Homeಮುಖಪುಟಕೊಚ್ಚಿ: ಸ್ಪೋಟ ಪ್ರಕರಣ ಮುಂದಿಟ್ಟು ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆ; 54 ಪ್ರಕರಣಗಳು ದಾಖಲು

ಕೊಚ್ಚಿ: ಸ್ಪೋಟ ಪ್ರಕರಣ ಮುಂದಿಟ್ಟು ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆ; 54 ಪ್ರಕರಣಗಳು ದಾಖಲು

- Advertisement -
- Advertisement -

ಕೊಚ್ಚಿಯ ಕಲಮಸ್ಸೆರಿ ಬಳಿ ಕ್ರಿಶ್ಚಿಯನ್ ಪ್ರಾರ್ಥನಾ ಸಭೆಯೊಂದರಲ್ಲಿ ಇತ್ತೀಚೆಗೆ ನಡೆದ ಸ್ಫೋಟದ ನಂತರ ಸಾಮಾಜಿಕ ಮಾದ್ಯಮಗಳ ಮೂಲಕ ಕೋಮು ಪ್ರಚೋದನಕಾರಿ ವಿಷಯಗಳನ್ನು ಪ್ರಚಾರ ಮಾಡಿದ್ದಕ್ಕಾಗಿ 54 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಮಲಪ್ಪುರಂ ಜಿಲ್ಲೆಯೊಂದರಲ್ಲಿ 26 ಪ್ರಕರಣಗಳು ದಾಖಲಾಗಿದ್ದರೆ, ಎರ್ನಾಕುಲಂನಲ್ಲಿ 15 ಮತ್ತು ತಿರುವನಂತಪುರಂನಲ್ಲಿ 5 ಪ್ರಕರಣಗಳು ದಾಖಲಾಗಿವೆ. ತ್ರಿಶೂರ್ ನಗರ ಮತ್ತು ಕೊಟ್ಟಾಯಂನಲ್ಲಿ ತಲಾ ಎರಡು ಪ್ರಕರಣಗಳು ದಾಖಲಾಗಿದ್ದು, ಪತ್ತನಂತಿಟ್ಟ, ಅಲಪ್ಪುಝ, ಪಾಲಕ್ಕಾಡ್ ಮತ್ತು ಕೋಝಿಕ್ಕೋಡ್ ಗ್ರಾಮಾಂತರ ಠಾಣೆಗಳಲ್ಲಿ ತಲಾ ಒಂದು ಪ್ರಕರಣಗಳು ದಾಖಲಾಗಿದೆ.

ಕೋಮು ದ್ವೇಷವನ್ನು ಪ್ರಚೋದಿಸುವ ಪೋಸ್ಟ್‌ಗಳನ್ನು ಹಂಚಿಕೊಳ್ಳಲು ನಕಲಿ ಪ್ರೊಫೈಲ್‌ಗಳನ್ನು ಬಳಸಿರುವುದನ್ನು ಪತ್ತೆಹಚ್ಚಲಾಗಿದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೋಮು ದ್ವೇಷಕ್ಕೆ ಪ್ರಚೋದಿಸಿರುವ ನಕಲಿ ಪ್ರೊಫೈಲ್‌ಗಳ ಐಪಿ ವಿಳಾಸಗಳನ್ನು ಪತ್ತೆ ಹಚ್ಚಲು ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಎಕ್ಸ್, ವಾಟ್ಸಾಪ್ ಮತ್ತು ಇತರ ಸಾಮಾಜಿಕ ಮಾದ್ಯಮ ಸಂಸ್ಥೆಗಳಿಗೆ ವಿನಂತಿಗಳನ್ನು ಮಾಡಲಾಗಿದೆ. ಇಂತಹ ಖಾತೆಗಳನ್ನು ಗುರುತಿಸಲು ರಾಜ್ಯದಲ್ಲಿ ಸೈಬರ್ ಸೆಲ್ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ.

ಕೊಚ್ಚಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ಯೆಹೋವನ ಸಾಕ್ಷಿಗಳ ಸಮಾವೇಷದಲ್ಲಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಮಾಡಿದ ಪೋಸ್ಟ್‌ಗೆ ಸಂಬಂಧಿಸಿ ಈ ಮೊದಲು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಎರಡು ಪ್ರಕರಣ ದಾಖಲಾಗಿತ್ತು.

ಐಪಿಸಿ 153 ಮತ್ತು 153 ಎ ಮತ್ತು ಸೆಕ್ಷನ್ 120 (ಒ) ಅಡಿಯಲ್ಲಿ ರಾಜೀವ್ ಚಂದ್ರಶೇಖರ್‌ ವಿರುದ್ಧ ಎರಡು ಪ್ರಕರಣವನ್ನು ದಾಖಲಿಸಲಾಗಿದೆ. ಒಂದು ಕೇಸ್‌ನ್ನು ಕೆಪಿಸಿಸಿ ಡಿಜಿಟಲ್ ಮೀಡಿಯಾ ಕನ್ವೀನರ್ ಪಿ ಸರಿನ್ ನೀಡಿದ ದೂರಿನ ಆಧಾರದ ಕೇರಳ ಪೊಲೀಸರು ದಾಖಲಿಸಿಕೊಂಡಿದ್ದರು. ಇದಕ್ಕೆ ಮೊದಲು ಸಚಿವ ರಾಜೀವ್ ಚಂದ್ರಶೇಖರ್‌ ವಿರುದ್ಧ ಸ್ವಯಂಪ್ರೇರಿತವಾಗಿ ಒಂದು ಪ್ರಕರಣವನ್ನು ಕೇರಳ ಪೊಲೀಸರು ದಾಖಲಿಸಿದ್ದರು.

ಕಳೆದ ವಾರ ಕೇರಳದ ಯೆಹೋವನ ಸಾಕ್ಷಿಗಳ ಸಮಾವೇಷದಲ್ಲಿ ಬಾಂಬ್‌ ಸ್ಪೋಟ ಸಂಭವಿಸಿತ್ತು. ಘಟನೆಯಲ್ಲಿ 3 ಮಂದಿ ಮೃತಪಟ್ಟು, 50 ಮಂದಿ ಗಾಯಗೊಂಡಿದ್ದರು.

ಪ್ರಕರಣದ ಬಗ್ಗೆ ಪೋಸ್ಟ್‌ ಮಾಡಿದ್ದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್‌, ಭ್ರಷ್ಟಾಚಾರದ ಆರೋಪದ ಮೂಲಕ ಅಪಖ್ಯಾತಿ ಪಡೆದ ಸಿಎಂ ಪಿಣರಾಯಿ ವಿಜಯನ್‌ ನಾಚಿಕೆಯಿಲ್ಲದೆ ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದಾರೆ. ದೆಹಲಿಯಲ್ಲಿ ಕುಳಿತು ಇಸ್ರೇಲ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವಾಗ ಕೇರಳದಲ್ಲಿ ಜಿಹಾದ್‌ಗಾಗಿ ಹಮಾಸ್‌ನ ಮುಕ್ತ ಕರೆಗಳು ಅಮಾಯಕ ಕ್ರಿಶ್ಚಿಯನ್ನರ ಮೇಲೆ ದಾಳಿ ಮತ್ತು ಬಾಂಬ್ ಸ್ಫೋಟಗಳಿಗೆ ಕಾರಣವಾಗುತ್ತಿವೆ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದರು.

ರಾಜ್ಯದಲ್ಲಿ ದ್ವೇಷ ಮತ್ತು ಜಿಹಾದ್‌ನ್ನು ಮುಕ್ತವಾಗಿ ಬೋಧಿಸಲು INDIA ಮೈತ್ರಿಕೂಟದ ಎರಡು ರಾಜಕೀಯ ಪಕ್ಷಗಳು ಭಯೋತ್ಪಾದಕ ಸಂಘಟನೆ ಹಮಾಸ್‌ನ ಮುಖ್ಯಸ್ಥರಿಗೆ ಅವಕಾಶ ನೀಡಿರುವುದು ಮಾತ್ರ ಕಷ್ಟ ಎಂದು ಹೇಳಿದ್ದರು.

ಚಂದ್ರಶೇಖರ್‌ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಪಿಣರಾಯ್ ವಿಜಯನ್‌, ಸಚಿವರ ಹೇಳಿಕೆ ಕೋಮುವಾದದಿಂದ ಕೂಡಿದೆ. ವಿಷವುಳ್ಳವರು ವಿಷವನ್ನು ಉಗುಳುತ್ತಲೇ ಇರುತ್ತಾರೆ. ಜವಾಬ್ದಾರಿಯುತ ಸಚಿವರಾಗಿ ಅವರು ಘಟನೆಯ ಬಗ್ಗೆ ತನಿಖೆ ನಡೆಸುತ್ತಿರುವ ತನಿಖಾ ಸಂಸ್ಥೆಗಳಿಗೆ ಕನಿಷ್ಠ ಗೌರವವನ್ನು ತೋರಿಸಬೇಕಾಗಿತ್ತು. ನಿರ್ದಿಷ್ಟ ವರ್ಗವನ್ನು ಗುರಿಯಾಗಿಸಿಕೊಂಡು ತನಿಖೆಯ ಆರಂಭಿಕ ದಿನಗಳಲ್ಲಿ ಸಾರ್ವಜನಿಕ ಹೇಳಿಕೆಗಳನ್ನು ನೀಡಲು ಪ್ರಾರಂಭಿಸಿದ್ದಾರೆ ಎಂದು ಹೇಳಿದ್ದರು.

ಇದನ್ನು ಓದಿ: ವಂಚನೆ ಪ್ರಕರಣ: ಬಿಜೆಪಿ ಮುಖಂಡನ ವಿರುದ್ಧದ ಪ್ರಕರಣ ಕೈಬಿಡುವಂತೆ ಆಗ್ರಹಿಸಿದ ಸಿಬಿಐ ವರದಿ ತಿರಸ್ಕರಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...