Homeಮುಖಪುಟವಾಟ್ಸಾಪ್ ಗ್ರೂಪ್‌ನಲ್ಲಿ 512 ಜನರಿಗೆ ಅವಕಾಶ: ಎಡಿಟ್ ಮತ್ತು Undo ಆಯ್ಕೆ ಮುಂದಿನ ಕೊಡುಗೆ

ವಾಟ್ಸಾಪ್ ಗ್ರೂಪ್‌ನಲ್ಲಿ 512 ಜನರಿಗೆ ಅವಕಾಶ: ಎಡಿಟ್ ಮತ್ತು Undo ಆಯ್ಕೆ ಮುಂದಿನ ಕೊಡುಗೆ

- Advertisement -
- Advertisement -

ಜನಪ್ರಿಯ ಮೆಸೇಂಜಿಂಗ್ ತಾಣವಾದ ವಾಟ್ಸಾಪ್ ತನ್ನ ಬಳಕೆದಾರರಿಗೆ ಹಲವು ವೈಶಿಷ್ಯಗಳನ್ನು ಪರಿಚಯಿಸುತ್ತಿದೆ. ಸದ್ಯಕ್ಕೆ ಗುಂಪಿನ ಸದಸ್ಯರ ಮಿತಿಯನ್ನು 256 ರಿಂದ 512 ಕ್ಕೆ ಏರಿಸಿರುವ ಸಂಸ್ಥೆಯು ಇನ್ನು ಮುಂದೆ ಹಲವು ಆಯ್ಕೆಗಳನ್ನು ನೀಡಲು ಮುಂದಾಗಿವೆ.

ಇದುವರೆಗೂ ವಾಟ್ಸಾಪ್ ಗುಂಪುಗಳಲ್ಲಿ 256 ಸದಸ್ಯರಿಗೆ ಮಾತ್ರ ಅವಕಾಶವಿತ್ತು. ಆದರೆ ಮತ್ತೊಂದು ಮೆಸೆಂಜಿಂಗ್ ತಾಣವಾದ ಟೆಲಿಗ್ರಾಂ 2 ಲಕ್ಷದವರೆಗೆ ಸದಸ್ಯರನ್ನು ಹೊಂದುವ ಅವಕಾಶ ನೀಡಿದೆ. ಈ ಹಿನ್ನೆಲೆಯಲ್ಲಿ ವಾಟ್ಸಾಪ್ ಗುಂಪಿನ ಮಿತಿಯನ್ನು ಹೆಚ್ಚಿಸುವ ಬೇಡಿಕೆಯಿತ್ತು. ಅದನ್ನು ಪರಿಗಣಿಸಿರುವ ವಾಟ್ಸಾಪ್ ಸದ್ಯಕ್ಕೆ ಗುಂಪಿನ ಸದಸ್ಯರ ಮಿತಿಯನ್ನು 512ಕ್ಕೆ ಏರಿಸಿದೆ.

ಮುಂದೆ ಬರಲಿದೆ ಎಡಿಟ್ ಆಯ್ಕೆ

ಫೇಸ್‌ಬುಕ್‌ನಲ್ಲಿ ನೀವು ಪೋಸ್ಟ್ ಮಾಡಿದ ಸಂದೇಶವನ್ನು ಮತ್ತೆ ಎಡಿಟ್ ಮಾಡುವ ಅವಕಾಶವಿದೆ. ಸದ್ಯ ವಾಟ್ಸಾಪಿನಲ್ಲಿ ಒಮ್ಮೆ ಸಂದೇಶ ಕಳುಹಿಸಿದರೆ ಅದನ್ನು ಮತ್ತೆ ತಿದ್ದುವ ಅವಕಾಶವಿಲ್ಲ. ಅದನ್ನು ಡಿಲೀಟ್ ಮಾಡಿ ಮತ್ತೆ ಬರೆಯಬೇಕಾದ ಅನಿವಾರ್ಯತೆಯಿದೆ. ಆ ಕಷ್ಟವನ್ನು ಅರ್ಥ ಮಾಡಿಕೊಂಡಿರುವ ವಾಟ್ಸಾಪ್ ಕಂಪನಿಯು ಎಡಿಟ್ ಮಾಡುವ ಅವಕಾಶ ನೀಡುವುದಾಗಿ ಘೋಷಿಸಿದ್ದು ಅದರ ಮೇಲೆ ಕೆಲಸ ಮಾಡುತ್ತಿದೆ. ಆ ಸೇವೆ ಜಾರಿಯಾದಲ್ಲಿ ಕಳುಹಿಸಿದ ಸಂದೇಶದಲ್ಲಿ ಏನಾದರೂ ಬದಲಾವಣೆ ಇದ್ದರೆ ಮಾಡಬಹುದಾಗಿದೆ. ಇದೇ ರೀತಿಯ ಎಡಿಟ್ ಆಯ್ಕೆ ಟ್ವಿಟರ್‌ನಲ್ಲಿ ಸಹ ತರಲು ಕೆಲಸ ನಡೆಯುತ್ತಿದೆ ಎನ್ನಲಾಗಿದೆ.

Undo ಆಯ್ಕೆ

ಇನ್ನು ಮುಂದೆ ವಾಟ್ಸಾಪ್‌ನಲ್ಲಿ ಯಾವುದೇ ಕಾರಣಕ್ಕಾಗಿ ಸಂದೇಶವನ್ನು ನೀವು ಡಿಲೀಟ್ ಮಾಡಿದ್ದಲ್ಲಿ Undo ಆಯ್ಕೆ ಮೂಲಕ ಅದನ್ನು ವಾಪಸ್ ಪಡೆಯುವ ಸೌಲಭ್ಯ ನೀಡುವುದಕ್ಕೆ ಕೆಲಸ ನಡೆಯುತ್ತಿದೆ. ಬೈ ಮಿಸ್ಟೇಕ್ ನೀವು ಯಾವುದೇ ಸಂದೇಶ ಅಳಿಸಿಬಿಟ್ಟರೆ Undo ಆಯ್ಕೆ ಮೂಲಕ ವಾಪಸ್ ಪಡೆಯಬಹುದು. ಆದರೆ ಇದಕ್ಕೆ ನಿರ್ಧಿಷ್ಟ ಕಾಲಮಿತಿ ಇರುತ್ತದೆ ಎಂದು ವಾಟ್ಸಾಪ್ ಹೇಳಿದೆ. ನೀವು ಅಳಿಸಿದ ಸಂದೇಶವನ್ನು ನಿಗಧಿತ ಸಮಯದೊಳಗೆ ಮಾತ್ರ ಪಡೆಯಬಹುದು. ಇಲ್ಲದಿದ್ದರೆ ಅದು ಕಣ್ಮರೆಯಾಗಲಿದೆ.

ಇದನ್ನೂ ಓದಿ: ಮೂರೂವರೆ ವರ್ಷದಲ್ಲಿ 752 ಕೋಮು ಪ್ರಕರಣಗಳನ್ನು ಕಂಡ ’ಸೌಹಾರ್ದ ಕರ್ನಾಟಕ’

ಇವಿಷ್ಟು ಸದ್ಯಕ್ಕೆ ವಾಟ್ಸಾಪ್ ನೀಡಿರುವ ಕೊಡುಗೆಗಳಾಗಿದ್ದು, ಅದಕ್ಕೆ ಯಾವುದೇ ದರ ನಿಗಧಿ ಮಾಡಿಲ್ಲ. ಮೆಟಾ ಮಾಲಿಕತ್ವದ ವಾಟ್ಸಾಪ್ ತನ್ನ ಸೇವೆಗಳಿಗೆ ಮುಂದೆ ದರ ನಿಗಧಿ ಮಾಡಲಿದೆ ಎಂಬ ಚರ್ಚೆಗಳು ಸಹ ನಡೆಯುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...