Homeಮುಖಪುಟ500 ವರ್ಷಗಳಷ್ಟು ಹಳೆಯ ಮಸೀದಿಯ ಸಮೀಕ್ಷೆಗೆ ಆದೇಶಿಸಿದ ಯುಪಿ ಕೋರ್ಟ್ - ತೀವ್ರ ಆಕ್ರೋಶ

500 ವರ್ಷಗಳಷ್ಟು ಹಳೆಯ ಮಸೀದಿಯ ಸಮೀಕ್ಷೆಗೆ ಆದೇಶಿಸಿದ ಯುಪಿ ಕೋರ್ಟ್ – ತೀವ್ರ ಆಕ್ರೋಶ

- Advertisement -
- Advertisement -

1526 ರಲ್ಲಿ ನಿರ್ಮಿಸಲಾಗಿರುವ ಮಸೀದಿಯೊಂದರ ಸಮೀಕ್ಷೆ ನಡೆಸುವಂತೆ ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ನ್ಯಾಯಾಲಯ ಆದೇಶ ನೀಡಿದ್ದು, ಈ ಪ್ರಕ್ರಿಯೆಯನ್ನು ಪ್ರತಿಭಟಿಸಲು ಸ್ಥಳೀಯ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಪ್ರದೇಶದಲ್ಲಿ ಮಂಗಳವಾರ ಉದ್ವಿಗ್ನತೆ ಸೃಷ್ಟಿಸಿಯಾಗಿದೆ. ಪ್ರಸ್ತುತ ಮಸೀದಿಗೆ ಮೊದಲು ಆ ಸ್ಥಳದಲ್ಲಿ ಹಿಂದೂ ದೇವಾಲಯವು ಅಸ್ತಿತ್ವದಲ್ಲಿತ್ತು ಎಂಬ ಹೇಳಿಕೆಗಳನ್ನು ತನಿಖೆ ಮಾಡಲು ಅಧಿಕಾರಿಗಳು ಮಂಗಳವಾರ ಸಂಜೆ ಚಂದೌಸಿ ಪಟ್ಟಣದ ಶಾಹಿ ಜಾಮಾ ಮಸೀದಿಯನ್ನು ಸಮೀಕ್ಷೆ ನಡೆಸಿದ್ದಾರೆ. 500 ವರ್ಷಗಳಷ್ಟು

1526 ರಲ್ಲಿ ಮುಸ್ಲಿಂ ರಾಜರು ದೇವಸ್ಥಾನವನ್ನು ಕೆಡವಿ ಆ ಸ್ಥಳದಲ್ಲಿ ಮಸೀದಿಯನ್ನು ನಿರ್ಮಿಸಿದ್ದಾರೆ ಎಂದು ಆರೋಪಿಸಿ ರಿಷಿ ರಾಜ್ ಗಿರಿ ಎಂಬ ಹಿಂದೂ ಪೂಜಾರಿಯೊಬ್ಬ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಿದ್ದರು. ಹಾಗಾಗಿ, ಸ್ಥಳೀಯ ನ್ಯಾಯಾಲಯವು ಅಡ್ವೊಕೇಟ್ ಕಮಿಷನರ್ ರಮೇಶ್ ಚಂದ್ ರಾಘವ್ ಅವರನ್ನು ಸಮೀಕ್ಷೆ ನಡೆಸುವಂತೆ ಆದೇಶಿಸಿದೆ. ಸಮೀಕ್ಷೆ ನಡೆಸಲು ಅಧಿಕಾರಿಗಳು ಮಸೀದಿಗೆ ಆಗಮಿಸುತ್ತಿದ್ದಂತೆ, ನೂರಾರು ಮುಸ್ಲಿಮರು ಕ್ರಮವನ್ನು ಪ್ರತಿಭಟಿಸಲು ಜಮಾಯಿಸಿದ್ದಾರೆ. ಶಾಂತಿ ಕಾಪಾಡಲು ಹೆಚ್ಚಿನ ಸಂಖ್ಯೆಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣ ಕುಮಾರ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸ್ಥಳೀಯ ಮುಸ್ಲಿಂ ಮುಖಂಡರೊಂದಿಗೆ ಅಧಿಕಾರಿಗಳು ಸಂಪರ್ಕದಲ್ಲಿದ್ದು, ಕೋಮು ಸೌಹಾರ್ದತೆಗೆ ಧಕ್ಕೆಯಾಗುವುದಿಲ್ಲ ಎಂದು ಒಪ್ಪಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ಪೆನ್ಸಿಯಾ ತಿಳಿಸಿದ್ದಾರೆ. “ಸಾಮಾಜಿಕ ಮಾಧ್ಯಮಗಳ ಮೂಲಕ ಅಥವಾ ಯಾವುದೇ ರೀತಿಯಲ್ಲಿ ವದಂತಿಗಳನ್ನು ಹರಡುವುದು ಕಂಡುಬಂದರೆ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ” ಎಂದು ಪೆನ್ಸಿಯಾ ಎಚ್ಚರಿಕೆ ನೀಡಿದ್ದಾರೆ.

ನವೆಂಬರ್ 29ರೊಳಗೆ ನ್ಯಾಯಾಲಯ ವರದಿ ಕೇಳಿದ್ದರೂ ತರಾತುರಿಯಲ್ಲಿ ಸರ್ವೆ ನಡೆಸಲಾಗಿದೆ ಎಂದು ಮಸೀದಿ ಆಡಳಿತ ಪರ ವಕೀಲ ಜಾಫರ್ ಅಲಿ ತಿಳಿಸಿದ್ದಾರೆ. ಅಗತ್ಯವಿದ್ದರೆ ನ್ಯಾಯಾಲಯದ ಆದೇಶವನ್ನು ಮಸೀದಿ ಅಧಿಕಾರಿಗಳು ಪ್ರಶ್ನಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ. 500 ವರ್ಷಗಳಷ್ಟು

 

ಈ ಕ್ರಮವನ್ನು ಜಮೀಯತ್ ಉಲಮಾ-ಇ-ಹಿಂದ್ ವಿರೋಧಿಸಿದ್ದು, ಅಯೋಧ್ಯೆಯ ಬಾಬರಿ ಮಸೀದಿ ಧ್ವಂಸದ ಗಾಯಗಳಿಂದ ದೇಶ ನರಳುತ್ತಲೇ ಇದೆ ಎಂದು ಎಂದು ಹೇಳಿದ್ದಾರೆ. ಬಾಬರಿ ಮಸೀದಿಯಂತಹ ವಿವಾದಗಳು ಮರುಕಳಿಸದಂತೆ ತಡೆಯಲು 1991 ರಲ್ಲಿ ಪೂಜಾ ಸ್ಥಳಗಳ ವಿಶೇಷ ನಿಬಂಧನೆಗಳ ಕಾಯ್ದೆಯನ್ನು ಪರಿಚಯಿಸಲಾಯಿತು ಎಂದು ಉಲಮಾ ಇ ಹಿಂದ್ ಮುಖ್ಯಸ್ಥ ಮಹಮೂದ್ ಮದನಿ ಹೇಳಿದ್ದಾರೆ.

“ಬಾಬರಿ ಮಸೀದಿ ಒಡೆದ ಪ್ರಕರಣದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಕೂಡ ಈ ಕಾನೂನಿನ ಮಹತ್ವವನ್ನು ಒತ್ತಿಹೇಳಿದೆ. ಆದಾಗ್ಯೂ, ಇತ್ತೀಚಿನ ನ್ಯಾಯಾಂಗ ಕ್ರಮಗಳಲ್ಲಿ ಈ ಕಾನೂನನ್ನು ಕಡೆಗಣಿಸುತ್ತಿರುವುದು ಆತಂಕಕಾರಿಯಾಗಿದೆ. ಹಿಂದಿನದನ್ನು ಅಗೆಯುತ್ತಲೆ ಇದ್ದರೆ, ಅದಕ್ಕೆ ಅಂತ್ಯವೆ ಇರುವುದಿಲ್ಲ” ಎಂದು ಅವರು ಹೇಳಿದ್ದಾರೆ

ಇದೇ ರೀತಿಯ ವಾದಗಳೊಂದಿಗೆ ಬಾಬರಿ ಮಸೀದಿಯನ್ನು 1992 ರಲ್ಲಿ ಹಿಂದೂ ಉಗ್ರಗಾಮಿಗಳು ಧ್ವಂಸಗೊಳಿಸಿದ್ದರು. ಅದರಂತೆ ಕೆಡವಲಾದ ಮಸೀದಿಯ ಸ್ಥಳದಲ್ಲಿ ಈಗ ಬೇರೆ ಕಟ್ಟಡವನ್ನು ನಿರ್ಮಿಸಲು ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಮಾರಂಭದಲ್ಲಿ ಈ ಕಟ್ಟಡವನ್ನು ಉದ್ಘಾಟಿಸಲಾಗಿದೆ.

ಬಾಬರಿ ಮಸೀದಿ ಪ್ರಕರಣದ ಸುಪ್ರೀಂ ಕೋರ್ಟ್‌ನ ತೀರ್ಪು ಭಾರತದಾದ್ಯಂತ ಮುಸ್ಲಿಂ ಪ್ರಾರ್ಥನಾ ಸ್ಥಳಗಳನ್ನು ಗುರಿಯಾಗಿಸಲು ಹಿಂದುತ್ವ ಗುಂಪುಗಳಿಗೆ ಧೈರ್ಯ ನೀಡಿದೆ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಚಂಡೌಸಿಯಲ್ಲಿ ನಡೆದ ಸಮೀಕ್ಷೆಯ ವೇಗವನ್ನು ಪ್ರಶ್ನಿಸಿದ ಅವರು, ಸಾಮಾನ್ಯ ಪ್ರಕರಣಗಳಲ್ಲಿ ಇಂತಹ ಕ್ಷಿಪ್ರತನ ಕಂಡುಬರುವುದಿಲ್ಲ ಎಂದು ಟೀಕಿಸಿದ್ದಾರೆ.

“ನ್ಯಾಯಾಲಯಗಳು ಇಂತಹ ಆದೇಶಗಳನ್ನು ಮುಂದುವರಿಸಿದರೆ, ಆರಾಧನಾ ಸ್ಥಳಗಳ ಕಾಯಿದೆಯು ಕೇವಲ ಸತ್ತ ಪತ್ರವಾಗಿ ಮಾತ್ರ ಉಳಿಯಲಿದೆ. ಅಂತಹ ಮೊಕದ್ದಮೆಗಳು ನ್ಯಾಯಾಲಯಗಳನ್ನು ತಲುಪುವುದನ್ನು ತಡೆಯಲು ಕೂಡಾ ಈ ಕಾಯಿದೆಯ ಉದ್ದೇಶವಾಗಿದೆ.” ಎಂದು ಅವರು ಹೇಳಿದ್ದಾರೆ.

1991ರ ಆರಾಧನಾ ಸ್ಥಳಗಳ ಕಾಯಿದೆಯು, ಪವಿತ್ರ ಸ್ಥಳಗಳ “ಧಾರ್ಮಿಕ ಸ್ವರೂಪ” ಆಗಸ್ಟ್ 15, 1947ರ ಸ್ವಾತಂತ್ರ್ಯದ ದಿನದಂದು ಹೇಗಿತ್ತೊ, ಹಾಗೆಯೇ ಉಳಿಯಬೇಕು ಎಂಬ ಷರತ್ತು ವಿಧಿಸುತ್ತದೆ. ಆದರೆ ಈ ಕಾನೂನಿನಿಂದ ಬಾಬರಿ ಮಸೀದಿಯನ್ನು ಹೊರಗಿಡಲಾಗಿತ್ತು.

ಇದನ್ನೂ ಓದಿ: ನಿರ್ಮಲಾ ಸೀತಾರಾಮನ್, ಕಟೀಲ್ ವಿರುದ್ಧದ ಸುಲಿಗೆ ಪ್ರಕರಣ | ತೀರ್ಪು ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್

ನಿರ್ಮಲಾ ಸೀತಾರಾಮನ್, ಕಟೀಲ್ ವಿರುದ್ಧದ ಸುಲಿಗೆ ಪ್ರಕರಣ | ತೀರ್ಪು ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...