Homeಮುಖಪುಟ512ಕೆಜಿ ಈರುಳ್ಳಿಗೆ ಕೇವಲ 2ರೂ. ಲಾಭ ಪಡೆದ ರೈತ!; ಸರ್ಕಾರದ ಅಸಮಂಜಸ ನೀತಿಯೇ ಇದಕ್ಕೆ ಕಾರಣ...

512ಕೆಜಿ ಈರುಳ್ಳಿಗೆ ಕೇವಲ 2ರೂ. ಲಾಭ ಪಡೆದ ರೈತ!; ಸರ್ಕಾರದ ಅಸಮಂಜಸ ನೀತಿಯೇ ಇದಕ್ಕೆ ಕಾರಣ ಎಂದ ರೈತ ಮುಖಂಡ

- Advertisement -
- Advertisement -

ಮಹಾರಾಷ್ಟ್ರ, ಸೊಲ್ಲಾಪುರದ ರೈತರೊಬ್ಬರು ತಾವು ಬೆಳೆದಿದ್ದ 512 ಕೆಜಿ ಈರುಳ್ಳಿಯನ್ನು ಜಿಲ್ಲೆಯ ವ್ಯಾಪಾರಿಯೊಬ್ಬರಿಗೆ ಮಾರಾಟ ಮಾಡಿದ್ದು, ಅದರಿಂದ ಅವರು ಗಳಿಸಿದ ಹಣ ಕೇವಲ 2.49ರೂ. ಈ ಸುದ್ದಿ ತಿಳಿದಾಕ್ಷಣ ರೈತರು ಆಘಾತಕ್ಕೊಳಗಾದರು.

ಸೊಲ್ಲಾಪುರದ ಬಾರ್ಶಿ ತಹಸಿಲ್‌ನಲ್ಲಿ ವಾಸವಾಗಿರುವ 63 ವರ್ಷದ ರಾಜೇಂದ್ರ ಚವ್ಹಾಣ ಎಂಬ ರೈತ ಸೊಲ್ಲಾಪುರ ಮಾರುಕಟ್ಟೆ ಯಾರ್ಡ್‌ನಲ್ಲಿ ಈರುಳ್ಳಿ ಇಳುವರಿ ಪ್ರತಿ ಕೆಜಿಗೆ 1ರೂ.ನಂತೆ ಬೆಲೆ ಪಡೆದಿದೆ. ಆದರೆ ಎಲ್ಲಾ ಕಡಿತದ ನಂತರ ಅವರು ಈ ಅಲ್ಪ ಮೊತ್ತವನ್ನು ತಮ್ಮ ಒಟ್ಟು ಲಾಭವಾಗಿ ಪಡೆದರು ಎಂದು ಅವರು ಹೇಳಿದರು.

ಈ ಬಗ್ಗೆ ಪಿಟಿಐ ಜೊತೆ ಮಾತನಾಡಿದ ರೈತ ಚವ್ಹಾಣ್, ”ಸೊಲ್ಲಾಪುರದ ಈರುಳ್ಳಿ ವ್ಯಾಪಾರಿಯೊಬ್ಬರಿಗೆ ಐದು ಕ್ವಿಂಟಾಲ್‌ಗಿಂತ ಹೆಚ್ಚು ತೂಕದ 10 ಚೀಲ ಈರುಳ್ಳಿಯನ್ನು ಮಾರಾಟಕ್ಕೆ ಕಳುಹಿಸಿದ್ದೆ, ಆದರೆ ಲೋಡಿಂಗ್, ಸಾರಿಗೆ, ಕೂಲಿ ಮತ್ತು ಇತರ ಶುಲ್ಕಗಳನ್ನು ಕಡಿತಗೊಳಿಸಿದ ನಂತರ ನನಗೆ ಕೇವಲ ಅವರಿಂದ 2.49ರೂ. ನಿವ್ವಳ ಲಾಭ ಬಂದಿದೆ. ಆ ವ್ಯಾಪಾರಿ ನನಗೆ ನೀಡಿದ ದರ ಕ್ವಿಂಟಲ್‌ಗೆ 100 ರೂ. ಆಗಿತ್ತು. ಒಟ್ಟಾರೆ ಬೆಳೆ 512 ಕೆಜಿ ಇದ್ದು, ಉತ್ಪನ್ನಕ್ಕೆ 512ರೂ. ಬೆಲೆ ಬಂದಿದೆ” ಎಂದು ಅವರು ಹೇಳಿದರು..

”ಕೂಲಿ, ತೂಕ, ಸಾಗಣೆ ಮತ್ತು ಇತರ ಶುಲ್ಕಗಳ ಮೇಲೆ 509.51ರೂ. ಕಡಿತದ ನಂತರ, ನಾನು ಕೇವಲ 2.49ರೂ. ನಿವ್ವಳ ಲಾಭ ಪಡೆದಿದ್ದೇನೆ. ಇದು ನನಗೆ ಮತ್ತು ರಾಜ್ಯದ ಇತರ ಈರುಳ್ಳಿ ಬೆಳೆಗಾರರಿಗೆ ಮಾಡಿದ ಅವಮಾನವಾಗಿದೆ. ಅಂತಹ ಆದಾಯವನ್ನು ಪಡೆದರೆ ನಾವು ಹೇಗೆ ಬದುಕುವುದು? ಈರುಳ್ಳಿ ರೈತರ ಬೆಳೆಗೆ ಉತ್ತಮ ಬೆಲೆ ಸಿಗಬೇಕು ಮತ್ತು ಹಾನಿಗೊಳಗಾದ ರೈತರಿಗೆ ಪರಿಹಾರ ಸಿಗಬೇಕು” ಎಂದರು.

ಇದನ್ನೂ ಓದಿ: ಮಹಾರಾಷ್ಟ್ರ: ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಮಹಿಳೆ ಕೊಂದು, ಬೆಡ್ ಬಾಕ್ಸ್‌ನಲ್ಲಿ ಶವ ಅಡಗಿಸಿಟ್ಟ ಪ್ರಿಯಕರ

ಉತ್ಪನ್ನವು ಉತ್ತಮ ಗುಣಮಟ್ಟದ್ದಾಗಿದೆ ಎಂದು ಚವಾಣ್ ಹೇಳಿಕೊಂಡರೆ, ಅದು ಕಡಿಮೆ ದರ್ಜೆಯದ್ದಾಗಿದೆ ಎಂದು ವ್ಯಾಪಾರಿ ಹೇಳಿದ್ದಾನೆ.

”ರೈತರು 10 ಚೀಲ ಮಾತ್ರ ತಂದಿದ್ದು, ಉತ್ಪನ್ನವೂ ಕಡಿಮೆ ದರ್ಜೆಯದ್ದಾಗಿದೆ. ಹೀಗಾಗಿ ಕ್ವಿಂಟಲ್ ದರಕ್ಕೆ 100ರೂ. ಸಿಕ್ಕಿದೆ. ಹೀಗಾಗಿ ಎಲ್ಲ ಕಡಿತಗೊಳಿಸಿ 2ರೂ. ನಿವ್ವಳ ಲಾಭ ಬಂದಿದೆ” ಎಂದು ವ್ಯಾಪಾರಿ ತಿಳಿಸಿದ್ದಾನೆ.

”ಇದೇ ರೈತ ಇತ್ತೀಚಿನ ದಿನಗಳಲ್ಲಿ ನನಗೆ 400ಕ್ಕೂ ಹೆಚ್ಚು ಚೀಲಗಳನ್ನು ಮಾರಾಟ ಮಾಡುವ ಮೂಲಕ ಉತ್ತಮ ಲಾಭ ಪಡೆದಿದ್ದಾನೆ. ಈ ಬಾರಿ 10 ಮೂಟೆ ಇಲ್ಲದ ಉಳಿಕೆ ಉತ್ಪನ್ನಗಳನ್ನು ತಂದಿದ್ದು, ಬೆಲೆ ಕುಸಿದಿದ್ದರಿಂದ ಈ ದರ ಸಿಕ್ಕಿದೆ”  ಎಂದು ವ್ಯಾಪಾರಿ ಹೇಳಿದರು.

ಈ ಬಗ್ಗೆ ರೈತ ಮುಖಂಡ ಹಾಗೂ ಮಾಜಿ ಸಂಸದ ರಾಜು ಶೆಟ್ಟಿ ಮಾತನಾಡಿ, ”ಈಗ ಮಾರುಕಟ್ಟೆಗೆ ಬರುತ್ತಿರುವ ಈರುಳ್ಳಿ ‘ಖಾರಿಫ್’ ಉತ್ಪನ್ನವಾಗಿದ್ದು, ಇದನ್ನು ದೀರ್ಘಕಾಲ ಶೇಖರಿಸಿಡಲು ಸಾಧ್ಯವಿಲ್ಲ, ಹೀಗಾಗಿ ಉತ್ಪನ್ನದ ಶೆಲ್ಫ್ ಲೈಫ್ ಕಡಿಮೆಯಾಗಿದೆ. ಈ ಈರುಳ್ಳಿಯನ್ನು ತಕ್ಷಣ ಮಾರುಕಟ್ಟೆಯಲ್ಲಿ ಮಾರಾಟ ಮಾಡಿ ಹೊರಕ್ಕೆ ರಫ್ತು ಮಾಡಬೇಕಾಗಿದೆ. ಆದರೆ ದಲ್ಲಾಳಿಗಳ ದುರಾಸೆಯಿಂದಾಗಿ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಗಗನಕ್ಕೇರಿದೆ.

ಈ ಈರುಳ್ಳಿಯನ್ನು ಭಾರತೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ(NAFED)ದಿಂದ ಖರೀದಿಸಲಾಗುತ್ತಿಲ್ಲ, ಆದ್ದರಿಂದ ಈ ‘ಖಾರಿಫ್’ ಈರುಳ್ಳಿಗೆ ಬೆಲೆ ಸಿಗುವಂತೆ ಮಾಡುವುದೇ ಸರ್ಕಾರಕ್ಕೆ ಇರುವ ಏಕೈಕ ಆಯ್ಕೆಯಾಗಿದೆ ಎಂದು ರಾಜು ಶೆಟ್ಟಿ ಹೇಳಿದರು.

”ಈರುಳ್ಳಿಗೆ ಸಂಬಂಧಿಸಿದಂತೆ ಸರ್ಕಾರದ ರಫ್ತು ಮತ್ತು ಆಮದು ನೀತಿಯು ಸ್ಥಿರವಾಗಿಲ್ಲ. ನಾವು ಪಾಕಿಸ್ತಾನ ಮತ್ತು ಬಾಂಗ್ಲಾದೇಶಗಳ ಎರಡು ಶಾಶ್ವತ ಮಾರುಕಟ್ಟೆಗಳನ್ನು ಹೊಂದಿದ್ದೇವೆ. ಆದರೆ ನಮ್ಮ ಸರ್ಕಾರದ ಅಸಮಂಜಸ ನೀತಿಯಿಂದಾಗಿ ಅವರು ನಮ್ಮ ಬದಲಿಗೆ ಇರಾನ್‌ನಿಂದ ಈರುಳ್ಳಿ ಖರೀದಿಸಲು ಆದ್ಯತೆ ನೀಡಿದರು. ಮೂರನೇ ಮಾರುಕಟ್ಟೆ ಶ್ರೀಲಂಕಾ, ಆದರೆ ಪ್ರತಿಯೊಬ್ಬರಿಗೂ ಅವರ ಪರಿಸ್ಥಿತಿ ತಿಳಿದಿದೆ ಮತ್ತು ಯಾರೂ ತಮ್ಮ ಉತ್ಪನ್ನಗಳನ್ನು ಕಳುಹಿಸಲು ಬಯಸುವುದಿಲ್ಲ” ಎಂದು ಅವರು ಹೇಳಿದರು.

ಸರ್ಕಾರ ಈ ಈರುಳ್ಳಿ ಖರೀದಿಸಬೇಕು ಅಥವಾ ರೈತರಿಗೆ ಸಬ್ಸಿಡಿ ನೀಡಬೇಕು ಎಂದು ರೈತ ಮುಖಂಡರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. The farmers agitation…remember…that’s when farmers shot themselves in the foot….they became political pawns and protested good reforms…if any one expects govt to buy everything that they produce that’s not right. Markets will find their levels and reforms would have helped you avoid pitfalls. By the way I am also a farmer happily living with organic and multi crop farming.

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...