Homeಮುಖಪುಟ500 ವರ್ಷಗಳಷ್ಟು ಹಳೆಯ ಮಸೀದಿಯ ಸಮೀಕ್ಷೆಗೆ ಆದೇಶಿಸಿದ ಯುಪಿ ಕೋರ್ಟ್ - ತೀವ್ರ ಆಕ್ರೋಶ

500 ವರ್ಷಗಳಷ್ಟು ಹಳೆಯ ಮಸೀದಿಯ ಸಮೀಕ್ಷೆಗೆ ಆದೇಶಿಸಿದ ಯುಪಿ ಕೋರ್ಟ್ – ತೀವ್ರ ಆಕ್ರೋಶ

- Advertisement -
- Advertisement -

1526 ರಲ್ಲಿ ನಿರ್ಮಿಸಲಾಗಿರುವ ಮಸೀದಿಯೊಂದರ ಸಮೀಕ್ಷೆ ನಡೆಸುವಂತೆ ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ನ್ಯಾಯಾಲಯ ಆದೇಶ ನೀಡಿದ್ದು, ಈ ಪ್ರಕ್ರಿಯೆಯನ್ನು ಪ್ರತಿಭಟಿಸಲು ಸ್ಥಳೀಯ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಪ್ರದೇಶದಲ್ಲಿ ಮಂಗಳವಾರ ಉದ್ವಿಗ್ನತೆ ಸೃಷ್ಟಿಸಿಯಾಗಿದೆ. ಪ್ರಸ್ತುತ ಮಸೀದಿಗೆ ಮೊದಲು ಆ ಸ್ಥಳದಲ್ಲಿ ಹಿಂದೂ ದೇವಾಲಯವು ಅಸ್ತಿತ್ವದಲ್ಲಿತ್ತು ಎಂಬ ಹೇಳಿಕೆಗಳನ್ನು ತನಿಖೆ ಮಾಡಲು ಅಧಿಕಾರಿಗಳು ಮಂಗಳವಾರ ಸಂಜೆ ಚಂದೌಸಿ ಪಟ್ಟಣದ ಶಾಹಿ ಜಾಮಾ ಮಸೀದಿಯನ್ನು ಸಮೀಕ್ಷೆ ನಡೆಸಿದ್ದಾರೆ. 500 ವರ್ಷಗಳಷ್ಟು

1526 ರಲ್ಲಿ ಮುಸ್ಲಿಂ ರಾಜರು ದೇವಸ್ಥಾನವನ್ನು ಕೆಡವಿ ಆ ಸ್ಥಳದಲ್ಲಿ ಮಸೀದಿಯನ್ನು ನಿರ್ಮಿಸಿದ್ದಾರೆ ಎಂದು ಆರೋಪಿಸಿ ರಿಷಿ ರಾಜ್ ಗಿರಿ ಎಂಬ ಹಿಂದೂ ಪೂಜಾರಿಯೊಬ್ಬ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಿದ್ದರು. ಹಾಗಾಗಿ, ಸ್ಥಳೀಯ ನ್ಯಾಯಾಲಯವು ಅಡ್ವೊಕೇಟ್ ಕಮಿಷನರ್ ರಮೇಶ್ ಚಂದ್ ರಾಘವ್ ಅವರನ್ನು ಸಮೀಕ್ಷೆ ನಡೆಸುವಂತೆ ಆದೇಶಿಸಿದೆ. ಸಮೀಕ್ಷೆ ನಡೆಸಲು ಅಧಿಕಾರಿಗಳು ಮಸೀದಿಗೆ ಆಗಮಿಸುತ್ತಿದ್ದಂತೆ, ನೂರಾರು ಮುಸ್ಲಿಮರು ಕ್ರಮವನ್ನು ಪ್ರತಿಭಟಿಸಲು ಜಮಾಯಿಸಿದ್ದಾರೆ. ಶಾಂತಿ ಕಾಪಾಡಲು ಹೆಚ್ಚಿನ ಸಂಖ್ಯೆಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣ ಕುಮಾರ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸ್ಥಳೀಯ ಮುಸ್ಲಿಂ ಮುಖಂಡರೊಂದಿಗೆ ಅಧಿಕಾರಿಗಳು ಸಂಪರ್ಕದಲ್ಲಿದ್ದು, ಕೋಮು ಸೌಹಾರ್ದತೆಗೆ ಧಕ್ಕೆಯಾಗುವುದಿಲ್ಲ ಎಂದು ಒಪ್ಪಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ಪೆನ್ಸಿಯಾ ತಿಳಿಸಿದ್ದಾರೆ. “ಸಾಮಾಜಿಕ ಮಾಧ್ಯಮಗಳ ಮೂಲಕ ಅಥವಾ ಯಾವುದೇ ರೀತಿಯಲ್ಲಿ ವದಂತಿಗಳನ್ನು ಹರಡುವುದು ಕಂಡುಬಂದರೆ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ” ಎಂದು ಪೆನ್ಸಿಯಾ ಎಚ್ಚರಿಕೆ ನೀಡಿದ್ದಾರೆ.

ನವೆಂಬರ್ 29ರೊಳಗೆ ನ್ಯಾಯಾಲಯ ವರದಿ ಕೇಳಿದ್ದರೂ ತರಾತುರಿಯಲ್ಲಿ ಸರ್ವೆ ನಡೆಸಲಾಗಿದೆ ಎಂದು ಮಸೀದಿ ಆಡಳಿತ ಪರ ವಕೀಲ ಜಾಫರ್ ಅಲಿ ತಿಳಿಸಿದ್ದಾರೆ. ಅಗತ್ಯವಿದ್ದರೆ ನ್ಯಾಯಾಲಯದ ಆದೇಶವನ್ನು ಮಸೀದಿ ಅಧಿಕಾರಿಗಳು ಪ್ರಶ್ನಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ. 500 ವರ್ಷಗಳಷ್ಟು

 

ಈ ಕ್ರಮವನ್ನು ಜಮೀಯತ್ ಉಲಮಾ-ಇ-ಹಿಂದ್ ವಿರೋಧಿಸಿದ್ದು, ಅಯೋಧ್ಯೆಯ ಬಾಬರಿ ಮಸೀದಿ ಧ್ವಂಸದ ಗಾಯಗಳಿಂದ ದೇಶ ನರಳುತ್ತಲೇ ಇದೆ ಎಂದು ಎಂದು ಹೇಳಿದ್ದಾರೆ. ಬಾಬರಿ ಮಸೀದಿಯಂತಹ ವಿವಾದಗಳು ಮರುಕಳಿಸದಂತೆ ತಡೆಯಲು 1991 ರಲ್ಲಿ ಪೂಜಾ ಸ್ಥಳಗಳ ವಿಶೇಷ ನಿಬಂಧನೆಗಳ ಕಾಯ್ದೆಯನ್ನು ಪರಿಚಯಿಸಲಾಯಿತು ಎಂದು ಉಲಮಾ ಇ ಹಿಂದ್ ಮುಖ್ಯಸ್ಥ ಮಹಮೂದ್ ಮದನಿ ಹೇಳಿದ್ದಾರೆ.

“ಬಾಬರಿ ಮಸೀದಿ ಒಡೆದ ಪ್ರಕರಣದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಕೂಡ ಈ ಕಾನೂನಿನ ಮಹತ್ವವನ್ನು ಒತ್ತಿಹೇಳಿದೆ. ಆದಾಗ್ಯೂ, ಇತ್ತೀಚಿನ ನ್ಯಾಯಾಂಗ ಕ್ರಮಗಳಲ್ಲಿ ಈ ಕಾನೂನನ್ನು ಕಡೆಗಣಿಸುತ್ತಿರುವುದು ಆತಂಕಕಾರಿಯಾಗಿದೆ. ಹಿಂದಿನದನ್ನು ಅಗೆಯುತ್ತಲೆ ಇದ್ದರೆ, ಅದಕ್ಕೆ ಅಂತ್ಯವೆ ಇರುವುದಿಲ್ಲ” ಎಂದು ಅವರು ಹೇಳಿದ್ದಾರೆ

ಇದೇ ರೀತಿಯ ವಾದಗಳೊಂದಿಗೆ ಬಾಬರಿ ಮಸೀದಿಯನ್ನು 1992 ರಲ್ಲಿ ಹಿಂದೂ ಉಗ್ರಗಾಮಿಗಳು ಧ್ವಂಸಗೊಳಿಸಿದ್ದರು. ಅದರಂತೆ ಕೆಡವಲಾದ ಮಸೀದಿಯ ಸ್ಥಳದಲ್ಲಿ ಈಗ ಬೇರೆ ಕಟ್ಟಡವನ್ನು ನಿರ್ಮಿಸಲು ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಮಾರಂಭದಲ್ಲಿ ಈ ಕಟ್ಟಡವನ್ನು ಉದ್ಘಾಟಿಸಲಾಗಿದೆ.

ಬಾಬರಿ ಮಸೀದಿ ಪ್ರಕರಣದ ಸುಪ್ರೀಂ ಕೋರ್ಟ್‌ನ ತೀರ್ಪು ಭಾರತದಾದ್ಯಂತ ಮುಸ್ಲಿಂ ಪ್ರಾರ್ಥನಾ ಸ್ಥಳಗಳನ್ನು ಗುರಿಯಾಗಿಸಲು ಹಿಂದುತ್ವ ಗುಂಪುಗಳಿಗೆ ಧೈರ್ಯ ನೀಡಿದೆ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಚಂಡೌಸಿಯಲ್ಲಿ ನಡೆದ ಸಮೀಕ್ಷೆಯ ವೇಗವನ್ನು ಪ್ರಶ್ನಿಸಿದ ಅವರು, ಸಾಮಾನ್ಯ ಪ್ರಕರಣಗಳಲ್ಲಿ ಇಂತಹ ಕ್ಷಿಪ್ರತನ ಕಂಡುಬರುವುದಿಲ್ಲ ಎಂದು ಟೀಕಿಸಿದ್ದಾರೆ.

“ನ್ಯಾಯಾಲಯಗಳು ಇಂತಹ ಆದೇಶಗಳನ್ನು ಮುಂದುವರಿಸಿದರೆ, ಆರಾಧನಾ ಸ್ಥಳಗಳ ಕಾಯಿದೆಯು ಕೇವಲ ಸತ್ತ ಪತ್ರವಾಗಿ ಮಾತ್ರ ಉಳಿಯಲಿದೆ. ಅಂತಹ ಮೊಕದ್ದಮೆಗಳು ನ್ಯಾಯಾಲಯಗಳನ್ನು ತಲುಪುವುದನ್ನು ತಡೆಯಲು ಕೂಡಾ ಈ ಕಾಯಿದೆಯ ಉದ್ದೇಶವಾಗಿದೆ.” ಎಂದು ಅವರು ಹೇಳಿದ್ದಾರೆ.

1991ರ ಆರಾಧನಾ ಸ್ಥಳಗಳ ಕಾಯಿದೆಯು, ಪವಿತ್ರ ಸ್ಥಳಗಳ “ಧಾರ್ಮಿಕ ಸ್ವರೂಪ” ಆಗಸ್ಟ್ 15, 1947ರ ಸ್ವಾತಂತ್ರ್ಯದ ದಿನದಂದು ಹೇಗಿತ್ತೊ, ಹಾಗೆಯೇ ಉಳಿಯಬೇಕು ಎಂಬ ಷರತ್ತು ವಿಧಿಸುತ್ತದೆ. ಆದರೆ ಈ ಕಾನೂನಿನಿಂದ ಬಾಬರಿ ಮಸೀದಿಯನ್ನು ಹೊರಗಿಡಲಾಗಿತ್ತು.

ಇದನ್ನೂ ಓದಿ: ನಿರ್ಮಲಾ ಸೀತಾರಾಮನ್, ಕಟೀಲ್ ವಿರುದ್ಧದ ಸುಲಿಗೆ ಪ್ರಕರಣ | ತೀರ್ಪು ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್

ನಿರ್ಮಲಾ ಸೀತಾರಾಮನ್, ಕಟೀಲ್ ವಿರುದ್ಧದ ಸುಲಿಗೆ ಪ್ರಕರಣ | ತೀರ್ಪು ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...