Homeಮುಖಪುಟ500 ವರ್ಷಗಳಷ್ಟು ಹಳೆಯ ಮಸೀದಿಯ ಸಮೀಕ್ಷೆಗೆ ಆದೇಶಿಸಿದ ಯುಪಿ ಕೋರ್ಟ್ - ತೀವ್ರ ಆಕ್ರೋಶ

500 ವರ್ಷಗಳಷ್ಟು ಹಳೆಯ ಮಸೀದಿಯ ಸಮೀಕ್ಷೆಗೆ ಆದೇಶಿಸಿದ ಯುಪಿ ಕೋರ್ಟ್ – ತೀವ್ರ ಆಕ್ರೋಶ

- Advertisement -
- Advertisement -

1526 ರಲ್ಲಿ ನಿರ್ಮಿಸಲಾಗಿರುವ ಮಸೀದಿಯೊಂದರ ಸಮೀಕ್ಷೆ ನಡೆಸುವಂತೆ ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ನ್ಯಾಯಾಲಯ ಆದೇಶ ನೀಡಿದ್ದು, ಈ ಪ್ರಕ್ರಿಯೆಯನ್ನು ಪ್ರತಿಭಟಿಸಲು ಸ್ಥಳೀಯ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಪ್ರದೇಶದಲ್ಲಿ ಮಂಗಳವಾರ ಉದ್ವಿಗ್ನತೆ ಸೃಷ್ಟಿಸಿಯಾಗಿದೆ. ಪ್ರಸ್ತುತ ಮಸೀದಿಗೆ ಮೊದಲು ಆ ಸ್ಥಳದಲ್ಲಿ ಹಿಂದೂ ದೇವಾಲಯವು ಅಸ್ತಿತ್ವದಲ್ಲಿತ್ತು ಎಂಬ ಹೇಳಿಕೆಗಳನ್ನು ತನಿಖೆ ಮಾಡಲು ಅಧಿಕಾರಿಗಳು ಮಂಗಳವಾರ ಸಂಜೆ ಚಂದೌಸಿ ಪಟ್ಟಣದ ಶಾಹಿ ಜಾಮಾ ಮಸೀದಿಯನ್ನು ಸಮೀಕ್ಷೆ ನಡೆಸಿದ್ದಾರೆ. 500 ವರ್ಷಗಳಷ್ಟು

1526 ರಲ್ಲಿ ಮುಸ್ಲಿಂ ರಾಜರು ದೇವಸ್ಥಾನವನ್ನು ಕೆಡವಿ ಆ ಸ್ಥಳದಲ್ಲಿ ಮಸೀದಿಯನ್ನು ನಿರ್ಮಿಸಿದ್ದಾರೆ ಎಂದು ಆರೋಪಿಸಿ ರಿಷಿ ರಾಜ್ ಗಿರಿ ಎಂಬ ಹಿಂದೂ ಪೂಜಾರಿಯೊಬ್ಬ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಿದ್ದರು. ಹಾಗಾಗಿ, ಸ್ಥಳೀಯ ನ್ಯಾಯಾಲಯವು ಅಡ್ವೊಕೇಟ್ ಕಮಿಷನರ್ ರಮೇಶ್ ಚಂದ್ ರಾಘವ್ ಅವರನ್ನು ಸಮೀಕ್ಷೆ ನಡೆಸುವಂತೆ ಆದೇಶಿಸಿದೆ. ಸಮೀಕ್ಷೆ ನಡೆಸಲು ಅಧಿಕಾರಿಗಳು ಮಸೀದಿಗೆ ಆಗಮಿಸುತ್ತಿದ್ದಂತೆ, ನೂರಾರು ಮುಸ್ಲಿಮರು ಕ್ರಮವನ್ನು ಪ್ರತಿಭಟಿಸಲು ಜಮಾಯಿಸಿದ್ದಾರೆ. ಶಾಂತಿ ಕಾಪಾಡಲು ಹೆಚ್ಚಿನ ಸಂಖ್ಯೆಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣ ಕುಮಾರ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸ್ಥಳೀಯ ಮುಸ್ಲಿಂ ಮುಖಂಡರೊಂದಿಗೆ ಅಧಿಕಾರಿಗಳು ಸಂಪರ್ಕದಲ್ಲಿದ್ದು, ಕೋಮು ಸೌಹಾರ್ದತೆಗೆ ಧಕ್ಕೆಯಾಗುವುದಿಲ್ಲ ಎಂದು ಒಪ್ಪಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ಪೆನ್ಸಿಯಾ ತಿಳಿಸಿದ್ದಾರೆ. “ಸಾಮಾಜಿಕ ಮಾಧ್ಯಮಗಳ ಮೂಲಕ ಅಥವಾ ಯಾವುದೇ ರೀತಿಯಲ್ಲಿ ವದಂತಿಗಳನ್ನು ಹರಡುವುದು ಕಂಡುಬಂದರೆ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ” ಎಂದು ಪೆನ್ಸಿಯಾ ಎಚ್ಚರಿಕೆ ನೀಡಿದ್ದಾರೆ.

ನವೆಂಬರ್ 29ರೊಳಗೆ ನ್ಯಾಯಾಲಯ ವರದಿ ಕೇಳಿದ್ದರೂ ತರಾತುರಿಯಲ್ಲಿ ಸರ್ವೆ ನಡೆಸಲಾಗಿದೆ ಎಂದು ಮಸೀದಿ ಆಡಳಿತ ಪರ ವಕೀಲ ಜಾಫರ್ ಅಲಿ ತಿಳಿಸಿದ್ದಾರೆ. ಅಗತ್ಯವಿದ್ದರೆ ನ್ಯಾಯಾಲಯದ ಆದೇಶವನ್ನು ಮಸೀದಿ ಅಧಿಕಾರಿಗಳು ಪ್ರಶ್ನಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ. 500 ವರ್ಷಗಳಷ್ಟು

 

ಈ ಕ್ರಮವನ್ನು ಜಮೀಯತ್ ಉಲಮಾ-ಇ-ಹಿಂದ್ ವಿರೋಧಿಸಿದ್ದು, ಅಯೋಧ್ಯೆಯ ಬಾಬರಿ ಮಸೀದಿ ಧ್ವಂಸದ ಗಾಯಗಳಿಂದ ದೇಶ ನರಳುತ್ತಲೇ ಇದೆ ಎಂದು ಎಂದು ಹೇಳಿದ್ದಾರೆ. ಬಾಬರಿ ಮಸೀದಿಯಂತಹ ವಿವಾದಗಳು ಮರುಕಳಿಸದಂತೆ ತಡೆಯಲು 1991 ರಲ್ಲಿ ಪೂಜಾ ಸ್ಥಳಗಳ ವಿಶೇಷ ನಿಬಂಧನೆಗಳ ಕಾಯ್ದೆಯನ್ನು ಪರಿಚಯಿಸಲಾಯಿತು ಎಂದು ಉಲಮಾ ಇ ಹಿಂದ್ ಮುಖ್ಯಸ್ಥ ಮಹಮೂದ್ ಮದನಿ ಹೇಳಿದ್ದಾರೆ.

“ಬಾಬರಿ ಮಸೀದಿ ಒಡೆದ ಪ್ರಕರಣದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಕೂಡ ಈ ಕಾನೂನಿನ ಮಹತ್ವವನ್ನು ಒತ್ತಿಹೇಳಿದೆ. ಆದಾಗ್ಯೂ, ಇತ್ತೀಚಿನ ನ್ಯಾಯಾಂಗ ಕ್ರಮಗಳಲ್ಲಿ ಈ ಕಾನೂನನ್ನು ಕಡೆಗಣಿಸುತ್ತಿರುವುದು ಆತಂಕಕಾರಿಯಾಗಿದೆ. ಹಿಂದಿನದನ್ನು ಅಗೆಯುತ್ತಲೆ ಇದ್ದರೆ, ಅದಕ್ಕೆ ಅಂತ್ಯವೆ ಇರುವುದಿಲ್ಲ” ಎಂದು ಅವರು ಹೇಳಿದ್ದಾರೆ

ಇದೇ ರೀತಿಯ ವಾದಗಳೊಂದಿಗೆ ಬಾಬರಿ ಮಸೀದಿಯನ್ನು 1992 ರಲ್ಲಿ ಹಿಂದೂ ಉಗ್ರಗಾಮಿಗಳು ಧ್ವಂಸಗೊಳಿಸಿದ್ದರು. ಅದರಂತೆ ಕೆಡವಲಾದ ಮಸೀದಿಯ ಸ್ಥಳದಲ್ಲಿ ಈಗ ಬೇರೆ ಕಟ್ಟಡವನ್ನು ನಿರ್ಮಿಸಲು ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಮಾರಂಭದಲ್ಲಿ ಈ ಕಟ್ಟಡವನ್ನು ಉದ್ಘಾಟಿಸಲಾಗಿದೆ.

ಬಾಬರಿ ಮಸೀದಿ ಪ್ರಕರಣದ ಸುಪ್ರೀಂ ಕೋರ್ಟ್‌ನ ತೀರ್ಪು ಭಾರತದಾದ್ಯಂತ ಮುಸ್ಲಿಂ ಪ್ರಾರ್ಥನಾ ಸ್ಥಳಗಳನ್ನು ಗುರಿಯಾಗಿಸಲು ಹಿಂದುತ್ವ ಗುಂಪುಗಳಿಗೆ ಧೈರ್ಯ ನೀಡಿದೆ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಚಂಡೌಸಿಯಲ್ಲಿ ನಡೆದ ಸಮೀಕ್ಷೆಯ ವೇಗವನ್ನು ಪ್ರಶ್ನಿಸಿದ ಅವರು, ಸಾಮಾನ್ಯ ಪ್ರಕರಣಗಳಲ್ಲಿ ಇಂತಹ ಕ್ಷಿಪ್ರತನ ಕಂಡುಬರುವುದಿಲ್ಲ ಎಂದು ಟೀಕಿಸಿದ್ದಾರೆ.

“ನ್ಯಾಯಾಲಯಗಳು ಇಂತಹ ಆದೇಶಗಳನ್ನು ಮುಂದುವರಿಸಿದರೆ, ಆರಾಧನಾ ಸ್ಥಳಗಳ ಕಾಯಿದೆಯು ಕೇವಲ ಸತ್ತ ಪತ್ರವಾಗಿ ಮಾತ್ರ ಉಳಿಯಲಿದೆ. ಅಂತಹ ಮೊಕದ್ದಮೆಗಳು ನ್ಯಾಯಾಲಯಗಳನ್ನು ತಲುಪುವುದನ್ನು ತಡೆಯಲು ಕೂಡಾ ಈ ಕಾಯಿದೆಯ ಉದ್ದೇಶವಾಗಿದೆ.” ಎಂದು ಅವರು ಹೇಳಿದ್ದಾರೆ.

1991ರ ಆರಾಧನಾ ಸ್ಥಳಗಳ ಕಾಯಿದೆಯು, ಪವಿತ್ರ ಸ್ಥಳಗಳ “ಧಾರ್ಮಿಕ ಸ್ವರೂಪ” ಆಗಸ್ಟ್ 15, 1947ರ ಸ್ವಾತಂತ್ರ್ಯದ ದಿನದಂದು ಹೇಗಿತ್ತೊ, ಹಾಗೆಯೇ ಉಳಿಯಬೇಕು ಎಂಬ ಷರತ್ತು ವಿಧಿಸುತ್ತದೆ. ಆದರೆ ಈ ಕಾನೂನಿನಿಂದ ಬಾಬರಿ ಮಸೀದಿಯನ್ನು ಹೊರಗಿಡಲಾಗಿತ್ತು.

ಇದನ್ನೂ ಓದಿ: ನಿರ್ಮಲಾ ಸೀತಾರಾಮನ್, ಕಟೀಲ್ ವಿರುದ್ಧದ ಸುಲಿಗೆ ಪ್ರಕರಣ | ತೀರ್ಪು ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್

ನಿರ್ಮಲಾ ಸೀತಾರಾಮನ್, ಕಟೀಲ್ ವಿರುದ್ಧದ ಸುಲಿಗೆ ಪ್ರಕರಣ | ತೀರ್ಪು ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...