Homeಮುಖಪುಟಕೊಚ್ಚಿ: ಸ್ಪೋಟ ಪ್ರಕರಣ ಮುಂದಿಟ್ಟು ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆ; 54 ಪ್ರಕರಣಗಳು ದಾಖಲು

ಕೊಚ್ಚಿ: ಸ್ಪೋಟ ಪ್ರಕರಣ ಮುಂದಿಟ್ಟು ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆ; 54 ಪ್ರಕರಣಗಳು ದಾಖಲು

- Advertisement -
- Advertisement -

ಕೊಚ್ಚಿಯ ಕಲಮಸ್ಸೆರಿ ಬಳಿ ಕ್ರಿಶ್ಚಿಯನ್ ಪ್ರಾರ್ಥನಾ ಸಭೆಯೊಂದರಲ್ಲಿ ಇತ್ತೀಚೆಗೆ ನಡೆದ ಸ್ಫೋಟದ ನಂತರ ಸಾಮಾಜಿಕ ಮಾದ್ಯಮಗಳ ಮೂಲಕ ಕೋಮು ಪ್ರಚೋದನಕಾರಿ ವಿಷಯಗಳನ್ನು ಪ್ರಚಾರ ಮಾಡಿದ್ದಕ್ಕಾಗಿ 54 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಮಲಪ್ಪುರಂ ಜಿಲ್ಲೆಯೊಂದರಲ್ಲಿ 26 ಪ್ರಕರಣಗಳು ದಾಖಲಾಗಿದ್ದರೆ, ಎರ್ನಾಕುಲಂನಲ್ಲಿ 15 ಮತ್ತು ತಿರುವನಂತಪುರಂನಲ್ಲಿ 5 ಪ್ರಕರಣಗಳು ದಾಖಲಾಗಿವೆ. ತ್ರಿಶೂರ್ ನಗರ ಮತ್ತು ಕೊಟ್ಟಾಯಂನಲ್ಲಿ ತಲಾ ಎರಡು ಪ್ರಕರಣಗಳು ದಾಖಲಾಗಿದ್ದು, ಪತ್ತನಂತಿಟ್ಟ, ಅಲಪ್ಪುಝ, ಪಾಲಕ್ಕಾಡ್ ಮತ್ತು ಕೋಝಿಕ್ಕೋಡ್ ಗ್ರಾಮಾಂತರ ಠಾಣೆಗಳಲ್ಲಿ ತಲಾ ಒಂದು ಪ್ರಕರಣಗಳು ದಾಖಲಾಗಿದೆ.

ಕೋಮು ದ್ವೇಷವನ್ನು ಪ್ರಚೋದಿಸುವ ಪೋಸ್ಟ್‌ಗಳನ್ನು ಹಂಚಿಕೊಳ್ಳಲು ನಕಲಿ ಪ್ರೊಫೈಲ್‌ಗಳನ್ನು ಬಳಸಿರುವುದನ್ನು ಪತ್ತೆಹಚ್ಚಲಾಗಿದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೋಮು ದ್ವೇಷಕ್ಕೆ ಪ್ರಚೋದಿಸಿರುವ ನಕಲಿ ಪ್ರೊಫೈಲ್‌ಗಳ ಐಪಿ ವಿಳಾಸಗಳನ್ನು ಪತ್ತೆ ಹಚ್ಚಲು ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಎಕ್ಸ್, ವಾಟ್ಸಾಪ್ ಮತ್ತು ಇತರ ಸಾಮಾಜಿಕ ಮಾದ್ಯಮ ಸಂಸ್ಥೆಗಳಿಗೆ ವಿನಂತಿಗಳನ್ನು ಮಾಡಲಾಗಿದೆ. ಇಂತಹ ಖಾತೆಗಳನ್ನು ಗುರುತಿಸಲು ರಾಜ್ಯದಲ್ಲಿ ಸೈಬರ್ ಸೆಲ್ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ.

ಕೊಚ್ಚಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ಯೆಹೋವನ ಸಾಕ್ಷಿಗಳ ಸಮಾವೇಷದಲ್ಲಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಮಾಡಿದ ಪೋಸ್ಟ್‌ಗೆ ಸಂಬಂಧಿಸಿ ಈ ಮೊದಲು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಎರಡು ಪ್ರಕರಣ ದಾಖಲಾಗಿತ್ತು.

ಐಪಿಸಿ 153 ಮತ್ತು 153 ಎ ಮತ್ತು ಸೆಕ್ಷನ್ 120 (ಒ) ಅಡಿಯಲ್ಲಿ ರಾಜೀವ್ ಚಂದ್ರಶೇಖರ್‌ ವಿರುದ್ಧ ಎರಡು ಪ್ರಕರಣವನ್ನು ದಾಖಲಿಸಲಾಗಿದೆ. ಒಂದು ಕೇಸ್‌ನ್ನು ಕೆಪಿಸಿಸಿ ಡಿಜಿಟಲ್ ಮೀಡಿಯಾ ಕನ್ವೀನರ್ ಪಿ ಸರಿನ್ ನೀಡಿದ ದೂರಿನ ಆಧಾರದ ಕೇರಳ ಪೊಲೀಸರು ದಾಖಲಿಸಿಕೊಂಡಿದ್ದರು. ಇದಕ್ಕೆ ಮೊದಲು ಸಚಿವ ರಾಜೀವ್ ಚಂದ್ರಶೇಖರ್‌ ವಿರುದ್ಧ ಸ್ವಯಂಪ್ರೇರಿತವಾಗಿ ಒಂದು ಪ್ರಕರಣವನ್ನು ಕೇರಳ ಪೊಲೀಸರು ದಾಖಲಿಸಿದ್ದರು.

ಕಳೆದ ವಾರ ಕೇರಳದ ಯೆಹೋವನ ಸಾಕ್ಷಿಗಳ ಸಮಾವೇಷದಲ್ಲಿ ಬಾಂಬ್‌ ಸ್ಪೋಟ ಸಂಭವಿಸಿತ್ತು. ಘಟನೆಯಲ್ಲಿ 3 ಮಂದಿ ಮೃತಪಟ್ಟು, 50 ಮಂದಿ ಗಾಯಗೊಂಡಿದ್ದರು.

ಪ್ರಕರಣದ ಬಗ್ಗೆ ಪೋಸ್ಟ್‌ ಮಾಡಿದ್ದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್‌, ಭ್ರಷ್ಟಾಚಾರದ ಆರೋಪದ ಮೂಲಕ ಅಪಖ್ಯಾತಿ ಪಡೆದ ಸಿಎಂ ಪಿಣರಾಯಿ ವಿಜಯನ್‌ ನಾಚಿಕೆಯಿಲ್ಲದೆ ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದಾರೆ. ದೆಹಲಿಯಲ್ಲಿ ಕುಳಿತು ಇಸ್ರೇಲ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವಾಗ ಕೇರಳದಲ್ಲಿ ಜಿಹಾದ್‌ಗಾಗಿ ಹಮಾಸ್‌ನ ಮುಕ್ತ ಕರೆಗಳು ಅಮಾಯಕ ಕ್ರಿಶ್ಚಿಯನ್ನರ ಮೇಲೆ ದಾಳಿ ಮತ್ತು ಬಾಂಬ್ ಸ್ಫೋಟಗಳಿಗೆ ಕಾರಣವಾಗುತ್ತಿವೆ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದರು.

ರಾಜ್ಯದಲ್ಲಿ ದ್ವೇಷ ಮತ್ತು ಜಿಹಾದ್‌ನ್ನು ಮುಕ್ತವಾಗಿ ಬೋಧಿಸಲು INDIA ಮೈತ್ರಿಕೂಟದ ಎರಡು ರಾಜಕೀಯ ಪಕ್ಷಗಳು ಭಯೋತ್ಪಾದಕ ಸಂಘಟನೆ ಹಮಾಸ್‌ನ ಮುಖ್ಯಸ್ಥರಿಗೆ ಅವಕಾಶ ನೀಡಿರುವುದು ಮಾತ್ರ ಕಷ್ಟ ಎಂದು ಹೇಳಿದ್ದರು.

ಚಂದ್ರಶೇಖರ್‌ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಪಿಣರಾಯ್ ವಿಜಯನ್‌, ಸಚಿವರ ಹೇಳಿಕೆ ಕೋಮುವಾದದಿಂದ ಕೂಡಿದೆ. ವಿಷವುಳ್ಳವರು ವಿಷವನ್ನು ಉಗುಳುತ್ತಲೇ ಇರುತ್ತಾರೆ. ಜವಾಬ್ದಾರಿಯುತ ಸಚಿವರಾಗಿ ಅವರು ಘಟನೆಯ ಬಗ್ಗೆ ತನಿಖೆ ನಡೆಸುತ್ತಿರುವ ತನಿಖಾ ಸಂಸ್ಥೆಗಳಿಗೆ ಕನಿಷ್ಠ ಗೌರವವನ್ನು ತೋರಿಸಬೇಕಾಗಿತ್ತು. ನಿರ್ದಿಷ್ಟ ವರ್ಗವನ್ನು ಗುರಿಯಾಗಿಸಿಕೊಂಡು ತನಿಖೆಯ ಆರಂಭಿಕ ದಿನಗಳಲ್ಲಿ ಸಾರ್ವಜನಿಕ ಹೇಳಿಕೆಗಳನ್ನು ನೀಡಲು ಪ್ರಾರಂಭಿಸಿದ್ದಾರೆ ಎಂದು ಹೇಳಿದ್ದರು.

ಇದನ್ನು ಓದಿ: ವಂಚನೆ ಪ್ರಕರಣ: ಬಿಜೆಪಿ ಮುಖಂಡನ ವಿರುದ್ಧದ ಪ್ರಕರಣ ಕೈಬಿಡುವಂತೆ ಆಗ್ರಹಿಸಿದ ಸಿಬಿಐ ವರದಿ ತಿರಸ್ಕರಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...