Homeಕರ್ನಾಟಕರಾಜ್ಯಕ್ಕೆ ಬರಬೇಕಿದ್ದ 5,495 ಕೋಟಿ ರೂ. ವಿಶೇಷ ಅನುದಾನ ತಡೆದವರು ನಿರ್ಮಲಾ ಸೀತಾರಾಮನ್: ಸಿದ್ದರಾಮಯ್ಯ ಆರೋಪ

ರಾಜ್ಯಕ್ಕೆ ಬರಬೇಕಿದ್ದ 5,495 ಕೋಟಿ ರೂ. ವಿಶೇಷ ಅನುದಾನ ತಡೆದವರು ನಿರ್ಮಲಾ ಸೀತಾರಾಮನ್: ಸಿದ್ದರಾಮಯ್ಯ ಆರೋಪ

- Advertisement -
- Advertisement -

15ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ರಾಜ್ಯಕ್ಕೆ ಬರಬೇಕಿದ್ದ 5,495 ಕೋಟಿ ರೂ. ವಿಶೇಷ ಅನುದಾನಕ್ಕೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಒಪ್ಪಿಗೆ ನೀಡಲು ನಿರಾಕರಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಗುರುವಾರ ಜೆಡಿಎಸ್‌ನ ಕೆ.ಎ ತಿಪ್ಪೇಸ್ವಾಮಿ, ಟಿ.ಎ ಶರವಣ ಅವರ ಪ್ರಶ್ನೆಗಳಿಗೆ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ, ಹಣಕಾಸು ಆಯೋಗದ ಶಿಫಾರಸಿನಂತೆ ಅನುದಾನ ಮತ್ತು ತೆರಿಗೆ ಹಂಚಿಕೆ ಮಾಡಲಾಗುತ್ತದೆ. 2018-19ರಲ್ಲಿ 35,894 ಕೋಟಿ ರೂ. ದೊರೆತಿತ್ತು. ನಂತರ ಪ್ರತಿ ವರ್ಷವೂ ಕಡಿಮೆ ದೊರೆತಿದೆ. ನಾಲ್ಕು ವರ್ಷಗಳ ಹಣಕಾಸಿನ ಸ್ಥಿತಿಗತಿಗೆ ಹೋಲಿಸಿದರೆ ಅದು ತೀರ ಕಡಿಮೆ ಮೊತ್ತ. 14ನೇ ಹಣಕಾಸು ಆಯೋಗದಲ್ಲಿ ರಾಜ್ಯದ ಪಾಲು ಶೇ 4.71 ಇತ್ತು. 15ನೇ ಹಣಕಾಸು ಆಯೋಗದಲ್ಲಿ ಅದು ಶೇ. 3.65ಕ್ಕೆ ಕುಸಿದಿದೆ. ಶೇ 1.06ರಷ್ಟು ಕಡಿಮೆ ನಿಗದಿ ಮಾಡಲಾಗಿದೆ ಎಂದು ವಿವರಿಸಿದ್ದಾರೆ.

15ನೇ ಹಣಕಾಸು ಆಯೋಗದ ಶಿಫಾರಸಿನ ಪ್ರಕಾರ ವಿಶೇಷ ಅನುದಾನ ನೀಡುವಂತೆ ರಾಜ್ಯ ಸರ್ಕಾರ ಮಾಡಿದ್ದ ಮನವಿಯನ್ನು ಕೇಂದ್ರ ಪುರಸ್ಕರಿಸಿಲ್ಲ. ಕೇಂದ್ರದ ಮೇಲೆ ಒತ್ತಡ ಹಾಕಲು ರಾಜ್ಯ ನಿರಂತರ ಪ್ರಯತ್ನ ಮಾಡುತ್ತಿದೆ. ಜಿಎಸ್‌ಟಿಯಲ್ಲೂ ರಾಜ್ಯದ ಪಾಲು ಸಮರ್ಪಕವಾಗಿ ಸಿಗುತ್ತಿಲ್ಲ. ಈ ಕುರಿತು ಹಿಂದಿನ ಬಿಜೆಪಿ ಸರ್ಕಾರ ಧ್ವನಿಯನ್ನೇ ಎತ್ತಲಿಲ್ಲ. ಇದನ್ನು ಹೇಳಿದರೆ ವಿರೋಧ ಪಕ್ಷದ ನಾಯಕರಿಗೆ ಬೇಸರವಾಗುತ್ತದೆ ಎಂದರು.

ರಾಜ್ಯದಿಂದ ಕೇಂದ್ರಕ್ಕೆ ಸಂದಾಯವಾಗುವ ಎಲ್ಲ ರೀತಿಯ ತೆರಿಗೆ ಮಾಹಿತಿ ರಾಜ್ಯ ಸರ್ಕಾರದ ಬಳಿ ಇಲ್ಲ. ನೀಡಬೇಕಿರುವ ಪಾಲನ್ನೂ ಸರಿಯಾಗಿ ನೀಡದಿದ್ದರೆ ಹೇಗೆ? ಉತ್ತರದ ರಾಜ್ಯಗಳಿಗೆ ಹೆಚ್ಚಿನ ನೆರವು ನೀಡಲಾಗಿದೆ. ಕರ್ನಾಟಕಕ್ಕೆ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾರೆ.

16ನೇ ಹಣಕಾಸು ಆಯೋಗದ ಮುಂದೆ ರಾಜ್ಯದ ವಾದ ಸಮರ್ಥವಾಗಿ ಮಂಡಿಸುತ್ತೇವೆ. ವಾದ ಮಂಡನೆಗೆ ಅಗತ್ಯವಾದ ಪ್ರಸ್ತಾವನೆ ಸಿದ್ಧಪಡಿಸಲಾಗುತ್ತಿದೆ. ಆಗಿರುವ ತಾರತಮ್ಯ ಸರಿಪಡಿಸಲು ಆಯೋಗಕ್ಕೆ ಕೋರಿಕೆ ಸಲ್ಲಿಸುತ್ತೇವೆ ಎಂದಿದ್ದಾರೆ.

ಅಬಕಾರಿ ಆದಾಯದಲ್ಲಿ ಗಣನೀಯ ಏರಿಕೆಯಾಗಿದೆ. 2022-23ನೇ ಸಾಲಿನಲ್ಲಿ 29,920 ಕೋಟಿ ರೂ. ಬಂದಿದೆ. ವಾಣಿಜ್ಯ ತೆರಿಗೆ ಸೋರಿಕೆ ತಡೆಗೂ ಕ್ರಮ ಕೈಗೊಳ್ಳಲಾಗಿದ್ದು, 1,320 ಕೋಟಿ ರೂ. ವಸೂಲಿ ಮಾಡಲಾಗಿದೆ ಎಂದು ಕಾಂಗ್ರೆಸ್‌ನ ಎಂ ನಾಗರಾಜು ಅವರ ಪ್ರಶ್ನೆಗೆ ಉತ್ತರಿಸಿದರು.

ಇದನ್ನೂ ಓದಿ; ಶಿವಮೊಗ್ಗ ಕೃಷಿ ವಿವಿ ನೇಮಕಾತಿಯಲ್ಲಿ ರೋಸ್ಟರ್ ವಂಚನೆಯಿಂದ 50 ದಲಿತ ಅಭ್ಯರ್ಥಿಗಳಿಗೆ ಅನ್ಯಾಯ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...