Homeಮುಖಪುಟವಾಟ್ಸಾಪ್ ಗ್ರೂಪ್‌ನಲ್ಲಿ 512 ಜನರಿಗೆ ಅವಕಾಶ: ಎಡಿಟ್ ಮತ್ತು Undo ಆಯ್ಕೆ ಮುಂದಿನ ಕೊಡುಗೆ

ವಾಟ್ಸಾಪ್ ಗ್ರೂಪ್‌ನಲ್ಲಿ 512 ಜನರಿಗೆ ಅವಕಾಶ: ಎಡಿಟ್ ಮತ್ತು Undo ಆಯ್ಕೆ ಮುಂದಿನ ಕೊಡುಗೆ

- Advertisement -
- Advertisement -

ಜನಪ್ರಿಯ ಮೆಸೇಂಜಿಂಗ್ ತಾಣವಾದ ವಾಟ್ಸಾಪ್ ತನ್ನ ಬಳಕೆದಾರರಿಗೆ ಹಲವು ವೈಶಿಷ್ಯಗಳನ್ನು ಪರಿಚಯಿಸುತ್ತಿದೆ. ಸದ್ಯಕ್ಕೆ ಗುಂಪಿನ ಸದಸ್ಯರ ಮಿತಿಯನ್ನು 256 ರಿಂದ 512 ಕ್ಕೆ ಏರಿಸಿರುವ ಸಂಸ್ಥೆಯು ಇನ್ನು ಮುಂದೆ ಹಲವು ಆಯ್ಕೆಗಳನ್ನು ನೀಡಲು ಮುಂದಾಗಿವೆ.

ಇದುವರೆಗೂ ವಾಟ್ಸಾಪ್ ಗುಂಪುಗಳಲ್ಲಿ 256 ಸದಸ್ಯರಿಗೆ ಮಾತ್ರ ಅವಕಾಶವಿತ್ತು. ಆದರೆ ಮತ್ತೊಂದು ಮೆಸೆಂಜಿಂಗ್ ತಾಣವಾದ ಟೆಲಿಗ್ರಾಂ 2 ಲಕ್ಷದವರೆಗೆ ಸದಸ್ಯರನ್ನು ಹೊಂದುವ ಅವಕಾಶ ನೀಡಿದೆ. ಈ ಹಿನ್ನೆಲೆಯಲ್ಲಿ ವಾಟ್ಸಾಪ್ ಗುಂಪಿನ ಮಿತಿಯನ್ನು ಹೆಚ್ಚಿಸುವ ಬೇಡಿಕೆಯಿತ್ತು. ಅದನ್ನು ಪರಿಗಣಿಸಿರುವ ವಾಟ್ಸಾಪ್ ಸದ್ಯಕ್ಕೆ ಗುಂಪಿನ ಸದಸ್ಯರ ಮಿತಿಯನ್ನು 512ಕ್ಕೆ ಏರಿಸಿದೆ.

ಮುಂದೆ ಬರಲಿದೆ ಎಡಿಟ್ ಆಯ್ಕೆ

ಫೇಸ್‌ಬುಕ್‌ನಲ್ಲಿ ನೀವು ಪೋಸ್ಟ್ ಮಾಡಿದ ಸಂದೇಶವನ್ನು ಮತ್ತೆ ಎಡಿಟ್ ಮಾಡುವ ಅವಕಾಶವಿದೆ. ಸದ್ಯ ವಾಟ್ಸಾಪಿನಲ್ಲಿ ಒಮ್ಮೆ ಸಂದೇಶ ಕಳುಹಿಸಿದರೆ ಅದನ್ನು ಮತ್ತೆ ತಿದ್ದುವ ಅವಕಾಶವಿಲ್ಲ. ಅದನ್ನು ಡಿಲೀಟ್ ಮಾಡಿ ಮತ್ತೆ ಬರೆಯಬೇಕಾದ ಅನಿವಾರ್ಯತೆಯಿದೆ. ಆ ಕಷ್ಟವನ್ನು ಅರ್ಥ ಮಾಡಿಕೊಂಡಿರುವ ವಾಟ್ಸಾಪ್ ಕಂಪನಿಯು ಎಡಿಟ್ ಮಾಡುವ ಅವಕಾಶ ನೀಡುವುದಾಗಿ ಘೋಷಿಸಿದ್ದು ಅದರ ಮೇಲೆ ಕೆಲಸ ಮಾಡುತ್ತಿದೆ. ಆ ಸೇವೆ ಜಾರಿಯಾದಲ್ಲಿ ಕಳುಹಿಸಿದ ಸಂದೇಶದಲ್ಲಿ ಏನಾದರೂ ಬದಲಾವಣೆ ಇದ್ದರೆ ಮಾಡಬಹುದಾಗಿದೆ. ಇದೇ ರೀತಿಯ ಎಡಿಟ್ ಆಯ್ಕೆ ಟ್ವಿಟರ್‌ನಲ್ಲಿ ಸಹ ತರಲು ಕೆಲಸ ನಡೆಯುತ್ತಿದೆ ಎನ್ನಲಾಗಿದೆ.

Undo ಆಯ್ಕೆ

ಇನ್ನು ಮುಂದೆ ವಾಟ್ಸಾಪ್‌ನಲ್ಲಿ ಯಾವುದೇ ಕಾರಣಕ್ಕಾಗಿ ಸಂದೇಶವನ್ನು ನೀವು ಡಿಲೀಟ್ ಮಾಡಿದ್ದಲ್ಲಿ Undo ಆಯ್ಕೆ ಮೂಲಕ ಅದನ್ನು ವಾಪಸ್ ಪಡೆಯುವ ಸೌಲಭ್ಯ ನೀಡುವುದಕ್ಕೆ ಕೆಲಸ ನಡೆಯುತ್ತಿದೆ. ಬೈ ಮಿಸ್ಟೇಕ್ ನೀವು ಯಾವುದೇ ಸಂದೇಶ ಅಳಿಸಿಬಿಟ್ಟರೆ Undo ಆಯ್ಕೆ ಮೂಲಕ ವಾಪಸ್ ಪಡೆಯಬಹುದು. ಆದರೆ ಇದಕ್ಕೆ ನಿರ್ಧಿಷ್ಟ ಕಾಲಮಿತಿ ಇರುತ್ತದೆ ಎಂದು ವಾಟ್ಸಾಪ್ ಹೇಳಿದೆ. ನೀವು ಅಳಿಸಿದ ಸಂದೇಶವನ್ನು ನಿಗಧಿತ ಸಮಯದೊಳಗೆ ಮಾತ್ರ ಪಡೆಯಬಹುದು. ಇಲ್ಲದಿದ್ದರೆ ಅದು ಕಣ್ಮರೆಯಾಗಲಿದೆ.

ಇದನ್ನೂ ಓದಿ: ಮೂರೂವರೆ ವರ್ಷದಲ್ಲಿ 752 ಕೋಮು ಪ್ರಕರಣಗಳನ್ನು ಕಂಡ ’ಸೌಹಾರ್ದ ಕರ್ನಾಟಕ’

ಇವಿಷ್ಟು ಸದ್ಯಕ್ಕೆ ವಾಟ್ಸಾಪ್ ನೀಡಿರುವ ಕೊಡುಗೆಗಳಾಗಿದ್ದು, ಅದಕ್ಕೆ ಯಾವುದೇ ದರ ನಿಗಧಿ ಮಾಡಿಲ್ಲ. ಮೆಟಾ ಮಾಲಿಕತ್ವದ ವಾಟ್ಸಾಪ್ ತನ್ನ ಸೇವೆಗಳಿಗೆ ಮುಂದೆ ದರ ನಿಗಧಿ ಮಾಡಲಿದೆ ಎಂಬ ಚರ್ಚೆಗಳು ಸಹ ನಡೆಯುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....