Homeಕರ್ನಾಟಕಹಜ್ ಭವನಕ್ಕೆ 5000 ಕೋಟಿ ರೂ. ಬಿಡುಗಡೆ ವಿಚಾರ: ಸುಳ್ಳು ಸುದ್ದಿ ಹರಡದಂತೆ ಮಾಧ್ಯಮಗಳಿಗೆ ಕಾಂಗ್ರೆಸ್...

ಹಜ್ ಭವನಕ್ಕೆ 5000 ಕೋಟಿ ರೂ. ಬಿಡುಗಡೆ ವಿಚಾರ: ಸುಳ್ಳು ಸುದ್ದಿ ಹರಡದಂತೆ ಮಾಧ್ಯಮಗಳಿಗೆ ಕಾಂಗ್ರೆಸ್ ಕಿವಿಮಾತು

- Advertisement -
- Advertisement -

ಹಜ್ ಭವನ ನವೀಕರಣಕ್ಕೆ ಮುಖ್ಯಮಂತ್ರಿಗಳು 5 ಸಾವಿರ ಕೋಟಿ ರೂ. ನೀಡಿದ್ದಾರೆ ಎಂದು ಕನ್ನಡದ ಪಬ್ಲಿಕ್ ಟಿವಿ ವಾಹಿನಿಯು ಸುದ್ದಿ ಪ್ರಸಾರ ಮಾಡಿತ್ತು. ಈ ಬಗ್ಗೆ ಸಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಆದರೆ ಇದು ಸುಳ್ಳು ಸುದ್ದಿ ಎನ್ನುವುದನ್ನು ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ತಿಳಿಸಿದೆ.

ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಮಹತ್ವದ ಗೃಹಲಕ್ಷ್ಮಿ ಯೋಜನೆಯ ಅರ್ಜಿ ನಮೂನೆಯು ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದೆ. ಅದರಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮಹಿಳೆ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಭಾವಚಿತ್ರವಿದ್ದು, ಅದರಲ್ಲಿನ ಮಾಹಿತಿ ವಿಚಾರ ಕೂಡ ಗೊಂದಲಕಾರಿಯಾಗಿರುವುದರಿಂದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಇದು ಕೂಡ ನಕಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸ್ಪಷ್ಟಪಡಿಸಿದೆ.

”ಗೃಹ ಲಕ್ಷ್ಮೀ ಯೋಜನೆಗೆ ಸಂಬಂಧಿಸಿ ಇಲಾಖೆಯಿಂದ ಅಧಿಕೃತವಾಗಿ ಅರ್ಜಿ ನಮೂನೆ ಬಿಡುಗಡೆಯಾಗಿಲ್ಲ. ಅದರ ಸಿದ್ಧತೆ ನಡೆಯುತ್ತಿದೆ, ಈಗ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗುತ್ತಿರುವ ಅರ್ಜಿ ನಮೂನೆ ನಕಲಿ” ಎಂದು ಇಲಾಖೆಯ ನಿರ್ದೇಶನಾಲಯ ಕಚೇರಿಯ ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ.

ಈ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ”ಮಾಧ್ಯಮಗಳು ಹೊಣೆಗಾರಿಕೆಯಿಂದ ವರ್ತಿಸಬೇಕು, ಪತ್ರಿಕಾಧರ್ಮಕ್ಕೆ ಚ್ಯುತಿ ಬಾರದಂತೆ ನಡೆದುಕೊಂಡಾಗ ಮಾತ್ರ ಸ್ವಸ್ಥ ಸಮಾಜ ರೂಪಿಸಲು ಸಾಧ್ಯ. ನಮ್ಮ ಸರ್ಕಾರದ ಬಗ್ಗೆ ರಚನಾತ್ಮಕ ಟೀಕೆ, ವಿಮರ್ಶೆ, ಸಲಹೆಗಳಿಗೆ ಸದಾ ಸ್ವಾಗತವಿರುತ್ತದೆ. ಆದರೆ ಉದ್ದೇಶಪೂರ್ವಕವಾಗಿ ನಕಾರಾತ್ಮಕ ಅಭಿಪ್ರಾಯ ಮೂಡಿಸುವ ಪ್ರಯತ್ನ ಮಾಡಬೇಡಿ ಎಂಬುದು ನಮ್ಮ ಕಳಕಳಿಯ ಮನವಿ” ಎಂದು ಹೇಳಿದೆ.

ಹಜ್ ಭವನಕ್ಕೆ 5000 ಕೋಟಿ ರೂ. ಕೊಟ್ಟ ಸರ್ಕಾರ: ಮಾಧ್ಯಮ ವರದಿಗೆ ಸಚಿವ ಝಮೀರ್ ಅಹ್ಮದ್ ಸ್ಪಷ್ಟಣೆ

”ಕರ್ನಾಟಕ ಹಜ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಹಜ್ ಭವನ ನಿರ್ಮಾಣಕ್ಕೆ ಐದು ಸಾವಿರ ಕೋಟಿ ರೂ. ಕೊಡುವಂತೆ ನಾನು ಬೇಡಿಕೆ ಇಟ್ಟಿದ್ದೇನೆ ಎಂದು ಟ್ರೋಲ್ ಮಾಡಲಾಗುತ್ತಿದೆ. ಅದು ಶುದ್ಧ ಸುಳ್ಳು” ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಸ್ಪಷ್ಟ ಪಡಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ”ವಾಸ್ತವವಾಗಿ ನಾನು ಅಂದು ಮನವಿ ಮಾಡಿದ್ದು, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗೆ 5000 ಕೋಟಿ ರೂ. ಕೊಡುವುದಾಗಿ ಭರವಸೆ ನೀಡಲಾಗಿದೆ. ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಿನ್ನೆಲೆಯಲ್ಲಿ ನಮಗೆ ನೀಡುವುದಾಗಿ ಹೇಳಿರುವ ಅನುದಾನ ಕಡಿತ ಮಾಡಬಹುದು ಎಂಬ ಮಾತುಗಳು ಕೇಳಿಬರುತ್ತಿರುವುದರಿಂದ ನಮ್ಮ ಧರ್ಮ ಗುರುಗಳು ಆತಂಕಗೊಂಡಿದ್ದಾರೆ. ದಯವಿಟ್ಟು ತಾವು ಯಾವುದೇ ರೀತಿಯ ಕಡಿತ ಮಾಡಬಾರದು. ಹಿಂದೆ ನೀವು ಮುಖ್ಯಮಂತ್ರಿ ಆಗಿದ್ದಾಗ 2018ರಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗೆ 3150 ಕೋಟಿ ರೂ. ಕೊಟ್ಟಿದ್ದೀರಿ. ಆ ನಂತರ ಬಂದ ಸರ್ಕಾರಗಳು ಕ್ರಮೇಣ ಅನುದಾನ ಕಡಿಮೆ ಮಾಡುತ್ತಾ ಹೋಗಿವೆ. ಹೀಗಾಗಿ ಐದು ಸಾವಿರ ಕೋಟಿ ರೂ. ಅನುದಾನ ನೀಡಿದರೆ ನಮ್ಮ ಸಮುದಾಯಕ್ಕೆ ಬಹಳ ದೊಡ್ಡ ಉಪಕಾರ ಆಗುತ್ತದೆ ಎಂದು ನಾನು ಮನವಿ ಮಾಡಿದ್ದೇನೆ” ಎಂದು ತಿಳಿಸಿದ್ದಾರೆ.

”ಹಜ್ ಭವನದ ನವೀಕರಣಕ್ಕೆ ಐದು ಕೋಟಿ ರೂ. ಕೊಟ್ಟಿದ್ದೀರಿ ಅದಕ್ಕೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ ಎಂದು ಹೇಳಿದ್ದೇನೆ. ಆದರೆ ಕೆಲವರು ನನ್ನ ಹೇಳಿಕೆ ತಪ್ಪಾಗಿ ತಿರುಚಿ ಟ್ರೋಲ್ ಮಾಡುತ್ತಿದ್ದಾರೆ. ಅದು ಸತ್ಯಕ್ಕೆ ದೂರ. ಇಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

5 ಕೋಟಿ ಎಂದಿದ್ದನ್ನು 5000 ಕೋಟಿ ಮಾಡಿದ ಪಬ್ಲಿಕ್ ಟಿವಿ

”ಹಜ್ ಭವನದ ನವೀಕರಣಕ್ಕೆ ಐದು ಕೋಟಿ ರೂ. ಕೊಟ್ಟಿದ್ದಕ್ಕೆ ಸಚಿವ ಝಮೀರ್ ಅಹ್ಮದ್ ಅವರು ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ್ದರು. ಇದನ್ನೇ ಪಬ್ಲಿಕ್ ಟಿವಿ ಸುದ್ದಿವಾಹಿನಿಯು ”ಹಜ್ ಭವನ ನವೀಕರಣಕ್ಕೆ 5000 ಕೋಟಿದ್ದಾರೆ” ಎಂದು ಝಮೀರ್ ಅಹ್ಮದ್ ಅವರು ಹೇಳಿರುವುದಾಗಿ ವರದಿ ಮಾಡಿದೆ. ಇದರಿಂದ ಗೊಂದಲ ಸೃಷ್ಟಿಯಾಗಿದ್ದು, ಇದೀಗ ಖುದ್ದು ಝಮೀರ್ ಅಹ್ಮದ್ ಅವರೇ ಸ್ಪಷ್ಟನೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...