Homeಮುಖಪುಟಪಿಎಂ ಕೇರ್ಸ್ ಫಂಡ್‌ನಿಂದ 551 ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆ

ಪಿಎಂ ಕೇರ್ಸ್ ಫಂಡ್‌ನಿಂದ 551 ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆ

- Advertisement -
- Advertisement -

ದೇಶದ ಕೊರೊನಾ ಸೋಂಕಿತರಲ್ಲಿ ಹೆಚ್ಚು ಸಾವಿರಾರು ಮಂದಿ ಆಕ್ಸಿಜನ್ ಪೂರೈಕೆ ಇಲ್ಲದೆ ಸಾವನ್ನಪ್ಪುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪಿಎಂ ಕೇರ್ಸ್‌ನ ನೆರವಿನಲ್ಲಿ 551 ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲಾಗುವುದು ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.

ದೇಶದ ಹಲವು ಸ್ಥಳಗಳಲ್ಲಿ ಆಕ್ಸಿಜನ್ ಕೊರತೆಯ ವರದಿಗಳು ಹೆಚ್ಚಾಗುತ್ತಿರುವ ಕಾರಣ, ಜೀವ ಉಳಿಸುವ ಅನಿಲದ ಲಭ್ಯತೆಯನ್ನು ಹೆಚ್ಚಿಸಲು ದೇಶಾದ್ಯಂತ ಸಾರ್ವಜನಿಕ ಆರೋಗ್ಯ ಸೌಲಭ್ಯ ಘಟಕಗಳಲ್ಲಿ 500 ಕ್ಕೂ ಹೆಚ್ಚು ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲಾಗುವುದು ಎಂದಿದೆ.

551 ಸ್ಥಾವರಗಳ ಸ್ಥಾಪನೆಗೆ ಹಣ ಹಂಚಿಕೆ ಮಾಡಲು ಪಿಎಂ ಕೇರ್ಸ್ ಫಂಡ್ ತಾತ್ವಿಕವಾಗಿ ಅನುಮೋದನೆ ನೀಡಿದೆ ಎಂದು ಪ್ರಧಾನಿ ಕಚೇರಿ (ಪಿಎಂಒ) ಭಾನುವಾರ ತಿಳಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಈ ಘಟಕಗಳನ್ನು ಆದಷ್ಟು ಬೇಗ ಕಾರ್ಯರೂಪಕ್ಕೆ ತರಬೇಕು ಎಂದು ನಿರ್ದೇಶಿಸಿದ್ದಾರೆ ಎಂದು ತಿಳಿಸಿದೆ.

ಇದನ್ನೂ ಓದಿ: ಕೊರೊನಾ ತಲ್ಲಣ: #ModiOxygenDo, भाषणबाज_मोदी, #oxygenbedslekkakodi ಟ್ವಿಟರ್‌ ಟ್ರೆಂಡ್

ಈ ಆಮ್ಲಜನಕ ಉತ್ಪಾದನಾ ಘಟಕಗಳು ಜಿಲ್ಲಾ ಮಟ್ಟದಲ್ಲಿ ಆಮ್ಲಜನಕದ ಲಭ್ಯತೆಗೆ ಪ್ರಮುಖ ಉತ್ತೇಜನ ನೀಡುತ್ತವೆ ಎನ್ನಲಾಗಿದೆ.

ಈ ಮೀಸಲಾದ ಸ್ಥಾವರಗಳನ್ನು ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಜಿಲ್ಲಾ ಕೇಂದ್ರಗಳಲ್ಲಿ ಆಯ್ದ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಥಾಪಿಸಲಾಗುವುದು. ಅವುಗಳ ಹೊಣೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮೂಲಕ  ಮಾಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಜಿಲ್ಲಾ ಕೇಂದ್ರದಲ್ಲಿರುವ ಸರ್ಕಾರಿ ಆಸ್ಪತ್ರೆಗಳಲ್ಲಿ ಪಿಎಸ್‌ಎ (Pressure Swing Adsorption) ಆಮ್ಲಜನಕ ಸ್ಥಾವರಗಳನ್ನು ಸ್ಥಾಪಿಸುವ ಹಿಂದಿನ ಮೂಲ ಉದ್ದೇಶವೆಂದರೆ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದಾಗಿದೆ. ಆಮ್ಲಜನಕ ಉತ್ಪಾದನಾ ಸೌಲಭ್ಯವು ಈ ಆಸ್ಪತ್ರೆಗಳು ಮತ್ತು ಜಿಲ್ಲೆಯ ದಿನನಿತ್ಯದ ವೈದ್ಯಕೀಯ ಆಮ್ಲಜನಕದ ಅಗತ್ಯಗಳನ್ನು ಪೂರೈಸುತ್ತದೆ.

ಇದರಿಂದ ಜಿಲ್ಲೆಗಳಲ್ಲಿನ ಸರ್ಕಾರಿ ಆಸ್ಪತ್ರೆಗಳು ಆಮ್ಲಜನಕದ ಪೂರೈಕೆಯಲ್ಲಿ ಹಠಾತ್ ಅಡೆತಡೆಗಳನ್ನು ಎದುರಿಸುವುದಿಲ್ಲ. ಜೊತೆಗೆ ಕೊರೊನಾ ಸೋಂಕಿತ ರೋಗಿಗಳು ಮತ್ತು ಆಮ್ಲಜನಕ ಅಗತ್ಯವಿರುವ ಇತರ ರೋಗಿಗಳಿಗೆ ಸಹಾಯವಾಗುತ್ತದೆ ಎಂದು ತಿಳಿಸಿದೆ.

ರಾಷ್ಟ್ರ ರಾಜಧಾನಿಯ ಹಲವಾರು ಆಸ್ಪತ್ರೆಗಳು ವೈದ್ಯಕೀಯ ಆಮ್ಲಜನಕದ ತೀವ್ರ ಕೊರತೆಯಿಂದ ಬಳಲುತ್ತಿವೆ. ಕೆಲವು ಆಸ್ಪತ್ರೆಗಳು ಅಲ್ಪಾವಧಿಯ ವ್ಯವಸ್ಥೆಗಳನ್ನು ಮಾಡುವಲ್ಲಿ ಯಶಸ್ವಿಯಾಗಿದ್ದರೂ, ಸೋಂಕಿತರ ತೀವ್ರ ಏರಿಕೆ ನೊಡುತ್ತಿದ್ದರೆ ಈ ಸಮಸ್ಯೆ ಇಲ್ಲಿಗೆ ಮುಗಿಯುವಂತಿಲ್ಲ ಎನ್ನಲಾಗಿದೆ.


ಇದನ್ನೂ ಓದಿ: ಸಾಂಕ್ರಾಮಿಕ ದುರಂತದ ಸಮಯದಲ್ಲಿ ಐಪಿಎಲ್ ಕವರೇಜ್ ಮಾಡುವುದಿಲ್ಲವೆಂದ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...