Homeಮುಖಪುಟದೆಹಲಿಯಲ್ಲಿ ದಾಖಲೆಯ 52.3 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲು

ದೆಹಲಿಯಲ್ಲಿ ದಾಖಲೆಯ 52.3 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲು

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು 52.3 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದ್ದು, ದೆಹಲಿಯ ಮುಂಗೇಶ್‌ಪುರದ ಹವಾಮಾನ ಕೇಂದ್ರವು ಮಧ್ಯಾಹ್ನ 2.30ಕ್ಕೆ 52.3 ಡಿಗ್ರಿ ಸೆಲ್ಸಿಯಸ್‌ನೊಂದಿಗೆ ಭಾರತದ ಇದುವರೆಗಿನ ಅತ್ಯಂತ ಬಿಸಿಯಾದ ದಿನವನ್ನು ದಾಖಲಿಸಿದೆ. ಭಾರತದಲ್ಲಿ ಇದುವರೆಗೆ ದಾಖಲಾದ ಅತ್ಯಧಿಕ ತಾಪಮಾನ ಇದಾಗಿದೆ.

ದೆಹಲಿಯಲ್ಲಿ ಇಂದು ತಾಪಮಾನವು ನಿರೀಕ್ಷೆಗಿಂತ 9 ಡಿಗ್ರಿಗಿಂತ ಹೆಚ್ಚಿತ್ತು, 2002ರಲ್ಲಿ ಅತಿಹೆಚ್ಚು ಎಂದರೆ ದಾಖಲೆಯ 49.2 ಡಿಗ್ರಿ ಸೆಲ್ಸಿಯಸ್‌ನಷ್ಟು ತಾಪಮಾನ ದಾಖಲಾಗಿತ್ತು. ಇಂದಿನ ತಾಪಮಾನವು 52.3 ಡಿಗ್ರಿ ಸೆಲ್ಸಿಯಸ್‌ನೊಂದಿಗೆ ಈ ದಾಖಲೆಯನ್ನು ಮೀರಿಸಿದೆ.

ಭಾರತೀಯ ಹವಾಮಾನ ಇಲಾಖೆ (IMD) ತಾಪಮಾನದ ಹೆಚ್ಚಳದ ಹಿನ್ನೆಲೆ ದೆಹಲಿಗೆ ರೆಡ್ ಅಲರ್ಟ್ ಆರೋಗ್ಯ ಸೂಚನೆಯನ್ನು ಬಿಡುಗಡೆ ಮಾಡಿದೆ. ದೆಹಲಿಯಲ್ಲಿ ಅಂದಾಜು 30 ಮಿಲಿಯನ್‌ಗಿಂತಲೂ ಹೆಚ್ಚು ಜನಸಂಖ್ಯೆ ಇದ್ದು, ದುರ್ಬಲ ಜನರು ಸೇರಿದಂತೆ ಎಲ್ಲಾ ವಯಸ್ಸಿನ ಜನರ ಬಗೆಗೆ ತೀವ್ರ ಕಾಳಜಿಯ ಅಗತ್ಯವಿದೆ ಎಂದು ಎಚ್ಚರಿಸಿದೆ.

ಭಾರತದಲ್ಲಿ ಬೇಸಿಗೆಯ ಉಷ್ಣತೆಯಲ್ಲಿ ಹೆಚ್ಚಳವು ಹೊಸದೇನಲ್ಲ, ಆದರೆ ವೈಜ್ಞಾನಿಕ ಸಂಶೋಧನೆಯು ಹವಾಮಾನ ಬದಲಾವಣೆಯು ಶಾಖದ ಅಲೆಗಳು ಹೆಚ್ಚು ತೀವ್ರವಾಗಲು ಕಾರಣವಾಗುತ್ತದೆ ಎಂದು ಕಂಡು ಹಿಡಿದಿದೆ. ಬಿಸಿಲಿನ ತಾಪಮಾನದ ಹೆಚ್ಚಳದಿಂದಾಗಿ ದೆಹಲಿಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಳವಾಗಿದ್ದು, 8,302 ಮೆಗಾವ್ಯಾಟ್ ವಿದ್ಯುತ್‌ ಬಳಕೆಯಾಗಿದೆ. ವಿದ್ಯುತ್‌ಗೆ ಸಾರ್ವಕಾಲಿಕವಾಗಿ ಬೇಡಿಕೆ ಹೆಚ್ಚಳವಾಗಿದೆ, ಬಿಸಿಲ ಬೇಗೆಗೆ ಜನರು ಹವಾ ನಿಯಂತ್ರಿತ ಉಪಕರಣಗಳ ಮೊರೆ ಹೋಗಿದ್ದಾರೆ ಎಂದು ವಿದ್ಯುತ್ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿಯನ್ನು ಹೊರತುಪಡಿಸಿದರೆ ಮರುಭೂಮಿ ರಾಜ್ಯ ರಾಜಸ್ಥಾನದಲ್ಲಿ ಅತ್ಯಂತ ಹೆಚ್ಚಿನ ತಾಪಮಾನ ವರದಿಯಾಗಿದೆ. ಅಲ್ಲಿ 51 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ದಕ್ಷಿಣ ರಾಜಸ್ಥಾನದ ಬಾರ್ಮರ್, ಜೋಧ್‌ಪುರ್, ಉದಯಪುರ, ಸಿರೋಹಿ ಮತ್ತು ಜಲೋರ್ ಜಿಲ್ಲೆಗಳಲ್ಲಿ ಇಂದು ತಾಪಮಾನದಲ್ಲಿ 4 ಡಿಗ್ರಿ ಸೆಲ್ಸಿಯಸ್‌ನಷ್ಟು ಕುಸಿತ ದಾಖಲಾಗಿದೆ. ಇದು ವಾಯುವ್ಯ ಭಾರತದಲ್ಲಿ ಶಾಖದ ಅಲೆಗಳ ಕುಸಿತದ ಆರಂಭವನ್ನು ಸೂಚಿಸುತ್ತದೆ. NWP ದತ್ತಾಂಶವು, ಗುರುವಾರದಿಂದ ಬಂಗಾಳಕೊಲ್ಲಿಯಿಂದ ತೇವಾಂಶವುಳ್ಳ ಗಾಳಿಯು ಬೀಸಲಿದ್ದು, ಉತ್ತರ ಪ್ರದೇಶದ ಗರಿಷ್ಠ ತಾಪಮಾನದಲ್ಲಿ ಕ್ರಮೇಣ ಇಳಿಕೆಗೆ ಕಾರಣವಾಗಬಹುದು ಎಂದು ಹೇಳಿದೆ.

ಇದನ್ನು ಓದಿ: ಮಧ್ಯಪ್ರದೇಶ: ಬುಡಕಟ್ಟು ಸಮುದಾಯದ ವ್ಯಕ್ತಿಯೋರ್ವನಿಗೆ ಥಳಿಸಿ ಮೂತ್ರ ಕುಡಿಯುವಂತೆ ಬಲವಂತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...