Homeಮುಖಪುಟ55ನೇ ಜಿಎಸ್‌ಟಿ ಮಂಡಳಿ ಸಭೆ : ವಿಮೆ ಕಂತಿಗೆ ತೆರಿಗೆ ಕಡಿತ ಮುಂದೂಡಿಕೆ

55ನೇ ಜಿಎಸ್‌ಟಿ ಮಂಡಳಿ ಸಭೆ : ವಿಮೆ ಕಂತಿಗೆ ತೆರಿಗೆ ಕಡಿತ ಮುಂದೂಡಿಕೆ

- Advertisement -
- Advertisement -

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಶನಿವಾರ (ಡಿ.21) ನಡೆದ 55ನೇ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮಂಡಳಿಯ ಸಭೆಯಲ್ಲಿ ಆರೋಗ್ಯ ಮತ್ತು ಜೀವ ವಿಮೆ ಕಂತಿನ ಮೇಲಿನ ಜಿಎಸ್‌ಟಿ ಕಡಿತಗೊಳಿಸುವ ನಿರ್ಧಾರವನ್ನು ಮುಂದೂಡಲಾಗಿದೆ.

ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಮತ್ತು ಹಣಕಾಸು ಮಂತ್ರಿಗಳ ಉಪಸ್ಥಿತಿಯಲ್ಲಿ ರಾಜಸ್ಥಾನದಲ್ಲಿ ನಡೆದ ಸಭೆಯಲ್ಲಿ ವಿಮಾ ಕಂತಿನ ಮೇಲಿನ ತೆರಿಗೆ ಪರಿಷ್ಕರಣೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಮೊದಲು ಹೆಚ್ಚಿನ ಚರ್ಚೆ ಹಾಗೂ ಪರಾಮರ್ಶೆ ನಡೆಸುವ ಅಗತ್ಯವಿದೆ ಎಂದು ಮಂಡಳಿ ಹೇಳಿದೆ.

ಸ್ವಿಗ್ಗಿ ಮತ್ತು ಝೊಮ್ಯಾಟೋದ ಆಹಾರ ವಿತರಣೆ ಮೇಲೆ ಪ್ರಸ್ತುತ ಶೇ.18ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿದೆ. ಇದನ್ನು ಶೇ.5ಕ್ಕೆ ಇಳಿಸಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿತ್ತು. ಆದರೆ, ಸದ್ಯಕ್ಕೆ ಇದನ್ನೂ ಮುಂದೂಡಲಾಗಿದೆ.

ಏವಿಯೇಷನ್ ​​ಟರ್ಬೈನ್ ಫ್ಯೂಯಲ್ (ಎಟಿಎಫ್) ಅಥವಾ ವಿಮಾನ ಇಂಧನವನ್ನು ಜಿಎಸ್‌ಟಿ ವ್ಯಾಪ್ತಿಗೆ ಸೇರಿಸುವ ಕುರಿತ ಸಭೆಯ ಕಾರ್ಯಸೂಚಿಯಲ್ಲಿನ (ಸಭೆಯ ಅಜೆಂಡಾದ) ಮತ್ತೊಂದು ಮಹತ್ವದ ಅಂಶವನ್ನು ಮಂಡಳಿಯು ತಿರಸ್ಕರಿಸಿದೆ. ಪ್ರಸ್ತುತ, ಎಟಿಎಫ್ ಅಬಕಾರಿ ಸುಂಕ ಮತ್ತು ಮೌಲ್ಯವರ್ಧಿತ ತೆರಿಗೆಗೆ (ವ್ಯಾಟ್) ಒಳಪಟ್ಟಿದೆ. ಇದು ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿದೆ. ಹೆಚ್ಚಿನ ವೆಚ್ಚಗಳು ಅಂತಿಮವಾಗಿ ಟಿಕೆಟ್ ದರಗಳ ಮೇಲೆ ಪರಿಣಾಮ ಬೀರುವುದರಿಂದ ಇದನ್ನು ಜಿಎಸ್‌ಟಿ ಅಡಿಯಲ್ಲಿ ತರಲು ಕೋರಲಾಗಿದೆ.

ರಾಜ್ಯಗಳ ಸಹಕಾರ ಬೇಕಿದೆ : ನಿರ್ಮಲಾ ಸೀತಾರಾಮನ್

ವಿಮಾನ ಇಂಧನವನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವ ಬಗ್ಗೆ ರಾಜ್ಯಗಳು ಒಪ್ಪಲು ಸಿದ್ದವಿಲ್ಲ. ಕೇಂದ್ರ ಸರ್ಕಾರವೊಂದೇ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಇವಿ ಮಾರಾಟ ತೆರಿಗೆ ಪರಿಷ್ಕರಣೆ

ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಎಲೆಕ್ಟ್ರಾನಿಕ್ ವಾಹನಗಳ (ಇವಿ) ಮಾರಾಟ ತೆರಿಗೆಯನ್ನು ಪರಿಷ್ಕರಣೆ ಮಾಡಲಾಗಿದೆ. ವಿದ್ಯುತ್ ಚಾಲಿತ ಹೊಸ ಕಾರುಗಳಿಗೆ ಶೇ.5ರಷ್ಟು ಜಿಎಸ್‌ಟಿ ವಿಧಿಸಲು ನಿರ್ಧರಿಸಲಾಗಿದೆ. ಆದರೆ, ಸೆಕೆಂಡ್ ಹ್ಯಾಂಡ್ ಇವಿ ಕಾರನ್ನು ಅದರ ಮಾಲೀಕ ನೇರವಾಗಿ ಮಾರಾಟ ಮಾಡಿದರೆ ಜಿಎಸ್‌ಟಿ ಅನ್ವಯಿಸುವುದಿಲ್ಲ. ಯಾವುದಾದರು ಕಂಪನಿಯು ಸೆಕೆಂಡ್ ಹ್ಯಾಂಡ್ ಇವಿ ಮಾರಿದರೆ ಅಥವಾ ಮಾರಾಟಗಾರರು ಸೆಕೆಂಡ್ ಹ್ಯಾಂಡ್ ಇವಿ ಕಾರನ್ನು ಮಾರ್ಪಡಿಸಿ ಮಾರಿದರೆ ಶೇ.18ರಷ್ಟು ಜಿಎಸ್‌ಟಿ ಅನ್ವಯವಾಗಲಿದೆ.

55ನೇ ಜಿಎಸ್‌ಟಿ ಸಭೆಯ ಇತರ ನಿರ್ಣಯಗಳು :

  • ಅಂತಿಮ ಬಳಕೆಯ ಹೊರತಾಗಿಯೂ, ಬಲವರ್ಧಿತ ಅಕ್ಕಿ ಕಾಳುಗಳ ಜಿಎಸ್‌ಟಿ ದರವನ್ನು ಶೇ. 18ರಿಂದ ರಿಂದ ಶೇ.5ಕ್ಕೆ ಇಳಿಸಲಾಗಿದೆ. ಆಹಾರ ಪದಾರ್ಥವನ್ನು ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ (ಪಿಡಿಎಸ್) ತಂದಿರುವುದನ್ನು ಖಚಿತಪಡಿಸಿಕೊಳ್ಳುವುದು ಇದರ ಉದ್ದೇಶವಾಗಿದೆ.
  • ಸರ್ಕಾರದ ಯೋಜನೆಯಡಿಯಲ್ಲಿ ಆರ್ಥಿಕ ದುರ್ಬಲ ವರ್ಗಗಳಿಗೆ (ಇಡಬ್ಲ್ಯುಎಸ್‌) ಉಚಿತ ವಿತರಣೆಗಾಗಿ ಉದ್ದೇಶಿಸಲಾದ ಆಹಾರ ತಯಾರಿಕೆಯ ಮೇಲಿನ ರಿಯಾಯಿತಿಯ ಶೇ. 5 ಜಿಎಸ್‌ಟಿ ವಿನಾಯಿತಿ ಇರುತ್ತದೆ.
  • ಉಪ್ಪು ಮತ್ತು ಮಸಾಲೆಗಳೊಂದಿಗೆ ಅನ್ಪ್ಯಾಕ್ ಮಾಡಲಾದ ಪಾಪ್‌ಕಾರ್ನ್ ಶೇ. 5 ಜಿಎಸ್‌ಟಿಗೆ ಒಳಪಡಲಿದೆ. ಆದರೆ, ಪ್ರಿ-ಪ್ಯಾಕ್ ಮಾಡಿದ ಪಾಪ್‌ಕಾರ್ನ್‌ಗೆ ಶೇ.12 ಮತ್ತು ಕ್ಯಾರಮೆಲ್ ಲೇಪಿತ ಪಾಪ್‌ಕಾರ್ನ್‌ಗೆ ಶೇ. 18 ಜಿಎಸ್‌ಟಿ ಅನ್ವಯವಾಗಲಿದೆ.
  • ಸಾಲದ ಷರತ್ತುಗಳನ್ನು ಅನುಸರಿಸಲು ವಿಫಲವಾದಾಗ ಸಾಲಗಾರರಿಂದ ಬ್ಯಾಂಕ್‌ಗಳು ಮತ್ತು ಬ್ಯಾಂಕಿಂಗ್ ಅಲ್ಲದ ಹಣಕಾಸು ಕಂಪನಿಗಳು (NBFC) ವಿಧಿಸುವ ಮತ್ತು ಸಂಗ್ರಹಿಸುವ ದಂಡದ ಶುಲ್ಕಗಳ ಮೇಲೆ ಯಾವುದೇ ಜಿಎಸ್‌ಟಿ ಇರುವುದಿಲ್ಲ.
  • ವಹಿವಾಟುಗಳಲ್ಲಿ 2,000 ರೂ.ಗಿಂತ ಕಡಿಮೆ ಮೊತ್ತವನ್ನು ಪ್ರಕ್ರಿಯೆಗೊಳಿಸುವ ಪಾವತಿ ಸಂಗ್ರಾಹಕರು ಜಿಎಸ್‌ಟಿ ವಿನಾಯಿತಿಗೆ ಅರ್ಹರಾಗಿರುತ್ತಾರೆ. ಆದರೆ, ಪಾವತಿ ಗೇಟ್‌ವೇಗಳು ಮತ್ತು ಫಿನ್‌ಟೆಕ್ ಸೇವೆಗಳನ್ನು ಇದರಲ್ಲಿ ಒಳಗೊಂಡಿಲ್ಲ.
  • ಇದನ್ನೂ ಓದಿ : ಮಹಾರಾಷ್ಟ್ರ ಖಾತೆ ಹಂಚಿಕೆ | ಶಿಂದೆಗೆ ಎರಡು ಮತ್ತೊಂದು, ಅಜಿತ್‌ಗೆ ಹಣಕಾಸು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...