Homeಮುಖಪುಟವಾಟ್ಸಾಪ್ ಗ್ರೂಪ್‌ನಲ್ಲಿ 512 ಜನರಿಗೆ ಅವಕಾಶ: ಎಡಿಟ್ ಮತ್ತು Undo ಆಯ್ಕೆ ಮುಂದಿನ ಕೊಡುಗೆ

ವಾಟ್ಸಾಪ್ ಗ್ರೂಪ್‌ನಲ್ಲಿ 512 ಜನರಿಗೆ ಅವಕಾಶ: ಎಡಿಟ್ ಮತ್ತು Undo ಆಯ್ಕೆ ಮುಂದಿನ ಕೊಡುಗೆ

- Advertisement -
- Advertisement -

ಜನಪ್ರಿಯ ಮೆಸೇಂಜಿಂಗ್ ತಾಣವಾದ ವಾಟ್ಸಾಪ್ ತನ್ನ ಬಳಕೆದಾರರಿಗೆ ಹಲವು ವೈಶಿಷ್ಯಗಳನ್ನು ಪರಿಚಯಿಸುತ್ತಿದೆ. ಸದ್ಯಕ್ಕೆ ಗುಂಪಿನ ಸದಸ್ಯರ ಮಿತಿಯನ್ನು 256 ರಿಂದ 512 ಕ್ಕೆ ಏರಿಸಿರುವ ಸಂಸ್ಥೆಯು ಇನ್ನು ಮುಂದೆ ಹಲವು ಆಯ್ಕೆಗಳನ್ನು ನೀಡಲು ಮುಂದಾಗಿವೆ.

ಇದುವರೆಗೂ ವಾಟ್ಸಾಪ್ ಗುಂಪುಗಳಲ್ಲಿ 256 ಸದಸ್ಯರಿಗೆ ಮಾತ್ರ ಅವಕಾಶವಿತ್ತು. ಆದರೆ ಮತ್ತೊಂದು ಮೆಸೆಂಜಿಂಗ್ ತಾಣವಾದ ಟೆಲಿಗ್ರಾಂ 2 ಲಕ್ಷದವರೆಗೆ ಸದಸ್ಯರನ್ನು ಹೊಂದುವ ಅವಕಾಶ ನೀಡಿದೆ. ಈ ಹಿನ್ನೆಲೆಯಲ್ಲಿ ವಾಟ್ಸಾಪ್ ಗುಂಪಿನ ಮಿತಿಯನ್ನು ಹೆಚ್ಚಿಸುವ ಬೇಡಿಕೆಯಿತ್ತು. ಅದನ್ನು ಪರಿಗಣಿಸಿರುವ ವಾಟ್ಸಾಪ್ ಸದ್ಯಕ್ಕೆ ಗುಂಪಿನ ಸದಸ್ಯರ ಮಿತಿಯನ್ನು 512ಕ್ಕೆ ಏರಿಸಿದೆ.

ಮುಂದೆ ಬರಲಿದೆ ಎಡಿಟ್ ಆಯ್ಕೆ

ಫೇಸ್‌ಬುಕ್‌ನಲ್ಲಿ ನೀವು ಪೋಸ್ಟ್ ಮಾಡಿದ ಸಂದೇಶವನ್ನು ಮತ್ತೆ ಎಡಿಟ್ ಮಾಡುವ ಅವಕಾಶವಿದೆ. ಸದ್ಯ ವಾಟ್ಸಾಪಿನಲ್ಲಿ ಒಮ್ಮೆ ಸಂದೇಶ ಕಳುಹಿಸಿದರೆ ಅದನ್ನು ಮತ್ತೆ ತಿದ್ದುವ ಅವಕಾಶವಿಲ್ಲ. ಅದನ್ನು ಡಿಲೀಟ್ ಮಾಡಿ ಮತ್ತೆ ಬರೆಯಬೇಕಾದ ಅನಿವಾರ್ಯತೆಯಿದೆ. ಆ ಕಷ್ಟವನ್ನು ಅರ್ಥ ಮಾಡಿಕೊಂಡಿರುವ ವಾಟ್ಸಾಪ್ ಕಂಪನಿಯು ಎಡಿಟ್ ಮಾಡುವ ಅವಕಾಶ ನೀಡುವುದಾಗಿ ಘೋಷಿಸಿದ್ದು ಅದರ ಮೇಲೆ ಕೆಲಸ ಮಾಡುತ್ತಿದೆ. ಆ ಸೇವೆ ಜಾರಿಯಾದಲ್ಲಿ ಕಳುಹಿಸಿದ ಸಂದೇಶದಲ್ಲಿ ಏನಾದರೂ ಬದಲಾವಣೆ ಇದ್ದರೆ ಮಾಡಬಹುದಾಗಿದೆ. ಇದೇ ರೀತಿಯ ಎಡಿಟ್ ಆಯ್ಕೆ ಟ್ವಿಟರ್‌ನಲ್ಲಿ ಸಹ ತರಲು ಕೆಲಸ ನಡೆಯುತ್ತಿದೆ ಎನ್ನಲಾಗಿದೆ.

Undo ಆಯ್ಕೆ

ಇನ್ನು ಮುಂದೆ ವಾಟ್ಸಾಪ್‌ನಲ್ಲಿ ಯಾವುದೇ ಕಾರಣಕ್ಕಾಗಿ ಸಂದೇಶವನ್ನು ನೀವು ಡಿಲೀಟ್ ಮಾಡಿದ್ದಲ್ಲಿ Undo ಆಯ್ಕೆ ಮೂಲಕ ಅದನ್ನು ವಾಪಸ್ ಪಡೆಯುವ ಸೌಲಭ್ಯ ನೀಡುವುದಕ್ಕೆ ಕೆಲಸ ನಡೆಯುತ್ತಿದೆ. ಬೈ ಮಿಸ್ಟೇಕ್ ನೀವು ಯಾವುದೇ ಸಂದೇಶ ಅಳಿಸಿಬಿಟ್ಟರೆ Undo ಆಯ್ಕೆ ಮೂಲಕ ವಾಪಸ್ ಪಡೆಯಬಹುದು. ಆದರೆ ಇದಕ್ಕೆ ನಿರ್ಧಿಷ್ಟ ಕಾಲಮಿತಿ ಇರುತ್ತದೆ ಎಂದು ವಾಟ್ಸಾಪ್ ಹೇಳಿದೆ. ನೀವು ಅಳಿಸಿದ ಸಂದೇಶವನ್ನು ನಿಗಧಿತ ಸಮಯದೊಳಗೆ ಮಾತ್ರ ಪಡೆಯಬಹುದು. ಇಲ್ಲದಿದ್ದರೆ ಅದು ಕಣ್ಮರೆಯಾಗಲಿದೆ.

ಇದನ್ನೂ ಓದಿ: ಮೂರೂವರೆ ವರ್ಷದಲ್ಲಿ 752 ಕೋಮು ಪ್ರಕರಣಗಳನ್ನು ಕಂಡ ’ಸೌಹಾರ್ದ ಕರ್ನಾಟಕ’

ಇವಿಷ್ಟು ಸದ್ಯಕ್ಕೆ ವಾಟ್ಸಾಪ್ ನೀಡಿರುವ ಕೊಡುಗೆಗಳಾಗಿದ್ದು, ಅದಕ್ಕೆ ಯಾವುದೇ ದರ ನಿಗಧಿ ಮಾಡಿಲ್ಲ. ಮೆಟಾ ಮಾಲಿಕತ್ವದ ವಾಟ್ಸಾಪ್ ತನ್ನ ಸೇವೆಗಳಿಗೆ ಮುಂದೆ ದರ ನಿಗಧಿ ಮಾಡಲಿದೆ ಎಂಬ ಚರ್ಚೆಗಳು ಸಹ ನಡೆಯುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...