Homeಮುಖಪುಟ50,000 ಜನರನ್ನು ರಾತ್ರೋರಾತ್ರಿ ಕಿತ್ತೊಗೆಯಲು ಸಾಧ್ಯವಿಲ್ಲ: ಹಲ್ದ್‌ವಾನಿ ಒಕ್ಕಲೆಬ್ಬಿಸುವಿಕೆಗೆ ಸುಪ್ರೀಂ ತಡೆ

50,000 ಜನರನ್ನು ರಾತ್ರೋರಾತ್ರಿ ಕಿತ್ತೊಗೆಯಲು ಸಾಧ್ಯವಿಲ್ಲ: ಹಲ್ದ್‌ವಾನಿ ಒಕ್ಕಲೆಬ್ಬಿಸುವಿಕೆಗೆ ಸುಪ್ರೀಂ ತಡೆ

- Advertisement -
- Advertisement -

ಉತ್ತರಾಖಂಡ ರಾಜ್ಯದ ಹಲ್ದ್‌ವಾನಿ ಜಿಲ್ಲೆಯ ಬನ್‌ಭೂಲ್‌ಪುರ ಪ್ರದೇಶದ ರೈಲು ನಿಲ್ದಾಣದ ಪಕ್ಕದಲ್ಲಿ ಗುಡಿಸಲುಗಳನ್ನು ಹಾಕಿಕೊಂಡು, ಮನೆ ಕಟ್ಟಿಕೊಂಡು ತಲೆಮಾರುಗಳಿಂದ ವಾಸಿಸುತ್ತಿದ್ದು ಸುಮಾರು 4,000ಕ್ಕೂ ಹೆಚ್ಚು ಕುಟುಂಬಗಳನ್ನು ಅಲ್ಲಿಂದ ಒಕ್ಕಲಿಬ್ಬಿಸಬೇಕು ಎಂಬ ಉತ್ತರಾಖಂಡ ಹೈಕೋರ್ಟ್ ಆದೇಶಕ್ಕೆ ಇಂದು ಸುಪ್ರೀಂ ಕೋರ್ಟ್ ತಡೆ ನೀಡಿದೆ.

50,000 ಜನರನ್ನು ರಾತ್ರೋರಾತ್ರಿ ಬೇರು ಸಮೇತ ಕಿತ್ತೊಗೆಯಲು ಸಾಧ್ಯವಿಲ್ಲ. ಇದೊಂದು ಮಾನವೀಯ ವಿಷಯ. ಇದಕ್ಕೆ ಕಾರ್ಯಸಾಧುವಾದ ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಮತ್ತು ಅಭಯ್ ಎಸ್ ಓಕಾ ಅವರ ಪೀಠವು “ಏಳು ದಿನಗಳಲ್ಲಿ 4,000 ಕ್ಕೂ ಅಧಿಕ ಕುಟುಂಬಗಳನ್ನು ಬೀದಿಪಾಲು ಮಾಡಲು ಸಾಧ್ಯವೇ? ಅವರು ಅಲ್ಲಿ ಬಹಳ ವರ್ಷಗಳಿಂದ ವಾಸವಿದ್ದಾರೆ ಎನ್ನಲಾಗಿದೆ. ಅವರನ್ನು ಪುನರ್ವಸತಿ ಇಲ್ಲದೆ ಕೊರೆಯುವ ಚಳಿಯಲ್ಲಿ ಬೀದಿಗೆ ತಳ್ಳಲು ಸಾಧ್ಯವಿಲ್ಲ” ಎಂದಿದೆ.

ದಶಕಗಳಿಂದ ಅಲ್ಲಿ ವಾಸಿಸುತ್ತಿರುವ ಜನರನ್ನು ಒಕ್ಕಲೆಬ್ಬಿಸಲು ಅರೆಸೈನಿಕ ಪಡೆಗಳನ್ನು ನಿಯೋಜಿಸಬೇಕು ಎಂದು ಹೇಳುವುದು ಸರಿಯಲ್ಲ ಎಂದು ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಹೇಳಿದ್ದಾರೆ.

ನ್ಯಾಯಾಲಯವು ಈ ಪ್ರದೇಶದಲ್ಲಿ ಯಾವುದೇ ನಿರ್ಮಾಣ ಕಾಮಗಾರಿ ಮಾಡಬಾರದು ಎಂದು ಆದೇಶಿಸಿ, ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ರೈಲ್ವೆ ಮತ್ತು ಉತ್ತರಾಖಂಡ ಸರ್ಕಾರಕ್ಕೆ ಸೂಚಿಸಿದೆ. ಮುಂದಿನ ತಿಂಗಳು ಪ್ರಕರಣದ ವಿಚಾರಣೆ ನಡೆಯಲಿದೆ ಎಂದು ಹೇಳಿದೆ.

ಏನಿದು ಪ್ರಕರಣ?

ಉತ್ತರಾಖಂಡ ರಾಜ್ಯದ ಹಲ್ದ್‌ವಾನಿ ಜಿಲ್ಲೆಯ ರೈಲ್ವೆ ನಿಲ್ದಾಣದ ಬಳಿಯ ಬನ್‌ಭೂಲ್‌ಪುರ ಪ್ರದೇಶದ 2 ಕಿ.ಮೀ ವ್ಯಾಪ್ತಿಯಲ್ಲಿ ಸುಮಾರು 4,000ಕ್ಕೂ ಹೆಚ್ಚು ಕುಟುಂಬಗಳು ಹಿಂದಿನಿಂದಲೂ ವಾಸಿಸುತ್ತಿವೆ. ಅಲ್ಲಿನ ಬಹುತೇಕ ಮುಸ್ಲಿಂ ಸುಮುದಾಯಕ್ಕೆ ಸೇರಿದ್ದಾರೆ. ಆ ಜಾಗವು ರೈಲ್ವೆ ಇಲಾಖೆಗೆ ಸೇರಿದ್ದು, ಅಲ್ಲಿನ ಜನರು ಅತಿಕ್ರಮ ಪ್ರವೇಶ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅದೇ ವಾದವನ್ನು ಉತ್ತರಾಖಂಡ ಹೈಕೋರ್ಟ್ ಎತ್ತಿ ಹಿಡಿದು ಡಿಸೆಂಬರ್ 20 ರಂದು ಅವರನ್ನು ಅಲ್ಲಿಂದ ತೆರವುಗೊಳಿಸಲು ಆದೇಶಿಸಿತ್ತು.

ಈ ಆದೇಶದಿಂದ ತತ್ತರಿಸಿರುವ ಅಲ್ಲಿನ ನಿವಾಸಿಗಳು ಇದು ರೈಲ್ವೆ ಇಲಾಖೆಯ ಜಾಗವಲ್ಲ ಎಂದು ವಾದಿಸಿ, ಒಕ್ಕಲೆಬ್ಬಿಸುವಿಕೆಯನ್ನು ನಿಲ್ಲಿಸಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಮಾಡಿದ್ದಾರೆ. ನ್ಯಾಯವಾದಿ ಪ್ರಶಾಂತ್ ಭೂಷಣ್ ಸಂತ್ರಸ್ತರ ಪರವಾಗಿ ಅರ್ಜಿ ಸಲ್ಲಿಸಿ ವಾದಿಸಿದ್ದರು. ಸುಪ್ರೀಂ ಕೋರ್ಟ್ ಅರ್ಜಿದಾರರ ಪರ ನಿಂತಿದೆ.

ನಾವಿಲ್ಲಿ ಹಲವಾರು ತಲೆಮಾರುಗಳಿಂದ ವಾಸಿಸುತ್ತಿದ್ದೇವೆ. ನಮ್ಮ ಮನೆಗಳಿಗೆ ತೆರಿಗೆ ಕಟ್ಟುತ್ತಿದ್ದೇವೆ. ಈ ಪ್ರದೇಶದಲ್ಲಿ ಐದು ಸರ್ಕಾರಿ ಶಾಲೆಗಳು, ಒಂದು ಆಸ್ಪತ್ರೆ ಮತ್ತು ಎರಡು ಓವರ್‌ಹೆಡ್ ನೀರಿನ ಟ್ಯಾಂಕ್‌ಗಳಿವೆ. ಇಂತಹ ಪ್ರದೇಶವನ್ನು ಅಕ್ರಮವೆಂದು ನೆಲಸಮ ಮಾಡಲು ಸಾಧ್ಯವಿಲ್ಲ. ಏಕೆಂದರೆ ಈ ಭೂಮಿಯ ಒಡೆತನದ ವ್ಯಾಜ್ಯ ಇನ್ನು ಜಿಲ್ಲಾ ಕೋರ್ಟ್‌ನಲ್ಲಿರುವಾಗ ಒಕ್ಕಲೆಬ್ಬಿಸುವಿಕೆಗೆ ಹೈಕೋರ್ಟ್ ಆದೇಶಿಸಿರುವುದು ಕಾನೂನುಬಾಹಿರ ಎಂದು ಅಲ್ಲಿನ ನಿವಾಸಿಗಳು ವಾದಿಸಿದ್ದಾರೆ.

ಈ ಪ್ರದೇಶದಲ್ಲಿ ಬಹುತೇಕ ಮುಸ್ಲಿಂ ಸಮುದಾಯಗಳು ವಾಸಿಸುತ್ತಿರುವ ಕಾರಣ ಹಗೆತನದಿಂದಾಗಿ ನಮ್ಮನ್ನು ಒಕ್ಕಲೆಬ್ಬಿಸಲಾಗುತ್ತಿದೆ. ತಲೆಮಾರುಗಳಿಂದ ಇಲ್ಲಿ ಬದುಕಿದ ನಮಗೆ ಈ ಜಾಗದ ಒಡೆತನದ ಹಕ್ಕಿದೆ. ನಮ್ಮನ್ನು ಒಕ್ಕಲೆಬ್ಬಿಸುವುದು ಬೇಡ ಎಂದು ಅಲ್ಲಿನ ಸಾವಿರಾರು ಮಹಿಳೆಯರು ಮೊಂಬತ್ತಿ ಬೆಳಗಿಸಿ ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಯಾವ ಯಾವ ಕೆಟಗರಿಯಲ್ಲಿ ಎಷ್ಟೆಷ್ಟು ಜಾತಿಗಳಿವೆ? ಮೀಸಲಾತಿಯ ಪಾಲೆಷ್ಟಿದೆ? – ಪೂರ್ಣ ವಿವರ ಇಲ್ಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...