Homeಕರ್ನಾಟಕ547 ಕೋಟಿ ರೂ. ಕ್ರಿಯಾ ಯೋಜನೆಗೆ ತುಮಕೂರು ಜಿಪಂ ಅನುಮೋದನೆ

547 ಕೋಟಿ ರೂ. ಕ್ರಿಯಾ ಯೋಜನೆಗೆ ತುಮಕೂರು ಜಿಪಂ ಅನುಮೋದನೆ

ಕಳೆದ ಹಲವು ದಿನಗಳಿಂದ ವಾಕ್ಸಮರಕ್ಕೆ ಗುರಿಯಾಗಿದ್ದ ಅಧ್ಯಕ್ಷರು ಮತ್ತು ಆರೋಪಗಳ ಸುರಿಮಳೆಗರೆದಿದ್ದ ಸದಸ್ಯರು ಸಾಮಾನ್ಯ ಸಭೆಯಲ್ಲಿ ಏನೂ ಆಗಿಲ್ಲವೆಂಬಂತೆ ನಡೆದುಕೊಂಡು ಅಚ್ಚರಿ ಮೂಡಿಸಿದರು

- Advertisement -
- Advertisement -

ಶಿರಾ ಉಪಚುನಾವಣೆ ಹಿನ್ನೆಲೆಯಲ್ಲಿ ಅಧ್ಯಕ್ಷರ ವಿರುದ್ಧ ಸಿಡಿದೆದ್ದಿದ್ದ ಸದಸ್ಯರು ಕೋರಂ ಕೊರತೆ ಸೃಷ್ಟಿದ್ದರು. ಜಿಲ್ಲಾ ಉಸ್ತುವಾರಿ ಸಚಿವರು ಸೂಪರ್ ಸೀಡ್ ಮಾಡುವ ಎಚ್ಚರಿಕೆಯನ್ನೂ ನೀಡಿದ್ದರು. ಆದರೆ ಇಂದು ನಡೆದ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆ ಅಡ್ಡಿಆತಂಕಗಳಿಲ್ಲದೆ ಸುಸೂತ್ರವಾಗಿ ನಡೆಯಿತು. ಎಲ್ಲ ಸದಸ್ಯರೂ ಸಭೆಯಲ್ಲಿ ಹಾಜರಿದ್ದರೂ ಅಧ್ಯಕ್ಷರ ವಿರುದ್ದ ಸಣ್ಣ ದನಿಯೂ ವ್ಯಕ್ತಪಡಿಸದೆ 547 ಕೋಟಿ ರೂಪಾಯಿ ಕ್ರಿಯಾ ಯೋಜನೆಗೆ ಅನುಮೋದನೆ ದೊರೆತಿದೆ.

ಹೌದು, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ರವಿಕುಮಾರ್ ಅವರನ್ನು ಅಧ್ಯಕ್ಷಗಾದಿಯಿಂದ ಇಳಿಸಲು ಪ್ರಯತ್ನ ನಡೆದಿತ್ತು. ಮೂರು ಪಕ್ಷಗಳ ಸದಸ್ಯರೂ ಕೂಡ ಅಧ್ಯಕ್ಷರ ಕಾರ್ಯ ವೈಖರಿ ವಿರುದ್ಧ ಸಿಡಿದೆದ್ದಿದ್ದರು. ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂಬ ಆರೋಪವನ್ನೂ ಮಾಡಿದ್ದರು.

ಸರ್ಕಾರಿ ನೌಕರರ ಸಂಘದ ಮಾಜಿ ಜಿಲ್ಲಾಧ್ಯಕ್ಷ ಸಣ್ಣ ಮುದ್ದಯ್ಯ ಕಾಡುಗೊಲ್ಲರಿಗೆ ಅಧ್ಯಕ್ಷ ಸ್ಥಾನವನ್ನು ನೀಡಬೇಕೆಂದೂ ಆಗ್ರಹಿಸಿದ್ದರು. ಇಷ್ಟೆಲ್ಲಾ ಗೊಂದಲಗಳ ನಡುವೆಯೇ ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಗೆದ್ದು ಬೀಗಿದ ಮೇಲೆ ನಡೆದ ಸಾಮಾನ್ಯ ಸಭೆಯಲ್ಲಿ ಯಾವೊಬ್ಬ ಸದಸ್ಯರು ಮಾತಾಡದೇ ಮೌನಕ್ಕೆ ಶರಣಾಗಿದ್ದುದು ಅಚ್ಚರಿ ಉಂಟು ಮಾಡಿತು.

ಕಳೆದ ನಾಲ್ಲು ದಿನಗಳ ಹಿಂದೆ ನಡೆದ ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ಸಾಮಾನ್ಯ ಸಭೆ ನಡೆಯದೆ ಕ್ರಿಯಾ ಯೋಜನೆಗೆ ಅನುಮೋದನೆ ದೊರೆತಿಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ತುಮಕೂರು ಜಿಲ್ಲಾ ಪಂಛಾಯತ್ ಅನ್ನು ಸೂಪರ್ ಸೀಡ್ ಮಾಡಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನೂ ನೀಡಿದ್ದರು.

ಇದನ್ನೂ ಓದಿ: ಎರಡು-ಮೂರು ದಿನದಲ್ಲಿ ಸಚಿವ ಸಂಪುಟ ವಿಸ್ತರಣೆ: ಮುಖ್ಯಮಂತ್ರಿ ಯಡಿಯೂರಪ್ಪ

ಆದರೆ ಹಿರಿಯ ಸದಸ್ಯ ವೈ.ಎಚ್.ಹುಚ್ಚಯ್ಯ ಅವರು ನಾನುಗೌರಿ.ಕಾಂ ಜೊತೆ ಮಾತನಾಡಿ “ಜಿಪಂ ಸೂಪರ್ ಸೀಡ್ ಮಾಡುವುದಿಲ್ಲ. ಸಚಿವರು ಹಾಗೆ ಹೇಳಿರುವುದು ಸದಸ್ಯರಿಗೆ ಎಚ್ಚರಿಕೆ ನೀಡುವುದಕ್ಕಾಗಿ. ನಾಲ್ಕೈದು ತಿಂಗಳು ಮಾತ್ರ ಅಧಿಕಾರ ಅವಧಿ ಇದೆ. ಸಚಿವರ ಉದ್ದೇಶ ಅದಲ್ಲ. ಸುಮಾರು 547 ಕೋಟಿ ರೂಪಾಯಿ ಕ್ರಿಯಾ ಯೋಜನೆಗೆ ಅನುಮೋದನೆ ಸಿಗಬೇಕಾಗಿದೆ. ಅಭಿವೃದ್ಧಿ ಕಾರ್ಯಕಗಳು ಸ್ಥಗಿತವಾಗಿವೆ. ಹಾಗಾಗಿ ಸಚಿವರು ಇಂತಹ ಹೇಳಿಕೆಯನ್ನು ಕೊಟ್ಟಿದ್ದಾರೆ” ಎಂದು ಹೇಳಿದ್ದರು. ಅದರಂತೆಯೇ ಇಂದು ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯರು ಮೌನವಾಗಿ ಕುಳಿತು ಕ್ರಿಯಾ ಯೋಜನೆಗೆ ಒಪ್ಪಿಗೆ ಸೂಚಿಸಿದ್ದಾರೆ.

ಸದಸ್ಯರು ಮೂರು ಸಾಮಾನ್ಯ ಸಭೆಗೆ ಗೈರು ಹಾಜರಾದರೆ ಸದಸ್ಯತ್ವ ರದ್ದಾಗುತ್ತದೆ ಎಂಬ ನಿಯಮವಿದೆ. ಅದಕ್ಕಾಗಿಯೇ ಎಲ್ಲಾ ಸದಸ್ಯರು ಇಂದಿನ ಸಭೆಗೆ ಆಗಮಿಸಿದ್ದರು. ಹನ್ನೊಂದು ಗಂಟೆಗೆ ಸೇರಿದ ಸಭೆ 12 ಗಂಟೆಗೆ ಮುಕ್ತಾಯವಾಯಿತು.

ಅಧ್ಯಕ್ಷರ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಿದ್ದ ಸದಸ್ಯರು ಮೌನಕ್ಕೆ ಶರಣಾಗಿದ್ದರು. ಸೂಪರ್ ಸೀಡ್ ಮಾಡುವ ಹೇಳಿಕೆ ನೀಡಿದ್ದ ಸಚಿವ ಜೆ.ಸಿಮಾಧುಸ್ವಾಮಿ ಅವರೇ ಸಭೆಯಲ್ಲಿ ಕ್ರಿಯಾ ಯೋಜನೆಗೆ ಅನುಮೋದನೆ ಪಡೆದುಕೊಂಡರು. ಸಂಸದ ಬಸವರಾಜು ಕೂಡ ವೇದಿಕೆಯಲ್ಲಿದ್ದರು.

ಒಂದಿಬ್ಬರು ಸದಸ್ಯರು 2018-2019ನೇ ಸಾಲಿನ ಕ್ರಿಯಾ ಯೋಜನೆಗೆ ಅನುಮೋದನೆ ಪಡೆದುಕೊಂಡಿಲ್ಲ ಎಂದು ವಿಷಯ ಪ್ರಸ್ತಾಪಿಸಿ ಅಧ್ಯಕ್ಷರನ್ನು ತಿವಿಯುವ ಕೆಲಸ ಮಾಡಿದರು. ಆದರೆ ಆ ಮಾತುಗಳಿಗೆ ಯಾರೂ ಕಿಮ್ಮತ್ತು ನೀಡಲಿಲ್ಲ. ಅಧ್ಯಕ್ಷೆ ಲತಾ ರವಿಕುಮಾರ್ ಕೂಡ ವೇದಿಕೆಯಲ್ಲಿ ಗಂಭೀರವಾಗಿ ಕುಳಿತುಕೊಂಡು ಸದಸ್ಯರ ನಡೆಯನ್ನು ಗಮನಿಸುತ್ತಿದ್ದರು. ಕಳೆದ ಹಲವು ದಿನಗಳಿಂದ ವಾಕ್ಸಮರಕ್ಕೆ ಗುರಿಯಾಗಿದ್ದ ಅಧ್ಯಕ್ಷರು ಮತ್ತು ಆರೋಪಗಳ ಸುರಿಮಳೆಗರೆದಿದ್ದ ಸದಸ್ಯರು ಏನೂ ಆಗಿಲ್ಲವೆಂಬಂತೆ ನಡೆದುಕೊಂಡು ಪತ್ರಕರ್ತರನ್ನು ಅಚ್ಚರಿಗೆ ದೂಡಿದರು.


ಇದನ್ನೂ ಓದಿ: ಸಿಎಂ ಪುತ್ರ ವಿಜಯೇಂದ್ರ ವಿರುದ್ಧ ದೂರು; ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....