಜಾಮಾ ಮಸೀದಿಯನ್ನು ಸಮೀಕ್ಷೆ ನಡೆಸಿದ್ದಾರೆ. 500 ವರ್ಷಗಳಷ್ಟು

1526 ರಲ್ಲಿ ಮುಸ್ಲಿಂ ರಾಜರು ದೇವಸ್ಥಾನವನ್ನು ಕೆಡವಿ ಆ ಸ್ಥಳದಲ್ಲಿ ಮಸೀದಿಯನ್ನು ನಿರ್ಮಿಸಿದ್ದಾರೆ ಎಂದು ಆರೋಪಿಸಿ ರಿಷಿ ರಾಜ್ ಗಿರಿ ಎಂಬ ಹಿಂದೂ ಪೂಜಾರಿಯೊಬ್ಬ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಿದ್ದರು. ಹಾಗಾಗಿ, ಸ್ಥಳೀಯ ನ್ಯಾಯಾಲಯವು ಅಡ್ವೊಕೇಟ್ ಕಮಿಷನರ್ ರಮೇಶ್ ಚಂದ್ ರಾಘವ್ ಅವರನ್ನು ಸಮೀಕ್ಷೆ ನಡೆಸುವಂತೆ ಆದೇಶಿಸಿದೆ. ಸಮೀಕ್ಷೆ ನಡೆಸಲು ಅಧಿಕಾರಿಗಳು ಮಸೀದಿಗೆ ಆಗಮಿಸುತ್ತಿದ್ದಂತೆ, ನೂರಾರು ಮುಸ್ಲಿಮರು ಕ್ರಮವನ್ನು ಪ್ರತಿಭಟಿಸಲು ಜಮಾಯಿಸಿದ್ದಾರೆ. ಶಾಂತಿ ಕಾಪಾಡಲು ಹೆಚ್ಚಿನ ಸಂಖ್ಯೆಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣ ಕುಮಾರ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸ್ಥಳೀಯ ಮುಸ್ಲಿಂ ಮುಖಂಡರೊಂದಿಗೆ ಅಧಿಕಾರಿಗಳು ಸಂಪರ್ಕದಲ್ಲಿದ್ದು, ಕೋಮು ಸೌಹಾರ್ದತೆಗೆ ಧಕ್ಕೆಯಾಗುವುದಿಲ್ಲ ಎಂದು ಒಪ್ಪಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ಪೆನ್ಸಿಯಾ ತಿಳಿಸಿದ್ದಾರೆ. “ಸಾಮಾಜಿಕ ಮಾಧ್ಯಮಗಳ ಮೂಲಕ ಅಥವಾ ಯಾವುದೇ ರೀತಿಯಲ್ಲಿ ವದಂತಿಗಳನ್ನು ಹರಡುವುದು ಕಂಡುಬಂದರೆ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ” ಎಂದು ಪೆನ್ಸಿಯಾ ಎಚ್ಚರಿಕೆ ನೀಡಿದ್ದಾರೆ.

ನವೆಂಬರ್ 29ರೊಳಗೆ ನ್ಯಾಯಾಲಯ ವರದಿ ಕೇಳಿದ್ದರೂ ತರಾತುರಿಯಲ್ಲಿ ಸರ್ವೆ ನಡೆಸಲಾಗಿದೆ ಎಂದು ಮಸೀದಿ ಆಡಳಿತ ಪರ ವಕೀಲ ಜಾಫರ್ ಅಲಿ ತಿಳಿಸಿದ್ದಾರೆ. ಅಗತ್ಯವಿದ್ದರೆ ನ್ಯಾಯಾಲಯದ ಆದೇಶವನ್ನು ಮಸೀದಿ ಅಧಿಕಾರಿಗಳು ಪ್ರಶ್ನಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ. 500 ವರ್ಷಗಳಷ್ಟು

 

ಈ ಕ್ರಮವನ್ನು ಜಮೀಯತ್ ಉಲಮಾ-ಇ-ಹಿಂದ್ ವಿರೋಧಿಸಿದ್ದು, ಅಯೋಧ್ಯೆಯ ಬಾಬರಿ ಮಸೀದಿ ಧ್ವಂಸದ ಗಾಯಗಳಿಂದ ದೇಶ ನರಳುತ್ತಲೇ ಇದೆ ಎಂದು ಎಂದು ಹೇಳಿದ್ದಾರೆ. ಬಾಬರಿ ಮಸೀದಿಯಂತಹ ವಿವಾದಗಳು ಮರುಕಳಿಸದಂತೆ ತಡೆಯಲು 1991 ರಲ್ಲಿ ಪೂಜಾ ಸ್ಥಳಗಳ ವಿಶೇಷ ನಿಬಂಧನೆಗಳ ಕಾಯ್ದೆಯನ್ನು ಪರಿಚಯಿಸಲಾಯಿತು ಎಂದು ಉಲಮಾ ಇ ಹಿಂದ್ ಮುಖ್ಯಸ್ಥ ಮಹಮೂದ್ ಮದನಿ ಹೇಳಿದ್ದಾರೆ.

“ಬಾಬರಿ ಮಸೀದಿ ಒಡೆದ ಪ್ರಕರಣದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಕೂಡ ಈ ಕಾನೂನಿನ ಮಹತ್ವವನ್ನು ಒತ್ತಿಹೇಳಿದೆ. ಆದಾಗ್ಯೂ, ಇತ್ತೀಚಿನ ನ್ಯಾಯಾಂಗ ಕ್ರಮಗಳಲ್ಲಿ ಈ ಕಾನೂನನ್ನು ಕಡೆಗಣಿಸುತ್ತಿರುವುದು ಆತಂಕಕಾರಿಯಾಗಿದೆ. ಹಿಂದಿನದನ್ನು ಅಗೆಯುತ್ತಲೆ ಇದ್ದರೆ, ಅದಕ್ಕೆ ಅಂತ್ಯವೆ ಇರುವುದಿಲ್ಲ” ಎಂದು ಅವರು ಹೇಳಿದ್ದಾರೆ

ಇದೇ ರೀತಿಯ ವಾದಗಳೊಂದಿಗೆ ಬಾಬರಿ ಮಸೀದಿಯನ್ನು 1992 ರಲ್ಲಿ ಹಿಂದೂ ಉಗ್ರಗಾಮಿಗಳು ಧ್ವಂಸಗೊಳಿಸಿದ್ದರು. ಅದರಂತೆ ಕೆಡವಲಾದ ಮಸೀದಿಯ ಸ್ಥಳದಲ್ಲಿ ಈಗ ಬೇರೆ ಕಟ್ಟಡವನ್ನು ನಿರ್ಮಿಸಲು ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಮಾರಂಭದಲ್ಲಿ ಈ ಕಟ್ಟಡವನ್ನು ಉದ್ಘಾಟಿಸಲಾಗಿದೆ.

ಬಾಬರಿ ಮಸೀದಿ ಪ್ರಕರಣದ ಸುಪ್ರೀಂ ಕೋರ್ಟ್‌ನ ತೀರ್ಪು ಭಾರತದಾದ್ಯಂತ ಮುಸ್ಲಿಂ ಪ್ರಾರ್ಥನಾ ಸ್ಥಳಗಳನ್ನು ಗುರಿಯಾಗಿಸಲು ಹಿಂದುತ್ವ ಗುಂಪುಗಳಿಗೆ ಧೈರ್ಯ ನೀಡಿದೆ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಚಂಡೌಸಿಯಲ್ಲಿ ನಡೆದ ಸಮೀಕ್ಷೆಯ ವೇಗವನ್ನು ಪ್ರಶ್ನಿಸಿದ ಅವರು, ಸಾಮಾನ್ಯ ಪ್ರಕರಣಗಳಲ್ಲಿ ಇಂತಹ ಕ್ಷಿಪ್ರತನ ಕಂಡುಬರುವುದಿಲ್ಲ ಎಂದು ಟೀಕಿಸಿದ್ದಾರೆ.

“ನ್ಯಾಯಾಲಯಗಳು ಇಂತಹ ಆದೇಶಗಳನ್ನು ಮುಂದುವರಿಸಿದರೆ, ಆರಾಧನಾ ಸ್ಥಳಗಳ ಕಾಯಿದೆಯು ಕೇವಲ ಸತ್ತ ಪತ್ರವಾಗಿ ಮಾತ್ರ ಉಳಿಯಲಿದೆ. ಅಂತಹ ಮೊಕದ್ದಮೆಗಳು ನ್ಯಾಯಾಲಯಗಳನ್ನು ತಲುಪುವುದನ್ನು ತಡೆಯಲು ಕೂಡಾ ಈ ಕಾಯಿದೆಯ ಉದ್ದೇಶವಾಗಿದೆ.” ಎಂದು ಅವರು ಹೇಳಿದ್ದಾರೆ.

1991ರ ಆರಾಧನಾ ಸ್ಥಳಗಳ ಕಾಯಿದೆಯು, ಪವಿತ್ರ ಸ್ಥಳಗಳ “ಧಾರ್ಮಿಕ ಸ್ವರೂಪ” ಆಗಸ್ಟ್ 15, 1947ರ ಸ್ವಾತಂತ್ರ್ಯದ ದಿನದಂದು ಹೇಗಿತ್ತೊ, ಹಾಗೆಯೇ ಉಳಿಯಬೇಕು ಎಂಬ ಷರತ್ತು ವಿಧಿಸುತ್ತದೆ. ಆದರೆ ಈ ಕಾನೂನಿನಿಂದ ಬಾಬರಿ ಮಸೀದಿಯನ್ನು ಹೊರಗಿಡಲಾಗಿತ್ತು.

ಇದನ್ನೂ ಓದಿ: ನಿರ್ಮಲಾ ಸೀತಾರಾಮನ್, ಕಟೀಲ್ ವಿರುದ್ಧದ ಸುಲಿಗೆ ಪ್ರಕರಣ | ತೀರ್ಪು ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್

ನಿರ್ಮಲಾ ಸೀತಾರಾಮನ್, ಕಟೀಲ್ ವಿರುದ್ಧದ ಸುಲಿಗೆ ಪ್ರಕರಣ | ತೀರ್ಪು ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...