Homeಮುಖಪುಟಪ್ಯಾರಸಿಟಮಲ್ ಸೇರಿದಂತೆ 52 ಔಷಧಿಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ

ಪ್ಯಾರಸಿಟಮಲ್ ಸೇರಿದಂತೆ 52 ಔಷಧಿಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ

- Advertisement -
- Advertisement -

ಭಾರತದ ಉನ್ನತ ಔಷಧ ನಿಯಂತ್ರಣ ಸಂಸ್ಥೆ, ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (ಸಿಡಿಎಸ್‌ಸಿಒ) ನಡೆಸಿದ ಪರೀಕ್ಷೆಯಲ್ಲಿ ಜನಪ್ರಿಯ ಔಷಧಿಗಳಾದ ಪ್ಯಾರಸಿಟಮಲ್, ಪ್ಯಾಂಟೊಪ್ರಜೋಲ್
ಮತ್ತು ಹಲವಾರು ಆಂಟಿ ಬಯೋಟಿಕ್‌ಗಳು ಒಳಗೊಂಡಂತೆ ಸುಮಾರು 50 ಔಷಧಿಗಳು ಗುಣಮಟ್ಟದ ಮಾನದಂಡಗಳನ್ನು ಪೂರೈಸಲು ವಿಫಲವಾಗಿವೆ.

ಇವುಗಳಲ್ಲಿ ಸುಮಾರು 22 ಔಷಧಿಗಳನ್ನು ಹಿಮಾಚಲ ಪ್ರದೇಶದಲ್ಲಿ ಉತ್ಪಾದಿಸಲಾಗಿದೆ ಎಂದು ಸಿಡಿಎಸ್‌ಸಿಒ ಮೇ 2024ರಲ್ಲಿ ನಡೆಸಿದ ಪರೀಕ್ಷೆಯನ್ನು ಉಲ್ಲೇಖಿಸಿ ಎಚ್ಚರಿಕೆ ನೀಡಿದೆ.

ಜೈಪುರ, ಹೈದರಾಬಾದ್, ವಘೋಡಿಯಾ, ವಡೋದರಾ, ಆಂಧ್ರ ಪ್ರದೇಶ ಮತ್ತು ಇಂದೋರ್‌ನಂತಹ ಇತರ ಸ್ಥಳಗಳಿಂದ ಸಂಗ್ರಹಿಸಿದ ಔ‍ಷಧಗಳ ಮಾದರಿಯಲ್ಲೂ ಗುಣಮಟ್ಟದ ಕೊರತೆ ಕಂಡು ಬಂದಿದೆ. ಜೂನ್ 20 ರಂದು ಬಿಡುಗಡೆಯಾದ ಡ್ರಗ್ ಅಲರ್ಟ್ ಪ್ರಕಾರ, ಒಟ್ಟು 52 ಔಷಧ ಮಾದರಿಗಳು ಸಿಡಿಎಸ್‌ಸಿಒ ನಡೆಸಿದ ಗುಣಮಟ್ಟದ ಪರೀಕ್ಷೆಗಳಲ್ಲಿ ಉತ್ತೀರ್ಣಗೊಂಡಿಲ್ಲ.

ಸಾಮಾನ್ಯ ಜ್ವರ, ಮೈಕೈ ನೋವಿಗೆ ಜನರು ಬಳಸುವ ಪ್ಯಾರಸಿಟಮಲ್ ಮಾತ್ರೆಗಳು ಗುಣಮಟ್ಟದ ಮಾನದಂಡಗಳನ್ನು ಪೂರೈಸಲು ವಿಫಲವಾಗಿದೆ. ಇದರಂತೆ ಜನರು ವೈದ್ಯರ ನಿರ್ದೇಶನಗಳಿಲ್ಲದೆ ಮೆಡಿಕಲ್‌ನಿಂದ ಪಡೆದು ಬಳಸುವ ಅನೇಕ ಔಷಧಿಗಳು ಕೂಡ ಗುಣಮಟ್ಟದಿಂದ ಕೂಡಿಲ್ಲ ಎಂಬುವುದು ತಿಳಿದು ಬಂದಿದೆ. ವೈದ್ಯಕೀಯ ಸಮುದಾಯ ಮತ್ತು ಜನರಿಗೆ ಈ ಬಗ್ಗೆ ಸಿಡಿಎಸ್‌ಸಿಒ ಎಚ್ಚರಿಕೆ ನೀಡಿದೆ.

ಮಧ್ಯ ಪ್ರದೇಶದ ಉಜ್ಜಯಿನಿ ಮೂಲದ ಆಸ್ಕೋನ್ ಹೆಲ್ತ್‌ಕೇರ್‌ನಲ್ಲಿ ಕೆಳದರ್ಜೆಯ 500 ಎಂಜಿ ಪ್ಯಾರಸಿಟಮಲ್ ಮಾತ್ರೆಗಳನ್ನು ತಯಾರಿಸಲಾಗಿದೆ. ಆಸ್ಕೋನ್ ಹೆಲ್ತ್‌ಕೇರ್‌ನ ಅಧಿಕೃತ ವೆಬ್‌ಸೈಟ್ ಕಂಪನಿಯು ಅಂತಿಮ ಔಷಧೀಯ ಡೋಸೇಜ್ ಫಾರ್ಮ್‌ಗಳನ್ನು ತಯಾರಿಸುತ್ತದೆ ಎಂದು ಹೇಳುತ್ತದೆ.

ಗುಣಮಟ್ಟವಿಲ್ಲದ ಔಷಧಗಳ ಬಗ್ಗೆ ಹೆಚ್ಚುತ್ತಿರುವ ಆತಂಕ

ರೋಗ ಗ್ರಸ್ತವಾಗುವಿಕೆಗಳು ಮತ್ತು ಆತಂಕದ ಅಸ್ವಸ್ಥತೆಗಳಿಗೆ ಬಳಸುವ ಕ್ಲೋನಾಜೆಪಮ್ ಮಾತ್ರೆಗಳು, ನೋವು ನಿವಾರಕ ಡಿಕ್ಲೋಫೆನಾಕ್, ಆಂಟಿ-ಹೈಪರ್ಟೆನ್ಷನ್ ಡ್ರಗ್ ಟೆಲ್ಮಿಸಾರ್ಟನ್, ಉಸಿರಾಟದ ಕಾಯಿಲೆಗಳಿಗೆ ಬಳಸುವ ಆಂಬ್ರೋಕ್ಸೋಲ್, ಆಂಟಿಫಂಗಲ್ ಫ್ಲುಕೋನಜೋಲ್ ಮತ್ತು ವಿವಿಧ ಮಲ್ಟಿವಿಟಮಿನ್ ಮತ್ತು ಕ್ಯಾಲ್ಸಿಯಂ ಮಾತ್ರೆಗಳು ಕಳಪೆ ಗುಣಮಟ್ಟದ ಔಷಧಿಗಳ ಪಟ್ಟಿಯಲ್ಲಿ ಸೇರಿವೆ.

ಭಾರತದಲ್ಲಿ ಉತ್ಪಾದಿಸಲ್ಪಟ್ಟ ಕೆಮ್ಮಿನ ಸಿರಪ್‌ಗಳು ಸಾಗರೋತ್ತರ ಮಕ್ಕಳ ಸಾವಿಗೆ ಕಾರಣವಾಗಿರುವ ನಡುವೆ ಅನೇಕ ಔಷಧಿಗಳು ಗುಟಮಟ್ಟದಿಂದ ಕೂಡಿಲ್ಲ ಎಂಬುವುದು ಬಹಿರಂಗವಾಗಿದೆ. ಅಂಬಾಲಾದಲ್ಲಿ ಉತ್ಪಾದಿಸಲಾದ ಟೆರ್ಬುಟಲಿನ್ ಸಲ್ಫೇಟ್, ಬ್ರೋಮ್ಹೆಕ್ಸಿನ್ ಹೈಡ್ರೋಕ್ಲೋರೈಡ್, ಗ್ವೈಫೆನೆಸಿನ್ ಮತ್ತು ಮೆಂಥಾಲ್ ಸಿರಪ್ ಅನ್ನು ಒಳಗೊಂಡಿರುವ ಕೆಮ್ಮಿನ ಸಿರಪ್‌ಗಳೂ ಕೂಡ ಗುಣಮಟ್ಟದ ಕೊರತೆಯ ಔಷಧಿಗಳ ಪಟ್ಟಿಯಲ್ಲಿ ಸೇರಿವೆ. ಇದು ಆತಂಕ ಹೆಚ್ಚಿಸಿದೆ.

ಮೆಹಂದಿ ಬಗ್ಗೆಯೂ ಎಚ್ಚರಿಕೆ ನೀಡಿದ ಸಿಡಿಎಸ್‌ಸಿಒ

ಹೆಣ್ಣು ಮಕ್ಕಳು ಬಳಸುವ ಮೆಹಂದಿಯ ಕುರಿತು ಕೂಡ ಸಿಡಿಎಸ್‌ಸಿಒ ಎಚ್ಚರಿಕೆ ನೀಡಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಲಭ್ಯವಿರುವ ಬಹುತೇಕ ಮೆಹಂದಿ ಟ್ಯೂಬ್‌ಗಳು ಸೌಂದರ್ಯವರ್ಧಕಗಳ ವರ್ಗಕ್ಕೆ ನಿಗದಿಪಡಿಸಿದ ಮಾನದಂಡಗಳನ್ನು ಪೂರೈಸುತ್ತಿಲ್ಲ. ಅವುಗಳು ಕಳಪೆ ಗುಣಮಟ್ಟದ್ದಾಗಿದ್ದು, ಹಾನಿಕಾರಕ ರಾಸಾಯನಿಕಗಳಿಂದ ಕೂಡಿದೆ. ಅಂತಹ ಮೆಹಂದಿಗಳ ಬಳಕೆ ಚರ್ಮ ಮತ್ತು ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎಂದು ಸಿಡಿಎಸ್‌ಸಿಒ ಹೇಳಿದೆ.

ಇದನ್ನೂ ಓದಿ : ವಿವಾಹಿತ ಮಹಿಳೆಯರ ನೇಮಕಕ್ಕೆ ನಿರಾಕರಿಸುತ್ತಿರುವ ‘ಫಾಕ್ಸ್‌ಕಾನ್’: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...