Homeಮುಖಪುಟಪ್ರಧಾನಿ ಮೋದಿಯ 58 ದೇಶಗಳ ಭೇಟಿಗೆ 517 ಕೋಟಿ ವೆಚ್ಚ: ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರ

ಪ್ರಧಾನಿ ಮೋದಿಯ 58 ದೇಶಗಳ ಭೇಟಿಗೆ 517 ಕೋಟಿ ವೆಚ್ಚ: ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರ

2019 ರ ನವೆಂಬರ್ 13-14 ರಂದು ಬ್ರೆಜಿಲ್‌ನಲ್ಲಿ ನಡೆದ ಬ್ರಿಕ್ಸ್ ರಾಷ್ಟ್ರಗಳ ಶೃಂಗ ಸಭೆಗೆ ಭಾಗಿಯಾಗಿರುವುದು ಕೊನೆಯ ಪ್ರವಾಸವಾಗಿದೆ

- Advertisement -
- Advertisement -

2015 ರಿಂದ ಇದುವರೆಗೆ ಪ್ರಧಾನಿ ನರೇಂದ್ರ ಮೋದಿ ಅವರು 58 ದೇಶಗಳಿಗೆ ಭೇಟಿ ನೀಡಿದ್ದಾರೆ. ಇದಕ್ಕಾಗಿ ಪ್ರಯಾಣ ವೆಚ್ಚ ಸೇರಿ 517 ಕೋಟಿ ರೂಪಾಯಿ ವೆಚ್ಚವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಖಾತೆಯ ರಾಜ್ಯ ಸಚಿವ ವಿ.ಮುರುಳೀಧರನ್ ರಾಜ್ಯಸಭೆಗೆ ಹೇಳಿಕೆ ನೀಡಿದ್ದಾರೆ ಎಂದು ದಿವೈರ್.ಕಾಂ ವರದಿ ಮಾಡಿದೆ.

ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (ಎನ್.ಸಿ.ಪಿ.)ದ ಸಂಸದ ಫೌಜಿಯಾ ಖಾನ್ ಅವರ ಕೇಳಿದ ಲಿಖಿತ ಪ್ರಶ್ನೆಗೆ ವಿವರ ನೀಡಿರುವ ಸಚಿವರು ಪ್ರಧಾನಿ ವಿದೇಶಗಳ ಭೇಟಿಗೆ ಒಟ್ಟು 517.82 ಕೋಟಿ ರೂಪಾಯಿ ವೆಚ್ಚವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಅಂಫಾನ್ ಹಾನಿಯ ಸಮೀಕ್ಷೆ: 83 ದಿನಗಳ ನಂತರ ಮೊದಲ ಪ್ರವಾಸ ಮಾಡಿದ ಮೋದಿ

ಸಚಿವ ಮುರುಳೀಧರನ್ ನೀಡಿರುವ ಮಾಹಿತಿ ಪ್ರಕಾರ, “ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಾ, ರಷ್ಯಾ, ಚೀನಾ ದೇಶಗಳಿಗೆ ಇತ್ತೀಚೆಗೆ ಭೇಟಿ ನೀಡಿದ್ದಾರೆ. ಈ ದೇಶಗಳಿಗೆ 5 ಬಾರಿ ಭೇಟಿ ಕೊಟ್ಟಿದ್ದಾರೆ. ಸಿಂಗಾಪುರ, ಜರ್ಮನಿ, ಫ್ರಾನ್ಸ್, ಶ್ರೀಲಂಕಾ, ಯುನೈಟೆಡ್ ಅರಬ್ ಎಮಿರೇಟ್ ದೇಶಗಳಿಗೆ ಹಲವು ಬಾರಿ ಭೇಟಿ ನೀಡಿದ್ದಾರೆ”

ಪ್ರಧಾನಿ ಮೋದಿ ಅವರು ನವೆಂಬರ್ 13-14 2019 ರಂದು ಬ್ರೆಜಿಲ್ ನಲ್ಲಿ ನಡೆದ ಬ್ರಿಕ್ಸ್ ರಾಷ್ಟ್ರಗಳ ಶೃಂಗ ಸಭೆಗೆ ಭಾಗಿಯಾಗಿವುದು ಕೊನೆಯ ಭೇಟಿಯಾಗಿದೆ ಎಂದು ದಿವೈರ್ ವರದಿ ಮಾಡಿದೆ.

ಈ ಭೇಟಿಯಿಂದ ಬ್ರಿಕ್ಸ್ ದೇಶಗಳೊಂದಿಗಿನ ವ್ಯಾಪಾರ ಮತ್ತು ಹೂಡಿಕೆ, ತಂತ್ರಜ್ಞಾನ, ರಕ್ಷಣಾ ಸಹಭಾಗಿತ್ವ ಮತ್ತು ಜನರ ಪರಸ್ಪರ ಸಂಪರ್ಕಕ್ಕೆ ಮತ್ತು ಸಂಬಂಧ ಬಲಗೊಳ್ಳಲು ಸಹಕಾರಿಯಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೋನಾ ವೈರಸ್ ಭೀತಿ: ಯುರೋಪ್‌ ಪ್ರವಾಸ ರದ್ದುಗೊಳಿಸಿದ ನರೇಂದ್ರ ಮೋದಿ

ವಿದೇಶ ಪ್ರವಾಸ ಭಾರತದ ರಾಷ್ಟ್ರೀಯ ಅಭಿವೃದ್ಧಿ, ಆರ್ಥಿಕ ಬೆಳವಣಿಗೆಯ ಪ್ರಚಾರ ಮಾಡಲು ಮತ್ತು ದೇಶದ ಜನರ ಕಲ್ಯಾಣಕ್ಕೆ ಅನುಕೂಲವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ವಾತಾವರಣ ಬದಲಾವಣೆ, ಟ್ರಾನ್ಸ್ ರಾಷ್ಟ್ರೀಯ ಅಪರಾಧ ಮತ್ತು ಭಯೋತ್ಪಾದನೆಯ ಕುರಿತು ವಿಶ್ವದ ಬೇರೆ ಬೇರೆ ದೇಶಗಳಲ್ಲಿ ನಡೆದ ಬಹುಪಕ್ಷೀಯ ಮಟ್ಟದ ಸಭೆಗಳಲ್ಲಿ ಭಾರತ ಗಮನ ಸೆಳೆಯುವಂತಹ ಪ್ರಯತ್ನ ಮಾಡಿ ಯಶಸ್ವಿಯಾಗಿದೆ ಎಂದು ತಿಳಿಸಿದ್ದಾರೆ.

ದ್ವಿಪಕ್ಷೀಯ, ಪ್ರಾದೇಶಿಕ ಮಟ್ಟದಲ್ಲೂ ವ್ಯಾಪಾರ, ಹೂಡಿಕೆ, ತಂತ್ರಜ್ಞಾನ, ಮಾರಿಟೈಮ್, ಬಾಹ್ಯಾಕಾಶ, ರಕ್ಷಣಾ ಸಹಭಾಗಿತ್ವಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಈ ಸಂಬಂಧ ಭಾರತ ತನ್ನ ದೃಷ್ಟಿಕೋನವನ್ನು ವಿಶ್ವಕ್ಕೆ ಮನವರಿಕೆ ಮಾಡಿಕೊಟ್ಟಿದೆ.

ಚೀನಾಕ್ಕೆ ಪ್ರಧಾನಿ ಭೇಟಿ ನೀಡಿದ ಸಂದರ್ಭಧಲ್ಲಿ ನವದೆಹಲಿ ಮತ್ತು ಬೀಜಿಂಗ್ 50 ಒಡಂಬಡಿಕೆಗಳಿಗೆ ಸಹಿ ಹಾಕಿವೆ ಎಂದು ಉತ್ತರ ನೀಡಿರುವುದಾಗಿ ದಿವೈರ್ ವರದಿ ಮಾಡಿದೆ.

ಇದನ್ನೂ ಓದಿ: ಅತಿಹೆಚ್ಚು ವಿದೇಶಿ ಪ್ರವಾಸ ಮಾಡಿದ್ದು ಮೋದಿಯಲ್ಲ, ಮನಮೋಹನ್ ಸಿಂಗ್: ಅಮಿತ್ ಶಾ ಹೇಳಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...