Homeಕರ್ನಾಟಕ547 ಕೋಟಿ ರೂ. ಕ್ರಿಯಾ ಯೋಜನೆಗೆ ತುಮಕೂರು ಜಿಪಂ ಅನುಮೋದನೆ

547 ಕೋಟಿ ರೂ. ಕ್ರಿಯಾ ಯೋಜನೆಗೆ ತುಮಕೂರು ಜಿಪಂ ಅನುಮೋದನೆ

ಕಳೆದ ಹಲವು ದಿನಗಳಿಂದ ವಾಕ್ಸಮರಕ್ಕೆ ಗುರಿಯಾಗಿದ್ದ ಅಧ್ಯಕ್ಷರು ಮತ್ತು ಆರೋಪಗಳ ಸುರಿಮಳೆಗರೆದಿದ್ದ ಸದಸ್ಯರು ಸಾಮಾನ್ಯ ಸಭೆಯಲ್ಲಿ ಏನೂ ಆಗಿಲ್ಲವೆಂಬಂತೆ ನಡೆದುಕೊಂಡು ಅಚ್ಚರಿ ಮೂಡಿಸಿದರು

- Advertisement -
- Advertisement -

ಶಿರಾ ಉಪಚುನಾವಣೆ ಹಿನ್ನೆಲೆಯಲ್ಲಿ ಅಧ್ಯಕ್ಷರ ವಿರುದ್ಧ ಸಿಡಿದೆದ್ದಿದ್ದ ಸದಸ್ಯರು ಕೋರಂ ಕೊರತೆ ಸೃಷ್ಟಿದ್ದರು. ಜಿಲ್ಲಾ ಉಸ್ತುವಾರಿ ಸಚಿವರು ಸೂಪರ್ ಸೀಡ್ ಮಾಡುವ ಎಚ್ಚರಿಕೆಯನ್ನೂ ನೀಡಿದ್ದರು. ಆದರೆ ಇಂದು ನಡೆದ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆ ಅಡ್ಡಿಆತಂಕಗಳಿಲ್ಲದೆ ಸುಸೂತ್ರವಾಗಿ ನಡೆಯಿತು. ಎಲ್ಲ ಸದಸ್ಯರೂ ಸಭೆಯಲ್ಲಿ ಹಾಜರಿದ್ದರೂ ಅಧ್ಯಕ್ಷರ ವಿರುದ್ದ ಸಣ್ಣ ದನಿಯೂ ವ್ಯಕ್ತಪಡಿಸದೆ 547 ಕೋಟಿ ರೂಪಾಯಿ ಕ್ರಿಯಾ ಯೋಜನೆಗೆ ಅನುಮೋದನೆ ದೊರೆತಿದೆ.

ಹೌದು, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ರವಿಕುಮಾರ್ ಅವರನ್ನು ಅಧ್ಯಕ್ಷಗಾದಿಯಿಂದ ಇಳಿಸಲು ಪ್ರಯತ್ನ ನಡೆದಿತ್ತು. ಮೂರು ಪಕ್ಷಗಳ ಸದಸ್ಯರೂ ಕೂಡ ಅಧ್ಯಕ್ಷರ ಕಾರ್ಯ ವೈಖರಿ ವಿರುದ್ಧ ಸಿಡಿದೆದ್ದಿದ್ದರು. ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂಬ ಆರೋಪವನ್ನೂ ಮಾಡಿದ್ದರು.

ಸರ್ಕಾರಿ ನೌಕರರ ಸಂಘದ ಮಾಜಿ ಜಿಲ್ಲಾಧ್ಯಕ್ಷ ಸಣ್ಣ ಮುದ್ದಯ್ಯ ಕಾಡುಗೊಲ್ಲರಿಗೆ ಅಧ್ಯಕ್ಷ ಸ್ಥಾನವನ್ನು ನೀಡಬೇಕೆಂದೂ ಆಗ್ರಹಿಸಿದ್ದರು. ಇಷ್ಟೆಲ್ಲಾ ಗೊಂದಲಗಳ ನಡುವೆಯೇ ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಗೆದ್ದು ಬೀಗಿದ ಮೇಲೆ ನಡೆದ ಸಾಮಾನ್ಯ ಸಭೆಯಲ್ಲಿ ಯಾವೊಬ್ಬ ಸದಸ್ಯರು ಮಾತಾಡದೇ ಮೌನಕ್ಕೆ ಶರಣಾಗಿದ್ದುದು ಅಚ್ಚರಿ ಉಂಟು ಮಾಡಿತು.

ಕಳೆದ ನಾಲ್ಲು ದಿನಗಳ ಹಿಂದೆ ನಡೆದ ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ಸಾಮಾನ್ಯ ಸಭೆ ನಡೆಯದೆ ಕ್ರಿಯಾ ಯೋಜನೆಗೆ ಅನುಮೋದನೆ ದೊರೆತಿಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ತುಮಕೂರು ಜಿಲ್ಲಾ ಪಂಛಾಯತ್ ಅನ್ನು ಸೂಪರ್ ಸೀಡ್ ಮಾಡಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನೂ ನೀಡಿದ್ದರು.

ಇದನ್ನೂ ಓದಿ: ಎರಡು-ಮೂರು ದಿನದಲ್ಲಿ ಸಚಿವ ಸಂಪುಟ ವಿಸ್ತರಣೆ: ಮುಖ್ಯಮಂತ್ರಿ ಯಡಿಯೂರಪ್ಪ

ಆದರೆ ಹಿರಿಯ ಸದಸ್ಯ ವೈ.ಎಚ್.ಹುಚ್ಚಯ್ಯ ಅವರು ನಾನುಗೌರಿ.ಕಾಂ ಜೊತೆ ಮಾತನಾಡಿ “ಜಿಪಂ ಸೂಪರ್ ಸೀಡ್ ಮಾಡುವುದಿಲ್ಲ. ಸಚಿವರು ಹಾಗೆ ಹೇಳಿರುವುದು ಸದಸ್ಯರಿಗೆ ಎಚ್ಚರಿಕೆ ನೀಡುವುದಕ್ಕಾಗಿ. ನಾಲ್ಕೈದು ತಿಂಗಳು ಮಾತ್ರ ಅಧಿಕಾರ ಅವಧಿ ಇದೆ. ಸಚಿವರ ಉದ್ದೇಶ ಅದಲ್ಲ. ಸುಮಾರು 547 ಕೋಟಿ ರೂಪಾಯಿ ಕ್ರಿಯಾ ಯೋಜನೆಗೆ ಅನುಮೋದನೆ ಸಿಗಬೇಕಾಗಿದೆ. ಅಭಿವೃದ್ಧಿ ಕಾರ್ಯಕಗಳು ಸ್ಥಗಿತವಾಗಿವೆ. ಹಾಗಾಗಿ ಸಚಿವರು ಇಂತಹ ಹೇಳಿಕೆಯನ್ನು ಕೊಟ್ಟಿದ್ದಾರೆ” ಎಂದು ಹೇಳಿದ್ದರು. ಅದರಂತೆಯೇ ಇಂದು ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯರು ಮೌನವಾಗಿ ಕುಳಿತು ಕ್ರಿಯಾ ಯೋಜನೆಗೆ ಒಪ್ಪಿಗೆ ಸೂಚಿಸಿದ್ದಾರೆ.

ಸದಸ್ಯರು ಮೂರು ಸಾಮಾನ್ಯ ಸಭೆಗೆ ಗೈರು ಹಾಜರಾದರೆ ಸದಸ್ಯತ್ವ ರದ್ದಾಗುತ್ತದೆ ಎಂಬ ನಿಯಮವಿದೆ. ಅದಕ್ಕಾಗಿಯೇ ಎಲ್ಲಾ ಸದಸ್ಯರು ಇಂದಿನ ಸಭೆಗೆ ಆಗಮಿಸಿದ್ದರು. ಹನ್ನೊಂದು ಗಂಟೆಗೆ ಸೇರಿದ ಸಭೆ 12 ಗಂಟೆಗೆ ಮುಕ್ತಾಯವಾಯಿತು.

ಅಧ್ಯಕ್ಷರ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಿದ್ದ ಸದಸ್ಯರು ಮೌನಕ್ಕೆ ಶರಣಾಗಿದ್ದರು. ಸೂಪರ್ ಸೀಡ್ ಮಾಡುವ ಹೇಳಿಕೆ ನೀಡಿದ್ದ ಸಚಿವ ಜೆ.ಸಿಮಾಧುಸ್ವಾಮಿ ಅವರೇ ಸಭೆಯಲ್ಲಿ ಕ್ರಿಯಾ ಯೋಜನೆಗೆ ಅನುಮೋದನೆ ಪಡೆದುಕೊಂಡರು. ಸಂಸದ ಬಸವರಾಜು ಕೂಡ ವೇದಿಕೆಯಲ್ಲಿದ್ದರು.

ಒಂದಿಬ್ಬರು ಸದಸ್ಯರು 2018-2019ನೇ ಸಾಲಿನ ಕ್ರಿಯಾ ಯೋಜನೆಗೆ ಅನುಮೋದನೆ ಪಡೆದುಕೊಂಡಿಲ್ಲ ಎಂದು ವಿಷಯ ಪ್ರಸ್ತಾಪಿಸಿ ಅಧ್ಯಕ್ಷರನ್ನು ತಿವಿಯುವ ಕೆಲಸ ಮಾಡಿದರು. ಆದರೆ ಆ ಮಾತುಗಳಿಗೆ ಯಾರೂ ಕಿಮ್ಮತ್ತು ನೀಡಲಿಲ್ಲ. ಅಧ್ಯಕ್ಷೆ ಲತಾ ರವಿಕುಮಾರ್ ಕೂಡ ವೇದಿಕೆಯಲ್ಲಿ ಗಂಭೀರವಾಗಿ ಕುಳಿತುಕೊಂಡು ಸದಸ್ಯರ ನಡೆಯನ್ನು ಗಮನಿಸುತ್ತಿದ್ದರು. ಕಳೆದ ಹಲವು ದಿನಗಳಿಂದ ವಾಕ್ಸಮರಕ್ಕೆ ಗುರಿಯಾಗಿದ್ದ ಅಧ್ಯಕ್ಷರು ಮತ್ತು ಆರೋಪಗಳ ಸುರಿಮಳೆಗರೆದಿದ್ದ ಸದಸ್ಯರು ಏನೂ ಆಗಿಲ್ಲವೆಂಬಂತೆ ನಡೆದುಕೊಂಡು ಪತ್ರಕರ್ತರನ್ನು ಅಚ್ಚರಿಗೆ ದೂಡಿದರು.


ಇದನ್ನೂ ಓದಿ: ಸಿಎಂ ಪುತ್ರ ವಿಜಯೇಂದ್ರ ವಿರುದ್ಧ ದೂರು; ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...