Homeಕರ್ನಾಟಕಬೆಂಗಳೂರಿನ ನೀರಿನ ಸಮಸ್ಯೆ ನಿವಾರಣೆಗೆ ರೂ. 556 ಕೋಟಿ ಮೀಸಲು: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರಿನ ನೀರಿನ ಸಮಸ್ಯೆ ನಿವಾರಣೆಗೆ ರೂ. 556 ಕೋಟಿ ಮೀಸಲು: ಡಿಸಿಎಂ ಡಿ.ಕೆ ಶಿವಕುಮಾರ್

"ನೋಂದಣಿ ಮಾಡಿಸಿಕೊಳ್ಳದಿದ್ದರೆ ಟ್ಯಾಂಕರ್‌ಗಳು ಸೀಜ್"

- Advertisement -
- Advertisement -

ಬೆಂಗಳೂರು ನಗರದ ಎಲ್ಲಾ ನೀರಿನ ಟ್ಯಾಂಕರ್ ಮಾಲೀಕರು ಮಾ. 7ರ ವೇಳೆಗೆ ನೋಂದಣಿ ಮಾಡಿಸದಿದ್ದರೆ ವಶಕ್ಕೆ ಪಡೆಯಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಕುಡಿಯುವ ನೀರಿನ ಸಮಸ್ಯೆ ವಿಚಾರವಾಗಿ ಬಿಬಿಎಂಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ 3,500 ಟ್ಯಾಂಕರ್‌ಗಳು ಇವೆ. ಈ ಪೈಕಿ ಕೇವಲ 219 ಟ್ಯಾಂಕರ್‌ಗಳು, ಅಂದರೆ ಶೇ 10ರಷ್ಟು ಮಾತ್ರ ನೋಂದಣಿ ಮಾಡಿಸಿಕೊಂಡಿವೆ. ಚಿಕ್ಕ, ದೊಡ್ಡ, ಹಾಲಿನ ಟ್ಯಾಂಕರ್‌ಗಳನ್ನು ಶೀಘ್ರ ಸರ್ಕಾರದ ವಶಕ್ಕೆ ಪಡೆಯಲಾಗುವುದು. ಬಿಡಬ್ಲ್ಯೂಎಸ್‌ಎಸ್‌ಬಿಯವರು 210 ಟ್ಯಾಂಕರ್‌ಗಳನ್ನು ಈಗಾಗಲೇ ನೀರಿನ ಪೂರೈಕೆಗೆ ಬಳಸುತ್ತಿದ್ದಾರೆ ಎಂದು ತಿಳಿಸಿದರು.

ನೀರು ಸರ್ಕಾರಕ್ಕೆ ಸೇರಿದ್ದು

ನೀರು ಸರ್ಕಾರಕ್ಕೆ ಸೇರಿದ್ದು, ಯಾವುದೇ ವ್ಯಕ್ತಿಗೆ ಸೇರಿದ್ದಲ್ಲ. ಯಾವ ನೀರನ್ನು ಬೇಕಾದರೂ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಹಕ್ಕು ಸರ್ಕಾರಕ್ಕೆ ಇದೆ. ಬೆಂಗಳೂರು ಹೊರವಲಯದಲ್ಲಿ ಅಂತರ್ಜಲ ಮಟ್ಟ ಹೆಚ್ಚಿರುವ ಕಡೆಯಿಂದಲೂ ನೀರಿನ ಪೂರೈಕೆ ಮಾಡಲು ಸಿದ್ದರಾಗಿ ಇರಬೇಕು ಎಂದು ಅಧಿಕಾರಿಗಳಿಗೆ ತಿಳಿಸಲಾಗಿದೆ. ನೀರಿನ ಸಮಸ್ಯೆ ಬಗೆಹರಿಸಲು ಚುನಾವಣಾ ನೀತಿ ಸಂಹಿತೆ ಅಡ್ಡ ಬರುವುದಿಲ್ಲ ಎಂದು ಡಿಕೆಶಿ ತಿಳಿಸಿದರು.

ಸಮಸ್ಯೆ ಬಗೆಹರಿಸಲು ₹556 ಕೋಟಿ ಮೀಸಲು

ಬೆಂಗಳೂರು ನಗರದ ಎಲ್ಲಾ ಶಾಸಕರಿಗೆ ನೀರಿನ ಸಮಸ್ಯೆ ಬಗೆಹರಿಸಲು ₹10 ಕೋಟಿ ಅನುದಾನ ನೀಡಲಾಗಿದೆ. ಬಿಬಿಎಂಪಿಗೆ ₹148 ಕೋಟಿ, ಬಿಡಬ್ಲ್ಯೂ ಎಸ್‌ಎಸ್‌ಬಿಯಿಂದ ₹128 ಕೋಟಿ ಸೇರಿ ಒಟ್ಟು 556 ಕೋಟಿ ಹಣವನ್ನು ಕುಡಿಯುವ ನೀರಿನ ಪೂರೈಕೆಗೆ ಮೀಸಲಿಡಲಾಗಿದೆ ಎಂದು ಮಾಹಿತಿ ನೀಡಿದರು.

ನೀರಿನ ಸಮಸ್ಯೆ ಬಗೆಹರಿಸಲು ಬಿಬಿಎಂಪಿ ಸಹಾಯವಾಣಿ ಮತ್ತು ವಾರ್ಡ್ ವಾರು ದೂರು ಕೇಂದ್ರಗಳನ್ನು ತೆರೆಯಲಾಗುವುದು. ಸಮಸ್ಯೆ ಆಲಿಸಲು ವಾರ್ ರೂಂಗಳು ಕೆಲಸ ನಿರ್ವಹಿಸಲಿವೆ. ಹಿರಿಯ ಅಧಿಕಾರಿಗಳು ಸೇರಿದಂತೆ ನಾನು ಸಹ ಪದೇ,‌ ಪದೇ ಪರಿಶೀಲನೆ ನಡೆಸುತ್ತೇನೆ ಎಂದರು.

ಕುಡಿಯುವ ನೀರನ್ನು ಪೂರೈಕೆ ಮಾಡುವುದು ಸರ್ಕಾರದ ಜವಾಬ್ದಾರಿ. ಬೆಂಗಳೂರಿನ ಜನತೆ ಗಾಬರಿಯಾಗುವುದು ಬೇಡ. ಪ್ರತಿಯೊಬ್ಬರಿಗೂ ನೀರು ನೀಡುವುದು ನಮ್ಮ ಕರ್ತವ್ಯ ಎಂದು ಹೇಳಿದರು.

ನಗರದಲ್ಲಿವೆ 15 ಸಾವಿರ ಕೊಳವೆ ಬಾವಿಗಳು

ಪ್ರಸ್ತುತ ನಗರದಲ್ಲಿ 15 ಸಾವಿರ ಕೊಳವೆ ಬಾವಿಗಳಿವೆ. ದಾಖಲೆಗಳ ಪ್ರಕಾರ 16,781 ಕೊಳವೆ ಬಾವಿಗಳಿವೆ. ಇದರಲ್ಲಿ 6,997 ಕೊಳವೆ ಬಾವಿಗಳು ಬತ್ತಿ ಹೋಗಿದ್ದು, 7,784 ಕೊಳವೆ ಬಾವಿಗಳು ಚಾಲ್ತಿಯಲ್ಲಿವೆ. ಹೊಸ ಕೊಳವೆ ಬಾವಿ ಕೊರೆಸಲು ಸ್ಥಳೀಯ ಗುತ್ತಿಗೆದಾರರು ಮತ್ತು ತಮಿಳುನಾಡಿನ ಕೊಳವೆಬಾವಿ ಕೊರೆಯುವವರ ನಡುವೆ ದರದ ವಿಚಾರವಾಗಿ ಒಂದಷ್ಟು ಗೊಂದಲಗಳಿದ್ದು, ಇದನ್ನು ಶೀಘ್ರ ಬಗೆಹರಿಸಲಾಗುವುದು ಎಂದರು.

ನೀರು ಪೂರೈಕೆಗೆ ಹಾಲಿನ ಟ್ಯಾಂಕರ್‌ಗಳು

ನಿರುಪಯುಕ್ತ ಹಾಲಿನ ಟ್ಯಾಂಕರ್‌ಗಳನ್ನು ನೀರು ಸರಬರಾಜಿಗೆ ಬಳಕೆ ಮಾಡಲು ಸೂಚಿಸಲಾಗಿದೆ. ಕೆಎಂಎಫ್ ವ್ಯಾಪ್ತಿಯ ಎಲ್ಲಾ ಘಟಕಗಳಿಂದ ಟ್ಯಾಂಕರ್‌ಗಳನ್ನು ತರಿಸಿ ಸ್ವಚ್ಚಗೊಳಿಸಿ ಬಳಸಬೇಕು ಎಂದು ಹೇಳಲಾಗಿದೆ. ಈ ಟ್ಯಾಂಕರ್‌ಗಳನ್ನು ನೀರಿನ ಸಮಸ್ಯೆ ಬಗೆಹರಿಯುವ ತನಕ ಬಳಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಟ್ಯಾಂಕರ್ ನೀರು ಪೂರೈಕೆಗೆ ರೂ.500 ರಿಂದ 2 ಸಾವಿರದ ವರೆಗೂ ವಸೂಲಿ ಮಾಡುತ್ತಿದ್ದಾರೆ. ಈ ಗೊಂದಲದ ಕುರಿತು ಅಸೋಸಿಯೇಷನ್ ಬಳಿ ಮಾತನಾಡಿ, ನೀರಿನ ದರವನ್ನು ಕಿ.ಮೀಗೆ ಇಂತಿಷ್ಟು ಎಂದು ನಿಗದಿ ಮಾಡಲಾಗುವುದು. 110 ಹಳ್ಳಿಗಳಿಗೆ ಮೇ ಅಂತ್ಯದ ವೇಳೆಗೆ ಕಾವೇರಿ ನೀರು ಪೂರೈಕೆ ಮಾಡಲಾಗುವುಸು. 775 ಎಂಎಲ್‌ಡಿ ನೀರು ಆದಷ್ಟು ಬೇಗ ಜನರಿಗೆ ಪೂರೈಸಲಾಗುವುದು ಎಂದು ಡಿಕೆಶಿ ಭರವಸೆ ನೀಡಿದರು.

ನಿಷ್ಕ್ರಿಯವಾಗಿರುವ ಎಲ್ಲಾ ಶುದ್ದ ಕುಡಿಯುವ ನೀರಿನ ಘಟಕಗಳು ಚಾಲನೆಯಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಸಮಸ್ಯೆ ನಿವಾರಣೆಗೆ ಜವಾಬ್ದಾರಿಯುತ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಸಂಬಂಧಪಟ್ಟ ಎಲ್ಲಾ ಇಲಾಖೆಯವರಿಗೆ, ಮುಖ್ಯವಾಗಿ ಬೆಸ್ಕಾಂ ಅವರಿಗೆ ನಗರದಲ್ಲಿ ಚಾಲನೆಯಲ್ಲಿ ಇರುವ ಕೃಷಿ, ವಾಣಿಜ್ಯ ಬಳಕೆಯ ಕೊಳವೆ ಬಾವಿಗಳನ್ನು ದಾಖಲಿಸಬೇಕು ಎಂದು ಸೂಚನೆ ನೀಡಲಾಗಿದೆ. ನಾಗರಿಕರು ಕೂಡ ಅನಗತ್ಯವಾಗಿ ನೀರನ್ನು ಬಳಕೆ ಮಾಡಬಾರದು. ಉದ್ಯಾನಗಳಿಗೆ, ಇತರೇ ಬಳಕೆಗೆ ಸಂಸ್ಕರಿಸಿದ ನೀರನ್ನು ಪೂರೈಸಲಾಗುವುದು. ಭೀಕರ ಬರಗಾಲದಲ್ಲಿ ನೀರಿನ ಮಿತ ಬಳಕೆ ಮಾಡಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ : ಪಾಕಿಸ್ತಾನ ಪರ ಘೋಷಣೆ ಆರೋಪ: ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...