Homeಮುಖಪುಟ512ಕೆಜಿ ಈರುಳ್ಳಿಗೆ ಕೇವಲ 2ರೂ. ಲಾಭ ಪಡೆದ ರೈತ!; ಸರ್ಕಾರದ ಅಸಮಂಜಸ ನೀತಿಯೇ ಇದಕ್ಕೆ ಕಾರಣ...

512ಕೆಜಿ ಈರುಳ್ಳಿಗೆ ಕೇವಲ 2ರೂ. ಲಾಭ ಪಡೆದ ರೈತ!; ಸರ್ಕಾರದ ಅಸಮಂಜಸ ನೀತಿಯೇ ಇದಕ್ಕೆ ಕಾರಣ ಎಂದ ರೈತ ಮುಖಂಡ

- Advertisement -
- Advertisement -

ಮಹಾರಾಷ್ಟ್ರ, ಸೊಲ್ಲಾಪುರದ ರೈತರೊಬ್ಬರು ತಾವು ಬೆಳೆದಿದ್ದ 512 ಕೆಜಿ ಈರುಳ್ಳಿಯನ್ನು ಜಿಲ್ಲೆಯ ವ್ಯಾಪಾರಿಯೊಬ್ಬರಿಗೆ ಮಾರಾಟ ಮಾಡಿದ್ದು, ಅದರಿಂದ ಅವರು ಗಳಿಸಿದ ಹಣ ಕೇವಲ 2.49ರೂ. ಈ ಸುದ್ದಿ ತಿಳಿದಾಕ್ಷಣ ರೈತರು ಆಘಾತಕ್ಕೊಳಗಾದರು.

ಸೊಲ್ಲಾಪುರದ ಬಾರ್ಶಿ ತಹಸಿಲ್‌ನಲ್ಲಿ ವಾಸವಾಗಿರುವ 63 ವರ್ಷದ ರಾಜೇಂದ್ರ ಚವ್ಹಾಣ ಎಂಬ ರೈತ ಸೊಲ್ಲಾಪುರ ಮಾರುಕಟ್ಟೆ ಯಾರ್ಡ್‌ನಲ್ಲಿ ಈರುಳ್ಳಿ ಇಳುವರಿ ಪ್ರತಿ ಕೆಜಿಗೆ 1ರೂ.ನಂತೆ ಬೆಲೆ ಪಡೆದಿದೆ. ಆದರೆ ಎಲ್ಲಾ ಕಡಿತದ ನಂತರ ಅವರು ಈ ಅಲ್ಪ ಮೊತ್ತವನ್ನು ತಮ್ಮ ಒಟ್ಟು ಲಾಭವಾಗಿ ಪಡೆದರು ಎಂದು ಅವರು ಹೇಳಿದರು.

ಈ ಬಗ್ಗೆ ಪಿಟಿಐ ಜೊತೆ ಮಾತನಾಡಿದ ರೈತ ಚವ್ಹಾಣ್, ”ಸೊಲ್ಲಾಪುರದ ಈರುಳ್ಳಿ ವ್ಯಾಪಾರಿಯೊಬ್ಬರಿಗೆ ಐದು ಕ್ವಿಂಟಾಲ್‌ಗಿಂತ ಹೆಚ್ಚು ತೂಕದ 10 ಚೀಲ ಈರುಳ್ಳಿಯನ್ನು ಮಾರಾಟಕ್ಕೆ ಕಳುಹಿಸಿದ್ದೆ, ಆದರೆ ಲೋಡಿಂಗ್, ಸಾರಿಗೆ, ಕೂಲಿ ಮತ್ತು ಇತರ ಶುಲ್ಕಗಳನ್ನು ಕಡಿತಗೊಳಿಸಿದ ನಂತರ ನನಗೆ ಕೇವಲ ಅವರಿಂದ 2.49ರೂ. ನಿವ್ವಳ ಲಾಭ ಬಂದಿದೆ. ಆ ವ್ಯಾಪಾರಿ ನನಗೆ ನೀಡಿದ ದರ ಕ್ವಿಂಟಲ್‌ಗೆ 100 ರೂ. ಆಗಿತ್ತು. ಒಟ್ಟಾರೆ ಬೆಳೆ 512 ಕೆಜಿ ಇದ್ದು, ಉತ್ಪನ್ನಕ್ಕೆ 512ರೂ. ಬೆಲೆ ಬಂದಿದೆ” ಎಂದು ಅವರು ಹೇಳಿದರು..

”ಕೂಲಿ, ತೂಕ, ಸಾಗಣೆ ಮತ್ತು ಇತರ ಶುಲ್ಕಗಳ ಮೇಲೆ 509.51ರೂ. ಕಡಿತದ ನಂತರ, ನಾನು ಕೇವಲ 2.49ರೂ. ನಿವ್ವಳ ಲಾಭ ಪಡೆದಿದ್ದೇನೆ. ಇದು ನನಗೆ ಮತ್ತು ರಾಜ್ಯದ ಇತರ ಈರುಳ್ಳಿ ಬೆಳೆಗಾರರಿಗೆ ಮಾಡಿದ ಅವಮಾನವಾಗಿದೆ. ಅಂತಹ ಆದಾಯವನ್ನು ಪಡೆದರೆ ನಾವು ಹೇಗೆ ಬದುಕುವುದು? ಈರುಳ್ಳಿ ರೈತರ ಬೆಳೆಗೆ ಉತ್ತಮ ಬೆಲೆ ಸಿಗಬೇಕು ಮತ್ತು ಹಾನಿಗೊಳಗಾದ ರೈತರಿಗೆ ಪರಿಹಾರ ಸಿಗಬೇಕು” ಎಂದರು.

ಇದನ್ನೂ ಓದಿ: ಮಹಾರಾಷ್ಟ್ರ: ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಮಹಿಳೆ ಕೊಂದು, ಬೆಡ್ ಬಾಕ್ಸ್‌ನಲ್ಲಿ ಶವ ಅಡಗಿಸಿಟ್ಟ ಪ್ರಿಯಕರ

ಉತ್ಪನ್ನವು ಉತ್ತಮ ಗುಣಮಟ್ಟದ್ದಾಗಿದೆ ಎಂದು ಚವಾಣ್ ಹೇಳಿಕೊಂಡರೆ, ಅದು ಕಡಿಮೆ ದರ್ಜೆಯದ್ದಾಗಿದೆ ಎಂದು ವ್ಯಾಪಾರಿ ಹೇಳಿದ್ದಾನೆ.

”ರೈತರು 10 ಚೀಲ ಮಾತ್ರ ತಂದಿದ್ದು, ಉತ್ಪನ್ನವೂ ಕಡಿಮೆ ದರ್ಜೆಯದ್ದಾಗಿದೆ. ಹೀಗಾಗಿ ಕ್ವಿಂಟಲ್ ದರಕ್ಕೆ 100ರೂ. ಸಿಕ್ಕಿದೆ. ಹೀಗಾಗಿ ಎಲ್ಲ ಕಡಿತಗೊಳಿಸಿ 2ರೂ. ನಿವ್ವಳ ಲಾಭ ಬಂದಿದೆ” ಎಂದು ವ್ಯಾಪಾರಿ ತಿಳಿಸಿದ್ದಾನೆ.

”ಇದೇ ರೈತ ಇತ್ತೀಚಿನ ದಿನಗಳಲ್ಲಿ ನನಗೆ 400ಕ್ಕೂ ಹೆಚ್ಚು ಚೀಲಗಳನ್ನು ಮಾರಾಟ ಮಾಡುವ ಮೂಲಕ ಉತ್ತಮ ಲಾಭ ಪಡೆದಿದ್ದಾನೆ. ಈ ಬಾರಿ 10 ಮೂಟೆ ಇಲ್ಲದ ಉಳಿಕೆ ಉತ್ಪನ್ನಗಳನ್ನು ತಂದಿದ್ದು, ಬೆಲೆ ಕುಸಿದಿದ್ದರಿಂದ ಈ ದರ ಸಿಕ್ಕಿದೆ”  ಎಂದು ವ್ಯಾಪಾರಿ ಹೇಳಿದರು.

ಈ ಬಗ್ಗೆ ರೈತ ಮುಖಂಡ ಹಾಗೂ ಮಾಜಿ ಸಂಸದ ರಾಜು ಶೆಟ್ಟಿ ಮಾತನಾಡಿ, ”ಈಗ ಮಾರುಕಟ್ಟೆಗೆ ಬರುತ್ತಿರುವ ಈರುಳ್ಳಿ ‘ಖಾರಿಫ್’ ಉತ್ಪನ್ನವಾಗಿದ್ದು, ಇದನ್ನು ದೀರ್ಘಕಾಲ ಶೇಖರಿಸಿಡಲು ಸಾಧ್ಯವಿಲ್ಲ, ಹೀಗಾಗಿ ಉತ್ಪನ್ನದ ಶೆಲ್ಫ್ ಲೈಫ್ ಕಡಿಮೆಯಾಗಿದೆ. ಈ ಈರುಳ್ಳಿಯನ್ನು ತಕ್ಷಣ ಮಾರುಕಟ್ಟೆಯಲ್ಲಿ ಮಾರಾಟ ಮಾಡಿ ಹೊರಕ್ಕೆ ರಫ್ತು ಮಾಡಬೇಕಾಗಿದೆ. ಆದರೆ ದಲ್ಲಾಳಿಗಳ ದುರಾಸೆಯಿಂದಾಗಿ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಗಗನಕ್ಕೇರಿದೆ.

ಈ ಈರುಳ್ಳಿಯನ್ನು ಭಾರತೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ(NAFED)ದಿಂದ ಖರೀದಿಸಲಾಗುತ್ತಿಲ್ಲ, ಆದ್ದರಿಂದ ಈ ‘ಖಾರಿಫ್’ ಈರುಳ್ಳಿಗೆ ಬೆಲೆ ಸಿಗುವಂತೆ ಮಾಡುವುದೇ ಸರ್ಕಾರಕ್ಕೆ ಇರುವ ಏಕೈಕ ಆಯ್ಕೆಯಾಗಿದೆ ಎಂದು ರಾಜು ಶೆಟ್ಟಿ ಹೇಳಿದರು.

”ಈರುಳ್ಳಿಗೆ ಸಂಬಂಧಿಸಿದಂತೆ ಸರ್ಕಾರದ ರಫ್ತು ಮತ್ತು ಆಮದು ನೀತಿಯು ಸ್ಥಿರವಾಗಿಲ್ಲ. ನಾವು ಪಾಕಿಸ್ತಾನ ಮತ್ತು ಬಾಂಗ್ಲಾದೇಶಗಳ ಎರಡು ಶಾಶ್ವತ ಮಾರುಕಟ್ಟೆಗಳನ್ನು ಹೊಂದಿದ್ದೇವೆ. ಆದರೆ ನಮ್ಮ ಸರ್ಕಾರದ ಅಸಮಂಜಸ ನೀತಿಯಿಂದಾಗಿ ಅವರು ನಮ್ಮ ಬದಲಿಗೆ ಇರಾನ್‌ನಿಂದ ಈರುಳ್ಳಿ ಖರೀದಿಸಲು ಆದ್ಯತೆ ನೀಡಿದರು. ಮೂರನೇ ಮಾರುಕಟ್ಟೆ ಶ್ರೀಲಂಕಾ, ಆದರೆ ಪ್ರತಿಯೊಬ್ಬರಿಗೂ ಅವರ ಪರಿಸ್ಥಿತಿ ತಿಳಿದಿದೆ ಮತ್ತು ಯಾರೂ ತಮ್ಮ ಉತ್ಪನ್ನಗಳನ್ನು ಕಳುಹಿಸಲು ಬಯಸುವುದಿಲ್ಲ” ಎಂದು ಅವರು ಹೇಳಿದರು.

ಸರ್ಕಾರ ಈ ಈರುಳ್ಳಿ ಖರೀದಿಸಬೇಕು ಅಥವಾ ರೈತರಿಗೆ ಸಬ್ಸಿಡಿ ನೀಡಬೇಕು ಎಂದು ರೈತ ಮುಖಂಡರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. The farmers agitation…remember…that’s when farmers shot themselves in the foot….they became political pawns and protested good reforms…if any one expects govt to buy everything that they produce that’s not right. Markets will find their levels and reforms would have helped you avoid pitfalls. By the way I am also a farmer happily living with organic and multi crop farming.

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...