Homeಮುಖಪುಟ50,000 ಜನರನ್ನು ರಾತ್ರೋರಾತ್ರಿ ಕಿತ್ತೊಗೆಯಲು ಸಾಧ್ಯವಿಲ್ಲ: ಹಲ್ದ್‌ವಾನಿ ಒಕ್ಕಲೆಬ್ಬಿಸುವಿಕೆಗೆ ಸುಪ್ರೀಂ ತಡೆ

50,000 ಜನರನ್ನು ರಾತ್ರೋರಾತ್ರಿ ಕಿತ್ತೊಗೆಯಲು ಸಾಧ್ಯವಿಲ್ಲ: ಹಲ್ದ್‌ವಾನಿ ಒಕ್ಕಲೆಬ್ಬಿಸುವಿಕೆಗೆ ಸುಪ್ರೀಂ ತಡೆ

- Advertisement -
- Advertisement -

ಉತ್ತರಾಖಂಡ ರಾಜ್ಯದ ಹಲ್ದ್‌ವಾನಿ ಜಿಲ್ಲೆಯ ಬನ್‌ಭೂಲ್‌ಪುರ ಪ್ರದೇಶದ ರೈಲು ನಿಲ್ದಾಣದ ಪಕ್ಕದಲ್ಲಿ ಗುಡಿಸಲುಗಳನ್ನು ಹಾಕಿಕೊಂಡು, ಮನೆ ಕಟ್ಟಿಕೊಂಡು ತಲೆಮಾರುಗಳಿಂದ ವಾಸಿಸುತ್ತಿದ್ದು ಸುಮಾರು 4,000ಕ್ಕೂ ಹೆಚ್ಚು ಕುಟುಂಬಗಳನ್ನು ಅಲ್ಲಿಂದ ಒಕ್ಕಲಿಬ್ಬಿಸಬೇಕು ಎಂಬ ಉತ್ತರಾಖಂಡ ಹೈಕೋರ್ಟ್ ಆದೇಶಕ್ಕೆ ಇಂದು ಸುಪ್ರೀಂ ಕೋರ್ಟ್ ತಡೆ ನೀಡಿದೆ.

50,000 ಜನರನ್ನು ರಾತ್ರೋರಾತ್ರಿ ಬೇರು ಸಮೇತ ಕಿತ್ತೊಗೆಯಲು ಸಾಧ್ಯವಿಲ್ಲ. ಇದೊಂದು ಮಾನವೀಯ ವಿಷಯ. ಇದಕ್ಕೆ ಕಾರ್ಯಸಾಧುವಾದ ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಮತ್ತು ಅಭಯ್ ಎಸ್ ಓಕಾ ಅವರ ಪೀಠವು “ಏಳು ದಿನಗಳಲ್ಲಿ 4,000 ಕ್ಕೂ ಅಧಿಕ ಕುಟುಂಬಗಳನ್ನು ಬೀದಿಪಾಲು ಮಾಡಲು ಸಾಧ್ಯವೇ? ಅವರು ಅಲ್ಲಿ ಬಹಳ ವರ್ಷಗಳಿಂದ ವಾಸವಿದ್ದಾರೆ ಎನ್ನಲಾಗಿದೆ. ಅವರನ್ನು ಪುನರ್ವಸತಿ ಇಲ್ಲದೆ ಕೊರೆಯುವ ಚಳಿಯಲ್ಲಿ ಬೀದಿಗೆ ತಳ್ಳಲು ಸಾಧ್ಯವಿಲ್ಲ” ಎಂದಿದೆ.

ದಶಕಗಳಿಂದ ಅಲ್ಲಿ ವಾಸಿಸುತ್ತಿರುವ ಜನರನ್ನು ಒಕ್ಕಲೆಬ್ಬಿಸಲು ಅರೆಸೈನಿಕ ಪಡೆಗಳನ್ನು ನಿಯೋಜಿಸಬೇಕು ಎಂದು ಹೇಳುವುದು ಸರಿಯಲ್ಲ ಎಂದು ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಹೇಳಿದ್ದಾರೆ.

ನ್ಯಾಯಾಲಯವು ಈ ಪ್ರದೇಶದಲ್ಲಿ ಯಾವುದೇ ನಿರ್ಮಾಣ ಕಾಮಗಾರಿ ಮಾಡಬಾರದು ಎಂದು ಆದೇಶಿಸಿ, ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ರೈಲ್ವೆ ಮತ್ತು ಉತ್ತರಾಖಂಡ ಸರ್ಕಾರಕ್ಕೆ ಸೂಚಿಸಿದೆ. ಮುಂದಿನ ತಿಂಗಳು ಪ್ರಕರಣದ ವಿಚಾರಣೆ ನಡೆಯಲಿದೆ ಎಂದು ಹೇಳಿದೆ.

ಏನಿದು ಪ್ರಕರಣ?

ಉತ್ತರಾಖಂಡ ರಾಜ್ಯದ ಹಲ್ದ್‌ವಾನಿ ಜಿಲ್ಲೆಯ ರೈಲ್ವೆ ನಿಲ್ದಾಣದ ಬಳಿಯ ಬನ್‌ಭೂಲ್‌ಪುರ ಪ್ರದೇಶದ 2 ಕಿ.ಮೀ ವ್ಯಾಪ್ತಿಯಲ್ಲಿ ಸುಮಾರು 4,000ಕ್ಕೂ ಹೆಚ್ಚು ಕುಟುಂಬಗಳು ಹಿಂದಿನಿಂದಲೂ ವಾಸಿಸುತ್ತಿವೆ. ಅಲ್ಲಿನ ಬಹುತೇಕ ಮುಸ್ಲಿಂ ಸುಮುದಾಯಕ್ಕೆ ಸೇರಿದ್ದಾರೆ. ಆ ಜಾಗವು ರೈಲ್ವೆ ಇಲಾಖೆಗೆ ಸೇರಿದ್ದು, ಅಲ್ಲಿನ ಜನರು ಅತಿಕ್ರಮ ಪ್ರವೇಶ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅದೇ ವಾದವನ್ನು ಉತ್ತರಾಖಂಡ ಹೈಕೋರ್ಟ್ ಎತ್ತಿ ಹಿಡಿದು ಡಿಸೆಂಬರ್ 20 ರಂದು ಅವರನ್ನು ಅಲ್ಲಿಂದ ತೆರವುಗೊಳಿಸಲು ಆದೇಶಿಸಿತ್ತು.

ಈ ಆದೇಶದಿಂದ ತತ್ತರಿಸಿರುವ ಅಲ್ಲಿನ ನಿವಾಸಿಗಳು ಇದು ರೈಲ್ವೆ ಇಲಾಖೆಯ ಜಾಗವಲ್ಲ ಎಂದು ವಾದಿಸಿ, ಒಕ್ಕಲೆಬ್ಬಿಸುವಿಕೆಯನ್ನು ನಿಲ್ಲಿಸಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಮಾಡಿದ್ದಾರೆ. ನ್ಯಾಯವಾದಿ ಪ್ರಶಾಂತ್ ಭೂಷಣ್ ಸಂತ್ರಸ್ತರ ಪರವಾಗಿ ಅರ್ಜಿ ಸಲ್ಲಿಸಿ ವಾದಿಸಿದ್ದರು. ಸುಪ್ರೀಂ ಕೋರ್ಟ್ ಅರ್ಜಿದಾರರ ಪರ ನಿಂತಿದೆ.

ನಾವಿಲ್ಲಿ ಹಲವಾರು ತಲೆಮಾರುಗಳಿಂದ ವಾಸಿಸುತ್ತಿದ್ದೇವೆ. ನಮ್ಮ ಮನೆಗಳಿಗೆ ತೆರಿಗೆ ಕಟ್ಟುತ್ತಿದ್ದೇವೆ. ಈ ಪ್ರದೇಶದಲ್ಲಿ ಐದು ಸರ್ಕಾರಿ ಶಾಲೆಗಳು, ಒಂದು ಆಸ್ಪತ್ರೆ ಮತ್ತು ಎರಡು ಓವರ್‌ಹೆಡ್ ನೀರಿನ ಟ್ಯಾಂಕ್‌ಗಳಿವೆ. ಇಂತಹ ಪ್ರದೇಶವನ್ನು ಅಕ್ರಮವೆಂದು ನೆಲಸಮ ಮಾಡಲು ಸಾಧ್ಯವಿಲ್ಲ. ಏಕೆಂದರೆ ಈ ಭೂಮಿಯ ಒಡೆತನದ ವ್ಯಾಜ್ಯ ಇನ್ನು ಜಿಲ್ಲಾ ಕೋರ್ಟ್‌ನಲ್ಲಿರುವಾಗ ಒಕ್ಕಲೆಬ್ಬಿಸುವಿಕೆಗೆ ಹೈಕೋರ್ಟ್ ಆದೇಶಿಸಿರುವುದು ಕಾನೂನುಬಾಹಿರ ಎಂದು ಅಲ್ಲಿನ ನಿವಾಸಿಗಳು ವಾದಿಸಿದ್ದಾರೆ.

ಈ ಪ್ರದೇಶದಲ್ಲಿ ಬಹುತೇಕ ಮುಸ್ಲಿಂ ಸಮುದಾಯಗಳು ವಾಸಿಸುತ್ತಿರುವ ಕಾರಣ ಹಗೆತನದಿಂದಾಗಿ ನಮ್ಮನ್ನು ಒಕ್ಕಲೆಬ್ಬಿಸಲಾಗುತ್ತಿದೆ. ತಲೆಮಾರುಗಳಿಂದ ಇಲ್ಲಿ ಬದುಕಿದ ನಮಗೆ ಈ ಜಾಗದ ಒಡೆತನದ ಹಕ್ಕಿದೆ. ನಮ್ಮನ್ನು ಒಕ್ಕಲೆಬ್ಬಿಸುವುದು ಬೇಡ ಎಂದು ಅಲ್ಲಿನ ಸಾವಿರಾರು ಮಹಿಳೆಯರು ಮೊಂಬತ್ತಿ ಬೆಳಗಿಸಿ ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಯಾವ ಯಾವ ಕೆಟಗರಿಯಲ್ಲಿ ಎಷ್ಟೆಷ್ಟು ಜಾತಿಗಳಿವೆ? ಮೀಸಲಾತಿಯ ಪಾಲೆಷ್ಟಿದೆ? – ಪೂರ್ಣ ವಿವರ ಇಲ್ಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...