Homeಕರ್ನಾಟಕಬೆಂಗಳೂರಿನ ನೀರಿನ ಸಮಸ್ಯೆ ನಿವಾರಣೆಗೆ ರೂ. 556 ಕೋಟಿ ಮೀಸಲು: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರಿನ ನೀರಿನ ಸಮಸ್ಯೆ ನಿವಾರಣೆಗೆ ರೂ. 556 ಕೋಟಿ ಮೀಸಲು: ಡಿಸಿಎಂ ಡಿ.ಕೆ ಶಿವಕುಮಾರ್

"ನೋಂದಣಿ ಮಾಡಿಸಿಕೊಳ್ಳದಿದ್ದರೆ ಟ್ಯಾಂಕರ್‌ಗಳು ಸೀಜ್"

- Advertisement -
- Advertisement -

ಬೆಂಗಳೂರು ನಗರದ ಎಲ್ಲಾ ನೀರಿನ ಟ್ಯಾಂಕರ್ ಮಾಲೀಕರು ಮಾ. 7ರ ವೇಳೆಗೆ ನೋಂದಣಿ ಮಾಡಿಸದಿದ್ದರೆ ವಶಕ್ಕೆ ಪಡೆಯಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಕುಡಿಯುವ ನೀರಿನ ಸಮಸ್ಯೆ ವಿಚಾರವಾಗಿ ಬಿಬಿಎಂಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ 3,500 ಟ್ಯಾಂಕರ್‌ಗಳು ಇವೆ. ಈ ಪೈಕಿ ಕೇವಲ 219 ಟ್ಯಾಂಕರ್‌ಗಳು, ಅಂದರೆ ಶೇ 10ರಷ್ಟು ಮಾತ್ರ ನೋಂದಣಿ ಮಾಡಿಸಿಕೊಂಡಿವೆ. ಚಿಕ್ಕ, ದೊಡ್ಡ, ಹಾಲಿನ ಟ್ಯಾಂಕರ್‌ಗಳನ್ನು ಶೀಘ್ರ ಸರ್ಕಾರದ ವಶಕ್ಕೆ ಪಡೆಯಲಾಗುವುದು. ಬಿಡಬ್ಲ್ಯೂಎಸ್‌ಎಸ್‌ಬಿಯವರು 210 ಟ್ಯಾಂಕರ್‌ಗಳನ್ನು ಈಗಾಗಲೇ ನೀರಿನ ಪೂರೈಕೆಗೆ ಬಳಸುತ್ತಿದ್ದಾರೆ ಎಂದು ತಿಳಿಸಿದರು.

ನೀರು ಸರ್ಕಾರಕ್ಕೆ ಸೇರಿದ್ದು

ನೀರು ಸರ್ಕಾರಕ್ಕೆ ಸೇರಿದ್ದು, ಯಾವುದೇ ವ್ಯಕ್ತಿಗೆ ಸೇರಿದ್ದಲ್ಲ. ಯಾವ ನೀರನ್ನು ಬೇಕಾದರೂ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಹಕ್ಕು ಸರ್ಕಾರಕ್ಕೆ ಇದೆ. ಬೆಂಗಳೂರು ಹೊರವಲಯದಲ್ಲಿ ಅಂತರ್ಜಲ ಮಟ್ಟ ಹೆಚ್ಚಿರುವ ಕಡೆಯಿಂದಲೂ ನೀರಿನ ಪೂರೈಕೆ ಮಾಡಲು ಸಿದ್ದರಾಗಿ ಇರಬೇಕು ಎಂದು ಅಧಿಕಾರಿಗಳಿಗೆ ತಿಳಿಸಲಾಗಿದೆ. ನೀರಿನ ಸಮಸ್ಯೆ ಬಗೆಹರಿಸಲು ಚುನಾವಣಾ ನೀತಿ ಸಂಹಿತೆ ಅಡ್ಡ ಬರುವುದಿಲ್ಲ ಎಂದು ಡಿಕೆಶಿ ತಿಳಿಸಿದರು.

ಸಮಸ್ಯೆ ಬಗೆಹರಿಸಲು ₹556 ಕೋಟಿ ಮೀಸಲು

ಬೆಂಗಳೂರು ನಗರದ ಎಲ್ಲಾ ಶಾಸಕರಿಗೆ ನೀರಿನ ಸಮಸ್ಯೆ ಬಗೆಹರಿಸಲು ₹10 ಕೋಟಿ ಅನುದಾನ ನೀಡಲಾಗಿದೆ. ಬಿಬಿಎಂಪಿಗೆ ₹148 ಕೋಟಿ, ಬಿಡಬ್ಲ್ಯೂ ಎಸ್‌ಎಸ್‌ಬಿಯಿಂದ ₹128 ಕೋಟಿ ಸೇರಿ ಒಟ್ಟು 556 ಕೋಟಿ ಹಣವನ್ನು ಕುಡಿಯುವ ನೀರಿನ ಪೂರೈಕೆಗೆ ಮೀಸಲಿಡಲಾಗಿದೆ ಎಂದು ಮಾಹಿತಿ ನೀಡಿದರು.

ನೀರಿನ ಸಮಸ್ಯೆ ಬಗೆಹರಿಸಲು ಬಿಬಿಎಂಪಿ ಸಹಾಯವಾಣಿ ಮತ್ತು ವಾರ್ಡ್ ವಾರು ದೂರು ಕೇಂದ್ರಗಳನ್ನು ತೆರೆಯಲಾಗುವುದು. ಸಮಸ್ಯೆ ಆಲಿಸಲು ವಾರ್ ರೂಂಗಳು ಕೆಲಸ ನಿರ್ವಹಿಸಲಿವೆ. ಹಿರಿಯ ಅಧಿಕಾರಿಗಳು ಸೇರಿದಂತೆ ನಾನು ಸಹ ಪದೇ,‌ ಪದೇ ಪರಿಶೀಲನೆ ನಡೆಸುತ್ತೇನೆ ಎಂದರು.

ಕುಡಿಯುವ ನೀರನ್ನು ಪೂರೈಕೆ ಮಾಡುವುದು ಸರ್ಕಾರದ ಜವಾಬ್ದಾರಿ. ಬೆಂಗಳೂರಿನ ಜನತೆ ಗಾಬರಿಯಾಗುವುದು ಬೇಡ. ಪ್ರತಿಯೊಬ್ಬರಿಗೂ ನೀರು ನೀಡುವುದು ನಮ್ಮ ಕರ್ತವ್ಯ ಎಂದು ಹೇಳಿದರು.

ನಗರದಲ್ಲಿವೆ 15 ಸಾವಿರ ಕೊಳವೆ ಬಾವಿಗಳು

ಪ್ರಸ್ತುತ ನಗರದಲ್ಲಿ 15 ಸಾವಿರ ಕೊಳವೆ ಬಾವಿಗಳಿವೆ. ದಾಖಲೆಗಳ ಪ್ರಕಾರ 16,781 ಕೊಳವೆ ಬಾವಿಗಳಿವೆ. ಇದರಲ್ಲಿ 6,997 ಕೊಳವೆ ಬಾವಿಗಳು ಬತ್ತಿ ಹೋಗಿದ್ದು, 7,784 ಕೊಳವೆ ಬಾವಿಗಳು ಚಾಲ್ತಿಯಲ್ಲಿವೆ. ಹೊಸ ಕೊಳವೆ ಬಾವಿ ಕೊರೆಸಲು ಸ್ಥಳೀಯ ಗುತ್ತಿಗೆದಾರರು ಮತ್ತು ತಮಿಳುನಾಡಿನ ಕೊಳವೆಬಾವಿ ಕೊರೆಯುವವರ ನಡುವೆ ದರದ ವಿಚಾರವಾಗಿ ಒಂದಷ್ಟು ಗೊಂದಲಗಳಿದ್ದು, ಇದನ್ನು ಶೀಘ್ರ ಬಗೆಹರಿಸಲಾಗುವುದು ಎಂದರು.

ನೀರು ಪೂರೈಕೆಗೆ ಹಾಲಿನ ಟ್ಯಾಂಕರ್‌ಗಳು

ನಿರುಪಯುಕ್ತ ಹಾಲಿನ ಟ್ಯಾಂಕರ್‌ಗಳನ್ನು ನೀರು ಸರಬರಾಜಿಗೆ ಬಳಕೆ ಮಾಡಲು ಸೂಚಿಸಲಾಗಿದೆ. ಕೆಎಂಎಫ್ ವ್ಯಾಪ್ತಿಯ ಎಲ್ಲಾ ಘಟಕಗಳಿಂದ ಟ್ಯಾಂಕರ್‌ಗಳನ್ನು ತರಿಸಿ ಸ್ವಚ್ಚಗೊಳಿಸಿ ಬಳಸಬೇಕು ಎಂದು ಹೇಳಲಾಗಿದೆ. ಈ ಟ್ಯಾಂಕರ್‌ಗಳನ್ನು ನೀರಿನ ಸಮಸ್ಯೆ ಬಗೆಹರಿಯುವ ತನಕ ಬಳಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಟ್ಯಾಂಕರ್ ನೀರು ಪೂರೈಕೆಗೆ ರೂ.500 ರಿಂದ 2 ಸಾವಿರದ ವರೆಗೂ ವಸೂಲಿ ಮಾಡುತ್ತಿದ್ದಾರೆ. ಈ ಗೊಂದಲದ ಕುರಿತು ಅಸೋಸಿಯೇಷನ್ ಬಳಿ ಮಾತನಾಡಿ, ನೀರಿನ ದರವನ್ನು ಕಿ.ಮೀಗೆ ಇಂತಿಷ್ಟು ಎಂದು ನಿಗದಿ ಮಾಡಲಾಗುವುದು. 110 ಹಳ್ಳಿಗಳಿಗೆ ಮೇ ಅಂತ್ಯದ ವೇಳೆಗೆ ಕಾವೇರಿ ನೀರು ಪೂರೈಕೆ ಮಾಡಲಾಗುವುಸು. 775 ಎಂಎಲ್‌ಡಿ ನೀರು ಆದಷ್ಟು ಬೇಗ ಜನರಿಗೆ ಪೂರೈಸಲಾಗುವುದು ಎಂದು ಡಿಕೆಶಿ ಭರವಸೆ ನೀಡಿದರು.

ನಿಷ್ಕ್ರಿಯವಾಗಿರುವ ಎಲ್ಲಾ ಶುದ್ದ ಕುಡಿಯುವ ನೀರಿನ ಘಟಕಗಳು ಚಾಲನೆಯಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಸಮಸ್ಯೆ ನಿವಾರಣೆಗೆ ಜವಾಬ್ದಾರಿಯುತ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಸಂಬಂಧಪಟ್ಟ ಎಲ್ಲಾ ಇಲಾಖೆಯವರಿಗೆ, ಮುಖ್ಯವಾಗಿ ಬೆಸ್ಕಾಂ ಅವರಿಗೆ ನಗರದಲ್ಲಿ ಚಾಲನೆಯಲ್ಲಿ ಇರುವ ಕೃಷಿ, ವಾಣಿಜ್ಯ ಬಳಕೆಯ ಕೊಳವೆ ಬಾವಿಗಳನ್ನು ದಾಖಲಿಸಬೇಕು ಎಂದು ಸೂಚನೆ ನೀಡಲಾಗಿದೆ. ನಾಗರಿಕರು ಕೂಡ ಅನಗತ್ಯವಾಗಿ ನೀರನ್ನು ಬಳಕೆ ಮಾಡಬಾರದು. ಉದ್ಯಾನಗಳಿಗೆ, ಇತರೇ ಬಳಕೆಗೆ ಸಂಸ್ಕರಿಸಿದ ನೀರನ್ನು ಪೂರೈಸಲಾಗುವುದು. ಭೀಕರ ಬರಗಾಲದಲ್ಲಿ ನೀರಿನ ಮಿತ ಬಳಕೆ ಮಾಡಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ : ಪಾಕಿಸ್ತಾನ ಪರ ಘೋಷಣೆ ಆರೋಪ: ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...