Homeಕರ್ನಾಟಕಬೆಂಗಳೂರಿನ ನೀರಿನ ಸಮಸ್ಯೆ ನಿವಾರಣೆಗೆ ರೂ. 556 ಕೋಟಿ ಮೀಸಲು: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರಿನ ನೀರಿನ ಸಮಸ್ಯೆ ನಿವಾರಣೆಗೆ ರೂ. 556 ಕೋಟಿ ಮೀಸಲು: ಡಿಸಿಎಂ ಡಿ.ಕೆ ಶಿವಕುಮಾರ್

"ನೋಂದಣಿ ಮಾಡಿಸಿಕೊಳ್ಳದಿದ್ದರೆ ಟ್ಯಾಂಕರ್‌ಗಳು ಸೀಜ್"

- Advertisement -
- Advertisement -

ಬೆಂಗಳೂರು ನಗರದ ಎಲ್ಲಾ ನೀರಿನ ಟ್ಯಾಂಕರ್ ಮಾಲೀಕರು ಮಾ. 7ರ ವೇಳೆಗೆ ನೋಂದಣಿ ಮಾಡಿಸದಿದ್ದರೆ ವಶಕ್ಕೆ ಪಡೆಯಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಕುಡಿಯುವ ನೀರಿನ ಸಮಸ್ಯೆ ವಿಚಾರವಾಗಿ ಬಿಬಿಎಂಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ 3,500 ಟ್ಯಾಂಕರ್‌ಗಳು ಇವೆ. ಈ ಪೈಕಿ ಕೇವಲ 219 ಟ್ಯಾಂಕರ್‌ಗಳು, ಅಂದರೆ ಶೇ 10ರಷ್ಟು ಮಾತ್ರ ನೋಂದಣಿ ಮಾಡಿಸಿಕೊಂಡಿವೆ. ಚಿಕ್ಕ, ದೊಡ್ಡ, ಹಾಲಿನ ಟ್ಯಾಂಕರ್‌ಗಳನ್ನು ಶೀಘ್ರ ಸರ್ಕಾರದ ವಶಕ್ಕೆ ಪಡೆಯಲಾಗುವುದು. ಬಿಡಬ್ಲ್ಯೂಎಸ್‌ಎಸ್‌ಬಿಯವರು 210 ಟ್ಯಾಂಕರ್‌ಗಳನ್ನು ಈಗಾಗಲೇ ನೀರಿನ ಪೂರೈಕೆಗೆ ಬಳಸುತ್ತಿದ್ದಾರೆ ಎಂದು ತಿಳಿಸಿದರು.

ನೀರು ಸರ್ಕಾರಕ್ಕೆ ಸೇರಿದ್ದು

ನೀರು ಸರ್ಕಾರಕ್ಕೆ ಸೇರಿದ್ದು, ಯಾವುದೇ ವ್ಯಕ್ತಿಗೆ ಸೇರಿದ್ದಲ್ಲ. ಯಾವ ನೀರನ್ನು ಬೇಕಾದರೂ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಹಕ್ಕು ಸರ್ಕಾರಕ್ಕೆ ಇದೆ. ಬೆಂಗಳೂರು ಹೊರವಲಯದಲ್ಲಿ ಅಂತರ್ಜಲ ಮಟ್ಟ ಹೆಚ್ಚಿರುವ ಕಡೆಯಿಂದಲೂ ನೀರಿನ ಪೂರೈಕೆ ಮಾಡಲು ಸಿದ್ದರಾಗಿ ಇರಬೇಕು ಎಂದು ಅಧಿಕಾರಿಗಳಿಗೆ ತಿಳಿಸಲಾಗಿದೆ. ನೀರಿನ ಸಮಸ್ಯೆ ಬಗೆಹರಿಸಲು ಚುನಾವಣಾ ನೀತಿ ಸಂಹಿತೆ ಅಡ್ಡ ಬರುವುದಿಲ್ಲ ಎಂದು ಡಿಕೆಶಿ ತಿಳಿಸಿದರು.

ಸಮಸ್ಯೆ ಬಗೆಹರಿಸಲು ₹556 ಕೋಟಿ ಮೀಸಲು

ಬೆಂಗಳೂರು ನಗರದ ಎಲ್ಲಾ ಶಾಸಕರಿಗೆ ನೀರಿನ ಸಮಸ್ಯೆ ಬಗೆಹರಿಸಲು ₹10 ಕೋಟಿ ಅನುದಾನ ನೀಡಲಾಗಿದೆ. ಬಿಬಿಎಂಪಿಗೆ ₹148 ಕೋಟಿ, ಬಿಡಬ್ಲ್ಯೂ ಎಸ್‌ಎಸ್‌ಬಿಯಿಂದ ₹128 ಕೋಟಿ ಸೇರಿ ಒಟ್ಟು 556 ಕೋಟಿ ಹಣವನ್ನು ಕುಡಿಯುವ ನೀರಿನ ಪೂರೈಕೆಗೆ ಮೀಸಲಿಡಲಾಗಿದೆ ಎಂದು ಮಾಹಿತಿ ನೀಡಿದರು.

ನೀರಿನ ಸಮಸ್ಯೆ ಬಗೆಹರಿಸಲು ಬಿಬಿಎಂಪಿ ಸಹಾಯವಾಣಿ ಮತ್ತು ವಾರ್ಡ್ ವಾರು ದೂರು ಕೇಂದ್ರಗಳನ್ನು ತೆರೆಯಲಾಗುವುದು. ಸಮಸ್ಯೆ ಆಲಿಸಲು ವಾರ್ ರೂಂಗಳು ಕೆಲಸ ನಿರ್ವಹಿಸಲಿವೆ. ಹಿರಿಯ ಅಧಿಕಾರಿಗಳು ಸೇರಿದಂತೆ ನಾನು ಸಹ ಪದೇ,‌ ಪದೇ ಪರಿಶೀಲನೆ ನಡೆಸುತ್ತೇನೆ ಎಂದರು.

ಕುಡಿಯುವ ನೀರನ್ನು ಪೂರೈಕೆ ಮಾಡುವುದು ಸರ್ಕಾರದ ಜವಾಬ್ದಾರಿ. ಬೆಂಗಳೂರಿನ ಜನತೆ ಗಾಬರಿಯಾಗುವುದು ಬೇಡ. ಪ್ರತಿಯೊಬ್ಬರಿಗೂ ನೀರು ನೀಡುವುದು ನಮ್ಮ ಕರ್ತವ್ಯ ಎಂದು ಹೇಳಿದರು.

ನಗರದಲ್ಲಿವೆ 15 ಸಾವಿರ ಕೊಳವೆ ಬಾವಿಗಳು

ಪ್ರಸ್ತುತ ನಗರದಲ್ಲಿ 15 ಸಾವಿರ ಕೊಳವೆ ಬಾವಿಗಳಿವೆ. ದಾಖಲೆಗಳ ಪ್ರಕಾರ 16,781 ಕೊಳವೆ ಬಾವಿಗಳಿವೆ. ಇದರಲ್ಲಿ 6,997 ಕೊಳವೆ ಬಾವಿಗಳು ಬತ್ತಿ ಹೋಗಿದ್ದು, 7,784 ಕೊಳವೆ ಬಾವಿಗಳು ಚಾಲ್ತಿಯಲ್ಲಿವೆ. ಹೊಸ ಕೊಳವೆ ಬಾವಿ ಕೊರೆಸಲು ಸ್ಥಳೀಯ ಗುತ್ತಿಗೆದಾರರು ಮತ್ತು ತಮಿಳುನಾಡಿನ ಕೊಳವೆಬಾವಿ ಕೊರೆಯುವವರ ನಡುವೆ ದರದ ವಿಚಾರವಾಗಿ ಒಂದಷ್ಟು ಗೊಂದಲಗಳಿದ್ದು, ಇದನ್ನು ಶೀಘ್ರ ಬಗೆಹರಿಸಲಾಗುವುದು ಎಂದರು.

ನೀರು ಪೂರೈಕೆಗೆ ಹಾಲಿನ ಟ್ಯಾಂಕರ್‌ಗಳು

ನಿರುಪಯುಕ್ತ ಹಾಲಿನ ಟ್ಯಾಂಕರ್‌ಗಳನ್ನು ನೀರು ಸರಬರಾಜಿಗೆ ಬಳಕೆ ಮಾಡಲು ಸೂಚಿಸಲಾಗಿದೆ. ಕೆಎಂಎಫ್ ವ್ಯಾಪ್ತಿಯ ಎಲ್ಲಾ ಘಟಕಗಳಿಂದ ಟ್ಯಾಂಕರ್‌ಗಳನ್ನು ತರಿಸಿ ಸ್ವಚ್ಚಗೊಳಿಸಿ ಬಳಸಬೇಕು ಎಂದು ಹೇಳಲಾಗಿದೆ. ಈ ಟ್ಯಾಂಕರ್‌ಗಳನ್ನು ನೀರಿನ ಸಮಸ್ಯೆ ಬಗೆಹರಿಯುವ ತನಕ ಬಳಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಟ್ಯಾಂಕರ್ ನೀರು ಪೂರೈಕೆಗೆ ರೂ.500 ರಿಂದ 2 ಸಾವಿರದ ವರೆಗೂ ವಸೂಲಿ ಮಾಡುತ್ತಿದ್ದಾರೆ. ಈ ಗೊಂದಲದ ಕುರಿತು ಅಸೋಸಿಯೇಷನ್ ಬಳಿ ಮಾತನಾಡಿ, ನೀರಿನ ದರವನ್ನು ಕಿ.ಮೀಗೆ ಇಂತಿಷ್ಟು ಎಂದು ನಿಗದಿ ಮಾಡಲಾಗುವುದು. 110 ಹಳ್ಳಿಗಳಿಗೆ ಮೇ ಅಂತ್ಯದ ವೇಳೆಗೆ ಕಾವೇರಿ ನೀರು ಪೂರೈಕೆ ಮಾಡಲಾಗುವುಸು. 775 ಎಂಎಲ್‌ಡಿ ನೀರು ಆದಷ್ಟು ಬೇಗ ಜನರಿಗೆ ಪೂರೈಸಲಾಗುವುದು ಎಂದು ಡಿಕೆಶಿ ಭರವಸೆ ನೀಡಿದರು.

ನಿಷ್ಕ್ರಿಯವಾಗಿರುವ ಎಲ್ಲಾ ಶುದ್ದ ಕುಡಿಯುವ ನೀರಿನ ಘಟಕಗಳು ಚಾಲನೆಯಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಸಮಸ್ಯೆ ನಿವಾರಣೆಗೆ ಜವಾಬ್ದಾರಿಯುತ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಸಂಬಂಧಪಟ್ಟ ಎಲ್ಲಾ ಇಲಾಖೆಯವರಿಗೆ, ಮುಖ್ಯವಾಗಿ ಬೆಸ್ಕಾಂ ಅವರಿಗೆ ನಗರದಲ್ಲಿ ಚಾಲನೆಯಲ್ಲಿ ಇರುವ ಕೃಷಿ, ವಾಣಿಜ್ಯ ಬಳಕೆಯ ಕೊಳವೆ ಬಾವಿಗಳನ್ನು ದಾಖಲಿಸಬೇಕು ಎಂದು ಸೂಚನೆ ನೀಡಲಾಗಿದೆ. ನಾಗರಿಕರು ಕೂಡ ಅನಗತ್ಯವಾಗಿ ನೀರನ್ನು ಬಳಕೆ ಮಾಡಬಾರದು. ಉದ್ಯಾನಗಳಿಗೆ, ಇತರೇ ಬಳಕೆಗೆ ಸಂಸ್ಕರಿಸಿದ ನೀರನ್ನು ಪೂರೈಸಲಾಗುವುದು. ಭೀಕರ ಬರಗಾಲದಲ್ಲಿ ನೀರಿನ ಮಿತ ಬಳಕೆ ಮಾಡಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ : ಪಾಕಿಸ್ತಾನ ಪರ ಘೋಷಣೆ ಆರೋಪ: ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...