Homeಮುಖಪುಟಪ್ಯಾರಸಿಟಮಲ್ ಸೇರಿದಂತೆ 52 ಔಷಧಿಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ

ಪ್ಯಾರಸಿಟಮಲ್ ಸೇರಿದಂತೆ 52 ಔಷಧಿಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ

- Advertisement -
- Advertisement -

ಭಾರತದ ಉನ್ನತ ಔಷಧ ನಿಯಂತ್ರಣ ಸಂಸ್ಥೆ, ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (ಸಿಡಿಎಸ್‌ಸಿಒ) ನಡೆಸಿದ ಪರೀಕ್ಷೆಯಲ್ಲಿ ಜನಪ್ರಿಯ ಔಷಧಿಗಳಾದ ಪ್ಯಾರಸಿಟಮಲ್, ಪ್ಯಾಂಟೊಪ್ರಜೋಲ್
ಮತ್ತು ಹಲವಾರು ಆಂಟಿ ಬಯೋಟಿಕ್‌ಗಳು ಒಳಗೊಂಡಂತೆ ಸುಮಾರು 50 ಔಷಧಿಗಳು ಗುಣಮಟ್ಟದ ಮಾನದಂಡಗಳನ್ನು ಪೂರೈಸಲು ವಿಫಲವಾಗಿವೆ.

ಇವುಗಳಲ್ಲಿ ಸುಮಾರು 22 ಔಷಧಿಗಳನ್ನು ಹಿಮಾಚಲ ಪ್ರದೇಶದಲ್ಲಿ ಉತ್ಪಾದಿಸಲಾಗಿದೆ ಎಂದು ಸಿಡಿಎಸ್‌ಸಿಒ ಮೇ 2024ರಲ್ಲಿ ನಡೆಸಿದ ಪರೀಕ್ಷೆಯನ್ನು ಉಲ್ಲೇಖಿಸಿ ಎಚ್ಚರಿಕೆ ನೀಡಿದೆ.

ಜೈಪುರ, ಹೈದರಾಬಾದ್, ವಘೋಡಿಯಾ, ವಡೋದರಾ, ಆಂಧ್ರ ಪ್ರದೇಶ ಮತ್ತು ಇಂದೋರ್‌ನಂತಹ ಇತರ ಸ್ಥಳಗಳಿಂದ ಸಂಗ್ರಹಿಸಿದ ಔ‍ಷಧಗಳ ಮಾದರಿಯಲ್ಲೂ ಗುಣಮಟ್ಟದ ಕೊರತೆ ಕಂಡು ಬಂದಿದೆ. ಜೂನ್ 20 ರಂದು ಬಿಡುಗಡೆಯಾದ ಡ್ರಗ್ ಅಲರ್ಟ್ ಪ್ರಕಾರ, ಒಟ್ಟು 52 ಔಷಧ ಮಾದರಿಗಳು ಸಿಡಿಎಸ್‌ಸಿಒ ನಡೆಸಿದ ಗುಣಮಟ್ಟದ ಪರೀಕ್ಷೆಗಳಲ್ಲಿ ಉತ್ತೀರ್ಣಗೊಂಡಿಲ್ಲ.

ಸಾಮಾನ್ಯ ಜ್ವರ, ಮೈಕೈ ನೋವಿಗೆ ಜನರು ಬಳಸುವ ಪ್ಯಾರಸಿಟಮಲ್ ಮಾತ್ರೆಗಳು ಗುಣಮಟ್ಟದ ಮಾನದಂಡಗಳನ್ನು ಪೂರೈಸಲು ವಿಫಲವಾಗಿದೆ. ಇದರಂತೆ ಜನರು ವೈದ್ಯರ ನಿರ್ದೇಶನಗಳಿಲ್ಲದೆ ಮೆಡಿಕಲ್‌ನಿಂದ ಪಡೆದು ಬಳಸುವ ಅನೇಕ ಔಷಧಿಗಳು ಕೂಡ ಗುಣಮಟ್ಟದಿಂದ ಕೂಡಿಲ್ಲ ಎಂಬುವುದು ತಿಳಿದು ಬಂದಿದೆ. ವೈದ್ಯಕೀಯ ಸಮುದಾಯ ಮತ್ತು ಜನರಿಗೆ ಈ ಬಗ್ಗೆ ಸಿಡಿಎಸ್‌ಸಿಒ ಎಚ್ಚರಿಕೆ ನೀಡಿದೆ.

ಮಧ್ಯ ಪ್ರದೇಶದ ಉಜ್ಜಯಿನಿ ಮೂಲದ ಆಸ್ಕೋನ್ ಹೆಲ್ತ್‌ಕೇರ್‌ನಲ್ಲಿ ಕೆಳದರ್ಜೆಯ 500 ಎಂಜಿ ಪ್ಯಾರಸಿಟಮಲ್ ಮಾತ್ರೆಗಳನ್ನು ತಯಾರಿಸಲಾಗಿದೆ. ಆಸ್ಕೋನ್ ಹೆಲ್ತ್‌ಕೇರ್‌ನ ಅಧಿಕೃತ ವೆಬ್‌ಸೈಟ್ ಕಂಪನಿಯು ಅಂತಿಮ ಔಷಧೀಯ ಡೋಸೇಜ್ ಫಾರ್ಮ್‌ಗಳನ್ನು ತಯಾರಿಸುತ್ತದೆ ಎಂದು ಹೇಳುತ್ತದೆ.

ಗುಣಮಟ್ಟವಿಲ್ಲದ ಔಷಧಗಳ ಬಗ್ಗೆ ಹೆಚ್ಚುತ್ತಿರುವ ಆತಂಕ

ರೋಗ ಗ್ರಸ್ತವಾಗುವಿಕೆಗಳು ಮತ್ತು ಆತಂಕದ ಅಸ್ವಸ್ಥತೆಗಳಿಗೆ ಬಳಸುವ ಕ್ಲೋನಾಜೆಪಮ್ ಮಾತ್ರೆಗಳು, ನೋವು ನಿವಾರಕ ಡಿಕ್ಲೋಫೆನಾಕ್, ಆಂಟಿ-ಹೈಪರ್ಟೆನ್ಷನ್ ಡ್ರಗ್ ಟೆಲ್ಮಿಸಾರ್ಟನ್, ಉಸಿರಾಟದ ಕಾಯಿಲೆಗಳಿಗೆ ಬಳಸುವ ಆಂಬ್ರೋಕ್ಸೋಲ್, ಆಂಟಿಫಂಗಲ್ ಫ್ಲುಕೋನಜೋಲ್ ಮತ್ತು ವಿವಿಧ ಮಲ್ಟಿವಿಟಮಿನ್ ಮತ್ತು ಕ್ಯಾಲ್ಸಿಯಂ ಮಾತ್ರೆಗಳು ಕಳಪೆ ಗುಣಮಟ್ಟದ ಔಷಧಿಗಳ ಪಟ್ಟಿಯಲ್ಲಿ ಸೇರಿವೆ.

ಭಾರತದಲ್ಲಿ ಉತ್ಪಾದಿಸಲ್ಪಟ್ಟ ಕೆಮ್ಮಿನ ಸಿರಪ್‌ಗಳು ಸಾಗರೋತ್ತರ ಮಕ್ಕಳ ಸಾವಿಗೆ ಕಾರಣವಾಗಿರುವ ನಡುವೆ ಅನೇಕ ಔಷಧಿಗಳು ಗುಟಮಟ್ಟದಿಂದ ಕೂಡಿಲ್ಲ ಎಂಬುವುದು ಬಹಿರಂಗವಾಗಿದೆ. ಅಂಬಾಲಾದಲ್ಲಿ ಉತ್ಪಾದಿಸಲಾದ ಟೆರ್ಬುಟಲಿನ್ ಸಲ್ಫೇಟ್, ಬ್ರೋಮ್ಹೆಕ್ಸಿನ್ ಹೈಡ್ರೋಕ್ಲೋರೈಡ್, ಗ್ವೈಫೆನೆಸಿನ್ ಮತ್ತು ಮೆಂಥಾಲ್ ಸಿರಪ್ ಅನ್ನು ಒಳಗೊಂಡಿರುವ ಕೆಮ್ಮಿನ ಸಿರಪ್‌ಗಳೂ ಕೂಡ ಗುಣಮಟ್ಟದ ಕೊರತೆಯ ಔಷಧಿಗಳ ಪಟ್ಟಿಯಲ್ಲಿ ಸೇರಿವೆ. ಇದು ಆತಂಕ ಹೆಚ್ಚಿಸಿದೆ.

ಮೆಹಂದಿ ಬಗ್ಗೆಯೂ ಎಚ್ಚರಿಕೆ ನೀಡಿದ ಸಿಡಿಎಸ್‌ಸಿಒ

ಹೆಣ್ಣು ಮಕ್ಕಳು ಬಳಸುವ ಮೆಹಂದಿಯ ಕುರಿತು ಕೂಡ ಸಿಡಿಎಸ್‌ಸಿಒ ಎಚ್ಚರಿಕೆ ನೀಡಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಲಭ್ಯವಿರುವ ಬಹುತೇಕ ಮೆಹಂದಿ ಟ್ಯೂಬ್‌ಗಳು ಸೌಂದರ್ಯವರ್ಧಕಗಳ ವರ್ಗಕ್ಕೆ ನಿಗದಿಪಡಿಸಿದ ಮಾನದಂಡಗಳನ್ನು ಪೂರೈಸುತ್ತಿಲ್ಲ. ಅವುಗಳು ಕಳಪೆ ಗುಣಮಟ್ಟದ್ದಾಗಿದ್ದು, ಹಾನಿಕಾರಕ ರಾಸಾಯನಿಕಗಳಿಂದ ಕೂಡಿದೆ. ಅಂತಹ ಮೆಹಂದಿಗಳ ಬಳಕೆ ಚರ್ಮ ಮತ್ತು ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎಂದು ಸಿಡಿಎಸ್‌ಸಿಒ ಹೇಳಿದೆ.

ಇದನ್ನೂ ಓದಿ : ವಿವಾಹಿತ ಮಹಿಳೆಯರ ನೇಮಕಕ್ಕೆ ನಿರಾಕರಿಸುತ್ತಿರುವ ‘ಫಾಕ್ಸ್‌ಕಾನ್’: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...