Homeಮುಖಪುಟ50,000 ಜನರನ್ನು ರಾತ್ರೋರಾತ್ರಿ ಕಿತ್ತೊಗೆಯಲು ಸಾಧ್ಯವಿಲ್ಲ: ಹಲ್ದ್‌ವಾನಿ ಒಕ್ಕಲೆಬ್ಬಿಸುವಿಕೆಗೆ ಸುಪ್ರೀಂ ತಡೆ

50,000 ಜನರನ್ನು ರಾತ್ರೋರಾತ್ರಿ ಕಿತ್ತೊಗೆಯಲು ಸಾಧ್ಯವಿಲ್ಲ: ಹಲ್ದ್‌ವಾನಿ ಒಕ್ಕಲೆಬ್ಬಿಸುವಿಕೆಗೆ ಸುಪ್ರೀಂ ತಡೆ

- Advertisement -
- Advertisement -

ಉತ್ತರಾಖಂಡ ರಾಜ್ಯದ ಹಲ್ದ್‌ವಾನಿ ಜಿಲ್ಲೆಯ ಬನ್‌ಭೂಲ್‌ಪುರ ಪ್ರದೇಶದ ರೈಲು ನಿಲ್ದಾಣದ ಪಕ್ಕದಲ್ಲಿ ಗುಡಿಸಲುಗಳನ್ನು ಹಾಕಿಕೊಂಡು, ಮನೆ ಕಟ್ಟಿಕೊಂಡು ತಲೆಮಾರುಗಳಿಂದ ವಾಸಿಸುತ್ತಿದ್ದು ಸುಮಾರು 4,000ಕ್ಕೂ ಹೆಚ್ಚು ಕುಟುಂಬಗಳನ್ನು ಅಲ್ಲಿಂದ ಒಕ್ಕಲಿಬ್ಬಿಸಬೇಕು ಎಂಬ ಉತ್ತರಾಖಂಡ ಹೈಕೋರ್ಟ್ ಆದೇಶಕ್ಕೆ ಇಂದು ಸುಪ್ರೀಂ ಕೋರ್ಟ್ ತಡೆ ನೀಡಿದೆ.

50,000 ಜನರನ್ನು ರಾತ್ರೋರಾತ್ರಿ ಬೇರು ಸಮೇತ ಕಿತ್ತೊಗೆಯಲು ಸಾಧ್ಯವಿಲ್ಲ. ಇದೊಂದು ಮಾನವೀಯ ವಿಷಯ. ಇದಕ್ಕೆ ಕಾರ್ಯಸಾಧುವಾದ ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಮತ್ತು ಅಭಯ್ ಎಸ್ ಓಕಾ ಅವರ ಪೀಠವು “ಏಳು ದಿನಗಳಲ್ಲಿ 4,000 ಕ್ಕೂ ಅಧಿಕ ಕುಟುಂಬಗಳನ್ನು ಬೀದಿಪಾಲು ಮಾಡಲು ಸಾಧ್ಯವೇ? ಅವರು ಅಲ್ಲಿ ಬಹಳ ವರ್ಷಗಳಿಂದ ವಾಸವಿದ್ದಾರೆ ಎನ್ನಲಾಗಿದೆ. ಅವರನ್ನು ಪುನರ್ವಸತಿ ಇಲ್ಲದೆ ಕೊರೆಯುವ ಚಳಿಯಲ್ಲಿ ಬೀದಿಗೆ ತಳ್ಳಲು ಸಾಧ್ಯವಿಲ್ಲ” ಎಂದಿದೆ.

ದಶಕಗಳಿಂದ ಅಲ್ಲಿ ವಾಸಿಸುತ್ತಿರುವ ಜನರನ್ನು ಒಕ್ಕಲೆಬ್ಬಿಸಲು ಅರೆಸೈನಿಕ ಪಡೆಗಳನ್ನು ನಿಯೋಜಿಸಬೇಕು ಎಂದು ಹೇಳುವುದು ಸರಿಯಲ್ಲ ಎಂದು ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಹೇಳಿದ್ದಾರೆ.

ನ್ಯಾಯಾಲಯವು ಈ ಪ್ರದೇಶದಲ್ಲಿ ಯಾವುದೇ ನಿರ್ಮಾಣ ಕಾಮಗಾರಿ ಮಾಡಬಾರದು ಎಂದು ಆದೇಶಿಸಿ, ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ರೈಲ್ವೆ ಮತ್ತು ಉತ್ತರಾಖಂಡ ಸರ್ಕಾರಕ್ಕೆ ಸೂಚಿಸಿದೆ. ಮುಂದಿನ ತಿಂಗಳು ಪ್ರಕರಣದ ವಿಚಾರಣೆ ನಡೆಯಲಿದೆ ಎಂದು ಹೇಳಿದೆ.

ಏನಿದು ಪ್ರಕರಣ?

ಉತ್ತರಾಖಂಡ ರಾಜ್ಯದ ಹಲ್ದ್‌ವಾನಿ ಜಿಲ್ಲೆಯ ರೈಲ್ವೆ ನಿಲ್ದಾಣದ ಬಳಿಯ ಬನ್‌ಭೂಲ್‌ಪುರ ಪ್ರದೇಶದ 2 ಕಿ.ಮೀ ವ್ಯಾಪ್ತಿಯಲ್ಲಿ ಸುಮಾರು 4,000ಕ್ಕೂ ಹೆಚ್ಚು ಕುಟುಂಬಗಳು ಹಿಂದಿನಿಂದಲೂ ವಾಸಿಸುತ್ತಿವೆ. ಅಲ್ಲಿನ ಬಹುತೇಕ ಮುಸ್ಲಿಂ ಸುಮುದಾಯಕ್ಕೆ ಸೇರಿದ್ದಾರೆ. ಆ ಜಾಗವು ರೈಲ್ವೆ ಇಲಾಖೆಗೆ ಸೇರಿದ್ದು, ಅಲ್ಲಿನ ಜನರು ಅತಿಕ್ರಮ ಪ್ರವೇಶ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅದೇ ವಾದವನ್ನು ಉತ್ತರಾಖಂಡ ಹೈಕೋರ್ಟ್ ಎತ್ತಿ ಹಿಡಿದು ಡಿಸೆಂಬರ್ 20 ರಂದು ಅವರನ್ನು ಅಲ್ಲಿಂದ ತೆರವುಗೊಳಿಸಲು ಆದೇಶಿಸಿತ್ತು.

ಈ ಆದೇಶದಿಂದ ತತ್ತರಿಸಿರುವ ಅಲ್ಲಿನ ನಿವಾಸಿಗಳು ಇದು ರೈಲ್ವೆ ಇಲಾಖೆಯ ಜಾಗವಲ್ಲ ಎಂದು ವಾದಿಸಿ, ಒಕ್ಕಲೆಬ್ಬಿಸುವಿಕೆಯನ್ನು ನಿಲ್ಲಿಸಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಮಾಡಿದ್ದಾರೆ. ನ್ಯಾಯವಾದಿ ಪ್ರಶಾಂತ್ ಭೂಷಣ್ ಸಂತ್ರಸ್ತರ ಪರವಾಗಿ ಅರ್ಜಿ ಸಲ್ಲಿಸಿ ವಾದಿಸಿದ್ದರು. ಸುಪ್ರೀಂ ಕೋರ್ಟ್ ಅರ್ಜಿದಾರರ ಪರ ನಿಂತಿದೆ.

ನಾವಿಲ್ಲಿ ಹಲವಾರು ತಲೆಮಾರುಗಳಿಂದ ವಾಸಿಸುತ್ತಿದ್ದೇವೆ. ನಮ್ಮ ಮನೆಗಳಿಗೆ ತೆರಿಗೆ ಕಟ್ಟುತ್ತಿದ್ದೇವೆ. ಈ ಪ್ರದೇಶದಲ್ಲಿ ಐದು ಸರ್ಕಾರಿ ಶಾಲೆಗಳು, ಒಂದು ಆಸ್ಪತ್ರೆ ಮತ್ತು ಎರಡು ಓವರ್‌ಹೆಡ್ ನೀರಿನ ಟ್ಯಾಂಕ್‌ಗಳಿವೆ. ಇಂತಹ ಪ್ರದೇಶವನ್ನು ಅಕ್ರಮವೆಂದು ನೆಲಸಮ ಮಾಡಲು ಸಾಧ್ಯವಿಲ್ಲ. ಏಕೆಂದರೆ ಈ ಭೂಮಿಯ ಒಡೆತನದ ವ್ಯಾಜ್ಯ ಇನ್ನು ಜಿಲ್ಲಾ ಕೋರ್ಟ್‌ನಲ್ಲಿರುವಾಗ ಒಕ್ಕಲೆಬ್ಬಿಸುವಿಕೆಗೆ ಹೈಕೋರ್ಟ್ ಆದೇಶಿಸಿರುವುದು ಕಾನೂನುಬಾಹಿರ ಎಂದು ಅಲ್ಲಿನ ನಿವಾಸಿಗಳು ವಾದಿಸಿದ್ದಾರೆ.

ಈ ಪ್ರದೇಶದಲ್ಲಿ ಬಹುತೇಕ ಮುಸ್ಲಿಂ ಸಮುದಾಯಗಳು ವಾಸಿಸುತ್ತಿರುವ ಕಾರಣ ಹಗೆತನದಿಂದಾಗಿ ನಮ್ಮನ್ನು ಒಕ್ಕಲೆಬ್ಬಿಸಲಾಗುತ್ತಿದೆ. ತಲೆಮಾರುಗಳಿಂದ ಇಲ್ಲಿ ಬದುಕಿದ ನಮಗೆ ಈ ಜಾಗದ ಒಡೆತನದ ಹಕ್ಕಿದೆ. ನಮ್ಮನ್ನು ಒಕ್ಕಲೆಬ್ಬಿಸುವುದು ಬೇಡ ಎಂದು ಅಲ್ಲಿನ ಸಾವಿರಾರು ಮಹಿಳೆಯರು ಮೊಂಬತ್ತಿ ಬೆಳಗಿಸಿ ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಯಾವ ಯಾವ ಕೆಟಗರಿಯಲ್ಲಿ ಎಷ್ಟೆಷ್ಟು ಜಾತಿಗಳಿವೆ? ಮೀಸಲಾತಿಯ ಪಾಲೆಷ್ಟಿದೆ? – ಪೂರ್ಣ ವಿವರ ಇಲ್ಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...