Homeಮುಖಪುಟಕೊಚ್ಚಿ: ಸ್ಪೋಟ ಪ್ರಕರಣ ಮುಂದಿಟ್ಟು ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆ; 54 ಪ್ರಕರಣಗಳು ದಾಖಲು

ಕೊಚ್ಚಿ: ಸ್ಪೋಟ ಪ್ರಕರಣ ಮುಂದಿಟ್ಟು ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆ; 54 ಪ್ರಕರಣಗಳು ದಾಖಲು

- Advertisement -
- Advertisement -

ಕೊಚ್ಚಿಯ ಕಲಮಸ್ಸೆರಿ ಬಳಿ ಕ್ರಿಶ್ಚಿಯನ್ ಪ್ರಾರ್ಥನಾ ಸಭೆಯೊಂದರಲ್ಲಿ ಇತ್ತೀಚೆಗೆ ನಡೆದ ಸ್ಫೋಟದ ನಂತರ ಸಾಮಾಜಿಕ ಮಾದ್ಯಮಗಳ ಮೂಲಕ ಕೋಮು ಪ್ರಚೋದನಕಾರಿ ವಿಷಯಗಳನ್ನು ಪ್ರಚಾರ ಮಾಡಿದ್ದಕ್ಕಾಗಿ 54 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಮಲಪ್ಪುರಂ ಜಿಲ್ಲೆಯೊಂದರಲ್ಲಿ 26 ಪ್ರಕರಣಗಳು ದಾಖಲಾಗಿದ್ದರೆ, ಎರ್ನಾಕುಲಂನಲ್ಲಿ 15 ಮತ್ತು ತಿರುವನಂತಪುರಂನಲ್ಲಿ 5 ಪ್ರಕರಣಗಳು ದಾಖಲಾಗಿವೆ. ತ್ರಿಶೂರ್ ನಗರ ಮತ್ತು ಕೊಟ್ಟಾಯಂನಲ್ಲಿ ತಲಾ ಎರಡು ಪ್ರಕರಣಗಳು ದಾಖಲಾಗಿದ್ದು, ಪತ್ತನಂತಿಟ್ಟ, ಅಲಪ್ಪುಝ, ಪಾಲಕ್ಕಾಡ್ ಮತ್ತು ಕೋಝಿಕ್ಕೋಡ್ ಗ್ರಾಮಾಂತರ ಠಾಣೆಗಳಲ್ಲಿ ತಲಾ ಒಂದು ಪ್ರಕರಣಗಳು ದಾಖಲಾಗಿದೆ.

ಕೋಮು ದ್ವೇಷವನ್ನು ಪ್ರಚೋದಿಸುವ ಪೋಸ್ಟ್‌ಗಳನ್ನು ಹಂಚಿಕೊಳ್ಳಲು ನಕಲಿ ಪ್ರೊಫೈಲ್‌ಗಳನ್ನು ಬಳಸಿರುವುದನ್ನು ಪತ್ತೆಹಚ್ಚಲಾಗಿದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೋಮು ದ್ವೇಷಕ್ಕೆ ಪ್ರಚೋದಿಸಿರುವ ನಕಲಿ ಪ್ರೊಫೈಲ್‌ಗಳ ಐಪಿ ವಿಳಾಸಗಳನ್ನು ಪತ್ತೆ ಹಚ್ಚಲು ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಎಕ್ಸ್, ವಾಟ್ಸಾಪ್ ಮತ್ತು ಇತರ ಸಾಮಾಜಿಕ ಮಾದ್ಯಮ ಸಂಸ್ಥೆಗಳಿಗೆ ವಿನಂತಿಗಳನ್ನು ಮಾಡಲಾಗಿದೆ. ಇಂತಹ ಖಾತೆಗಳನ್ನು ಗುರುತಿಸಲು ರಾಜ್ಯದಲ್ಲಿ ಸೈಬರ್ ಸೆಲ್ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ.

ಕೊಚ್ಚಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ಯೆಹೋವನ ಸಾಕ್ಷಿಗಳ ಸಮಾವೇಷದಲ್ಲಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಮಾಡಿದ ಪೋಸ್ಟ್‌ಗೆ ಸಂಬಂಧಿಸಿ ಈ ಮೊದಲು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಎರಡು ಪ್ರಕರಣ ದಾಖಲಾಗಿತ್ತು.

ಐಪಿಸಿ 153 ಮತ್ತು 153 ಎ ಮತ್ತು ಸೆಕ್ಷನ್ 120 (ಒ) ಅಡಿಯಲ್ಲಿ ರಾಜೀವ್ ಚಂದ್ರಶೇಖರ್‌ ವಿರುದ್ಧ ಎರಡು ಪ್ರಕರಣವನ್ನು ದಾಖಲಿಸಲಾಗಿದೆ. ಒಂದು ಕೇಸ್‌ನ್ನು ಕೆಪಿಸಿಸಿ ಡಿಜಿಟಲ್ ಮೀಡಿಯಾ ಕನ್ವೀನರ್ ಪಿ ಸರಿನ್ ನೀಡಿದ ದೂರಿನ ಆಧಾರದ ಕೇರಳ ಪೊಲೀಸರು ದಾಖಲಿಸಿಕೊಂಡಿದ್ದರು. ಇದಕ್ಕೆ ಮೊದಲು ಸಚಿವ ರಾಜೀವ್ ಚಂದ್ರಶೇಖರ್‌ ವಿರುದ್ಧ ಸ್ವಯಂಪ್ರೇರಿತವಾಗಿ ಒಂದು ಪ್ರಕರಣವನ್ನು ಕೇರಳ ಪೊಲೀಸರು ದಾಖಲಿಸಿದ್ದರು.

ಕಳೆದ ವಾರ ಕೇರಳದ ಯೆಹೋವನ ಸಾಕ್ಷಿಗಳ ಸಮಾವೇಷದಲ್ಲಿ ಬಾಂಬ್‌ ಸ್ಪೋಟ ಸಂಭವಿಸಿತ್ತು. ಘಟನೆಯಲ್ಲಿ 3 ಮಂದಿ ಮೃತಪಟ್ಟು, 50 ಮಂದಿ ಗಾಯಗೊಂಡಿದ್ದರು.

ಪ್ರಕರಣದ ಬಗ್ಗೆ ಪೋಸ್ಟ್‌ ಮಾಡಿದ್ದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್‌, ಭ್ರಷ್ಟಾಚಾರದ ಆರೋಪದ ಮೂಲಕ ಅಪಖ್ಯಾತಿ ಪಡೆದ ಸಿಎಂ ಪಿಣರಾಯಿ ವಿಜಯನ್‌ ನಾಚಿಕೆಯಿಲ್ಲದೆ ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದಾರೆ. ದೆಹಲಿಯಲ್ಲಿ ಕುಳಿತು ಇಸ್ರೇಲ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವಾಗ ಕೇರಳದಲ್ಲಿ ಜಿಹಾದ್‌ಗಾಗಿ ಹಮಾಸ್‌ನ ಮುಕ್ತ ಕರೆಗಳು ಅಮಾಯಕ ಕ್ರಿಶ್ಚಿಯನ್ನರ ಮೇಲೆ ದಾಳಿ ಮತ್ತು ಬಾಂಬ್ ಸ್ಫೋಟಗಳಿಗೆ ಕಾರಣವಾಗುತ್ತಿವೆ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದರು.

ರಾಜ್ಯದಲ್ಲಿ ದ್ವೇಷ ಮತ್ತು ಜಿಹಾದ್‌ನ್ನು ಮುಕ್ತವಾಗಿ ಬೋಧಿಸಲು INDIA ಮೈತ್ರಿಕೂಟದ ಎರಡು ರಾಜಕೀಯ ಪಕ್ಷಗಳು ಭಯೋತ್ಪಾದಕ ಸಂಘಟನೆ ಹಮಾಸ್‌ನ ಮುಖ್ಯಸ್ಥರಿಗೆ ಅವಕಾಶ ನೀಡಿರುವುದು ಮಾತ್ರ ಕಷ್ಟ ಎಂದು ಹೇಳಿದ್ದರು.

ಚಂದ್ರಶೇಖರ್‌ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಪಿಣರಾಯ್ ವಿಜಯನ್‌, ಸಚಿವರ ಹೇಳಿಕೆ ಕೋಮುವಾದದಿಂದ ಕೂಡಿದೆ. ವಿಷವುಳ್ಳವರು ವಿಷವನ್ನು ಉಗುಳುತ್ತಲೇ ಇರುತ್ತಾರೆ. ಜವಾಬ್ದಾರಿಯುತ ಸಚಿವರಾಗಿ ಅವರು ಘಟನೆಯ ಬಗ್ಗೆ ತನಿಖೆ ನಡೆಸುತ್ತಿರುವ ತನಿಖಾ ಸಂಸ್ಥೆಗಳಿಗೆ ಕನಿಷ್ಠ ಗೌರವವನ್ನು ತೋರಿಸಬೇಕಾಗಿತ್ತು. ನಿರ್ದಿಷ್ಟ ವರ್ಗವನ್ನು ಗುರಿಯಾಗಿಸಿಕೊಂಡು ತನಿಖೆಯ ಆರಂಭಿಕ ದಿನಗಳಲ್ಲಿ ಸಾರ್ವಜನಿಕ ಹೇಳಿಕೆಗಳನ್ನು ನೀಡಲು ಪ್ರಾರಂಭಿಸಿದ್ದಾರೆ ಎಂದು ಹೇಳಿದ್ದರು.

ಇದನ್ನು ಓದಿ: ವಂಚನೆ ಪ್ರಕರಣ: ಬಿಜೆಪಿ ಮುಖಂಡನ ವಿರುದ್ಧದ ಪ್ರಕರಣ ಕೈಬಿಡುವಂತೆ ಆಗ್ರಹಿಸಿದ ಸಿಬಿಐ ವರದಿ ತಿರಸ್ಕರಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...