Homeಮುಖಪುಟ512ಕೆಜಿ ಈರುಳ್ಳಿಗೆ ಕೇವಲ 2ರೂ. ಲಾಭ ಪಡೆದ ರೈತ!; ಸರ್ಕಾರದ ಅಸಮಂಜಸ ನೀತಿಯೇ ಇದಕ್ಕೆ ಕಾರಣ...

512ಕೆಜಿ ಈರುಳ್ಳಿಗೆ ಕೇವಲ 2ರೂ. ಲಾಭ ಪಡೆದ ರೈತ!; ಸರ್ಕಾರದ ಅಸಮಂಜಸ ನೀತಿಯೇ ಇದಕ್ಕೆ ಕಾರಣ ಎಂದ ರೈತ ಮುಖಂಡ

- Advertisement -
- Advertisement -

ಮಹಾರಾಷ್ಟ್ರ, ಸೊಲ್ಲಾಪುರದ ರೈತರೊಬ್ಬರು ತಾವು ಬೆಳೆದಿದ್ದ 512 ಕೆಜಿ ಈರುಳ್ಳಿಯನ್ನು ಜಿಲ್ಲೆಯ ವ್ಯಾಪಾರಿಯೊಬ್ಬರಿಗೆ ಮಾರಾಟ ಮಾಡಿದ್ದು, ಅದರಿಂದ ಅವರು ಗಳಿಸಿದ ಹಣ ಕೇವಲ 2.49ರೂ. ಈ ಸುದ್ದಿ ತಿಳಿದಾಕ್ಷಣ ರೈತರು ಆಘಾತಕ್ಕೊಳಗಾದರು.

ಸೊಲ್ಲಾಪುರದ ಬಾರ್ಶಿ ತಹಸಿಲ್‌ನಲ್ಲಿ ವಾಸವಾಗಿರುವ 63 ವರ್ಷದ ರಾಜೇಂದ್ರ ಚವ್ಹಾಣ ಎಂಬ ರೈತ ಸೊಲ್ಲಾಪುರ ಮಾರುಕಟ್ಟೆ ಯಾರ್ಡ್‌ನಲ್ಲಿ ಈರುಳ್ಳಿ ಇಳುವರಿ ಪ್ರತಿ ಕೆಜಿಗೆ 1ರೂ.ನಂತೆ ಬೆಲೆ ಪಡೆದಿದೆ. ಆದರೆ ಎಲ್ಲಾ ಕಡಿತದ ನಂತರ ಅವರು ಈ ಅಲ್ಪ ಮೊತ್ತವನ್ನು ತಮ್ಮ ಒಟ್ಟು ಲಾಭವಾಗಿ ಪಡೆದರು ಎಂದು ಅವರು ಹೇಳಿದರು.

ಈ ಬಗ್ಗೆ ಪಿಟಿಐ ಜೊತೆ ಮಾತನಾಡಿದ ರೈತ ಚವ್ಹಾಣ್, ”ಸೊಲ್ಲಾಪುರದ ಈರುಳ್ಳಿ ವ್ಯಾಪಾರಿಯೊಬ್ಬರಿಗೆ ಐದು ಕ್ವಿಂಟಾಲ್‌ಗಿಂತ ಹೆಚ್ಚು ತೂಕದ 10 ಚೀಲ ಈರುಳ್ಳಿಯನ್ನು ಮಾರಾಟಕ್ಕೆ ಕಳುಹಿಸಿದ್ದೆ, ಆದರೆ ಲೋಡಿಂಗ್, ಸಾರಿಗೆ, ಕೂಲಿ ಮತ್ತು ಇತರ ಶುಲ್ಕಗಳನ್ನು ಕಡಿತಗೊಳಿಸಿದ ನಂತರ ನನಗೆ ಕೇವಲ ಅವರಿಂದ 2.49ರೂ. ನಿವ್ವಳ ಲಾಭ ಬಂದಿದೆ. ಆ ವ್ಯಾಪಾರಿ ನನಗೆ ನೀಡಿದ ದರ ಕ್ವಿಂಟಲ್‌ಗೆ 100 ರೂ. ಆಗಿತ್ತು. ಒಟ್ಟಾರೆ ಬೆಳೆ 512 ಕೆಜಿ ಇದ್ದು, ಉತ್ಪನ್ನಕ್ಕೆ 512ರೂ. ಬೆಲೆ ಬಂದಿದೆ” ಎಂದು ಅವರು ಹೇಳಿದರು..

”ಕೂಲಿ, ತೂಕ, ಸಾಗಣೆ ಮತ್ತು ಇತರ ಶುಲ್ಕಗಳ ಮೇಲೆ 509.51ರೂ. ಕಡಿತದ ನಂತರ, ನಾನು ಕೇವಲ 2.49ರೂ. ನಿವ್ವಳ ಲಾಭ ಪಡೆದಿದ್ದೇನೆ. ಇದು ನನಗೆ ಮತ್ತು ರಾಜ್ಯದ ಇತರ ಈರುಳ್ಳಿ ಬೆಳೆಗಾರರಿಗೆ ಮಾಡಿದ ಅವಮಾನವಾಗಿದೆ. ಅಂತಹ ಆದಾಯವನ್ನು ಪಡೆದರೆ ನಾವು ಹೇಗೆ ಬದುಕುವುದು? ಈರುಳ್ಳಿ ರೈತರ ಬೆಳೆಗೆ ಉತ್ತಮ ಬೆಲೆ ಸಿಗಬೇಕು ಮತ್ತು ಹಾನಿಗೊಳಗಾದ ರೈತರಿಗೆ ಪರಿಹಾರ ಸಿಗಬೇಕು” ಎಂದರು.

ಇದನ್ನೂ ಓದಿ: ಮಹಾರಾಷ್ಟ್ರ: ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಮಹಿಳೆ ಕೊಂದು, ಬೆಡ್ ಬಾಕ್ಸ್‌ನಲ್ಲಿ ಶವ ಅಡಗಿಸಿಟ್ಟ ಪ್ರಿಯಕರ

ಉತ್ಪನ್ನವು ಉತ್ತಮ ಗುಣಮಟ್ಟದ್ದಾಗಿದೆ ಎಂದು ಚವಾಣ್ ಹೇಳಿಕೊಂಡರೆ, ಅದು ಕಡಿಮೆ ದರ್ಜೆಯದ್ದಾಗಿದೆ ಎಂದು ವ್ಯಾಪಾರಿ ಹೇಳಿದ್ದಾನೆ.

”ರೈತರು 10 ಚೀಲ ಮಾತ್ರ ತಂದಿದ್ದು, ಉತ್ಪನ್ನವೂ ಕಡಿಮೆ ದರ್ಜೆಯದ್ದಾಗಿದೆ. ಹೀಗಾಗಿ ಕ್ವಿಂಟಲ್ ದರಕ್ಕೆ 100ರೂ. ಸಿಕ್ಕಿದೆ. ಹೀಗಾಗಿ ಎಲ್ಲ ಕಡಿತಗೊಳಿಸಿ 2ರೂ. ನಿವ್ವಳ ಲಾಭ ಬಂದಿದೆ” ಎಂದು ವ್ಯಾಪಾರಿ ತಿಳಿಸಿದ್ದಾನೆ.

”ಇದೇ ರೈತ ಇತ್ತೀಚಿನ ದಿನಗಳಲ್ಲಿ ನನಗೆ 400ಕ್ಕೂ ಹೆಚ್ಚು ಚೀಲಗಳನ್ನು ಮಾರಾಟ ಮಾಡುವ ಮೂಲಕ ಉತ್ತಮ ಲಾಭ ಪಡೆದಿದ್ದಾನೆ. ಈ ಬಾರಿ 10 ಮೂಟೆ ಇಲ್ಲದ ಉಳಿಕೆ ಉತ್ಪನ್ನಗಳನ್ನು ತಂದಿದ್ದು, ಬೆಲೆ ಕುಸಿದಿದ್ದರಿಂದ ಈ ದರ ಸಿಕ್ಕಿದೆ”  ಎಂದು ವ್ಯಾಪಾರಿ ಹೇಳಿದರು.

ಈ ಬಗ್ಗೆ ರೈತ ಮುಖಂಡ ಹಾಗೂ ಮಾಜಿ ಸಂಸದ ರಾಜು ಶೆಟ್ಟಿ ಮಾತನಾಡಿ, ”ಈಗ ಮಾರುಕಟ್ಟೆಗೆ ಬರುತ್ತಿರುವ ಈರುಳ್ಳಿ ‘ಖಾರಿಫ್’ ಉತ್ಪನ್ನವಾಗಿದ್ದು, ಇದನ್ನು ದೀರ್ಘಕಾಲ ಶೇಖರಿಸಿಡಲು ಸಾಧ್ಯವಿಲ್ಲ, ಹೀಗಾಗಿ ಉತ್ಪನ್ನದ ಶೆಲ್ಫ್ ಲೈಫ್ ಕಡಿಮೆಯಾಗಿದೆ. ಈ ಈರುಳ್ಳಿಯನ್ನು ತಕ್ಷಣ ಮಾರುಕಟ್ಟೆಯಲ್ಲಿ ಮಾರಾಟ ಮಾಡಿ ಹೊರಕ್ಕೆ ರಫ್ತು ಮಾಡಬೇಕಾಗಿದೆ. ಆದರೆ ದಲ್ಲಾಳಿಗಳ ದುರಾಸೆಯಿಂದಾಗಿ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಗಗನಕ್ಕೇರಿದೆ.

ಈ ಈರುಳ್ಳಿಯನ್ನು ಭಾರತೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ(NAFED)ದಿಂದ ಖರೀದಿಸಲಾಗುತ್ತಿಲ್ಲ, ಆದ್ದರಿಂದ ಈ ‘ಖಾರಿಫ್’ ಈರುಳ್ಳಿಗೆ ಬೆಲೆ ಸಿಗುವಂತೆ ಮಾಡುವುದೇ ಸರ್ಕಾರಕ್ಕೆ ಇರುವ ಏಕೈಕ ಆಯ್ಕೆಯಾಗಿದೆ ಎಂದು ರಾಜು ಶೆಟ್ಟಿ ಹೇಳಿದರು.

”ಈರುಳ್ಳಿಗೆ ಸಂಬಂಧಿಸಿದಂತೆ ಸರ್ಕಾರದ ರಫ್ತು ಮತ್ತು ಆಮದು ನೀತಿಯು ಸ್ಥಿರವಾಗಿಲ್ಲ. ನಾವು ಪಾಕಿಸ್ತಾನ ಮತ್ತು ಬಾಂಗ್ಲಾದೇಶಗಳ ಎರಡು ಶಾಶ್ವತ ಮಾರುಕಟ್ಟೆಗಳನ್ನು ಹೊಂದಿದ್ದೇವೆ. ಆದರೆ ನಮ್ಮ ಸರ್ಕಾರದ ಅಸಮಂಜಸ ನೀತಿಯಿಂದಾಗಿ ಅವರು ನಮ್ಮ ಬದಲಿಗೆ ಇರಾನ್‌ನಿಂದ ಈರುಳ್ಳಿ ಖರೀದಿಸಲು ಆದ್ಯತೆ ನೀಡಿದರು. ಮೂರನೇ ಮಾರುಕಟ್ಟೆ ಶ್ರೀಲಂಕಾ, ಆದರೆ ಪ್ರತಿಯೊಬ್ಬರಿಗೂ ಅವರ ಪರಿಸ್ಥಿತಿ ತಿಳಿದಿದೆ ಮತ್ತು ಯಾರೂ ತಮ್ಮ ಉತ್ಪನ್ನಗಳನ್ನು ಕಳುಹಿಸಲು ಬಯಸುವುದಿಲ್ಲ” ಎಂದು ಅವರು ಹೇಳಿದರು.

ಸರ್ಕಾರ ಈ ಈರುಳ್ಳಿ ಖರೀದಿಸಬೇಕು ಅಥವಾ ರೈತರಿಗೆ ಸಬ್ಸಿಡಿ ನೀಡಬೇಕು ಎಂದು ರೈತ ಮುಖಂಡರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. The farmers agitation…remember…that’s when farmers shot themselves in the foot….they became political pawns and protested good reforms…if any one expects govt to buy everything that they produce that’s not right. Markets will find their levels and reforms would have helped you avoid pitfalls. By the way I am also a farmer happily living with organic and multi crop farming.

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...