Homeಮುಖಪುಟಪ್ರಧಾನಿ ಮೋದಿಯ 58 ದೇಶಗಳ ಭೇಟಿಗೆ 517 ಕೋಟಿ ವೆಚ್ಚ: ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರ

ಪ್ರಧಾನಿ ಮೋದಿಯ 58 ದೇಶಗಳ ಭೇಟಿಗೆ 517 ಕೋಟಿ ವೆಚ್ಚ: ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರ

2019 ರ ನವೆಂಬರ್ 13-14 ರಂದು ಬ್ರೆಜಿಲ್‌ನಲ್ಲಿ ನಡೆದ ಬ್ರಿಕ್ಸ್ ರಾಷ್ಟ್ರಗಳ ಶೃಂಗ ಸಭೆಗೆ ಭಾಗಿಯಾಗಿರುವುದು ಕೊನೆಯ ಪ್ರವಾಸವಾಗಿದೆ

- Advertisement -
- Advertisement -

2015 ರಿಂದ ಇದುವರೆಗೆ ಪ್ರಧಾನಿ ನರೇಂದ್ರ ಮೋದಿ ಅವರು 58 ದೇಶಗಳಿಗೆ ಭೇಟಿ ನೀಡಿದ್ದಾರೆ. ಇದಕ್ಕಾಗಿ ಪ್ರಯಾಣ ವೆಚ್ಚ ಸೇರಿ 517 ಕೋಟಿ ರೂಪಾಯಿ ವೆಚ್ಚವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಖಾತೆಯ ರಾಜ್ಯ ಸಚಿವ ವಿ.ಮುರುಳೀಧರನ್ ರಾಜ್ಯಸಭೆಗೆ ಹೇಳಿಕೆ ನೀಡಿದ್ದಾರೆ ಎಂದು ದಿವೈರ್.ಕಾಂ ವರದಿ ಮಾಡಿದೆ.

ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (ಎನ್.ಸಿ.ಪಿ.)ದ ಸಂಸದ ಫೌಜಿಯಾ ಖಾನ್ ಅವರ ಕೇಳಿದ ಲಿಖಿತ ಪ್ರಶ್ನೆಗೆ ವಿವರ ನೀಡಿರುವ ಸಚಿವರು ಪ್ರಧಾನಿ ವಿದೇಶಗಳ ಭೇಟಿಗೆ ಒಟ್ಟು 517.82 ಕೋಟಿ ರೂಪಾಯಿ ವೆಚ್ಚವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಅಂಫಾನ್ ಹಾನಿಯ ಸಮೀಕ್ಷೆ: 83 ದಿನಗಳ ನಂತರ ಮೊದಲ ಪ್ರವಾಸ ಮಾಡಿದ ಮೋದಿ

ಸಚಿವ ಮುರುಳೀಧರನ್ ನೀಡಿರುವ ಮಾಹಿತಿ ಪ್ರಕಾರ, “ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಾ, ರಷ್ಯಾ, ಚೀನಾ ದೇಶಗಳಿಗೆ ಇತ್ತೀಚೆಗೆ ಭೇಟಿ ನೀಡಿದ್ದಾರೆ. ಈ ದೇಶಗಳಿಗೆ 5 ಬಾರಿ ಭೇಟಿ ಕೊಟ್ಟಿದ್ದಾರೆ. ಸಿಂಗಾಪುರ, ಜರ್ಮನಿ, ಫ್ರಾನ್ಸ್, ಶ್ರೀಲಂಕಾ, ಯುನೈಟೆಡ್ ಅರಬ್ ಎಮಿರೇಟ್ ದೇಶಗಳಿಗೆ ಹಲವು ಬಾರಿ ಭೇಟಿ ನೀಡಿದ್ದಾರೆ”

ಪ್ರಧಾನಿ ಮೋದಿ ಅವರು ನವೆಂಬರ್ 13-14 2019 ರಂದು ಬ್ರೆಜಿಲ್ ನಲ್ಲಿ ನಡೆದ ಬ್ರಿಕ್ಸ್ ರಾಷ್ಟ್ರಗಳ ಶೃಂಗ ಸಭೆಗೆ ಭಾಗಿಯಾಗಿವುದು ಕೊನೆಯ ಭೇಟಿಯಾಗಿದೆ ಎಂದು ದಿವೈರ್ ವರದಿ ಮಾಡಿದೆ.

ಈ ಭೇಟಿಯಿಂದ ಬ್ರಿಕ್ಸ್ ದೇಶಗಳೊಂದಿಗಿನ ವ್ಯಾಪಾರ ಮತ್ತು ಹೂಡಿಕೆ, ತಂತ್ರಜ್ಞಾನ, ರಕ್ಷಣಾ ಸಹಭಾಗಿತ್ವ ಮತ್ತು ಜನರ ಪರಸ್ಪರ ಸಂಪರ್ಕಕ್ಕೆ ಮತ್ತು ಸಂಬಂಧ ಬಲಗೊಳ್ಳಲು ಸಹಕಾರಿಯಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೋನಾ ವೈರಸ್ ಭೀತಿ: ಯುರೋಪ್‌ ಪ್ರವಾಸ ರದ್ದುಗೊಳಿಸಿದ ನರೇಂದ್ರ ಮೋದಿ

ವಿದೇಶ ಪ್ರವಾಸ ಭಾರತದ ರಾಷ್ಟ್ರೀಯ ಅಭಿವೃದ್ಧಿ, ಆರ್ಥಿಕ ಬೆಳವಣಿಗೆಯ ಪ್ರಚಾರ ಮಾಡಲು ಮತ್ತು ದೇಶದ ಜನರ ಕಲ್ಯಾಣಕ್ಕೆ ಅನುಕೂಲವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ವಾತಾವರಣ ಬದಲಾವಣೆ, ಟ್ರಾನ್ಸ್ ರಾಷ್ಟ್ರೀಯ ಅಪರಾಧ ಮತ್ತು ಭಯೋತ್ಪಾದನೆಯ ಕುರಿತು ವಿಶ್ವದ ಬೇರೆ ಬೇರೆ ದೇಶಗಳಲ್ಲಿ ನಡೆದ ಬಹುಪಕ್ಷೀಯ ಮಟ್ಟದ ಸಭೆಗಳಲ್ಲಿ ಭಾರತ ಗಮನ ಸೆಳೆಯುವಂತಹ ಪ್ರಯತ್ನ ಮಾಡಿ ಯಶಸ್ವಿಯಾಗಿದೆ ಎಂದು ತಿಳಿಸಿದ್ದಾರೆ.

ದ್ವಿಪಕ್ಷೀಯ, ಪ್ರಾದೇಶಿಕ ಮಟ್ಟದಲ್ಲೂ ವ್ಯಾಪಾರ, ಹೂಡಿಕೆ, ತಂತ್ರಜ್ಞಾನ, ಮಾರಿಟೈಮ್, ಬಾಹ್ಯಾಕಾಶ, ರಕ್ಷಣಾ ಸಹಭಾಗಿತ್ವಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಈ ಸಂಬಂಧ ಭಾರತ ತನ್ನ ದೃಷ್ಟಿಕೋನವನ್ನು ವಿಶ್ವಕ್ಕೆ ಮನವರಿಕೆ ಮಾಡಿಕೊಟ್ಟಿದೆ.

ಚೀನಾಕ್ಕೆ ಪ್ರಧಾನಿ ಭೇಟಿ ನೀಡಿದ ಸಂದರ್ಭಧಲ್ಲಿ ನವದೆಹಲಿ ಮತ್ತು ಬೀಜಿಂಗ್ 50 ಒಡಂಬಡಿಕೆಗಳಿಗೆ ಸಹಿ ಹಾಕಿವೆ ಎಂದು ಉತ್ತರ ನೀಡಿರುವುದಾಗಿ ದಿವೈರ್ ವರದಿ ಮಾಡಿದೆ.

ಇದನ್ನೂ ಓದಿ: ಅತಿಹೆಚ್ಚು ವಿದೇಶಿ ಪ್ರವಾಸ ಮಾಡಿದ್ದು ಮೋದಿಯಲ್ಲ, ಮನಮೋಹನ್ ಸಿಂಗ್: ಅಮಿತ್ ಶಾ ಹೇಳಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...