Homeಮುಖಪುಟಪ್ಯಾರಸಿಟಮಲ್ ಸೇರಿದಂತೆ 52 ಔಷಧಿಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ

ಪ್ಯಾರಸಿಟಮಲ್ ಸೇರಿದಂತೆ 52 ಔಷಧಿಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ

- Advertisement -
- Advertisement -

ಭಾರತದ ಉನ್ನತ ಔಷಧ ನಿಯಂತ್ರಣ ಸಂಸ್ಥೆ, ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (ಸಿಡಿಎಸ್‌ಸಿಒ) ನಡೆಸಿದ ಪರೀಕ್ಷೆಯಲ್ಲಿ ಜನಪ್ರಿಯ ಔಷಧಿಗಳಾದ ಪ್ಯಾರಸಿಟಮಲ್, ಪ್ಯಾಂಟೊಪ್ರಜೋಲ್
ಮತ್ತು ಹಲವಾರು ಆಂಟಿ ಬಯೋಟಿಕ್‌ಗಳು ಒಳಗೊಂಡಂತೆ ಸುಮಾರು 50 ಔಷಧಿಗಳು ಗುಣಮಟ್ಟದ ಮಾನದಂಡಗಳನ್ನು ಪೂರೈಸಲು ವಿಫಲವಾಗಿವೆ.

ಇವುಗಳಲ್ಲಿ ಸುಮಾರು 22 ಔಷಧಿಗಳನ್ನು ಹಿಮಾಚಲ ಪ್ರದೇಶದಲ್ಲಿ ಉತ್ಪಾದಿಸಲಾಗಿದೆ ಎಂದು ಸಿಡಿಎಸ್‌ಸಿಒ ಮೇ 2024ರಲ್ಲಿ ನಡೆಸಿದ ಪರೀಕ್ಷೆಯನ್ನು ಉಲ್ಲೇಖಿಸಿ ಎಚ್ಚರಿಕೆ ನೀಡಿದೆ.

ಜೈಪುರ, ಹೈದರಾಬಾದ್, ವಘೋಡಿಯಾ, ವಡೋದರಾ, ಆಂಧ್ರ ಪ್ರದೇಶ ಮತ್ತು ಇಂದೋರ್‌ನಂತಹ ಇತರ ಸ್ಥಳಗಳಿಂದ ಸಂಗ್ರಹಿಸಿದ ಔ‍ಷಧಗಳ ಮಾದರಿಯಲ್ಲೂ ಗುಣಮಟ್ಟದ ಕೊರತೆ ಕಂಡು ಬಂದಿದೆ. ಜೂನ್ 20 ರಂದು ಬಿಡುಗಡೆಯಾದ ಡ್ರಗ್ ಅಲರ್ಟ್ ಪ್ರಕಾರ, ಒಟ್ಟು 52 ಔಷಧ ಮಾದರಿಗಳು ಸಿಡಿಎಸ್‌ಸಿಒ ನಡೆಸಿದ ಗುಣಮಟ್ಟದ ಪರೀಕ್ಷೆಗಳಲ್ಲಿ ಉತ್ತೀರ್ಣಗೊಂಡಿಲ್ಲ.

ಸಾಮಾನ್ಯ ಜ್ವರ, ಮೈಕೈ ನೋವಿಗೆ ಜನರು ಬಳಸುವ ಪ್ಯಾರಸಿಟಮಲ್ ಮಾತ್ರೆಗಳು ಗುಣಮಟ್ಟದ ಮಾನದಂಡಗಳನ್ನು ಪೂರೈಸಲು ವಿಫಲವಾಗಿದೆ. ಇದರಂತೆ ಜನರು ವೈದ್ಯರ ನಿರ್ದೇಶನಗಳಿಲ್ಲದೆ ಮೆಡಿಕಲ್‌ನಿಂದ ಪಡೆದು ಬಳಸುವ ಅನೇಕ ಔಷಧಿಗಳು ಕೂಡ ಗುಣಮಟ್ಟದಿಂದ ಕೂಡಿಲ್ಲ ಎಂಬುವುದು ತಿಳಿದು ಬಂದಿದೆ. ವೈದ್ಯಕೀಯ ಸಮುದಾಯ ಮತ್ತು ಜನರಿಗೆ ಈ ಬಗ್ಗೆ ಸಿಡಿಎಸ್‌ಸಿಒ ಎಚ್ಚರಿಕೆ ನೀಡಿದೆ.

ಮಧ್ಯ ಪ್ರದೇಶದ ಉಜ್ಜಯಿನಿ ಮೂಲದ ಆಸ್ಕೋನ್ ಹೆಲ್ತ್‌ಕೇರ್‌ನಲ್ಲಿ ಕೆಳದರ್ಜೆಯ 500 ಎಂಜಿ ಪ್ಯಾರಸಿಟಮಲ್ ಮಾತ್ರೆಗಳನ್ನು ತಯಾರಿಸಲಾಗಿದೆ. ಆಸ್ಕೋನ್ ಹೆಲ್ತ್‌ಕೇರ್‌ನ ಅಧಿಕೃತ ವೆಬ್‌ಸೈಟ್ ಕಂಪನಿಯು ಅಂತಿಮ ಔಷಧೀಯ ಡೋಸೇಜ್ ಫಾರ್ಮ್‌ಗಳನ್ನು ತಯಾರಿಸುತ್ತದೆ ಎಂದು ಹೇಳುತ್ತದೆ.

ಗುಣಮಟ್ಟವಿಲ್ಲದ ಔಷಧಗಳ ಬಗ್ಗೆ ಹೆಚ್ಚುತ್ತಿರುವ ಆತಂಕ

ರೋಗ ಗ್ರಸ್ತವಾಗುವಿಕೆಗಳು ಮತ್ತು ಆತಂಕದ ಅಸ್ವಸ್ಥತೆಗಳಿಗೆ ಬಳಸುವ ಕ್ಲೋನಾಜೆಪಮ್ ಮಾತ್ರೆಗಳು, ನೋವು ನಿವಾರಕ ಡಿಕ್ಲೋಫೆನಾಕ್, ಆಂಟಿ-ಹೈಪರ್ಟೆನ್ಷನ್ ಡ್ರಗ್ ಟೆಲ್ಮಿಸಾರ್ಟನ್, ಉಸಿರಾಟದ ಕಾಯಿಲೆಗಳಿಗೆ ಬಳಸುವ ಆಂಬ್ರೋಕ್ಸೋಲ್, ಆಂಟಿಫಂಗಲ್ ಫ್ಲುಕೋನಜೋಲ್ ಮತ್ತು ವಿವಿಧ ಮಲ್ಟಿವಿಟಮಿನ್ ಮತ್ತು ಕ್ಯಾಲ್ಸಿಯಂ ಮಾತ್ರೆಗಳು ಕಳಪೆ ಗುಣಮಟ್ಟದ ಔಷಧಿಗಳ ಪಟ್ಟಿಯಲ್ಲಿ ಸೇರಿವೆ.

ಭಾರತದಲ್ಲಿ ಉತ್ಪಾದಿಸಲ್ಪಟ್ಟ ಕೆಮ್ಮಿನ ಸಿರಪ್‌ಗಳು ಸಾಗರೋತ್ತರ ಮಕ್ಕಳ ಸಾವಿಗೆ ಕಾರಣವಾಗಿರುವ ನಡುವೆ ಅನೇಕ ಔಷಧಿಗಳು ಗುಟಮಟ್ಟದಿಂದ ಕೂಡಿಲ್ಲ ಎಂಬುವುದು ಬಹಿರಂಗವಾಗಿದೆ. ಅಂಬಾಲಾದಲ್ಲಿ ಉತ್ಪಾದಿಸಲಾದ ಟೆರ್ಬುಟಲಿನ್ ಸಲ್ಫೇಟ್, ಬ್ರೋಮ್ಹೆಕ್ಸಿನ್ ಹೈಡ್ರೋಕ್ಲೋರೈಡ್, ಗ್ವೈಫೆನೆಸಿನ್ ಮತ್ತು ಮೆಂಥಾಲ್ ಸಿರಪ್ ಅನ್ನು ಒಳಗೊಂಡಿರುವ ಕೆಮ್ಮಿನ ಸಿರಪ್‌ಗಳೂ ಕೂಡ ಗುಣಮಟ್ಟದ ಕೊರತೆಯ ಔಷಧಿಗಳ ಪಟ್ಟಿಯಲ್ಲಿ ಸೇರಿವೆ. ಇದು ಆತಂಕ ಹೆಚ್ಚಿಸಿದೆ.

ಮೆಹಂದಿ ಬಗ್ಗೆಯೂ ಎಚ್ಚರಿಕೆ ನೀಡಿದ ಸಿಡಿಎಸ್‌ಸಿಒ

ಹೆಣ್ಣು ಮಕ್ಕಳು ಬಳಸುವ ಮೆಹಂದಿಯ ಕುರಿತು ಕೂಡ ಸಿಡಿಎಸ್‌ಸಿಒ ಎಚ್ಚರಿಕೆ ನೀಡಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಲಭ್ಯವಿರುವ ಬಹುತೇಕ ಮೆಹಂದಿ ಟ್ಯೂಬ್‌ಗಳು ಸೌಂದರ್ಯವರ್ಧಕಗಳ ವರ್ಗಕ್ಕೆ ನಿಗದಿಪಡಿಸಿದ ಮಾನದಂಡಗಳನ್ನು ಪೂರೈಸುತ್ತಿಲ್ಲ. ಅವುಗಳು ಕಳಪೆ ಗುಣಮಟ್ಟದ್ದಾಗಿದ್ದು, ಹಾನಿಕಾರಕ ರಾಸಾಯನಿಕಗಳಿಂದ ಕೂಡಿದೆ. ಅಂತಹ ಮೆಹಂದಿಗಳ ಬಳಕೆ ಚರ್ಮ ಮತ್ತು ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎಂದು ಸಿಡಿಎಸ್‌ಸಿಒ ಹೇಳಿದೆ.

ಇದನ್ನೂ ಓದಿ : ವಿವಾಹಿತ ಮಹಿಳೆಯರ ನೇಮಕಕ್ಕೆ ನಿರಾಕರಿಸುತ್ತಿರುವ ‘ಫಾಕ್ಸ್‌ಕಾನ್’: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...