Homeಮುಖಪುಟಪ್ಯಾರಸಿಟಮಲ್ ಸೇರಿದಂತೆ 52 ಔಷಧಿಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ

ಪ್ಯಾರಸಿಟಮಲ್ ಸೇರಿದಂತೆ 52 ಔಷಧಿಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ

- Advertisement -
- Advertisement -

ಭಾರತದ ಉನ್ನತ ಔಷಧ ನಿಯಂತ್ರಣ ಸಂಸ್ಥೆ, ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (ಸಿಡಿಎಸ್‌ಸಿಒ) ನಡೆಸಿದ ಪರೀಕ್ಷೆಯಲ್ಲಿ ಜನಪ್ರಿಯ ಔಷಧಿಗಳಾದ ಪ್ಯಾರಸಿಟಮಲ್, ಪ್ಯಾಂಟೊಪ್ರಜೋಲ್
ಮತ್ತು ಹಲವಾರು ಆಂಟಿ ಬಯೋಟಿಕ್‌ಗಳು ಒಳಗೊಂಡಂತೆ ಸುಮಾರು 50 ಔಷಧಿಗಳು ಗುಣಮಟ್ಟದ ಮಾನದಂಡಗಳನ್ನು ಪೂರೈಸಲು ವಿಫಲವಾಗಿವೆ.

ಇವುಗಳಲ್ಲಿ ಸುಮಾರು 22 ಔಷಧಿಗಳನ್ನು ಹಿಮಾಚಲ ಪ್ರದೇಶದಲ್ಲಿ ಉತ್ಪಾದಿಸಲಾಗಿದೆ ಎಂದು ಸಿಡಿಎಸ್‌ಸಿಒ ಮೇ 2024ರಲ್ಲಿ ನಡೆಸಿದ ಪರೀಕ್ಷೆಯನ್ನು ಉಲ್ಲೇಖಿಸಿ ಎಚ್ಚರಿಕೆ ನೀಡಿದೆ.

ಜೈಪುರ, ಹೈದರಾಬಾದ್, ವಘೋಡಿಯಾ, ವಡೋದರಾ, ಆಂಧ್ರ ಪ್ರದೇಶ ಮತ್ತು ಇಂದೋರ್‌ನಂತಹ ಇತರ ಸ್ಥಳಗಳಿಂದ ಸಂಗ್ರಹಿಸಿದ ಔ‍ಷಧಗಳ ಮಾದರಿಯಲ್ಲೂ ಗುಣಮಟ್ಟದ ಕೊರತೆ ಕಂಡು ಬಂದಿದೆ. ಜೂನ್ 20 ರಂದು ಬಿಡುಗಡೆಯಾದ ಡ್ರಗ್ ಅಲರ್ಟ್ ಪ್ರಕಾರ, ಒಟ್ಟು 52 ಔಷಧ ಮಾದರಿಗಳು ಸಿಡಿಎಸ್‌ಸಿಒ ನಡೆಸಿದ ಗುಣಮಟ್ಟದ ಪರೀಕ್ಷೆಗಳಲ್ಲಿ ಉತ್ತೀರ್ಣಗೊಂಡಿಲ್ಲ.

ಸಾಮಾನ್ಯ ಜ್ವರ, ಮೈಕೈ ನೋವಿಗೆ ಜನರು ಬಳಸುವ ಪ್ಯಾರಸಿಟಮಲ್ ಮಾತ್ರೆಗಳು ಗುಣಮಟ್ಟದ ಮಾನದಂಡಗಳನ್ನು ಪೂರೈಸಲು ವಿಫಲವಾಗಿದೆ. ಇದರಂತೆ ಜನರು ವೈದ್ಯರ ನಿರ್ದೇಶನಗಳಿಲ್ಲದೆ ಮೆಡಿಕಲ್‌ನಿಂದ ಪಡೆದು ಬಳಸುವ ಅನೇಕ ಔಷಧಿಗಳು ಕೂಡ ಗುಣಮಟ್ಟದಿಂದ ಕೂಡಿಲ್ಲ ಎಂಬುವುದು ತಿಳಿದು ಬಂದಿದೆ. ವೈದ್ಯಕೀಯ ಸಮುದಾಯ ಮತ್ತು ಜನರಿಗೆ ಈ ಬಗ್ಗೆ ಸಿಡಿಎಸ್‌ಸಿಒ ಎಚ್ಚರಿಕೆ ನೀಡಿದೆ.

ಮಧ್ಯ ಪ್ರದೇಶದ ಉಜ್ಜಯಿನಿ ಮೂಲದ ಆಸ್ಕೋನ್ ಹೆಲ್ತ್‌ಕೇರ್‌ನಲ್ಲಿ ಕೆಳದರ್ಜೆಯ 500 ಎಂಜಿ ಪ್ಯಾರಸಿಟಮಲ್ ಮಾತ್ರೆಗಳನ್ನು ತಯಾರಿಸಲಾಗಿದೆ. ಆಸ್ಕೋನ್ ಹೆಲ್ತ್‌ಕೇರ್‌ನ ಅಧಿಕೃತ ವೆಬ್‌ಸೈಟ್ ಕಂಪನಿಯು ಅಂತಿಮ ಔಷಧೀಯ ಡೋಸೇಜ್ ಫಾರ್ಮ್‌ಗಳನ್ನು ತಯಾರಿಸುತ್ತದೆ ಎಂದು ಹೇಳುತ್ತದೆ.

ಗುಣಮಟ್ಟವಿಲ್ಲದ ಔಷಧಗಳ ಬಗ್ಗೆ ಹೆಚ್ಚುತ್ತಿರುವ ಆತಂಕ

ರೋಗ ಗ್ರಸ್ತವಾಗುವಿಕೆಗಳು ಮತ್ತು ಆತಂಕದ ಅಸ್ವಸ್ಥತೆಗಳಿಗೆ ಬಳಸುವ ಕ್ಲೋನಾಜೆಪಮ್ ಮಾತ್ರೆಗಳು, ನೋವು ನಿವಾರಕ ಡಿಕ್ಲೋಫೆನಾಕ್, ಆಂಟಿ-ಹೈಪರ್ಟೆನ್ಷನ್ ಡ್ರಗ್ ಟೆಲ್ಮಿಸಾರ್ಟನ್, ಉಸಿರಾಟದ ಕಾಯಿಲೆಗಳಿಗೆ ಬಳಸುವ ಆಂಬ್ರೋಕ್ಸೋಲ್, ಆಂಟಿಫಂಗಲ್ ಫ್ಲುಕೋನಜೋಲ್ ಮತ್ತು ವಿವಿಧ ಮಲ್ಟಿವಿಟಮಿನ್ ಮತ್ತು ಕ್ಯಾಲ್ಸಿಯಂ ಮಾತ್ರೆಗಳು ಕಳಪೆ ಗುಣಮಟ್ಟದ ಔಷಧಿಗಳ ಪಟ್ಟಿಯಲ್ಲಿ ಸೇರಿವೆ.

ಭಾರತದಲ್ಲಿ ಉತ್ಪಾದಿಸಲ್ಪಟ್ಟ ಕೆಮ್ಮಿನ ಸಿರಪ್‌ಗಳು ಸಾಗರೋತ್ತರ ಮಕ್ಕಳ ಸಾವಿಗೆ ಕಾರಣವಾಗಿರುವ ನಡುವೆ ಅನೇಕ ಔಷಧಿಗಳು ಗುಟಮಟ್ಟದಿಂದ ಕೂಡಿಲ್ಲ ಎಂಬುವುದು ಬಹಿರಂಗವಾಗಿದೆ. ಅಂಬಾಲಾದಲ್ಲಿ ಉತ್ಪಾದಿಸಲಾದ ಟೆರ್ಬುಟಲಿನ್ ಸಲ್ಫೇಟ್, ಬ್ರೋಮ್ಹೆಕ್ಸಿನ್ ಹೈಡ್ರೋಕ್ಲೋರೈಡ್, ಗ್ವೈಫೆನೆಸಿನ್ ಮತ್ತು ಮೆಂಥಾಲ್ ಸಿರಪ್ ಅನ್ನು ಒಳಗೊಂಡಿರುವ ಕೆಮ್ಮಿನ ಸಿರಪ್‌ಗಳೂ ಕೂಡ ಗುಣಮಟ್ಟದ ಕೊರತೆಯ ಔಷಧಿಗಳ ಪಟ್ಟಿಯಲ್ಲಿ ಸೇರಿವೆ. ಇದು ಆತಂಕ ಹೆಚ್ಚಿಸಿದೆ.

ಮೆಹಂದಿ ಬಗ್ಗೆಯೂ ಎಚ್ಚರಿಕೆ ನೀಡಿದ ಸಿಡಿಎಸ್‌ಸಿಒ

ಹೆಣ್ಣು ಮಕ್ಕಳು ಬಳಸುವ ಮೆಹಂದಿಯ ಕುರಿತು ಕೂಡ ಸಿಡಿಎಸ್‌ಸಿಒ ಎಚ್ಚರಿಕೆ ನೀಡಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಲಭ್ಯವಿರುವ ಬಹುತೇಕ ಮೆಹಂದಿ ಟ್ಯೂಬ್‌ಗಳು ಸೌಂದರ್ಯವರ್ಧಕಗಳ ವರ್ಗಕ್ಕೆ ನಿಗದಿಪಡಿಸಿದ ಮಾನದಂಡಗಳನ್ನು ಪೂರೈಸುತ್ತಿಲ್ಲ. ಅವುಗಳು ಕಳಪೆ ಗುಣಮಟ್ಟದ್ದಾಗಿದ್ದು, ಹಾನಿಕಾರಕ ರಾಸಾಯನಿಕಗಳಿಂದ ಕೂಡಿದೆ. ಅಂತಹ ಮೆಹಂದಿಗಳ ಬಳಕೆ ಚರ್ಮ ಮತ್ತು ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎಂದು ಸಿಡಿಎಸ್‌ಸಿಒ ಹೇಳಿದೆ.

ಇದನ್ನೂ ಓದಿ : ವಿವಾಹಿತ ಮಹಿಳೆಯರ ನೇಮಕಕ್ಕೆ ನಿರಾಕರಿಸುತ್ತಿರುವ ‘ಫಾಕ್ಸ್‌ಕಾನ್’: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...