Homeಮುಖಪುಟವಾಟ್ಸಾಪ್ ಗ್ರೂಪ್‌ನಲ್ಲಿ 512 ಜನರಿಗೆ ಅವಕಾಶ: ಎಡಿಟ್ ಮತ್ತು Undo ಆಯ್ಕೆ ಮುಂದಿನ ಕೊಡುಗೆ

ವಾಟ್ಸಾಪ್ ಗ್ರೂಪ್‌ನಲ್ಲಿ 512 ಜನರಿಗೆ ಅವಕಾಶ: ಎಡಿಟ್ ಮತ್ತು Undo ಆಯ್ಕೆ ಮುಂದಿನ ಕೊಡುಗೆ

- Advertisement -
- Advertisement -

ಜನಪ್ರಿಯ ಮೆಸೇಂಜಿಂಗ್ ತಾಣವಾದ ವಾಟ್ಸಾಪ್ ತನ್ನ ಬಳಕೆದಾರರಿಗೆ ಹಲವು ವೈಶಿಷ್ಯಗಳನ್ನು ಪರಿಚಯಿಸುತ್ತಿದೆ. ಸದ್ಯಕ್ಕೆ ಗುಂಪಿನ ಸದಸ್ಯರ ಮಿತಿಯನ್ನು 256 ರಿಂದ 512 ಕ್ಕೆ ಏರಿಸಿರುವ ಸಂಸ್ಥೆಯು ಇನ್ನು ಮುಂದೆ ಹಲವು ಆಯ್ಕೆಗಳನ್ನು ನೀಡಲು ಮುಂದಾಗಿವೆ.

ಇದುವರೆಗೂ ವಾಟ್ಸಾಪ್ ಗುಂಪುಗಳಲ್ಲಿ 256 ಸದಸ್ಯರಿಗೆ ಮಾತ್ರ ಅವಕಾಶವಿತ್ತು. ಆದರೆ ಮತ್ತೊಂದು ಮೆಸೆಂಜಿಂಗ್ ತಾಣವಾದ ಟೆಲಿಗ್ರಾಂ 2 ಲಕ್ಷದವರೆಗೆ ಸದಸ್ಯರನ್ನು ಹೊಂದುವ ಅವಕಾಶ ನೀಡಿದೆ. ಈ ಹಿನ್ನೆಲೆಯಲ್ಲಿ ವಾಟ್ಸಾಪ್ ಗುಂಪಿನ ಮಿತಿಯನ್ನು ಹೆಚ್ಚಿಸುವ ಬೇಡಿಕೆಯಿತ್ತು. ಅದನ್ನು ಪರಿಗಣಿಸಿರುವ ವಾಟ್ಸಾಪ್ ಸದ್ಯಕ್ಕೆ ಗುಂಪಿನ ಸದಸ್ಯರ ಮಿತಿಯನ್ನು 512ಕ್ಕೆ ಏರಿಸಿದೆ.

ಮುಂದೆ ಬರಲಿದೆ ಎಡಿಟ್ ಆಯ್ಕೆ

ಫೇಸ್‌ಬುಕ್‌ನಲ್ಲಿ ನೀವು ಪೋಸ್ಟ್ ಮಾಡಿದ ಸಂದೇಶವನ್ನು ಮತ್ತೆ ಎಡಿಟ್ ಮಾಡುವ ಅವಕಾಶವಿದೆ. ಸದ್ಯ ವಾಟ್ಸಾಪಿನಲ್ಲಿ ಒಮ್ಮೆ ಸಂದೇಶ ಕಳುಹಿಸಿದರೆ ಅದನ್ನು ಮತ್ತೆ ತಿದ್ದುವ ಅವಕಾಶವಿಲ್ಲ. ಅದನ್ನು ಡಿಲೀಟ್ ಮಾಡಿ ಮತ್ತೆ ಬರೆಯಬೇಕಾದ ಅನಿವಾರ್ಯತೆಯಿದೆ. ಆ ಕಷ್ಟವನ್ನು ಅರ್ಥ ಮಾಡಿಕೊಂಡಿರುವ ವಾಟ್ಸಾಪ್ ಕಂಪನಿಯು ಎಡಿಟ್ ಮಾಡುವ ಅವಕಾಶ ನೀಡುವುದಾಗಿ ಘೋಷಿಸಿದ್ದು ಅದರ ಮೇಲೆ ಕೆಲಸ ಮಾಡುತ್ತಿದೆ. ಆ ಸೇವೆ ಜಾರಿಯಾದಲ್ಲಿ ಕಳುಹಿಸಿದ ಸಂದೇಶದಲ್ಲಿ ಏನಾದರೂ ಬದಲಾವಣೆ ಇದ್ದರೆ ಮಾಡಬಹುದಾಗಿದೆ. ಇದೇ ರೀತಿಯ ಎಡಿಟ್ ಆಯ್ಕೆ ಟ್ವಿಟರ್‌ನಲ್ಲಿ ಸಹ ತರಲು ಕೆಲಸ ನಡೆಯುತ್ತಿದೆ ಎನ್ನಲಾಗಿದೆ.

Undo ಆಯ್ಕೆ

ಇನ್ನು ಮುಂದೆ ವಾಟ್ಸಾಪ್‌ನಲ್ಲಿ ಯಾವುದೇ ಕಾರಣಕ್ಕಾಗಿ ಸಂದೇಶವನ್ನು ನೀವು ಡಿಲೀಟ್ ಮಾಡಿದ್ದಲ್ಲಿ Undo ಆಯ್ಕೆ ಮೂಲಕ ಅದನ್ನು ವಾಪಸ್ ಪಡೆಯುವ ಸೌಲಭ್ಯ ನೀಡುವುದಕ್ಕೆ ಕೆಲಸ ನಡೆಯುತ್ತಿದೆ. ಬೈ ಮಿಸ್ಟೇಕ್ ನೀವು ಯಾವುದೇ ಸಂದೇಶ ಅಳಿಸಿಬಿಟ್ಟರೆ Undo ಆಯ್ಕೆ ಮೂಲಕ ವಾಪಸ್ ಪಡೆಯಬಹುದು. ಆದರೆ ಇದಕ್ಕೆ ನಿರ್ಧಿಷ್ಟ ಕಾಲಮಿತಿ ಇರುತ್ತದೆ ಎಂದು ವಾಟ್ಸಾಪ್ ಹೇಳಿದೆ. ನೀವು ಅಳಿಸಿದ ಸಂದೇಶವನ್ನು ನಿಗಧಿತ ಸಮಯದೊಳಗೆ ಮಾತ್ರ ಪಡೆಯಬಹುದು. ಇಲ್ಲದಿದ್ದರೆ ಅದು ಕಣ್ಮರೆಯಾಗಲಿದೆ.

ಇದನ್ನೂ ಓದಿ: ಮೂರೂವರೆ ವರ್ಷದಲ್ಲಿ 752 ಕೋಮು ಪ್ರಕರಣಗಳನ್ನು ಕಂಡ ’ಸೌಹಾರ್ದ ಕರ್ನಾಟಕ’

ಇವಿಷ್ಟು ಸದ್ಯಕ್ಕೆ ವಾಟ್ಸಾಪ್ ನೀಡಿರುವ ಕೊಡುಗೆಗಳಾಗಿದ್ದು, ಅದಕ್ಕೆ ಯಾವುದೇ ದರ ನಿಗಧಿ ಮಾಡಿಲ್ಲ. ಮೆಟಾ ಮಾಲಿಕತ್ವದ ವಾಟ್ಸಾಪ್ ತನ್ನ ಸೇವೆಗಳಿಗೆ ಮುಂದೆ ದರ ನಿಗಧಿ ಮಾಡಲಿದೆ ಎಂಬ ಚರ್ಚೆಗಳು ಸಹ ನಡೆಯುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...