Homeಕರ್ನಾಟಕ547 ಕೋಟಿ ರೂ. ಕ್ರಿಯಾ ಯೋಜನೆಗೆ ತುಮಕೂರು ಜಿಪಂ ಅನುಮೋದನೆ

547 ಕೋಟಿ ರೂ. ಕ್ರಿಯಾ ಯೋಜನೆಗೆ ತುಮಕೂರು ಜಿಪಂ ಅನುಮೋದನೆ

ಕಳೆದ ಹಲವು ದಿನಗಳಿಂದ ವಾಕ್ಸಮರಕ್ಕೆ ಗುರಿಯಾಗಿದ್ದ ಅಧ್ಯಕ್ಷರು ಮತ್ತು ಆರೋಪಗಳ ಸುರಿಮಳೆಗರೆದಿದ್ದ ಸದಸ್ಯರು ಸಾಮಾನ್ಯ ಸಭೆಯಲ್ಲಿ ಏನೂ ಆಗಿಲ್ಲವೆಂಬಂತೆ ನಡೆದುಕೊಂಡು ಅಚ್ಚರಿ ಮೂಡಿಸಿದರು

- Advertisement -
- Advertisement -

ಶಿರಾ ಉಪಚುನಾವಣೆ ಹಿನ್ನೆಲೆಯಲ್ಲಿ ಅಧ್ಯಕ್ಷರ ವಿರುದ್ಧ ಸಿಡಿದೆದ್ದಿದ್ದ ಸದಸ್ಯರು ಕೋರಂ ಕೊರತೆ ಸೃಷ್ಟಿದ್ದರು. ಜಿಲ್ಲಾ ಉಸ್ತುವಾರಿ ಸಚಿವರು ಸೂಪರ್ ಸೀಡ್ ಮಾಡುವ ಎಚ್ಚರಿಕೆಯನ್ನೂ ನೀಡಿದ್ದರು. ಆದರೆ ಇಂದು ನಡೆದ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆ ಅಡ್ಡಿಆತಂಕಗಳಿಲ್ಲದೆ ಸುಸೂತ್ರವಾಗಿ ನಡೆಯಿತು. ಎಲ್ಲ ಸದಸ್ಯರೂ ಸಭೆಯಲ್ಲಿ ಹಾಜರಿದ್ದರೂ ಅಧ್ಯಕ್ಷರ ವಿರುದ್ದ ಸಣ್ಣ ದನಿಯೂ ವ್ಯಕ್ತಪಡಿಸದೆ 547 ಕೋಟಿ ರೂಪಾಯಿ ಕ್ರಿಯಾ ಯೋಜನೆಗೆ ಅನುಮೋದನೆ ದೊರೆತಿದೆ.

ಹೌದು, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ರವಿಕುಮಾರ್ ಅವರನ್ನು ಅಧ್ಯಕ್ಷಗಾದಿಯಿಂದ ಇಳಿಸಲು ಪ್ರಯತ್ನ ನಡೆದಿತ್ತು. ಮೂರು ಪಕ್ಷಗಳ ಸದಸ್ಯರೂ ಕೂಡ ಅಧ್ಯಕ್ಷರ ಕಾರ್ಯ ವೈಖರಿ ವಿರುದ್ಧ ಸಿಡಿದೆದ್ದಿದ್ದರು. ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂಬ ಆರೋಪವನ್ನೂ ಮಾಡಿದ್ದರು.

ಸರ್ಕಾರಿ ನೌಕರರ ಸಂಘದ ಮಾಜಿ ಜಿಲ್ಲಾಧ್ಯಕ್ಷ ಸಣ್ಣ ಮುದ್ದಯ್ಯ ಕಾಡುಗೊಲ್ಲರಿಗೆ ಅಧ್ಯಕ್ಷ ಸ್ಥಾನವನ್ನು ನೀಡಬೇಕೆಂದೂ ಆಗ್ರಹಿಸಿದ್ದರು. ಇಷ್ಟೆಲ್ಲಾ ಗೊಂದಲಗಳ ನಡುವೆಯೇ ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಗೆದ್ದು ಬೀಗಿದ ಮೇಲೆ ನಡೆದ ಸಾಮಾನ್ಯ ಸಭೆಯಲ್ಲಿ ಯಾವೊಬ್ಬ ಸದಸ್ಯರು ಮಾತಾಡದೇ ಮೌನಕ್ಕೆ ಶರಣಾಗಿದ್ದುದು ಅಚ್ಚರಿ ಉಂಟು ಮಾಡಿತು.

ಕಳೆದ ನಾಲ್ಲು ದಿನಗಳ ಹಿಂದೆ ನಡೆದ ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ಸಾಮಾನ್ಯ ಸಭೆ ನಡೆಯದೆ ಕ್ರಿಯಾ ಯೋಜನೆಗೆ ಅನುಮೋದನೆ ದೊರೆತಿಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ತುಮಕೂರು ಜಿಲ್ಲಾ ಪಂಛಾಯತ್ ಅನ್ನು ಸೂಪರ್ ಸೀಡ್ ಮಾಡಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನೂ ನೀಡಿದ್ದರು.

ಇದನ್ನೂ ಓದಿ: ಎರಡು-ಮೂರು ದಿನದಲ್ಲಿ ಸಚಿವ ಸಂಪುಟ ವಿಸ್ತರಣೆ: ಮುಖ್ಯಮಂತ್ರಿ ಯಡಿಯೂರಪ್ಪ

ಆದರೆ ಹಿರಿಯ ಸದಸ್ಯ ವೈ.ಎಚ್.ಹುಚ್ಚಯ್ಯ ಅವರು ನಾನುಗೌರಿ.ಕಾಂ ಜೊತೆ ಮಾತನಾಡಿ “ಜಿಪಂ ಸೂಪರ್ ಸೀಡ್ ಮಾಡುವುದಿಲ್ಲ. ಸಚಿವರು ಹಾಗೆ ಹೇಳಿರುವುದು ಸದಸ್ಯರಿಗೆ ಎಚ್ಚರಿಕೆ ನೀಡುವುದಕ್ಕಾಗಿ. ನಾಲ್ಕೈದು ತಿಂಗಳು ಮಾತ್ರ ಅಧಿಕಾರ ಅವಧಿ ಇದೆ. ಸಚಿವರ ಉದ್ದೇಶ ಅದಲ್ಲ. ಸುಮಾರು 547 ಕೋಟಿ ರೂಪಾಯಿ ಕ್ರಿಯಾ ಯೋಜನೆಗೆ ಅನುಮೋದನೆ ಸಿಗಬೇಕಾಗಿದೆ. ಅಭಿವೃದ್ಧಿ ಕಾರ್ಯಕಗಳು ಸ್ಥಗಿತವಾಗಿವೆ. ಹಾಗಾಗಿ ಸಚಿವರು ಇಂತಹ ಹೇಳಿಕೆಯನ್ನು ಕೊಟ್ಟಿದ್ದಾರೆ” ಎಂದು ಹೇಳಿದ್ದರು. ಅದರಂತೆಯೇ ಇಂದು ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯರು ಮೌನವಾಗಿ ಕುಳಿತು ಕ್ರಿಯಾ ಯೋಜನೆಗೆ ಒಪ್ಪಿಗೆ ಸೂಚಿಸಿದ್ದಾರೆ.

ಸದಸ್ಯರು ಮೂರು ಸಾಮಾನ್ಯ ಸಭೆಗೆ ಗೈರು ಹಾಜರಾದರೆ ಸದಸ್ಯತ್ವ ರದ್ದಾಗುತ್ತದೆ ಎಂಬ ನಿಯಮವಿದೆ. ಅದಕ್ಕಾಗಿಯೇ ಎಲ್ಲಾ ಸದಸ್ಯರು ಇಂದಿನ ಸಭೆಗೆ ಆಗಮಿಸಿದ್ದರು. ಹನ್ನೊಂದು ಗಂಟೆಗೆ ಸೇರಿದ ಸಭೆ 12 ಗಂಟೆಗೆ ಮುಕ್ತಾಯವಾಯಿತು.

ಅಧ್ಯಕ್ಷರ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಿದ್ದ ಸದಸ್ಯರು ಮೌನಕ್ಕೆ ಶರಣಾಗಿದ್ದರು. ಸೂಪರ್ ಸೀಡ್ ಮಾಡುವ ಹೇಳಿಕೆ ನೀಡಿದ್ದ ಸಚಿವ ಜೆ.ಸಿಮಾಧುಸ್ವಾಮಿ ಅವರೇ ಸಭೆಯಲ್ಲಿ ಕ್ರಿಯಾ ಯೋಜನೆಗೆ ಅನುಮೋದನೆ ಪಡೆದುಕೊಂಡರು. ಸಂಸದ ಬಸವರಾಜು ಕೂಡ ವೇದಿಕೆಯಲ್ಲಿದ್ದರು.

ಒಂದಿಬ್ಬರು ಸದಸ್ಯರು 2018-2019ನೇ ಸಾಲಿನ ಕ್ರಿಯಾ ಯೋಜನೆಗೆ ಅನುಮೋದನೆ ಪಡೆದುಕೊಂಡಿಲ್ಲ ಎಂದು ವಿಷಯ ಪ್ರಸ್ತಾಪಿಸಿ ಅಧ್ಯಕ್ಷರನ್ನು ತಿವಿಯುವ ಕೆಲಸ ಮಾಡಿದರು. ಆದರೆ ಆ ಮಾತುಗಳಿಗೆ ಯಾರೂ ಕಿಮ್ಮತ್ತು ನೀಡಲಿಲ್ಲ. ಅಧ್ಯಕ್ಷೆ ಲತಾ ರವಿಕುಮಾರ್ ಕೂಡ ವೇದಿಕೆಯಲ್ಲಿ ಗಂಭೀರವಾಗಿ ಕುಳಿತುಕೊಂಡು ಸದಸ್ಯರ ನಡೆಯನ್ನು ಗಮನಿಸುತ್ತಿದ್ದರು. ಕಳೆದ ಹಲವು ದಿನಗಳಿಂದ ವಾಕ್ಸಮರಕ್ಕೆ ಗುರಿಯಾಗಿದ್ದ ಅಧ್ಯಕ್ಷರು ಮತ್ತು ಆರೋಪಗಳ ಸುರಿಮಳೆಗರೆದಿದ್ದ ಸದಸ್ಯರು ಏನೂ ಆಗಿಲ್ಲವೆಂಬಂತೆ ನಡೆದುಕೊಂಡು ಪತ್ರಕರ್ತರನ್ನು ಅಚ್ಚರಿಗೆ ದೂಡಿದರು.


ಇದನ್ನೂ ಓದಿ: ಸಿಎಂ ಪುತ್ರ ವಿಜಯೇಂದ್ರ ವಿರುದ್ಧ ದೂರು; ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...