Homeಮುಖಪುಟಪ್ಯಾರಸಿಟಮಲ್ ಸೇರಿದಂತೆ 52 ಔಷಧಿಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ

ಪ್ಯಾರಸಿಟಮಲ್ ಸೇರಿದಂತೆ 52 ಔಷಧಿಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ

- Advertisement -
- Advertisement -

ಭಾರತದ ಉನ್ನತ ಔಷಧ ನಿಯಂತ್ರಣ ಸಂಸ್ಥೆ, ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (ಸಿಡಿಎಸ್‌ಸಿಒ) ನಡೆಸಿದ ಪರೀಕ್ಷೆಯಲ್ಲಿ ಜನಪ್ರಿಯ ಔಷಧಿಗಳಾದ ಪ್ಯಾರಸಿಟಮಲ್, ಪ್ಯಾಂಟೊಪ್ರಜೋಲ್
ಮತ್ತು ಹಲವಾರು ಆಂಟಿ ಬಯೋಟಿಕ್‌ಗಳು ಒಳಗೊಂಡಂತೆ ಸುಮಾರು 50 ಔಷಧಿಗಳು ಗುಣಮಟ್ಟದ ಮಾನದಂಡಗಳನ್ನು ಪೂರೈಸಲು ವಿಫಲವಾಗಿವೆ.

ಇವುಗಳಲ್ಲಿ ಸುಮಾರು 22 ಔಷಧಿಗಳನ್ನು ಹಿಮಾಚಲ ಪ್ರದೇಶದಲ್ಲಿ ಉತ್ಪಾದಿಸಲಾಗಿದೆ ಎಂದು ಸಿಡಿಎಸ್‌ಸಿಒ ಮೇ 2024ರಲ್ಲಿ ನಡೆಸಿದ ಪರೀಕ್ಷೆಯನ್ನು ಉಲ್ಲೇಖಿಸಿ ಎಚ್ಚರಿಕೆ ನೀಡಿದೆ.

ಜೈಪುರ, ಹೈದರಾಬಾದ್, ವಘೋಡಿಯಾ, ವಡೋದರಾ, ಆಂಧ್ರ ಪ್ರದೇಶ ಮತ್ತು ಇಂದೋರ್‌ನಂತಹ ಇತರ ಸ್ಥಳಗಳಿಂದ ಸಂಗ್ರಹಿಸಿದ ಔ‍ಷಧಗಳ ಮಾದರಿಯಲ್ಲೂ ಗುಣಮಟ್ಟದ ಕೊರತೆ ಕಂಡು ಬಂದಿದೆ. ಜೂನ್ 20 ರಂದು ಬಿಡುಗಡೆಯಾದ ಡ್ರಗ್ ಅಲರ್ಟ್ ಪ್ರಕಾರ, ಒಟ್ಟು 52 ಔಷಧ ಮಾದರಿಗಳು ಸಿಡಿಎಸ್‌ಸಿಒ ನಡೆಸಿದ ಗುಣಮಟ್ಟದ ಪರೀಕ್ಷೆಗಳಲ್ಲಿ ಉತ್ತೀರ್ಣಗೊಂಡಿಲ್ಲ.

ಸಾಮಾನ್ಯ ಜ್ವರ, ಮೈಕೈ ನೋವಿಗೆ ಜನರು ಬಳಸುವ ಪ್ಯಾರಸಿಟಮಲ್ ಮಾತ್ರೆಗಳು ಗುಣಮಟ್ಟದ ಮಾನದಂಡಗಳನ್ನು ಪೂರೈಸಲು ವಿಫಲವಾಗಿದೆ. ಇದರಂತೆ ಜನರು ವೈದ್ಯರ ನಿರ್ದೇಶನಗಳಿಲ್ಲದೆ ಮೆಡಿಕಲ್‌ನಿಂದ ಪಡೆದು ಬಳಸುವ ಅನೇಕ ಔಷಧಿಗಳು ಕೂಡ ಗುಣಮಟ್ಟದಿಂದ ಕೂಡಿಲ್ಲ ಎಂಬುವುದು ತಿಳಿದು ಬಂದಿದೆ. ವೈದ್ಯಕೀಯ ಸಮುದಾಯ ಮತ್ತು ಜನರಿಗೆ ಈ ಬಗ್ಗೆ ಸಿಡಿಎಸ್‌ಸಿಒ ಎಚ್ಚರಿಕೆ ನೀಡಿದೆ.

ಮಧ್ಯ ಪ್ರದೇಶದ ಉಜ್ಜಯಿನಿ ಮೂಲದ ಆಸ್ಕೋನ್ ಹೆಲ್ತ್‌ಕೇರ್‌ನಲ್ಲಿ ಕೆಳದರ್ಜೆಯ 500 ಎಂಜಿ ಪ್ಯಾರಸಿಟಮಲ್ ಮಾತ್ರೆಗಳನ್ನು ತಯಾರಿಸಲಾಗಿದೆ. ಆಸ್ಕೋನ್ ಹೆಲ್ತ್‌ಕೇರ್‌ನ ಅಧಿಕೃತ ವೆಬ್‌ಸೈಟ್ ಕಂಪನಿಯು ಅಂತಿಮ ಔಷಧೀಯ ಡೋಸೇಜ್ ಫಾರ್ಮ್‌ಗಳನ್ನು ತಯಾರಿಸುತ್ತದೆ ಎಂದು ಹೇಳುತ್ತದೆ.

ಗುಣಮಟ್ಟವಿಲ್ಲದ ಔಷಧಗಳ ಬಗ್ಗೆ ಹೆಚ್ಚುತ್ತಿರುವ ಆತಂಕ

ರೋಗ ಗ್ರಸ್ತವಾಗುವಿಕೆಗಳು ಮತ್ತು ಆತಂಕದ ಅಸ್ವಸ್ಥತೆಗಳಿಗೆ ಬಳಸುವ ಕ್ಲೋನಾಜೆಪಮ್ ಮಾತ್ರೆಗಳು, ನೋವು ನಿವಾರಕ ಡಿಕ್ಲೋಫೆನಾಕ್, ಆಂಟಿ-ಹೈಪರ್ಟೆನ್ಷನ್ ಡ್ರಗ್ ಟೆಲ್ಮಿಸಾರ್ಟನ್, ಉಸಿರಾಟದ ಕಾಯಿಲೆಗಳಿಗೆ ಬಳಸುವ ಆಂಬ್ರೋಕ್ಸೋಲ್, ಆಂಟಿಫಂಗಲ್ ಫ್ಲುಕೋನಜೋಲ್ ಮತ್ತು ವಿವಿಧ ಮಲ್ಟಿವಿಟಮಿನ್ ಮತ್ತು ಕ್ಯಾಲ್ಸಿಯಂ ಮಾತ್ರೆಗಳು ಕಳಪೆ ಗುಣಮಟ್ಟದ ಔಷಧಿಗಳ ಪಟ್ಟಿಯಲ್ಲಿ ಸೇರಿವೆ.

ಭಾರತದಲ್ಲಿ ಉತ್ಪಾದಿಸಲ್ಪಟ್ಟ ಕೆಮ್ಮಿನ ಸಿರಪ್‌ಗಳು ಸಾಗರೋತ್ತರ ಮಕ್ಕಳ ಸಾವಿಗೆ ಕಾರಣವಾಗಿರುವ ನಡುವೆ ಅನೇಕ ಔಷಧಿಗಳು ಗುಟಮಟ್ಟದಿಂದ ಕೂಡಿಲ್ಲ ಎಂಬುವುದು ಬಹಿರಂಗವಾಗಿದೆ. ಅಂಬಾಲಾದಲ್ಲಿ ಉತ್ಪಾದಿಸಲಾದ ಟೆರ್ಬುಟಲಿನ್ ಸಲ್ಫೇಟ್, ಬ್ರೋಮ್ಹೆಕ್ಸಿನ್ ಹೈಡ್ರೋಕ್ಲೋರೈಡ್, ಗ್ವೈಫೆನೆಸಿನ್ ಮತ್ತು ಮೆಂಥಾಲ್ ಸಿರಪ್ ಅನ್ನು ಒಳಗೊಂಡಿರುವ ಕೆಮ್ಮಿನ ಸಿರಪ್‌ಗಳೂ ಕೂಡ ಗುಣಮಟ್ಟದ ಕೊರತೆಯ ಔಷಧಿಗಳ ಪಟ್ಟಿಯಲ್ಲಿ ಸೇರಿವೆ. ಇದು ಆತಂಕ ಹೆಚ್ಚಿಸಿದೆ.

ಮೆಹಂದಿ ಬಗ್ಗೆಯೂ ಎಚ್ಚರಿಕೆ ನೀಡಿದ ಸಿಡಿಎಸ್‌ಸಿಒ

ಹೆಣ್ಣು ಮಕ್ಕಳು ಬಳಸುವ ಮೆಹಂದಿಯ ಕುರಿತು ಕೂಡ ಸಿಡಿಎಸ್‌ಸಿಒ ಎಚ್ಚರಿಕೆ ನೀಡಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಲಭ್ಯವಿರುವ ಬಹುತೇಕ ಮೆಹಂದಿ ಟ್ಯೂಬ್‌ಗಳು ಸೌಂದರ್ಯವರ್ಧಕಗಳ ವರ್ಗಕ್ಕೆ ನಿಗದಿಪಡಿಸಿದ ಮಾನದಂಡಗಳನ್ನು ಪೂರೈಸುತ್ತಿಲ್ಲ. ಅವುಗಳು ಕಳಪೆ ಗುಣಮಟ್ಟದ್ದಾಗಿದ್ದು, ಹಾನಿಕಾರಕ ರಾಸಾಯನಿಕಗಳಿಂದ ಕೂಡಿದೆ. ಅಂತಹ ಮೆಹಂದಿಗಳ ಬಳಕೆ ಚರ್ಮ ಮತ್ತು ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎಂದು ಸಿಡಿಎಸ್‌ಸಿಒ ಹೇಳಿದೆ.

ಇದನ್ನೂ ಓದಿ : ವಿವಾಹಿತ ಮಹಿಳೆಯರ ನೇಮಕಕ್ಕೆ ನಿರಾಕರಿಸುತ್ತಿರುವ ‘ಫಾಕ್ಸ್‌ಕಾನ್’: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...