Homeಮುಖಪುಟವಾಟ್ಸಾಪ್ ಗ್ರೂಪ್‌ನಲ್ಲಿ 512 ಜನರಿಗೆ ಅವಕಾಶ: ಎಡಿಟ್ ಮತ್ತು Undo ಆಯ್ಕೆ ಮುಂದಿನ ಕೊಡುಗೆ

ವಾಟ್ಸಾಪ್ ಗ್ರೂಪ್‌ನಲ್ಲಿ 512 ಜನರಿಗೆ ಅವಕಾಶ: ಎಡಿಟ್ ಮತ್ತು Undo ಆಯ್ಕೆ ಮುಂದಿನ ಕೊಡುಗೆ

- Advertisement -
- Advertisement -

ಜನಪ್ರಿಯ ಮೆಸೇಂಜಿಂಗ್ ತಾಣವಾದ ವಾಟ್ಸಾಪ್ ತನ್ನ ಬಳಕೆದಾರರಿಗೆ ಹಲವು ವೈಶಿಷ್ಯಗಳನ್ನು ಪರಿಚಯಿಸುತ್ತಿದೆ. ಸದ್ಯಕ್ಕೆ ಗುಂಪಿನ ಸದಸ್ಯರ ಮಿತಿಯನ್ನು 256 ರಿಂದ 512 ಕ್ಕೆ ಏರಿಸಿರುವ ಸಂಸ್ಥೆಯು ಇನ್ನು ಮುಂದೆ ಹಲವು ಆಯ್ಕೆಗಳನ್ನು ನೀಡಲು ಮುಂದಾಗಿವೆ.

ಇದುವರೆಗೂ ವಾಟ್ಸಾಪ್ ಗುಂಪುಗಳಲ್ಲಿ 256 ಸದಸ್ಯರಿಗೆ ಮಾತ್ರ ಅವಕಾಶವಿತ್ತು. ಆದರೆ ಮತ್ತೊಂದು ಮೆಸೆಂಜಿಂಗ್ ತಾಣವಾದ ಟೆಲಿಗ್ರಾಂ 2 ಲಕ್ಷದವರೆಗೆ ಸದಸ್ಯರನ್ನು ಹೊಂದುವ ಅವಕಾಶ ನೀಡಿದೆ. ಈ ಹಿನ್ನೆಲೆಯಲ್ಲಿ ವಾಟ್ಸಾಪ್ ಗುಂಪಿನ ಮಿತಿಯನ್ನು ಹೆಚ್ಚಿಸುವ ಬೇಡಿಕೆಯಿತ್ತು. ಅದನ್ನು ಪರಿಗಣಿಸಿರುವ ವಾಟ್ಸಾಪ್ ಸದ್ಯಕ್ಕೆ ಗುಂಪಿನ ಸದಸ್ಯರ ಮಿತಿಯನ್ನು 512ಕ್ಕೆ ಏರಿಸಿದೆ.

ಮುಂದೆ ಬರಲಿದೆ ಎಡಿಟ್ ಆಯ್ಕೆ

ಫೇಸ್‌ಬುಕ್‌ನಲ್ಲಿ ನೀವು ಪೋಸ್ಟ್ ಮಾಡಿದ ಸಂದೇಶವನ್ನು ಮತ್ತೆ ಎಡಿಟ್ ಮಾಡುವ ಅವಕಾಶವಿದೆ. ಸದ್ಯ ವಾಟ್ಸಾಪಿನಲ್ಲಿ ಒಮ್ಮೆ ಸಂದೇಶ ಕಳುಹಿಸಿದರೆ ಅದನ್ನು ಮತ್ತೆ ತಿದ್ದುವ ಅವಕಾಶವಿಲ್ಲ. ಅದನ್ನು ಡಿಲೀಟ್ ಮಾಡಿ ಮತ್ತೆ ಬರೆಯಬೇಕಾದ ಅನಿವಾರ್ಯತೆಯಿದೆ. ಆ ಕಷ್ಟವನ್ನು ಅರ್ಥ ಮಾಡಿಕೊಂಡಿರುವ ವಾಟ್ಸಾಪ್ ಕಂಪನಿಯು ಎಡಿಟ್ ಮಾಡುವ ಅವಕಾಶ ನೀಡುವುದಾಗಿ ಘೋಷಿಸಿದ್ದು ಅದರ ಮೇಲೆ ಕೆಲಸ ಮಾಡುತ್ತಿದೆ. ಆ ಸೇವೆ ಜಾರಿಯಾದಲ್ಲಿ ಕಳುಹಿಸಿದ ಸಂದೇಶದಲ್ಲಿ ಏನಾದರೂ ಬದಲಾವಣೆ ಇದ್ದರೆ ಮಾಡಬಹುದಾಗಿದೆ. ಇದೇ ರೀತಿಯ ಎಡಿಟ್ ಆಯ್ಕೆ ಟ್ವಿಟರ್‌ನಲ್ಲಿ ಸಹ ತರಲು ಕೆಲಸ ನಡೆಯುತ್ತಿದೆ ಎನ್ನಲಾಗಿದೆ.

Undo ಆಯ್ಕೆ

ಇನ್ನು ಮುಂದೆ ವಾಟ್ಸಾಪ್‌ನಲ್ಲಿ ಯಾವುದೇ ಕಾರಣಕ್ಕಾಗಿ ಸಂದೇಶವನ್ನು ನೀವು ಡಿಲೀಟ್ ಮಾಡಿದ್ದಲ್ಲಿ Undo ಆಯ್ಕೆ ಮೂಲಕ ಅದನ್ನು ವಾಪಸ್ ಪಡೆಯುವ ಸೌಲಭ್ಯ ನೀಡುವುದಕ್ಕೆ ಕೆಲಸ ನಡೆಯುತ್ತಿದೆ. ಬೈ ಮಿಸ್ಟೇಕ್ ನೀವು ಯಾವುದೇ ಸಂದೇಶ ಅಳಿಸಿಬಿಟ್ಟರೆ Undo ಆಯ್ಕೆ ಮೂಲಕ ವಾಪಸ್ ಪಡೆಯಬಹುದು. ಆದರೆ ಇದಕ್ಕೆ ನಿರ್ಧಿಷ್ಟ ಕಾಲಮಿತಿ ಇರುತ್ತದೆ ಎಂದು ವಾಟ್ಸಾಪ್ ಹೇಳಿದೆ. ನೀವು ಅಳಿಸಿದ ಸಂದೇಶವನ್ನು ನಿಗಧಿತ ಸಮಯದೊಳಗೆ ಮಾತ್ರ ಪಡೆಯಬಹುದು. ಇಲ್ಲದಿದ್ದರೆ ಅದು ಕಣ್ಮರೆಯಾಗಲಿದೆ.

ಇದನ್ನೂ ಓದಿ: ಮೂರೂವರೆ ವರ್ಷದಲ್ಲಿ 752 ಕೋಮು ಪ್ರಕರಣಗಳನ್ನು ಕಂಡ ’ಸೌಹಾರ್ದ ಕರ್ನಾಟಕ’

ಇವಿಷ್ಟು ಸದ್ಯಕ್ಕೆ ವಾಟ್ಸಾಪ್ ನೀಡಿರುವ ಕೊಡುಗೆಗಳಾಗಿದ್ದು, ಅದಕ್ಕೆ ಯಾವುದೇ ದರ ನಿಗಧಿ ಮಾಡಿಲ್ಲ. ಮೆಟಾ ಮಾಲಿಕತ್ವದ ವಾಟ್ಸಾಪ್ ತನ್ನ ಸೇವೆಗಳಿಗೆ ಮುಂದೆ ದರ ನಿಗಧಿ ಮಾಡಲಿದೆ ಎಂಬ ಚರ್ಚೆಗಳು ಸಹ ನಡೆಯುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...