Homeಕರ್ನಾಟಕಬೆಂಗಳೂರಿನ ನೀರಿನ ಸಮಸ್ಯೆ ನಿವಾರಣೆಗೆ ರೂ. 556 ಕೋಟಿ ಮೀಸಲು: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರಿನ ನೀರಿನ ಸಮಸ್ಯೆ ನಿವಾರಣೆಗೆ ರೂ. 556 ಕೋಟಿ ಮೀಸಲು: ಡಿಸಿಎಂ ಡಿ.ಕೆ ಶಿವಕುಮಾರ್

"ನೋಂದಣಿ ಮಾಡಿಸಿಕೊಳ್ಳದಿದ್ದರೆ ಟ್ಯಾಂಕರ್‌ಗಳು ಸೀಜ್"

- Advertisement -
- Advertisement -

ಬೆಂಗಳೂರು ನಗರದ ಎಲ್ಲಾ ನೀರಿನ ಟ್ಯಾಂಕರ್ ಮಾಲೀಕರು ಮಾ. 7ರ ವೇಳೆಗೆ ನೋಂದಣಿ ಮಾಡಿಸದಿದ್ದರೆ ವಶಕ್ಕೆ ಪಡೆಯಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಕುಡಿಯುವ ನೀರಿನ ಸಮಸ್ಯೆ ವಿಚಾರವಾಗಿ ಬಿಬಿಎಂಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ 3,500 ಟ್ಯಾಂಕರ್‌ಗಳು ಇವೆ. ಈ ಪೈಕಿ ಕೇವಲ 219 ಟ್ಯಾಂಕರ್‌ಗಳು, ಅಂದರೆ ಶೇ 10ರಷ್ಟು ಮಾತ್ರ ನೋಂದಣಿ ಮಾಡಿಸಿಕೊಂಡಿವೆ. ಚಿಕ್ಕ, ದೊಡ್ಡ, ಹಾಲಿನ ಟ್ಯಾಂಕರ್‌ಗಳನ್ನು ಶೀಘ್ರ ಸರ್ಕಾರದ ವಶಕ್ಕೆ ಪಡೆಯಲಾಗುವುದು. ಬಿಡಬ್ಲ್ಯೂಎಸ್‌ಎಸ್‌ಬಿಯವರು 210 ಟ್ಯಾಂಕರ್‌ಗಳನ್ನು ಈಗಾಗಲೇ ನೀರಿನ ಪೂರೈಕೆಗೆ ಬಳಸುತ್ತಿದ್ದಾರೆ ಎಂದು ತಿಳಿಸಿದರು.

ನೀರು ಸರ್ಕಾರಕ್ಕೆ ಸೇರಿದ್ದು

ನೀರು ಸರ್ಕಾರಕ್ಕೆ ಸೇರಿದ್ದು, ಯಾವುದೇ ವ್ಯಕ್ತಿಗೆ ಸೇರಿದ್ದಲ್ಲ. ಯಾವ ನೀರನ್ನು ಬೇಕಾದರೂ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಹಕ್ಕು ಸರ್ಕಾರಕ್ಕೆ ಇದೆ. ಬೆಂಗಳೂರು ಹೊರವಲಯದಲ್ಲಿ ಅಂತರ್ಜಲ ಮಟ್ಟ ಹೆಚ್ಚಿರುವ ಕಡೆಯಿಂದಲೂ ನೀರಿನ ಪೂರೈಕೆ ಮಾಡಲು ಸಿದ್ದರಾಗಿ ಇರಬೇಕು ಎಂದು ಅಧಿಕಾರಿಗಳಿಗೆ ತಿಳಿಸಲಾಗಿದೆ. ನೀರಿನ ಸಮಸ್ಯೆ ಬಗೆಹರಿಸಲು ಚುನಾವಣಾ ನೀತಿ ಸಂಹಿತೆ ಅಡ್ಡ ಬರುವುದಿಲ್ಲ ಎಂದು ಡಿಕೆಶಿ ತಿಳಿಸಿದರು.

ಸಮಸ್ಯೆ ಬಗೆಹರಿಸಲು ₹556 ಕೋಟಿ ಮೀಸಲು

ಬೆಂಗಳೂರು ನಗರದ ಎಲ್ಲಾ ಶಾಸಕರಿಗೆ ನೀರಿನ ಸಮಸ್ಯೆ ಬಗೆಹರಿಸಲು ₹10 ಕೋಟಿ ಅನುದಾನ ನೀಡಲಾಗಿದೆ. ಬಿಬಿಎಂಪಿಗೆ ₹148 ಕೋಟಿ, ಬಿಡಬ್ಲ್ಯೂ ಎಸ್‌ಎಸ್‌ಬಿಯಿಂದ ₹128 ಕೋಟಿ ಸೇರಿ ಒಟ್ಟು 556 ಕೋಟಿ ಹಣವನ್ನು ಕುಡಿಯುವ ನೀರಿನ ಪೂರೈಕೆಗೆ ಮೀಸಲಿಡಲಾಗಿದೆ ಎಂದು ಮಾಹಿತಿ ನೀಡಿದರು.

ನೀರಿನ ಸಮಸ್ಯೆ ಬಗೆಹರಿಸಲು ಬಿಬಿಎಂಪಿ ಸಹಾಯವಾಣಿ ಮತ್ತು ವಾರ್ಡ್ ವಾರು ದೂರು ಕೇಂದ್ರಗಳನ್ನು ತೆರೆಯಲಾಗುವುದು. ಸಮಸ್ಯೆ ಆಲಿಸಲು ವಾರ್ ರೂಂಗಳು ಕೆಲಸ ನಿರ್ವಹಿಸಲಿವೆ. ಹಿರಿಯ ಅಧಿಕಾರಿಗಳು ಸೇರಿದಂತೆ ನಾನು ಸಹ ಪದೇ,‌ ಪದೇ ಪರಿಶೀಲನೆ ನಡೆಸುತ್ತೇನೆ ಎಂದರು.

ಕುಡಿಯುವ ನೀರನ್ನು ಪೂರೈಕೆ ಮಾಡುವುದು ಸರ್ಕಾರದ ಜವಾಬ್ದಾರಿ. ಬೆಂಗಳೂರಿನ ಜನತೆ ಗಾಬರಿಯಾಗುವುದು ಬೇಡ. ಪ್ರತಿಯೊಬ್ಬರಿಗೂ ನೀರು ನೀಡುವುದು ನಮ್ಮ ಕರ್ತವ್ಯ ಎಂದು ಹೇಳಿದರು.

ನಗರದಲ್ಲಿವೆ 15 ಸಾವಿರ ಕೊಳವೆ ಬಾವಿಗಳು

ಪ್ರಸ್ತುತ ನಗರದಲ್ಲಿ 15 ಸಾವಿರ ಕೊಳವೆ ಬಾವಿಗಳಿವೆ. ದಾಖಲೆಗಳ ಪ್ರಕಾರ 16,781 ಕೊಳವೆ ಬಾವಿಗಳಿವೆ. ಇದರಲ್ಲಿ 6,997 ಕೊಳವೆ ಬಾವಿಗಳು ಬತ್ತಿ ಹೋಗಿದ್ದು, 7,784 ಕೊಳವೆ ಬಾವಿಗಳು ಚಾಲ್ತಿಯಲ್ಲಿವೆ. ಹೊಸ ಕೊಳವೆ ಬಾವಿ ಕೊರೆಸಲು ಸ್ಥಳೀಯ ಗುತ್ತಿಗೆದಾರರು ಮತ್ತು ತಮಿಳುನಾಡಿನ ಕೊಳವೆಬಾವಿ ಕೊರೆಯುವವರ ನಡುವೆ ದರದ ವಿಚಾರವಾಗಿ ಒಂದಷ್ಟು ಗೊಂದಲಗಳಿದ್ದು, ಇದನ್ನು ಶೀಘ್ರ ಬಗೆಹರಿಸಲಾಗುವುದು ಎಂದರು.

ನೀರು ಪೂರೈಕೆಗೆ ಹಾಲಿನ ಟ್ಯಾಂಕರ್‌ಗಳು

ನಿರುಪಯುಕ್ತ ಹಾಲಿನ ಟ್ಯಾಂಕರ್‌ಗಳನ್ನು ನೀರು ಸರಬರಾಜಿಗೆ ಬಳಕೆ ಮಾಡಲು ಸೂಚಿಸಲಾಗಿದೆ. ಕೆಎಂಎಫ್ ವ್ಯಾಪ್ತಿಯ ಎಲ್ಲಾ ಘಟಕಗಳಿಂದ ಟ್ಯಾಂಕರ್‌ಗಳನ್ನು ತರಿಸಿ ಸ್ವಚ್ಚಗೊಳಿಸಿ ಬಳಸಬೇಕು ಎಂದು ಹೇಳಲಾಗಿದೆ. ಈ ಟ್ಯಾಂಕರ್‌ಗಳನ್ನು ನೀರಿನ ಸಮಸ್ಯೆ ಬಗೆಹರಿಯುವ ತನಕ ಬಳಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಟ್ಯಾಂಕರ್ ನೀರು ಪೂರೈಕೆಗೆ ರೂ.500 ರಿಂದ 2 ಸಾವಿರದ ವರೆಗೂ ವಸೂಲಿ ಮಾಡುತ್ತಿದ್ದಾರೆ. ಈ ಗೊಂದಲದ ಕುರಿತು ಅಸೋಸಿಯೇಷನ್ ಬಳಿ ಮಾತನಾಡಿ, ನೀರಿನ ದರವನ್ನು ಕಿ.ಮೀಗೆ ಇಂತಿಷ್ಟು ಎಂದು ನಿಗದಿ ಮಾಡಲಾಗುವುದು. 110 ಹಳ್ಳಿಗಳಿಗೆ ಮೇ ಅಂತ್ಯದ ವೇಳೆಗೆ ಕಾವೇರಿ ನೀರು ಪೂರೈಕೆ ಮಾಡಲಾಗುವುಸು. 775 ಎಂಎಲ್‌ಡಿ ನೀರು ಆದಷ್ಟು ಬೇಗ ಜನರಿಗೆ ಪೂರೈಸಲಾಗುವುದು ಎಂದು ಡಿಕೆಶಿ ಭರವಸೆ ನೀಡಿದರು.

ನಿಷ್ಕ್ರಿಯವಾಗಿರುವ ಎಲ್ಲಾ ಶುದ್ದ ಕುಡಿಯುವ ನೀರಿನ ಘಟಕಗಳು ಚಾಲನೆಯಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಸಮಸ್ಯೆ ನಿವಾರಣೆಗೆ ಜವಾಬ್ದಾರಿಯುತ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಸಂಬಂಧಪಟ್ಟ ಎಲ್ಲಾ ಇಲಾಖೆಯವರಿಗೆ, ಮುಖ್ಯವಾಗಿ ಬೆಸ್ಕಾಂ ಅವರಿಗೆ ನಗರದಲ್ಲಿ ಚಾಲನೆಯಲ್ಲಿ ಇರುವ ಕೃಷಿ, ವಾಣಿಜ್ಯ ಬಳಕೆಯ ಕೊಳವೆ ಬಾವಿಗಳನ್ನು ದಾಖಲಿಸಬೇಕು ಎಂದು ಸೂಚನೆ ನೀಡಲಾಗಿದೆ. ನಾಗರಿಕರು ಕೂಡ ಅನಗತ್ಯವಾಗಿ ನೀರನ್ನು ಬಳಕೆ ಮಾಡಬಾರದು. ಉದ್ಯಾನಗಳಿಗೆ, ಇತರೇ ಬಳಕೆಗೆ ಸಂಸ್ಕರಿಸಿದ ನೀರನ್ನು ಪೂರೈಸಲಾಗುವುದು. ಭೀಕರ ಬರಗಾಲದಲ್ಲಿ ನೀರಿನ ಮಿತ ಬಳಕೆ ಮಾಡಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ : ಪಾಕಿಸ್ತಾನ ಪರ ಘೋಷಣೆ ಆರೋಪ: ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...