Homeಮುಖಪುಟ500 ವರ್ಷಗಳಷ್ಟು ಹಳೆಯ ಮಸೀದಿಯ ಸಮೀಕ್ಷೆಗೆ ಆದೇಶಿಸಿದ ಯುಪಿ ಕೋರ್ಟ್ - ತೀವ್ರ ಆಕ್ರೋಶ

500 ವರ್ಷಗಳಷ್ಟು ಹಳೆಯ ಮಸೀದಿಯ ಸಮೀಕ್ಷೆಗೆ ಆದೇಶಿಸಿದ ಯುಪಿ ಕೋರ್ಟ್ – ತೀವ್ರ ಆಕ್ರೋಶ

- Advertisement -
- Advertisement -

1526 ರಲ್ಲಿ ನಿರ್ಮಿಸಲಾಗಿರುವ ಮಸೀದಿಯೊಂದರ ಸಮೀಕ್ಷೆ ನಡೆಸುವಂತೆ ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ನ್ಯಾಯಾಲಯ ಆದೇಶ ನೀಡಿದ್ದು, ಈ ಪ್ರಕ್ರಿಯೆಯನ್ನು ಪ್ರತಿಭಟಿಸಲು ಸ್ಥಳೀಯ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಪ್ರದೇಶದಲ್ಲಿ ಮಂಗಳವಾರ ಉದ್ವಿಗ್ನತೆ ಸೃಷ್ಟಿಸಿಯಾಗಿದೆ. ಪ್ರಸ್ತುತ ಮಸೀದಿಗೆ ಮೊದಲು ಆ ಸ್ಥಳದಲ್ಲಿ ಹಿಂದೂ ದೇವಾಲಯವು ಅಸ್ತಿತ್ವದಲ್ಲಿತ್ತು ಎಂಬ ಹೇಳಿಕೆಗಳನ್ನು ತನಿಖೆ ಮಾಡಲು ಅಧಿಕಾರಿಗಳು ಮಂಗಳವಾರ ಸಂಜೆ ಚಂದೌಸಿ ಪಟ್ಟಣದ ಶಾಹಿ ಜಾಮಾ ಮಸೀದಿಯನ್ನು ಸಮೀಕ್ಷೆ ನಡೆಸಿದ್ದಾರೆ. 500 ವರ್ಷಗಳಷ್ಟು

1526 ರಲ್ಲಿ ಮುಸ್ಲಿಂ ರಾಜರು ದೇವಸ್ಥಾನವನ್ನು ಕೆಡವಿ ಆ ಸ್ಥಳದಲ್ಲಿ ಮಸೀದಿಯನ್ನು ನಿರ್ಮಿಸಿದ್ದಾರೆ ಎಂದು ಆರೋಪಿಸಿ ರಿಷಿ ರಾಜ್ ಗಿರಿ ಎಂಬ ಹಿಂದೂ ಪೂಜಾರಿಯೊಬ್ಬ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಿದ್ದರು. ಹಾಗಾಗಿ, ಸ್ಥಳೀಯ ನ್ಯಾಯಾಲಯವು ಅಡ್ವೊಕೇಟ್ ಕಮಿಷನರ್ ರಮೇಶ್ ಚಂದ್ ರಾಘವ್ ಅವರನ್ನು ಸಮೀಕ್ಷೆ ನಡೆಸುವಂತೆ ಆದೇಶಿಸಿದೆ. ಸಮೀಕ್ಷೆ ನಡೆಸಲು ಅಧಿಕಾರಿಗಳು ಮಸೀದಿಗೆ ಆಗಮಿಸುತ್ತಿದ್ದಂತೆ, ನೂರಾರು ಮುಸ್ಲಿಮರು ಕ್ರಮವನ್ನು ಪ್ರತಿಭಟಿಸಲು ಜಮಾಯಿಸಿದ್ದಾರೆ. ಶಾಂತಿ ಕಾಪಾಡಲು ಹೆಚ್ಚಿನ ಸಂಖ್ಯೆಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣ ಕುಮಾರ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸ್ಥಳೀಯ ಮುಸ್ಲಿಂ ಮುಖಂಡರೊಂದಿಗೆ ಅಧಿಕಾರಿಗಳು ಸಂಪರ್ಕದಲ್ಲಿದ್ದು, ಕೋಮು ಸೌಹಾರ್ದತೆಗೆ ಧಕ್ಕೆಯಾಗುವುದಿಲ್ಲ ಎಂದು ಒಪ್ಪಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ಪೆನ್ಸಿಯಾ ತಿಳಿಸಿದ್ದಾರೆ. “ಸಾಮಾಜಿಕ ಮಾಧ್ಯಮಗಳ ಮೂಲಕ ಅಥವಾ ಯಾವುದೇ ರೀತಿಯಲ್ಲಿ ವದಂತಿಗಳನ್ನು ಹರಡುವುದು ಕಂಡುಬಂದರೆ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ” ಎಂದು ಪೆನ್ಸಿಯಾ ಎಚ್ಚರಿಕೆ ನೀಡಿದ್ದಾರೆ.

ನವೆಂಬರ್ 29ರೊಳಗೆ ನ್ಯಾಯಾಲಯ ವರದಿ ಕೇಳಿದ್ದರೂ ತರಾತುರಿಯಲ್ಲಿ ಸರ್ವೆ ನಡೆಸಲಾಗಿದೆ ಎಂದು ಮಸೀದಿ ಆಡಳಿತ ಪರ ವಕೀಲ ಜಾಫರ್ ಅಲಿ ತಿಳಿಸಿದ್ದಾರೆ. ಅಗತ್ಯವಿದ್ದರೆ ನ್ಯಾಯಾಲಯದ ಆದೇಶವನ್ನು ಮಸೀದಿ ಅಧಿಕಾರಿಗಳು ಪ್ರಶ್ನಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ. 500 ವರ್ಷಗಳಷ್ಟು

 

ಈ ಕ್ರಮವನ್ನು ಜಮೀಯತ್ ಉಲಮಾ-ಇ-ಹಿಂದ್ ವಿರೋಧಿಸಿದ್ದು, ಅಯೋಧ್ಯೆಯ ಬಾಬರಿ ಮಸೀದಿ ಧ್ವಂಸದ ಗಾಯಗಳಿಂದ ದೇಶ ನರಳುತ್ತಲೇ ಇದೆ ಎಂದು ಎಂದು ಹೇಳಿದ್ದಾರೆ. ಬಾಬರಿ ಮಸೀದಿಯಂತಹ ವಿವಾದಗಳು ಮರುಕಳಿಸದಂತೆ ತಡೆಯಲು 1991 ರಲ್ಲಿ ಪೂಜಾ ಸ್ಥಳಗಳ ವಿಶೇಷ ನಿಬಂಧನೆಗಳ ಕಾಯ್ದೆಯನ್ನು ಪರಿಚಯಿಸಲಾಯಿತು ಎಂದು ಉಲಮಾ ಇ ಹಿಂದ್ ಮುಖ್ಯಸ್ಥ ಮಹಮೂದ್ ಮದನಿ ಹೇಳಿದ್ದಾರೆ.

“ಬಾಬರಿ ಮಸೀದಿ ಒಡೆದ ಪ್ರಕರಣದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಕೂಡ ಈ ಕಾನೂನಿನ ಮಹತ್ವವನ್ನು ಒತ್ತಿಹೇಳಿದೆ. ಆದಾಗ್ಯೂ, ಇತ್ತೀಚಿನ ನ್ಯಾಯಾಂಗ ಕ್ರಮಗಳಲ್ಲಿ ಈ ಕಾನೂನನ್ನು ಕಡೆಗಣಿಸುತ್ತಿರುವುದು ಆತಂಕಕಾರಿಯಾಗಿದೆ. ಹಿಂದಿನದನ್ನು ಅಗೆಯುತ್ತಲೆ ಇದ್ದರೆ, ಅದಕ್ಕೆ ಅಂತ್ಯವೆ ಇರುವುದಿಲ್ಲ” ಎಂದು ಅವರು ಹೇಳಿದ್ದಾರೆ

ಇದೇ ರೀತಿಯ ವಾದಗಳೊಂದಿಗೆ ಬಾಬರಿ ಮಸೀದಿಯನ್ನು 1992 ರಲ್ಲಿ ಹಿಂದೂ ಉಗ್ರಗಾಮಿಗಳು ಧ್ವಂಸಗೊಳಿಸಿದ್ದರು. ಅದರಂತೆ ಕೆಡವಲಾದ ಮಸೀದಿಯ ಸ್ಥಳದಲ್ಲಿ ಈಗ ಬೇರೆ ಕಟ್ಟಡವನ್ನು ನಿರ್ಮಿಸಲು ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಮಾರಂಭದಲ್ಲಿ ಈ ಕಟ್ಟಡವನ್ನು ಉದ್ಘಾಟಿಸಲಾಗಿದೆ.

ಬಾಬರಿ ಮಸೀದಿ ಪ್ರಕರಣದ ಸುಪ್ರೀಂ ಕೋರ್ಟ್‌ನ ತೀರ್ಪು ಭಾರತದಾದ್ಯಂತ ಮುಸ್ಲಿಂ ಪ್ರಾರ್ಥನಾ ಸ್ಥಳಗಳನ್ನು ಗುರಿಯಾಗಿಸಲು ಹಿಂದುತ್ವ ಗುಂಪುಗಳಿಗೆ ಧೈರ್ಯ ನೀಡಿದೆ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಚಂಡೌಸಿಯಲ್ಲಿ ನಡೆದ ಸಮೀಕ್ಷೆಯ ವೇಗವನ್ನು ಪ್ರಶ್ನಿಸಿದ ಅವರು, ಸಾಮಾನ್ಯ ಪ್ರಕರಣಗಳಲ್ಲಿ ಇಂತಹ ಕ್ಷಿಪ್ರತನ ಕಂಡುಬರುವುದಿಲ್ಲ ಎಂದು ಟೀಕಿಸಿದ್ದಾರೆ.

“ನ್ಯಾಯಾಲಯಗಳು ಇಂತಹ ಆದೇಶಗಳನ್ನು ಮುಂದುವರಿಸಿದರೆ, ಆರಾಧನಾ ಸ್ಥಳಗಳ ಕಾಯಿದೆಯು ಕೇವಲ ಸತ್ತ ಪತ್ರವಾಗಿ ಮಾತ್ರ ಉಳಿಯಲಿದೆ. ಅಂತಹ ಮೊಕದ್ದಮೆಗಳು ನ್ಯಾಯಾಲಯಗಳನ್ನು ತಲುಪುವುದನ್ನು ತಡೆಯಲು ಕೂಡಾ ಈ ಕಾಯಿದೆಯ ಉದ್ದೇಶವಾಗಿದೆ.” ಎಂದು ಅವರು ಹೇಳಿದ್ದಾರೆ.

1991ರ ಆರಾಧನಾ ಸ್ಥಳಗಳ ಕಾಯಿದೆಯು, ಪವಿತ್ರ ಸ್ಥಳಗಳ “ಧಾರ್ಮಿಕ ಸ್ವರೂಪ” ಆಗಸ್ಟ್ 15, 1947ರ ಸ್ವಾತಂತ್ರ್ಯದ ದಿನದಂದು ಹೇಗಿತ್ತೊ, ಹಾಗೆಯೇ ಉಳಿಯಬೇಕು ಎಂಬ ಷರತ್ತು ವಿಧಿಸುತ್ತದೆ. ಆದರೆ ಈ ಕಾನೂನಿನಿಂದ ಬಾಬರಿ ಮಸೀದಿಯನ್ನು ಹೊರಗಿಡಲಾಗಿತ್ತು.

ಇದನ್ನೂ ಓದಿ: ನಿರ್ಮಲಾ ಸೀತಾರಾಮನ್, ಕಟೀಲ್ ವಿರುದ್ಧದ ಸುಲಿಗೆ ಪ್ರಕರಣ | ತೀರ್ಪು ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್

ನಿರ್ಮಲಾ ಸೀತಾರಾಮನ್, ಕಟೀಲ್ ವಿರುದ್ಧದ ಸುಲಿಗೆ ಪ್ರಕರಣ | ತೀರ್ಪು ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...