Homeಮುಖಪುಟ500 ವರ್ಷಗಳಷ್ಟು ಹಳೆಯ ಮಸೀದಿಯ ಸಮೀಕ್ಷೆಗೆ ಆದೇಶಿಸಿದ ಯುಪಿ ಕೋರ್ಟ್ - ತೀವ್ರ ಆಕ್ರೋಶ

500 ವರ್ಷಗಳಷ್ಟು ಹಳೆಯ ಮಸೀದಿಯ ಸಮೀಕ್ಷೆಗೆ ಆದೇಶಿಸಿದ ಯುಪಿ ಕೋರ್ಟ್ – ತೀವ್ರ ಆಕ್ರೋಶ

- Advertisement -
- Advertisement -

1526 ರಲ್ಲಿ ನಿರ್ಮಿಸಲಾಗಿರುವ ಮಸೀದಿಯೊಂದರ ಸಮೀಕ್ಷೆ ನಡೆಸುವಂತೆ ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ನ್ಯಾಯಾಲಯ ಆದೇಶ ನೀಡಿದ್ದು, ಈ ಪ್ರಕ್ರಿಯೆಯನ್ನು ಪ್ರತಿಭಟಿಸಲು ಸ್ಥಳೀಯ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಪ್ರದೇಶದಲ್ಲಿ ಮಂಗಳವಾರ ಉದ್ವಿಗ್ನತೆ ಸೃಷ್ಟಿಸಿಯಾಗಿದೆ. ಪ್ರಸ್ತುತ ಮಸೀದಿಗೆ ಮೊದಲು ಆ ಸ್ಥಳದಲ್ಲಿ ಹಿಂದೂ ದೇವಾಲಯವು ಅಸ್ತಿತ್ವದಲ್ಲಿತ್ತು ಎಂಬ ಹೇಳಿಕೆಗಳನ್ನು ತನಿಖೆ ಮಾಡಲು ಅಧಿಕಾರಿಗಳು ಮಂಗಳವಾರ ಸಂಜೆ ಚಂದೌಸಿ ಪಟ್ಟಣದ ಶಾಹಿ ಜಾಮಾ ಮಸೀದಿಯನ್ನು ಸಮೀಕ್ಷೆ ನಡೆಸಿದ್ದಾರೆ. 500 ವರ್ಷಗಳಷ್ಟು

1526 ರಲ್ಲಿ ಮುಸ್ಲಿಂ ರಾಜರು ದೇವಸ್ಥಾನವನ್ನು ಕೆಡವಿ ಆ ಸ್ಥಳದಲ್ಲಿ ಮಸೀದಿಯನ್ನು ನಿರ್ಮಿಸಿದ್ದಾರೆ ಎಂದು ಆರೋಪಿಸಿ ರಿಷಿ ರಾಜ್ ಗಿರಿ ಎಂಬ ಹಿಂದೂ ಪೂಜಾರಿಯೊಬ್ಬ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಿದ್ದರು. ಹಾಗಾಗಿ, ಸ್ಥಳೀಯ ನ್ಯಾಯಾಲಯವು ಅಡ್ವೊಕೇಟ್ ಕಮಿಷನರ್ ರಮೇಶ್ ಚಂದ್ ರಾಘವ್ ಅವರನ್ನು ಸಮೀಕ್ಷೆ ನಡೆಸುವಂತೆ ಆದೇಶಿಸಿದೆ. ಸಮೀಕ್ಷೆ ನಡೆಸಲು ಅಧಿಕಾರಿಗಳು ಮಸೀದಿಗೆ ಆಗಮಿಸುತ್ತಿದ್ದಂತೆ, ನೂರಾರು ಮುಸ್ಲಿಮರು ಕ್ರಮವನ್ನು ಪ್ರತಿಭಟಿಸಲು ಜಮಾಯಿಸಿದ್ದಾರೆ. ಶಾಂತಿ ಕಾಪಾಡಲು ಹೆಚ್ಚಿನ ಸಂಖ್ಯೆಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣ ಕುಮಾರ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸ್ಥಳೀಯ ಮುಸ್ಲಿಂ ಮುಖಂಡರೊಂದಿಗೆ ಅಧಿಕಾರಿಗಳು ಸಂಪರ್ಕದಲ್ಲಿದ್ದು, ಕೋಮು ಸೌಹಾರ್ದತೆಗೆ ಧಕ್ಕೆಯಾಗುವುದಿಲ್ಲ ಎಂದು ಒಪ್ಪಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ಪೆನ್ಸಿಯಾ ತಿಳಿಸಿದ್ದಾರೆ. “ಸಾಮಾಜಿಕ ಮಾಧ್ಯಮಗಳ ಮೂಲಕ ಅಥವಾ ಯಾವುದೇ ರೀತಿಯಲ್ಲಿ ವದಂತಿಗಳನ್ನು ಹರಡುವುದು ಕಂಡುಬಂದರೆ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ” ಎಂದು ಪೆನ್ಸಿಯಾ ಎಚ್ಚರಿಕೆ ನೀಡಿದ್ದಾರೆ.

ನವೆಂಬರ್ 29ರೊಳಗೆ ನ್ಯಾಯಾಲಯ ವರದಿ ಕೇಳಿದ್ದರೂ ತರಾತುರಿಯಲ್ಲಿ ಸರ್ವೆ ನಡೆಸಲಾಗಿದೆ ಎಂದು ಮಸೀದಿ ಆಡಳಿತ ಪರ ವಕೀಲ ಜಾಫರ್ ಅಲಿ ತಿಳಿಸಿದ್ದಾರೆ. ಅಗತ್ಯವಿದ್ದರೆ ನ್ಯಾಯಾಲಯದ ಆದೇಶವನ್ನು ಮಸೀದಿ ಅಧಿಕಾರಿಗಳು ಪ್ರಶ್ನಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ. 500 ವರ್ಷಗಳಷ್ಟು

 

ಈ ಕ್ರಮವನ್ನು ಜಮೀಯತ್ ಉಲಮಾ-ಇ-ಹಿಂದ್ ವಿರೋಧಿಸಿದ್ದು, ಅಯೋಧ್ಯೆಯ ಬಾಬರಿ ಮಸೀದಿ ಧ್ವಂಸದ ಗಾಯಗಳಿಂದ ದೇಶ ನರಳುತ್ತಲೇ ಇದೆ ಎಂದು ಎಂದು ಹೇಳಿದ್ದಾರೆ. ಬಾಬರಿ ಮಸೀದಿಯಂತಹ ವಿವಾದಗಳು ಮರುಕಳಿಸದಂತೆ ತಡೆಯಲು 1991 ರಲ್ಲಿ ಪೂಜಾ ಸ್ಥಳಗಳ ವಿಶೇಷ ನಿಬಂಧನೆಗಳ ಕಾಯ್ದೆಯನ್ನು ಪರಿಚಯಿಸಲಾಯಿತು ಎಂದು ಉಲಮಾ ಇ ಹಿಂದ್ ಮುಖ್ಯಸ್ಥ ಮಹಮೂದ್ ಮದನಿ ಹೇಳಿದ್ದಾರೆ.

“ಬಾಬರಿ ಮಸೀದಿ ಒಡೆದ ಪ್ರಕರಣದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಕೂಡ ಈ ಕಾನೂನಿನ ಮಹತ್ವವನ್ನು ಒತ್ತಿಹೇಳಿದೆ. ಆದಾಗ್ಯೂ, ಇತ್ತೀಚಿನ ನ್ಯಾಯಾಂಗ ಕ್ರಮಗಳಲ್ಲಿ ಈ ಕಾನೂನನ್ನು ಕಡೆಗಣಿಸುತ್ತಿರುವುದು ಆತಂಕಕಾರಿಯಾಗಿದೆ. ಹಿಂದಿನದನ್ನು ಅಗೆಯುತ್ತಲೆ ಇದ್ದರೆ, ಅದಕ್ಕೆ ಅಂತ್ಯವೆ ಇರುವುದಿಲ್ಲ” ಎಂದು ಅವರು ಹೇಳಿದ್ದಾರೆ

ಇದೇ ರೀತಿಯ ವಾದಗಳೊಂದಿಗೆ ಬಾಬರಿ ಮಸೀದಿಯನ್ನು 1992 ರಲ್ಲಿ ಹಿಂದೂ ಉಗ್ರಗಾಮಿಗಳು ಧ್ವಂಸಗೊಳಿಸಿದ್ದರು. ಅದರಂತೆ ಕೆಡವಲಾದ ಮಸೀದಿಯ ಸ್ಥಳದಲ್ಲಿ ಈಗ ಬೇರೆ ಕಟ್ಟಡವನ್ನು ನಿರ್ಮಿಸಲು ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಮಾರಂಭದಲ್ಲಿ ಈ ಕಟ್ಟಡವನ್ನು ಉದ್ಘಾಟಿಸಲಾಗಿದೆ.

ಬಾಬರಿ ಮಸೀದಿ ಪ್ರಕರಣದ ಸುಪ್ರೀಂ ಕೋರ್ಟ್‌ನ ತೀರ್ಪು ಭಾರತದಾದ್ಯಂತ ಮುಸ್ಲಿಂ ಪ್ರಾರ್ಥನಾ ಸ್ಥಳಗಳನ್ನು ಗುರಿಯಾಗಿಸಲು ಹಿಂದುತ್ವ ಗುಂಪುಗಳಿಗೆ ಧೈರ್ಯ ನೀಡಿದೆ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಚಂಡೌಸಿಯಲ್ಲಿ ನಡೆದ ಸಮೀಕ್ಷೆಯ ವೇಗವನ್ನು ಪ್ರಶ್ನಿಸಿದ ಅವರು, ಸಾಮಾನ್ಯ ಪ್ರಕರಣಗಳಲ್ಲಿ ಇಂತಹ ಕ್ಷಿಪ್ರತನ ಕಂಡುಬರುವುದಿಲ್ಲ ಎಂದು ಟೀಕಿಸಿದ್ದಾರೆ.

“ನ್ಯಾಯಾಲಯಗಳು ಇಂತಹ ಆದೇಶಗಳನ್ನು ಮುಂದುವರಿಸಿದರೆ, ಆರಾಧನಾ ಸ್ಥಳಗಳ ಕಾಯಿದೆಯು ಕೇವಲ ಸತ್ತ ಪತ್ರವಾಗಿ ಮಾತ್ರ ಉಳಿಯಲಿದೆ. ಅಂತಹ ಮೊಕದ್ದಮೆಗಳು ನ್ಯಾಯಾಲಯಗಳನ್ನು ತಲುಪುವುದನ್ನು ತಡೆಯಲು ಕೂಡಾ ಈ ಕಾಯಿದೆಯ ಉದ್ದೇಶವಾಗಿದೆ.” ಎಂದು ಅವರು ಹೇಳಿದ್ದಾರೆ.

1991ರ ಆರಾಧನಾ ಸ್ಥಳಗಳ ಕಾಯಿದೆಯು, ಪವಿತ್ರ ಸ್ಥಳಗಳ “ಧಾರ್ಮಿಕ ಸ್ವರೂಪ” ಆಗಸ್ಟ್ 15, 1947ರ ಸ್ವಾತಂತ್ರ್ಯದ ದಿನದಂದು ಹೇಗಿತ್ತೊ, ಹಾಗೆಯೇ ಉಳಿಯಬೇಕು ಎಂಬ ಷರತ್ತು ವಿಧಿಸುತ್ತದೆ. ಆದರೆ ಈ ಕಾನೂನಿನಿಂದ ಬಾಬರಿ ಮಸೀದಿಯನ್ನು ಹೊರಗಿಡಲಾಗಿತ್ತು.

ಇದನ್ನೂ ಓದಿ: ನಿರ್ಮಲಾ ಸೀತಾರಾಮನ್, ಕಟೀಲ್ ವಿರುದ್ಧದ ಸುಲಿಗೆ ಪ್ರಕರಣ | ತೀರ್ಪು ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್

ನಿರ್ಮಲಾ ಸೀತಾರಾಮನ್, ಕಟೀಲ್ ವಿರುದ್ಧದ ಸುಲಿಗೆ ಪ್ರಕರಣ | ತೀರ್ಪು ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...