Homeಮುಖಪುಟ50,000 ಜನರನ್ನು ರಾತ್ರೋರಾತ್ರಿ ಕಿತ್ತೊಗೆಯಲು ಸಾಧ್ಯವಿಲ್ಲ: ಹಲ್ದ್‌ವಾನಿ ಒಕ್ಕಲೆಬ್ಬಿಸುವಿಕೆಗೆ ಸುಪ್ರೀಂ ತಡೆ

50,000 ಜನರನ್ನು ರಾತ್ರೋರಾತ್ರಿ ಕಿತ್ತೊಗೆಯಲು ಸಾಧ್ಯವಿಲ್ಲ: ಹಲ್ದ್‌ವಾನಿ ಒಕ್ಕಲೆಬ್ಬಿಸುವಿಕೆಗೆ ಸುಪ್ರೀಂ ತಡೆ

- Advertisement -
- Advertisement -

ಉತ್ತರಾಖಂಡ ರಾಜ್ಯದ ಹಲ್ದ್‌ವಾನಿ ಜಿಲ್ಲೆಯ ಬನ್‌ಭೂಲ್‌ಪುರ ಪ್ರದೇಶದ ರೈಲು ನಿಲ್ದಾಣದ ಪಕ್ಕದಲ್ಲಿ ಗುಡಿಸಲುಗಳನ್ನು ಹಾಕಿಕೊಂಡು, ಮನೆ ಕಟ್ಟಿಕೊಂಡು ತಲೆಮಾರುಗಳಿಂದ ವಾಸಿಸುತ್ತಿದ್ದು ಸುಮಾರು 4,000ಕ್ಕೂ ಹೆಚ್ಚು ಕುಟುಂಬಗಳನ್ನು ಅಲ್ಲಿಂದ ಒಕ್ಕಲಿಬ್ಬಿಸಬೇಕು ಎಂಬ ಉತ್ತರಾಖಂಡ ಹೈಕೋರ್ಟ್ ಆದೇಶಕ್ಕೆ ಇಂದು ಸುಪ್ರೀಂ ಕೋರ್ಟ್ ತಡೆ ನೀಡಿದೆ.

50,000 ಜನರನ್ನು ರಾತ್ರೋರಾತ್ರಿ ಬೇರು ಸಮೇತ ಕಿತ್ತೊಗೆಯಲು ಸಾಧ್ಯವಿಲ್ಲ. ಇದೊಂದು ಮಾನವೀಯ ವಿಷಯ. ಇದಕ್ಕೆ ಕಾರ್ಯಸಾಧುವಾದ ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಮತ್ತು ಅಭಯ್ ಎಸ್ ಓಕಾ ಅವರ ಪೀಠವು “ಏಳು ದಿನಗಳಲ್ಲಿ 4,000 ಕ್ಕೂ ಅಧಿಕ ಕುಟುಂಬಗಳನ್ನು ಬೀದಿಪಾಲು ಮಾಡಲು ಸಾಧ್ಯವೇ? ಅವರು ಅಲ್ಲಿ ಬಹಳ ವರ್ಷಗಳಿಂದ ವಾಸವಿದ್ದಾರೆ ಎನ್ನಲಾಗಿದೆ. ಅವರನ್ನು ಪುನರ್ವಸತಿ ಇಲ್ಲದೆ ಕೊರೆಯುವ ಚಳಿಯಲ್ಲಿ ಬೀದಿಗೆ ತಳ್ಳಲು ಸಾಧ್ಯವಿಲ್ಲ” ಎಂದಿದೆ.

ದಶಕಗಳಿಂದ ಅಲ್ಲಿ ವಾಸಿಸುತ್ತಿರುವ ಜನರನ್ನು ಒಕ್ಕಲೆಬ್ಬಿಸಲು ಅರೆಸೈನಿಕ ಪಡೆಗಳನ್ನು ನಿಯೋಜಿಸಬೇಕು ಎಂದು ಹೇಳುವುದು ಸರಿಯಲ್ಲ ಎಂದು ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಹೇಳಿದ್ದಾರೆ.

ನ್ಯಾಯಾಲಯವು ಈ ಪ್ರದೇಶದಲ್ಲಿ ಯಾವುದೇ ನಿರ್ಮಾಣ ಕಾಮಗಾರಿ ಮಾಡಬಾರದು ಎಂದು ಆದೇಶಿಸಿ, ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ರೈಲ್ವೆ ಮತ್ತು ಉತ್ತರಾಖಂಡ ಸರ್ಕಾರಕ್ಕೆ ಸೂಚಿಸಿದೆ. ಮುಂದಿನ ತಿಂಗಳು ಪ್ರಕರಣದ ವಿಚಾರಣೆ ನಡೆಯಲಿದೆ ಎಂದು ಹೇಳಿದೆ.

ಏನಿದು ಪ್ರಕರಣ?

ಉತ್ತರಾಖಂಡ ರಾಜ್ಯದ ಹಲ್ದ್‌ವಾನಿ ಜಿಲ್ಲೆಯ ರೈಲ್ವೆ ನಿಲ್ದಾಣದ ಬಳಿಯ ಬನ್‌ಭೂಲ್‌ಪುರ ಪ್ರದೇಶದ 2 ಕಿ.ಮೀ ವ್ಯಾಪ್ತಿಯಲ್ಲಿ ಸುಮಾರು 4,000ಕ್ಕೂ ಹೆಚ್ಚು ಕುಟುಂಬಗಳು ಹಿಂದಿನಿಂದಲೂ ವಾಸಿಸುತ್ತಿವೆ. ಅಲ್ಲಿನ ಬಹುತೇಕ ಮುಸ್ಲಿಂ ಸುಮುದಾಯಕ್ಕೆ ಸೇರಿದ್ದಾರೆ. ಆ ಜಾಗವು ರೈಲ್ವೆ ಇಲಾಖೆಗೆ ಸೇರಿದ್ದು, ಅಲ್ಲಿನ ಜನರು ಅತಿಕ್ರಮ ಪ್ರವೇಶ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅದೇ ವಾದವನ್ನು ಉತ್ತರಾಖಂಡ ಹೈಕೋರ್ಟ್ ಎತ್ತಿ ಹಿಡಿದು ಡಿಸೆಂಬರ್ 20 ರಂದು ಅವರನ್ನು ಅಲ್ಲಿಂದ ತೆರವುಗೊಳಿಸಲು ಆದೇಶಿಸಿತ್ತು.

ಈ ಆದೇಶದಿಂದ ತತ್ತರಿಸಿರುವ ಅಲ್ಲಿನ ನಿವಾಸಿಗಳು ಇದು ರೈಲ್ವೆ ಇಲಾಖೆಯ ಜಾಗವಲ್ಲ ಎಂದು ವಾದಿಸಿ, ಒಕ್ಕಲೆಬ್ಬಿಸುವಿಕೆಯನ್ನು ನಿಲ್ಲಿಸಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಮಾಡಿದ್ದಾರೆ. ನ್ಯಾಯವಾದಿ ಪ್ರಶಾಂತ್ ಭೂಷಣ್ ಸಂತ್ರಸ್ತರ ಪರವಾಗಿ ಅರ್ಜಿ ಸಲ್ಲಿಸಿ ವಾದಿಸಿದ್ದರು. ಸುಪ್ರೀಂ ಕೋರ್ಟ್ ಅರ್ಜಿದಾರರ ಪರ ನಿಂತಿದೆ.

ನಾವಿಲ್ಲಿ ಹಲವಾರು ತಲೆಮಾರುಗಳಿಂದ ವಾಸಿಸುತ್ತಿದ್ದೇವೆ. ನಮ್ಮ ಮನೆಗಳಿಗೆ ತೆರಿಗೆ ಕಟ್ಟುತ್ತಿದ್ದೇವೆ. ಈ ಪ್ರದೇಶದಲ್ಲಿ ಐದು ಸರ್ಕಾರಿ ಶಾಲೆಗಳು, ಒಂದು ಆಸ್ಪತ್ರೆ ಮತ್ತು ಎರಡು ಓವರ್‌ಹೆಡ್ ನೀರಿನ ಟ್ಯಾಂಕ್‌ಗಳಿವೆ. ಇಂತಹ ಪ್ರದೇಶವನ್ನು ಅಕ್ರಮವೆಂದು ನೆಲಸಮ ಮಾಡಲು ಸಾಧ್ಯವಿಲ್ಲ. ಏಕೆಂದರೆ ಈ ಭೂಮಿಯ ಒಡೆತನದ ವ್ಯಾಜ್ಯ ಇನ್ನು ಜಿಲ್ಲಾ ಕೋರ್ಟ್‌ನಲ್ಲಿರುವಾಗ ಒಕ್ಕಲೆಬ್ಬಿಸುವಿಕೆಗೆ ಹೈಕೋರ್ಟ್ ಆದೇಶಿಸಿರುವುದು ಕಾನೂನುಬಾಹಿರ ಎಂದು ಅಲ್ಲಿನ ನಿವಾಸಿಗಳು ವಾದಿಸಿದ್ದಾರೆ.

ಈ ಪ್ರದೇಶದಲ್ಲಿ ಬಹುತೇಕ ಮುಸ್ಲಿಂ ಸಮುದಾಯಗಳು ವಾಸಿಸುತ್ತಿರುವ ಕಾರಣ ಹಗೆತನದಿಂದಾಗಿ ನಮ್ಮನ್ನು ಒಕ್ಕಲೆಬ್ಬಿಸಲಾಗುತ್ತಿದೆ. ತಲೆಮಾರುಗಳಿಂದ ಇಲ್ಲಿ ಬದುಕಿದ ನಮಗೆ ಈ ಜಾಗದ ಒಡೆತನದ ಹಕ್ಕಿದೆ. ನಮ್ಮನ್ನು ಒಕ್ಕಲೆಬ್ಬಿಸುವುದು ಬೇಡ ಎಂದು ಅಲ್ಲಿನ ಸಾವಿರಾರು ಮಹಿಳೆಯರು ಮೊಂಬತ್ತಿ ಬೆಳಗಿಸಿ ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಯಾವ ಯಾವ ಕೆಟಗರಿಯಲ್ಲಿ ಎಷ್ಟೆಷ್ಟು ಜಾತಿಗಳಿವೆ? ಮೀಸಲಾತಿಯ ಪಾಲೆಷ್ಟಿದೆ? – ಪೂರ್ಣ ವಿವರ ಇಲ್ಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...