Homeಮುಖಪುಟವಾಟ್ಸಾಪ್ ಗ್ರೂಪ್‌ನಲ್ಲಿ 512 ಜನರಿಗೆ ಅವಕಾಶ: ಎಡಿಟ್ ಮತ್ತು Undo ಆಯ್ಕೆ ಮುಂದಿನ ಕೊಡುಗೆ

ವಾಟ್ಸಾಪ್ ಗ್ರೂಪ್‌ನಲ್ಲಿ 512 ಜನರಿಗೆ ಅವಕಾಶ: ಎಡಿಟ್ ಮತ್ತು Undo ಆಯ್ಕೆ ಮುಂದಿನ ಕೊಡುಗೆ

- Advertisement -
- Advertisement -

ಜನಪ್ರಿಯ ಮೆಸೇಂಜಿಂಗ್ ತಾಣವಾದ ವಾಟ್ಸಾಪ್ ತನ್ನ ಬಳಕೆದಾರರಿಗೆ ಹಲವು ವೈಶಿಷ್ಯಗಳನ್ನು ಪರಿಚಯಿಸುತ್ತಿದೆ. ಸದ್ಯಕ್ಕೆ ಗುಂಪಿನ ಸದಸ್ಯರ ಮಿತಿಯನ್ನು 256 ರಿಂದ 512 ಕ್ಕೆ ಏರಿಸಿರುವ ಸಂಸ್ಥೆಯು ಇನ್ನು ಮುಂದೆ ಹಲವು ಆಯ್ಕೆಗಳನ್ನು ನೀಡಲು ಮುಂದಾಗಿವೆ.

ಇದುವರೆಗೂ ವಾಟ್ಸಾಪ್ ಗುಂಪುಗಳಲ್ಲಿ 256 ಸದಸ್ಯರಿಗೆ ಮಾತ್ರ ಅವಕಾಶವಿತ್ತು. ಆದರೆ ಮತ್ತೊಂದು ಮೆಸೆಂಜಿಂಗ್ ತಾಣವಾದ ಟೆಲಿಗ್ರಾಂ 2 ಲಕ್ಷದವರೆಗೆ ಸದಸ್ಯರನ್ನು ಹೊಂದುವ ಅವಕಾಶ ನೀಡಿದೆ. ಈ ಹಿನ್ನೆಲೆಯಲ್ಲಿ ವಾಟ್ಸಾಪ್ ಗುಂಪಿನ ಮಿತಿಯನ್ನು ಹೆಚ್ಚಿಸುವ ಬೇಡಿಕೆಯಿತ್ತು. ಅದನ್ನು ಪರಿಗಣಿಸಿರುವ ವಾಟ್ಸಾಪ್ ಸದ್ಯಕ್ಕೆ ಗುಂಪಿನ ಸದಸ್ಯರ ಮಿತಿಯನ್ನು 512ಕ್ಕೆ ಏರಿಸಿದೆ.

ಮುಂದೆ ಬರಲಿದೆ ಎಡಿಟ್ ಆಯ್ಕೆ

ಫೇಸ್‌ಬುಕ್‌ನಲ್ಲಿ ನೀವು ಪೋಸ್ಟ್ ಮಾಡಿದ ಸಂದೇಶವನ್ನು ಮತ್ತೆ ಎಡಿಟ್ ಮಾಡುವ ಅವಕಾಶವಿದೆ. ಸದ್ಯ ವಾಟ್ಸಾಪಿನಲ್ಲಿ ಒಮ್ಮೆ ಸಂದೇಶ ಕಳುಹಿಸಿದರೆ ಅದನ್ನು ಮತ್ತೆ ತಿದ್ದುವ ಅವಕಾಶವಿಲ್ಲ. ಅದನ್ನು ಡಿಲೀಟ್ ಮಾಡಿ ಮತ್ತೆ ಬರೆಯಬೇಕಾದ ಅನಿವಾರ್ಯತೆಯಿದೆ. ಆ ಕಷ್ಟವನ್ನು ಅರ್ಥ ಮಾಡಿಕೊಂಡಿರುವ ವಾಟ್ಸಾಪ್ ಕಂಪನಿಯು ಎಡಿಟ್ ಮಾಡುವ ಅವಕಾಶ ನೀಡುವುದಾಗಿ ಘೋಷಿಸಿದ್ದು ಅದರ ಮೇಲೆ ಕೆಲಸ ಮಾಡುತ್ತಿದೆ. ಆ ಸೇವೆ ಜಾರಿಯಾದಲ್ಲಿ ಕಳುಹಿಸಿದ ಸಂದೇಶದಲ್ಲಿ ಏನಾದರೂ ಬದಲಾವಣೆ ಇದ್ದರೆ ಮಾಡಬಹುದಾಗಿದೆ. ಇದೇ ರೀತಿಯ ಎಡಿಟ್ ಆಯ್ಕೆ ಟ್ವಿಟರ್‌ನಲ್ಲಿ ಸಹ ತರಲು ಕೆಲಸ ನಡೆಯುತ್ತಿದೆ ಎನ್ನಲಾಗಿದೆ.

Undo ಆಯ್ಕೆ

ಇನ್ನು ಮುಂದೆ ವಾಟ್ಸಾಪ್‌ನಲ್ಲಿ ಯಾವುದೇ ಕಾರಣಕ್ಕಾಗಿ ಸಂದೇಶವನ್ನು ನೀವು ಡಿಲೀಟ್ ಮಾಡಿದ್ದಲ್ಲಿ Undo ಆಯ್ಕೆ ಮೂಲಕ ಅದನ್ನು ವಾಪಸ್ ಪಡೆಯುವ ಸೌಲಭ್ಯ ನೀಡುವುದಕ್ಕೆ ಕೆಲಸ ನಡೆಯುತ್ತಿದೆ. ಬೈ ಮಿಸ್ಟೇಕ್ ನೀವು ಯಾವುದೇ ಸಂದೇಶ ಅಳಿಸಿಬಿಟ್ಟರೆ Undo ಆಯ್ಕೆ ಮೂಲಕ ವಾಪಸ್ ಪಡೆಯಬಹುದು. ಆದರೆ ಇದಕ್ಕೆ ನಿರ್ಧಿಷ್ಟ ಕಾಲಮಿತಿ ಇರುತ್ತದೆ ಎಂದು ವಾಟ್ಸಾಪ್ ಹೇಳಿದೆ. ನೀವು ಅಳಿಸಿದ ಸಂದೇಶವನ್ನು ನಿಗಧಿತ ಸಮಯದೊಳಗೆ ಮಾತ್ರ ಪಡೆಯಬಹುದು. ಇಲ್ಲದಿದ್ದರೆ ಅದು ಕಣ್ಮರೆಯಾಗಲಿದೆ.

ಇದನ್ನೂ ಓದಿ: ಮೂರೂವರೆ ವರ್ಷದಲ್ಲಿ 752 ಕೋಮು ಪ್ರಕರಣಗಳನ್ನು ಕಂಡ ’ಸೌಹಾರ್ದ ಕರ್ನಾಟಕ’

ಇವಿಷ್ಟು ಸದ್ಯಕ್ಕೆ ವಾಟ್ಸಾಪ್ ನೀಡಿರುವ ಕೊಡುಗೆಗಳಾಗಿದ್ದು, ಅದಕ್ಕೆ ಯಾವುದೇ ದರ ನಿಗಧಿ ಮಾಡಿಲ್ಲ. ಮೆಟಾ ಮಾಲಿಕತ್ವದ ವಾಟ್ಸಾಪ್ ತನ್ನ ಸೇವೆಗಳಿಗೆ ಮುಂದೆ ದರ ನಿಗಧಿ ಮಾಡಲಿದೆ ಎಂಬ ಚರ್ಚೆಗಳು ಸಹ ನಡೆಯುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...